ಕ್ರೈಂ

ವಾಮಾಚಾರ ಆರೋಪ| ಎಮ್ಮೆ ಜೊತೆ ಠಾಣೆ ಮೆಟ್ಟಿಲೇರಿದ ರೈತ|

ಭೋಪಾಲ್: ಇಲ್ಲಿನ ಭಿಂಡ್ ಜಿಲ್ಲೆಯ ರೈತನೊಬ್ಬ ತನ್ನ ಎಮ್ಮೆಯೊಂದಿಗೆ ಪೊಲೀಸ್ ಠಾಣೆಗೆ ಹೋಗಿ ತನ್ನ ಎಮ್ಮೆ ಹಾಲು ಕೊಡಲು ನಿರಾಕರಿಸುತ್ತಿದೆ ಹಾಗೂ ಅದು ವಾಮಾಚಾರದ ಪ್ರಭಾವದಲ್ಲಿದೆ ಎಂದು ಶಂಕಿಸಿದ್ದಾನೆ ಎಂದು ಅಧಿಕಾರಿಯೊಬ್ಬರು ರವಿವಾರ ತಿಳಿಸಿದ್ದಾರೆ. ಈ ವಿಷಯದ ಕುರಿತು ಶನಿವಾರ ನಯಗಾಂವ್ ಗ್ರಾಮದಲ್ಲಿ ರೈತನೊಬ್ಬ ಪೊಲೀಸರಿಂದ ಸಹಾಯ ಕೋರುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಕಳೆದ ಕೆಲವು ದಿನಗಳಿಂದ ತನ್ನ ಎಮ್ಮೆ ಹಾಲು ಕೊಡುತ್ತಿಲ್ಲ ಎಂದು ಗ್ರಾಮದ ಬಾಬುಲಾಲ್ ಜಾಟವ್ (45) ಶನಿವಾರ ನಯಗಾಂವ್ ಪೊಲೀಸ್ ಠಾಣೆಯಲ್ಲಿ […]

ವಾಮಾಚಾರ ಆರೋಪ| ಎಮ್ಮೆ ಜೊತೆ ಠಾಣೆ ಮೆಟ್ಟಿಲೇರಿದ ರೈತ| Read More »

ಬಂಟ್ವಾಳ: ಭೀಕರ ಅಪಘಾತಕ್ಕೆ ಇಬ್ಬರು ಯುವಕರು ಬಲಿ| ಮತ್ತಿಬ್ಬರು ಗಂಭೀರ

ಬಂಟ್ವಾಳ : ರಾ.ಹೆ.75ರ ತುಂಬೆ ರಾಮಲಕಟ್ಟೆಯ ಬಳಿ ಕ್ಯಾಟರಿಂಗ್ ವೊಂದರ ಆಹಾರ ಸಾಗಾಟದ ಪಿಕ್ ಅಪ್ ಮರಕ್ಕೆ ಢಿಕ್ಕಿ ಹೊಡೆದು ಅದರಲ್ಲಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಉಪ್ಪಿನಂಗಡಿ ನಿವಾಸಿಗಳಾದ ಚೇತನ್ (25) ಹಾಗೂ ಆಶಿತ್ (21) ಮೃತಪಟ್ಟಿದ್ದಾರೆ. ಸಿಂಚನ್ ಹಾಗೂ ಸುದೀಪ್ ಗಾಯಗೊಂಡಿದ್ದಾರೆ. ಕಾರ್ಯಕ್ರಮ ಮುಗಿಸಿ ಮಂಗಳೂರು ಕಡೆಯಿಂದ ಆಗಮಿಸುತ್ತಿದ್ದ ಪಿಕ್ ಅಪ್ ಮರಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ತುಂಬೆ ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಇಬ್ಬರು ಅದಾಗಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ

ಬಂಟ್ವಾಳ: ಭೀಕರ ಅಪಘಾತಕ್ಕೆ ಇಬ್ಬರು ಯುವಕರು ಬಲಿ| ಮತ್ತಿಬ್ಬರು ಗಂಭೀರ Read More »

