ಕ್ರೈಂ

ಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ಮತ್ತೆ ವಿದ್ಯಾರ್ಥಿಗಳಿಗೆ ಹಲ್ಲೆ| ಚಾಕು ಇರಿದು ಇಬ್ಬರು ಗಂಭೀರ

ಪುತ್ತೂರು: ಪುತ್ತೂರಿನಲ್ಲಿ ನಿನ್ನೆ ನಡೆದ ಕಾಲೇಜು ವಿದ್ಯಾರ್ಥಿಗಳ ಮೇಲಿನ ಹಲ್ಲೆ ನಡೆದ ಬೆನ್ನಲ್ಲೇ ಇಂದು ಅದೇ ಕಾಲೇಜಿನ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಗಾಯಗೊಂಡವರನ್ನು ಕೊಂಬೆಟ್ಟು ಶಾಲಾ ವಿದ್ಯಾರ್ಥಿಗಳಾದ ಮುಕ್ವೆ ನಿವಾಸಿ ಉಮ್ಮರ್ ಎಂಬವರ ಪುತ್ರ ಸೈಫುದ್ದೀನ್ ಹಾಗೂ ಬನ್ನೂರು ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಇಮ್ರಾನ್ ಎಂದು ತಿಳಿದು ಬಂದಿದೆ. ಇನ್ನಿಬ್ಬರು ವಿದ್ಯಾರ್ಥಿಗಳಿಗೂ ಗಾಯಗೊಂಡ ಬಗ್ಗೆ ವರದಿಯಾಗಿದೆ. ನಿನ್ನೆಯ ಪ್ರಕರಣಕ್ಕೆ ಸಂಬಂಧಿಸಿ ಇಂದು ಎಬಿವಿಪಿ ವಿದ್ಯಾರ್ಥಿಗಳಿಂದ ಪುತ್ತೂರು […]

ಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ಮತ್ತೆ ವಿದ್ಯಾರ್ಥಿಗಳಿಗೆ ಹಲ್ಲೆ| ಚಾಕು ಇರಿದು ಇಬ್ಬರು ಗಂಭೀರ Read More »

ಕ್ರಿಕೆಟಿಗ‌ ಗೌತಮ್ ಗಂಭೀರ್ ಗೆ ಐಸಿಸ್ ನಿಂದ ಜೀವ ಬೆದರಿಕೆ

ನವದೆಹಲಿ: ಒಂದೆಡೆ ಭಾರತೀಯ ಸೇನೆಯಿಂದ ಐಸಿಸ್ ಉಗ್ರರನ್ನು ಸೆದೆ ಬಡಿಯುವ ಕಾರ್ಯ ನಡೆದಿದ್ದರೇ, ಮತ್ತೊಂದೆಡೆ ಐಸಿಸ್ ಉಗ್ರರ ಬೆದರಿಕೆ ಮುಂದುವರೆದಿದೆ. ಇದೀಗ ಭಾರತೀಯ ಕ್ರಿಕೆಟ್ ದಿಗ್ಗಜ ಗೌತಮ್ ಗಂಭೀರ್ ಗೆ ಐಸಿಸ್ ಉಗ್ರರು ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಕ್ರಿಕೆಟಿಗ ಗೌತಮ್ ಗಂಭೀರ್ ಆರೋಪಿಸಿದ್ದು, ತಮಗೆ ಐಸಿಸ್ ಉಗ್ರರು ಕಾಶ್ಮೀರದಿಂದ ಕರೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದಾಗಿ ತಿಳಿಸಿದ್ದಾರೆ. ಈ ಮೂಲತ ತಮಗೆ ಜೀವ ಬೆದರಿಕೆ ಇರೋ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ.

ಕ್ರಿಕೆಟಿಗ‌ ಗೌತಮ್ ಗಂಭೀರ್ ಗೆ ಐಸಿಸ್ ನಿಂದ ಜೀವ ಬೆದರಿಕೆ Read More »

ಬೆಳ್ತಂಗಡಿ: ಅಕ್ರಮ ಗೋಸಾಗಾಟ ಯತ್ನ| ಭಜರಂಗದಳ ಕಾರ್ಯಕರ್ತರಿಂದ ದಾಳಿ, ವಾಹನ ಸಹಿತ ಆರೋಪಿ ವಶ, ಇಬ್ಬರು ಪರಾರಿ

