ಉಪ್ಪಿನಂಗಡಿ ಠಾಣಾ ಮುಂಭಾಗದಲ್ಲಿ ಹೈಡ್ರಾಮಾ ನಡೆಸಿದ ಪಿಎಫ್ಐ| ಪೊಲೀಸರು ಲಾಠಿ ಚಾರ್ಜ್ ಮಾಡಿದ್ದೇಕೆ? ಕಂಪ್ಲೀಟ್ ಸ್ಟೋರಿ
ನಾಲ್ಕು ತಾಲೂಕುಗಳಲ್ಲಿ ನಿಷೇದಾಜ್ಞೆ ಜಾರಿ: ಪುತ್ತೂರು ಉಪ ವಿಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಸೆಕ್ಷನ್ 144ರನ್ವಯ ನಿಷೇದಾಜ್ಞೆ ಜಾರಿಗೊಳಿಸಿ ಪುತ್ತೂರು ಸಹಾಯಕ ಆಯುಕ್ತರಾದ ಡಾ. ಯತೀಶ್ ಉಳ್ಳಾಲರವರು ಆದೇಶ ಹೊರಡಿಸಿದ್ದಾರೆ. ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ ತಾಲೂಕಿನಾದ್ಯಂತ ನಿಷೇದಾಜ್ಙೆ ಜಾರಿಗೊಳಿಸಲಾಗಿದೆ. ಉಪ್ಪಿನಂಗಡಿಯಲ್ಲಿ ಡಿ 14 ರಂದು ರಾತ್ರಿ ನಡೆದ ಅಹಿತಕರ ಘಟನೆಯ ಹಿನ್ನಲೆಯಲ್ಲಿ ಸಹಾಯಕ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಪುತ್ತೂರು ಉಪವಿಭಾಗಾಯಾದ್ಯಂತ ಅಂದರೆ […]