ಬಸ್ ನಿಲ್ದಾಣದಲ್ಲಿ ಗುಂಪುಘರ್ಷಣೆ| ಓರ್ವ ಗಂಭೀರ|

ಚಿಕ್ಕಮಗಳೂರು: ಬಸ್​ ನಿಲ್ದಾಣದಲ್ಲಿ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮೂಡಿಗೆರೆ ಬಸ್​ ನಿಲ್ದಾಣದಲ್ಲಿ ಎರಡು ಗುಂಪುಗಳ ನಡುವೆ ಏಕಾಏಕಿ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಓರ್ವ ಯುವಕನ ತಲೆಗೆ ಗಂಭೀರ ಗಾಯವಾಗಿದೆ. ಯುವಕರ ವರ್ತನೆ ಕಂಡು ಸ್ಥಳದಲ್ಲಿದ್ದ ಪ್ರಯಾಣಿಕರು ಕಂಗಾಲಾಗಿದ್ದಾರೆ. ಬಸ್​ ನಿಲ್ದಾಣದಲ್ಲಿ ಪುಂಡರ ಹಾವಳಿ ಹೆಚ್ಚಾಗುತ್ತಿದ್ದು, ವಿದ್ಯಾರ್ಥಿನಿಯರು ಹಾಗೂ ಮಹಿಳೆಯರಿಗೆ ಭದ್ರತೆ ಇಲ್ಲ ಎನ್ನುವಂತಾಗಿದೆ. ನಿಲ್ದಾಣದಲ್ಲಿ ಇರುವ ಸಿಸಿ ಕ್ಯಾಮರಗಳು ಕೆಟ್ಟುನಿಂತಿವೆ. ಕೂಡಲೇ ಸಿಸಿಟಿವಿ

ಬಸ್ ನಿಲ್ದಾಣದಲ್ಲಿ ಗುಂಪುಘರ್ಷಣೆ| ಓರ್ವ ಗಂಭೀರ| Read More »

ಬಿಸ್ಲೆ ಘಾಟ್ ನಲ್ಲಿ ಮರಕ್ಕೆ ಢಿಕ್ಕಿ ಹೊಡೆದ‌ ಕಾರು| ಚಾಲಕ‌ ಗಂಭೀರ

ಸುಬ್ರಹ್ಮಣ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ಬಿಸ್ಲೆ ಘಾಟ್ ನಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಮಂಗಳೂರು ನಿವಾಸಿ ರವಿ ಎಂದು ಗುರುತಿಸಲಾಗಿದೆ. ಬಿಸಿಲೆ ಘಾಟ್ ನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಚಾಲಕ ರವಿಯವರ ಕಾಲು ಮುರಿತಕ್ಕೆ ಒಳಗಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ

ಬಿಸ್ಲೆ ಘಾಟ್ ನಲ್ಲಿ ಮರಕ್ಕೆ ಢಿಕ್ಕಿ ಹೊಡೆದ‌ ಕಾರು| ಚಾಲಕ‌ ಗಂಭೀರ Read More »

ಮಂಗಳೂರು: ನಾಗಬಿಂಬದ ಕಲ್ಲು ಹಾನಿಗೆಡಹಿದ ಕಿಡಿಗೇಡಿಗಳು| ಆರೋಪಿಗಳನ್ನು ಬಂಧಿಸದಿದ್ದರೆ ಕೋಡಿಕಲ್ ಬಂದ್ ಎಚ್ಚರಿಕೆ|