ಬೆಳ್ತಂಗಡಿ : ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಗೋ ಸಾಗಾಟವನ್ನು ಬಜರಂಗದಳ ಕಾರ್ಯಕರ್ತರು ವಿಫಲಗೊಳಿಸಿ, ಆರೋಪಿಯನ್ನು ವಾಹನ ಸಹಿತ ಪೋಲಿಸರಿಗೊಪ್ಪಿಸಿದ ಘಟನೆ ನಿನ್ನೆ ಮಧ್ಯರಾತ್ರಿ ನಡೆದಿದೆ. ಕಡಿರುದ್ಯಾವರ ಗ್ರಾಮದ ಕುರುಡ್ಯದಿಂದ ಕಸಾಯಿಖಾನೆಗಳಿಗೆ ನಿನ್ನೆ ಮಧ್ಯರಾತ್ರಿ ಪಿಕ್ ಅಪ್ ಒಂದರಲ್ಲಿ ಅಕ್ರಮ ಗೋಸಾಗಾಟ ಮಾಡುತ್ತಿದ್ದ ವೇಳೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದು, ಅಕ್ರಮ ಗೋ ಸಾಗಾಟ ವಾಹನವನ್ನು ತಡೆದಿದ್ದಾರೆ. ಪೋಲೀಸರ ಸಹಕಾರದಿಂದ ಒಬ್ಬಾತನನ್ನು ಬಂಧಿಸಿದ್ದು, ಸಾಗಾಟ ಮಾಡುತ್ತಿದ್ದ ಪಿಕ್ ಅಪ್ ಮತ್ತು ಮಾರುತಿ 800 ವಾಹನವನ್ನು ಗೋವು

ಬೆಳ್ತಂಗಡಿ: ಅಕ್ರಮ ಗೋಸಾಗಾಟ ಯತ್ನ| ಭಜರಂಗದಳ ಕಾರ್ಯಕರ್ತರಿಂದ ದಾಳಿ, ವಾಹನ ಸಹಿತ ಆರೋಪಿ ವಶ, ಇಬ್ಬರು ಪರಾರಿ Read More »

ಭೀಕರ ರಸ್ತೆ ದುರಂತ| ಹೊತ್ತಿ ಉರಿದ ಪ್ರವಾಸಿ ಬಸ್| 12 ಮಕ್ಕಳು ಸೇರಿ 45 ಮಂದಿ ದುರ್ಮರಣ

ಸೋಫಿಯಾ: ಬಲ್ಗೇರಿಯಾದ ಹೆದ್ದಾರಿಯಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತವಾಗಿ ಬೆಂಕಿ ಹೊತ್ತಿಕೊಂಡಿದ್ದು, 12 ಮಕ್ಕಳು ಸೇರಿದಂತೆ ಕನಿಷ್ಠ 45 ಜನರು ಮಂಗಳವಾರ ಸಾವನ್ನಪ್ಪಿದ್ದಾರೆ. ಬಲ್ಗೇರಿಯನ್ ಅಧಿಕಾರಿಗಳು ಇದನ್ನು ಬಾಲ್ಕನ್ ದೇಶದ ಇತಿಹಾಸದಲ್ಲಿ ಅತ್ಯಂತ ಮಾರಣಾಂತಿಕ ಬಸ್ ಅಪಘಾತ ಎಂದು ಕರೆದಿದ್ದಾರೆ. ಅಪಘಾತದ ಕಾರಣ ಅಸ್ಪಷ್ಟವಾಗಿದೆ. ಆದರೆ ಬೆಂಕಿ ಹೊತ್ತಿಕೊಳ್ಳುವ ಮೊದಲು ಅಥವಾ ನಂತರ ಬಸ್ ಹೆದ್ದಾರಿ ತಡೆಗೋಡೆಗೆ ಅಪ್ಪಳಿಸಿದೆ ಎಂದು ಬಲ್ಗೇರಿಯನ್ ಅಧಿಕಾರಿಗಳು ತಿಳಿಸಿದ್ದಾರೆ. ಉರಿಯುತ್ತಿರುವ ಬಸ್‌ನಿಂದ ಜಿಗಿದ ಏಳು ಜನರನ್ನು ಸೋಫಿಯಾದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ

ಭೀಕರ ರಸ್ತೆ ದುರಂತ| ಹೊತ್ತಿ ಉರಿದ ಪ್ರವಾಸಿ ಬಸ್| 12 ಮಕ್ಕಳು ಸೇರಿ 45 ಮಂದಿ ದುರ್ಮರಣ Read More »