ಮಂಗಳೂರು: ನಗರದ ಕೋಡಿಕಲ್‌ ನಾಗಬನದ ಕಲ್ಲನ್ನು ಎಸೆದಿರುವ ಕಿಡಿಗೇಡಿಗಳನ್ನು ಬಂಧಿಸದೇ ಇರುವ ಪೊಲೀಸ್ ಕ್ರಮವನ್ನು ಖಂಡಿಸಿ ಇಂದು ಕೋಡಿಕಲ್‌ನ ನಾಗಬನದ ಬಳಿ ವಿಎಚ್ ಪಿ ಹಾಗೂ ಸ್ಥಳೀಯ ನಾಗರೀಕರು ಪ್ರತಿಭಟನೆ ನಡೆಸಿದರು. ನಾಳೆ ಸಂಜೆಯೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಕೋಡಿಕಲ್ ಬಂದ್ ಮಾಡುವ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದ್ದಾರೆ ಕೋಡಿಕಲ್ ನಾಗಬನದಲ್ಲಿನ 13 ನಾಗಕಲ್ಲಿನಲ್ಲಿ ಒಂದು ಬಿಂಬವನ್ನು ಕಿಡಿಗೇಡಿಗಳು ಎಸೆದು ಅಪವಿತ್ರಗೊಳಿಸಿದ್ದರು. ಘಟನೆ ನಡೆದು ಕೆಲವು ದಿನಗಳು ಕಳೆದರೂ ಕೂಡ ಇಲ್ಲಿಯವರೆಗೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಸಫಲವಾಗಿಲ್ಲ. ಈ

ಮಂಗಳೂರು: ನಾಗಬಿಂಬದ ಕಲ್ಲು ಹಾನಿಗೆಡಹಿದ ಕಿಡಿಗೇಡಿಗಳು| ಆರೋಪಿಗಳನ್ನು ಬಂಧಿಸದಿದ್ದರೆ ಕೋಡಿಕಲ್ ಬಂದ್ ಎಚ್ಚರಿಕೆ| Read More »

ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ| ಸಾವಿಗೆ ಕಾರಣನಾದವನ ಹೆಸರು ಬರೆದಿದ್ದೆಲ್ಲಿ ಗೊತ್ತಾ?

ಕೋಲ್ಕತ್ತಾ: ಎರಡು ತಿಂಗಳ ಗರ್ಭಿಣಿಯಾಗಿದ್ದ 20 ವರ್ಷದ ಮಹಿಳೆಯೊಬ್ಬರು ಕಿರುಕುಳಕ್ಕೆ ಒಳಗಾಗಿ ಟಾಲಿಗಂಜ್ ರಸ್ತೆಯ ತನ್ನ ನಿವಾಸದಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ತನ್ನ ಅತ್ತೆಯೇ ಕಾರಣ ಎಂದು ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಪೂಜಾ ಚಂದಾ ಎನ್ನಲಾಗಿದ್ದು ತನ್ನ ಸಾವಿಗೆ ತನ್ನ ಅತ್ತೆ ಶೀಲಾ ಕಾರಣ ಎಂದು ಆರೋಪಿಸಿ ತನ್ನ ಎಡ ಅಂಗೈಯಲ್ಲಿ ಆತ್ಮಹತ್ಯೆ ಪತ್ರವನ್ನು ಬರೆದುಕೊಂಡಿದ್ದಾರೆ. ಟೋಲಿಗಂಜ್ ಪ್ರದೇಶದಲ್ಲಿ ಮೊಬೈಲ್ ಅಂಗಡಿ ಹೊಂದಿರುವ ಸಂಜೋಯ್ ಚಂದ್ರ ಅವರನ್ನು ಕೇವಲ ಒಂದು ವರ್ಷದ ಹಿಂದೆ ಪೂಜಾ

ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ| ಸಾವಿಗೆ ಕಾರಣನಾದವನ ಹೆಸರು ಬರೆದಿದ್ದೆಲ್ಲಿ ಗೊತ್ತಾ? Read More »

ಕ್ರಿಕಟಿಗ ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್, ಐಪಿಎಲ್ ಮಾಜಿ ಅಧ್ಯಕ್ಷ ರಾಜೀವ್ ಶುಕ್ಲಾರಿಂದ ಅತ್ಯಾಚಾರ| ಗಂಭೀರ ಆರೋಪ ಮಾಡಿದ ಗ್ಯಾಂಗ್ ಸ್ಟರ್ ರಿಯಾಝ್ ಭಾಟಿ‌ ಪತ್ನಿ|