ಉಡುಪಿ: ಕೆಲಸದ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಟೀಚರ್|

ಉಡುಪಿ: ಕೆಲಸದ ಒತ್ತಡದಿಂದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.21ರಂದು ರಾತ್ರಿ ಅಲೆವೂರಿನಲ್ಲಿ ನಡೆದಿದೆ. ಮೃತರನ್ನು ಉಡುಪಿಯ ಅಲೆವೂರು ನಿವಾಸಿ ಅಮೃತ (32) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಅಮೃತಾ ಉಡುಪಿಯ ಖಾಸಗಿ ಶಾಲೆಯಲ್ಲಿ 8 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಹಲವು ದಿನಗಳಿಂದ ಶಾಲೆಯ ಕೆಲಸದಿಂದಾಗಿ ಖಿನ್ನತೆಗೆ ಒಳಗಾಗಿದ್ದರು. ಆಕೆಯ ಕುಟುಂಬ ಸದಸ್ಯರು ಮಲಗಿದ್ದಾಗ ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ

ಉಡುಪಿ: ಕೆಲಸದ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಟೀಚರ್| Read More »

ಮಂಗಳೂರು: ಅತ್ಯಾಚಾರ ನಡೆಸಿ‌ ಎಂಟು ವರ್ಷದ ಕಂದಮ್ಮನ ಕೊಲೆಗೈದ ಕಿರಾತಕರು..!?

ಮಂಗಳೂರು, ನ.21: ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಬಳಿಯ ಪರಾರಿ ಎಂಬಲ್ಲಿ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರ ಎಂಟು ವರ್ಷದ ಮಗುವನ್ನು ಅತ್ಯಾಚಾರಗೈದು ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ರಾಜ್ ಟೈಲ್ಸ್ ಎನ್ನುವ ಹೆಸರಿನ ಇಂಟರ್ಲಾಕ್ ಕಾರ್ಖಾನೆ ಆವರಣದಲ್ಲಿ ಘಟನೆ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕರು ಅಲ್ಲಿ ಕೆಲಸ ಮಾಡುತ್ತಿದ್ದರು. ಕುಟುಂಬದ ಒಂದು ಮಗು ಸಂಜೆ ವೇಳೆಗೆ ಕಾಣೆಯಾಗಿತ್ತು. ಕಾರ್ಮಿಕರು, ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಸಂಜೆ 6 ಗಂಟೆ ಸುಮಾರಿಗೆ ಅಲ್ಲಿಯೇ ಪಕ್ಕದ

ಮಂಗಳೂರು: ಅತ್ಯಾಚಾರ ನಡೆಸಿ‌ ಎಂಟು ವರ್ಷದ ಕಂದಮ್ಮನ ಕೊಲೆಗೈದ ಕಿರಾತಕರು..!? Read More »

ಹಿಂದೂ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆ

ಇಸ್ಲಾಮಾಬಾದ್: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 11 ವರ್ಷದ ಹಿಂದೂ ಬಾಲಕಿಯನ್ನು ಲೈಂಗಿಕ ದೌರ್ಜನ್ಯದ ನಂತರ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕುಟುಂಬಸ್ಥರ ಪ್ರಕಾರ ಶುಕ್ರವಾರ ಸಂಜೆ ಅಪ್ರಾಪ್ತ ಬಾಲಕಿ ನಾಪತ್ತೆಯಾಗಿದ್ದಳು. ಬಾಲಕನ ಶವ ಶನಿವಾರ ಖೈರ್‌ಪುರ ಮಿರ್ ಪ್ರದೇಶದ ಬಾಬರ್ಲೋಯ್ ಪಟ್ಟಣದ ನಿರ್ಜನ ಮನೆಯಲ್ಲಿ ಪತ್ತೆಯಾಗಿದೆ. ಅಪ್ರಾಪ್ತ ಬಾಲಕಿ 5ನೇ ತರಗತಿಯಲ್ಲಿ ಓದುತ್ತಿರುವುದಾಗಿ ತಿಳಿದುಬಂದಿದೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ನಂತರ ದುಷ್ಕರ್ಮಿಗಳು ಕತ್ತು ಹಿಸುಕಿ ಕೊಂದಿದ್ದಾರೆ . ಇಗಾಗಲೇ ಇಬ್ಬರನ್ನು ಬಂಧಿಸಿದ್ದು, ಅವರಲ್ಲಿ ಒಬ್ಬರು ತಮ್ಮ

ಹಿಂದೂ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆ Read More »