ಮುಂಬೈ: ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್, ಐಪಿಎಲ್ ನ ಮಾಜಿ ಅಧ್ಯಕ್ಷ ರಾಜೀವ್ ಶುಕ್ಲಾ ಸೇರಿದಂತೆ ಹಲವು ಗಣ್ಯರ ವಿರುದ್ಧ ಗ್ಯಾಂಗ್ ಸ್ಟರ್ ರಿಯಾಜ್ ಭಾಟಿ ಪತ್ನಿ ಅತ್ಯಾಚಾರ ಆರೋಪ ಹೊರಿಸಿದ್ದಾರೆ. ತಮ್ಮ ಉದ್ಯಮ ಪಾಲುದಾರರು ಹಾಗೂ ಇತರ ಗಣ್ಯ ವ್ಯಕ್ತಿಗಳೊಂದಿಗೆ ಲೈಂಗಿಕ ಸಂಬಂಧ ಹೊಂದಲು ತನ್ನ ಪತಿ ತನ್ನನ್ನು ಒತ್ತಾಯಿಸಿದ್ದರು ಎಂದು ದಾವೂದ್ ಇಬ್ರಾಹಿಂ ಆಪ್ತ ಗ್ಯಾಂಗ್ ಸ್ಟರ್ ರಿಯಾಝ್ ಭಾಟಿ ಪತ್ನಿ ರೆಹನುಮಾ ಭಾಟಿ ಆರೋಪಿಸಿದ್ದಾರೆ ಎಂದು ವರದಿಯಾಗಿದೆ. ಮುಂಬೈನ ಸಾಂತಾಕ್ರೂಜ್ ಪೊಲೀಸರಿಗೆ

ಕ್ರಿಕಟಿಗ ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್, ಐಪಿಎಲ್ ಮಾಜಿ ಅಧ್ಯಕ್ಷ ರಾಜೀವ್ ಶುಕ್ಲಾರಿಂದ ಅತ್ಯಾಚಾರ| ಗಂಭೀರ ಆರೋಪ ಮಾಡಿದ ಗ್ಯಾಂಗ್ ಸ್ಟರ್ ರಿಯಾಝ್ ಭಾಟಿ‌ ಪತ್ನಿ| Read More »

ಹಳಿತಪ್ಪಿದ ಬೆಂಗಳೂರು- ಕಣ್ಣೂರು ರೈಲು| ಅದೃಷ್ಟವಶಾತ್ ತಪ್ಪಿದ ಅನಾಹುತ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ರೈಲು ಹಳಿಯ ಮೇಲೆ ಬಂಡೆಗಳು ಉರುಳಿ ಬಿದ್ದ ಪರಿಣಾಮ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ಬ ರೈಲಿನ 5 ಬೋಗಿಗಳು ಹಳಿ ತಪ್ಪಿರುವ ಘಟನೆ ನಡೆದಿದೆ. ಇಂದು ಮುಂಜಾನೆ 3.50 ರ ಸುಮಾರಿಗೆ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ನ 5 ಬೋಗಿಗಳು ಹಳಿ ತಪ್ಪಿದವು, ಬೆಂಗಳೂರು ವಿಭಾಗದ ಟೋಪ್ಪುರು-ಸಿವ್ದಿ ನಡುವೆ ಬಂಡೆಗಳು ಇದ್ದಕ್ಕಿದ್ದಂತೆ ಬಿದ್ದವು. ರೈಲಿನಲ್ಲಿಪ್ರಯಾಣಿಸುತ್ತಿದ್ದ ಎಲ್ಲಾ 2348 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ನೈಋತ್ಯ ರೈಲ್ವೆ ವರದಿ ಮಾಡಿದೆ, ಯಾವುದೇ ಸಾವು ನೋವು

ಹಳಿತಪ್ಪಿದ ಬೆಂಗಳೂರು- ಕಣ್ಣೂರು ರೈಲು| ಅದೃಷ್ಟವಶಾತ್ ತಪ್ಪಿದ ಅನಾಹುತ Read More »