ಅತ್ಯಾಚಾರ ಎಸಗಿ ಸಂತ್ರಸ್ತೆಯನ್ನು ಮದ್ವೆಯಾದ್ರೂ ಪ್ರಕರಣ ರದ್ದಾಗಲ್ಲ- ಹೈಕೋರ್ಟ್

ಬೆಂಗಳೂರು: ಅತ್ಯಾಚಾರ ಎಸಗಿ‌ ಸಂತ್ರಸ್ತೆಯನ್ನು ಮದುವೆಯಾದರೂ ಕೇಸ್ ರದ್ದಾಗುವುದಿಲ್ಲ ಎಂಬ ಮಹತ್ವದ ಸ್ಪಷ್ಟನೆಯನ್ನು ಹೈ ಕೋರ್ಟ್ ನೀಡಿದೆ. ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಪೋಕ್ಸೋ ಪ್ರಕರಣ ಕೈಬಿಡಲು ಹೈಕೋರ್ಟ್ ನಿರಾಕರಿಸಿದೆ. ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ಥೆಯನ್ನು ಆರೋಪಿ ಮದುವೆಯಾಗಿದ್ದರೂ ಕೂಡ ಅತ್ಯಾಚಾರ ಪ್ರಕರಣ ರದ್ದಾಗುವುದಿಲ್ಲವೆಂದು ಸ್ಪಷ್ಟಪಡಿಸಿದೆ. ವಿಜಯಪುರದ ಬಸವನ ಬಾಗೇವಾಡಿಯ ಆರೋಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರ ಪೀಠ, ಪ್ರಕರಣದಲ್ಲಿ ಆರೋಪಿ ಮತ್ತು ಸಂತ್ರಸ್ಥೆ ರಾಜಿಯಾದ ಮಾತ್ರಕ್ಕೆ ಕೇಸ್

ಅತ್ಯಾಚಾರ ಎಸಗಿ ಸಂತ್ರಸ್ತೆಯನ್ನು ಮದ್ವೆಯಾದ್ರೂ ಪ್ರಕರಣ ರದ್ದಾಗಲ್ಲ- ಹೈಕೋರ್ಟ್ Read More »

ಮಂಡ್ಯ: ಭೀಕರ ಅಪಘಾತದಲ್ಲಿ ಐವರ ಪ್ರಾಣ ತೆಗೆದ ಜವರಾಯ

ಮಂಡ್ಯ: ಟಿಪ್ಪರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗೇಟ್ ಬಳಿ ನಡೆದಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೆಂಕಟೇಶ(25), ಮುತ್ತಮ್ಮ(45), ಬಸಮ್ಮಣ್ಣಿ(30) ಹಾಗೂ ಗಾಯಗೊಂಡಿದ್ದ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಲಾರಿ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರಂತ ಘಟಿಸಿದೆ. ಅಪಘಾತದ ತೀವ್ರತೆಗೆ ಆಟೋ ನಜ್ಜು ಗುಜ್ಜಾಗಿದೆ. ಎದುರಿನಿಂದ ಬಂದ ಲಾರಿ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿ

ಮಂಡ್ಯ: ಭೀಕರ ಅಪಘಾತದಲ್ಲಿ ಐವರ ಪ್ರಾಣ ತೆಗೆದ ಜವರಾಯ Read More »

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದ ಅಪರಿಚಿತ ಗುಂಪು| ಮಾತಿನ ಚಕಮಕಿ, ಪೊಲೀಸರ ಮದ್ಯಪ್ರವೇಶ|

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರನ್ನು ಅಪರಿಚಿತ ಯುವಕರ ಗುಂಪೊಂದು ಹಿಂಬಾಲಿಸಿಕೊಂಡು ಬಂದಿದ್ದು, ಹಾಗೂ ವಿದ್ಯಾರ್ಥಿಗಳ ಮದ್ಯೆ ಮಾತಿನ ಚಕಮಕಿ ನಡೆದ ಘಟನೆ ಇಂದು ಸಂಜೆ ನಗರದ ನೆಲ್ಲಿಕಟ್ಟೆಯಲ್ಲಿ ನಡೆದಿದೆ. ಅಪರಿಚಿತ ಯುವಕರ ಗುಂಪೊಂದು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿಯರು ತಮ್ಮ ಸಹಪಾಠಿ ಗೆಳೆಯರಲ್ಲಿ ತಿಳಿಸಿದ್ದಾರೆ. ಆಗ ಸಹಪಾಠಿ ವಿದ್ಯಾರ್ಥಿಗಳು ಆಗಮಿಸಿ ಹಿಂಬಾಲಿಸಿಕೊಂಡು ಬಂದ ಯುವಕರಲ್ಲಿ ಪ್ರಶ್ನಿಸಿದ್ದಾರೆ. ಅಲ್ಲಿ ಮಾತಿಗೆ ಮಾತು ಬೆಳೆದು ಚಕಮಕಿ ಯಾಗಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಯುವಕರನ್ನು ಪುತ್ತೂರು ಮಹಿಳಾ ಠಾಣೆಗೆ ಕರೆದೊಯ್ದಿದ್ದಾರೆ.

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದ ಅಪರಿಚಿತ ಗುಂಪು| ಮಾತಿನ ಚಕಮಕಿ, ಪೊಲೀಸರ ಮದ್ಯಪ್ರವೇಶ| Read More »