ಧಾರವಾಡ: ಖ್ಯಾತ ತಬಲಾ ಕಲಾವಿದ ಪಂ. ಷಡಾಕ್ಷರಯ್ಯ ಗುಡ್ಡದಮಠ ನಿಧನ

ಧಾರವಾಡ: ಉತ್ತರ ಕರ್ನಾಟಕದ ಪ್ರಸಿದ್ಧ ತಬಲಾ ಕಲಾವಿದ ಪಂ. ಷಡಾಕ್ಷರಯ್ಯ ಗುಡ್ಡದಮಠ (74) ಇಂದು (ಗುರುವಾರ) ಬೆಳಿಗ್ಗೆ ನಿಧನರಾಗಿದ್ದಾರೆ. ಪಂ.ಷಡಕ್ಷರಯ್ಯ ಅವರು ಪತ್ನಿ, ಪುತ್ರ, ಪುತ್ರಿ, ಅಪಾರ ಬಂದು ಬಳಗ ಹಾಗೂ ಶಿಷ್ಯ ವೃಂದವನ್ನು ಅಗಲಿದ್ದಾರೆ. ಪಂ.ಷಡಕ್ಷರಯ್ಯ ಅವರು ರಾಜ್ಯ ಹಾಗೂ ದೇಶದ ವಿವಿಧ ಭಾಗದಲ್ಲಿ ತಬಲಾ ಕಾರ್ಯಕ್ರಮ ನೀಡಿದ್ದರು. ಅವರ ತಬಲಾ ಸೇವೆಗೆ ವಿವಿಧ ಪ್ರಶಸ್ತಿ, ಪುರಸ್ಕಾರ ಒಲಿದು ಬಂದಿವೆ. ಅವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

ಧಾರವಾಡ: ಖ್ಯಾತ ತಬಲಾ ಕಲಾವಿದ ಪಂ. ಷಡಾಕ್ಷರಯ್ಯ ಗುಡ್ಡದಮಠ ನಿಧನ Read More »

ನಿಧಿಗಾಗಿ‌ ಮಹಿಳೆಯ‌ ಬೆತ್ತಲೆ ಪೂಜೆ‌ ನಡೆಸಿದ ಆರು ಜನರ ಬಂಧನ|

ರಾಮನಗರ: ನಿಧಿ ಆಸೆಗಾಗಿ ಬೆತ್ತಲೆ ಪೂಜೆ ಸೇರಿದಂತೆ ಮೌಢ್ಯದ ಆಚರಣೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಆರು ಮಂದಿಯನ್ನು ಜಿಲ್ಲೆಯ ಸಾತನೂರು ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ತಮಿಳುನಾಡು ಮೂಲದವರಾದ ಪಾರ್ಥಸಾರಥಿ, ನಾಗರಾಜು, ಶಶಿಕುಮಾರ್, ಲೋಕೇಶ್, ಮೋಹನ್, ಲಕ್ಷ್ಮಿನರಸಪ್ಪ ಬಂಧಿತರು. ಇವರೊಂದಿಗೆ ಇದ್ದ ಕಾರ್ಮಿಕ ಮಹಿಳೆಯನ್ನು ಪೊಲೀಸರು ರಕ್ಷಿಸಿರುವುದಾಗಿ ತಿಳಿದುಬಂದಿದೆ. ಕನಕಪುರ ತಾಲ್ಲೂಕಿನ ಸಾತನೂರು ಸಮೀಪದ ಭೂಹಳ್ಳಿ ಗ್ರಾಮದ ಶ್ರೀನಿವಾಸ ಎಂಬುವರ ಮನೆಯಲ್ಲಿ ಆಗಾಗ ಗುಟ್ಟಾಗಿ ಪೂಜೆ ನಡೆಯುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ

ನಿಧಿಗಾಗಿ‌ ಮಹಿಳೆಯ‌ ಬೆತ್ತಲೆ ಪೂಜೆ‌ ನಡೆಸಿದ ಆರು ಜನರ ಬಂಧನ| Read More »