ಕ್ರೈಂ

ಜ್ಯೂಸ್ ನಲ್ಲಿ ಅಮಲು ಪದಾರ್ಥ ಬೆರೆಸಿ ರೌಡಿಶೀಟರ್‌ನಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ – ಆರೋಪಿ ಅಂದರ್

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ರೌಡಿಶೀಟರ್‌ ಅತ್ಯಾಚಾರ ನಡೆಸಿರುವ ಘಟನೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೈಕಂಬದ ಹೊಟೇಲ್ ಒಂದರಲ್ಲಿ ಬಾಣಸಿಗನಾಗಿದ್ದ ರೌಡಿಶೀಟರ್ ನವೀನ್ ಸಿಕ್ವೇರ ಎಂದು ಗುರುತಿಸಲಾಗಿದೆ. ಬಾಲಕಿ ಸಹೋದರನ ಪರಿಚಯದ ಹಿನ್ನೆಲೆ ಬಾಲಕಿ‌ ನಂಬರ್ ಪಡೆದಿದ್ದ ರೌಡಿಶೀಟರ್ ಆಕೆ ಮನೆಯಲ್ಲಿ ಒಬ್ಬಳೇ ಇರುವ ವೇಳೆ ಮನೆಗೆ ಬಂದು ಬಾಲಕಿಗೆ ಜ್ಯೂಸ್ ನಲ್ಲಿ ನಿದ್ದೆ ಬರೊ ಮದ್ದು ಬೆರೆಸಿ ಅತ್ಯಾಚಾರ ಮಾಡಿದ್ದ ಎನ್ನಲಾಗಿದೆ. ಇನ್ನು ಅತ್ಯಾಚಾರವೆಸಗಿ ಆರೋಪಿಯು […]

ಜ್ಯೂಸ್ ನಲ್ಲಿ ಅಮಲು ಪದಾರ್ಥ ಬೆರೆಸಿ ರೌಡಿಶೀಟರ್‌ನಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ – ಆರೋಪಿ ಅಂದರ್ Read More »

ಉಡುಪಿ : ಜಿಪ್ ಜಾರಿಸಿ ಖಾಸಗಿ ಅಂಗ ತೋರಿಸುತ್ತಿದ್ದ ಕಂಡಕ್ಟರ್‌ನ ಕಾಮದ ಪಿತ್ತ ಇಳಿಸಿದ ನರ್ಸಿಂಗ್ ವಿದ್ಯಾರ್ಥಿನಿಯರು

ಉಡುಪಿ: ಕಾಲೇಜು ವಿಧ್ಯಾರ್ಥಿನಿಯರಿಗೆ ಪ್ರತಿನಿತ್ಯ ಗುಪ್ತಾಂಗ ತೋರಿಸಿ ವಿಕೃತಿ ಮೆರೆಯುತ್ತಿದ್ದ ಖಾಸಗಿ ಬಸ್ ಕಂಡಕ್ಟರ್ ಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ, ಪೊಲೀಸ್ ವಶಕ್ಕೆ ನೀಡಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಹೆಬ್ರಿಯ ಹೆಸರಾಂತ ಖಾಸಗಿ ಬಸ್ ನ‌ ಕಂಡಕ್ಟರ್ ಉಪೇಂದ್ರ ಎಂಬಾತನೇ ಪ್ರಕರಣದ ಆರೋಪಿ. ಈತ ಸಂತೆಕಟ್ಟೆಯ ನರ್ಸಿಂಗ್ ಕಾಲೇಜ್ ಬಳಿ ತನ್ನ ಸ್ಕೂಟಿಯಲ್ಲಿ ಬಂದು ಅಲ್ಲಿನ ವಿದ್ಯಾರ್ಥಿನಿಯರಿಗೆ ಪ್ಯಾಂಟ್ ಜಿಪ್ ಜಾರಿಸಿ ಕಳೆದ ಕೆಲವು ದಿನಗಳಿಂದ ಗುಪ್ತಾಂಗ ತೋರಿಸುತ್ತಿದ್ದ. ಮಾತ್ರವಲ್ಲದೆ ಕೈಸನ್ನೆ, ಕಣ್ಣ್ ಸನ್ನೆ ಮಾಡುತ್ತ

ಉಡುಪಿ : ಜಿಪ್ ಜಾರಿಸಿ ಖಾಸಗಿ ಅಂಗ ತೋರಿಸುತ್ತಿದ್ದ ಕಂಡಕ್ಟರ್‌ನ ಕಾಮದ ಪಿತ್ತ ಇಳಿಸಿದ ನರ್ಸಿಂಗ್ ವಿದ್ಯಾರ್ಥಿನಿಯರು Read More »

ಬೆಳ್ತಂಗಡಿ: ಇಳಂತಿಲದಲ್ಲಿ ಐದು ಗ್ರೆನೇಡ್ ಪತ್ತೆ! ಪೊಲೀಸರಿಂದ ಚುರುಕುಗೊಂಡ ತನಿಖೆ|

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿ ಐದು ಗ್ರೆನೇಡ್ ಪತ್ತೆಯಾಗಿದ್ದು, ನಿವೃತ್ತ ಸೈನಿಕರೊಬ್ಬರು ಇದನ್ನು ಪೊಲೀಸರ ಗಮನಕ್ಕೆ ತಂದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಳಂತಿಲ ಗ್ರಾಮದ ನಿವಾಸಿ ಜಯಕುಮಾರ್ ನಿವೃತ್ತ ಯೋಧರಾಗಿದ್ದು ಶನಿವಾರ ಸಂಜೆ 6 ಗಂಟೆ ವೇಳೆಗೆ ಉಪ್ಪಿನಂಗಡಿಯಿಂದ ತನ್ನ ಮನೆಗೆ ನಡೆದುಕೊಂಡು ತೆರಳುತ್ತಿದ್ದಾಗ ಗುಡ್ಡದ ಇಳಿಜಾರಿನಲ್ಲಿ ಗ್ರೆನೇಡ್ ಮಾದರಿಯ ಸ್ಫೋಟಕ ವಸ್ತು ಕಂಡು ಬಂದಿದೆ. ಅದರಲ್ಲಿ ಹಳದಿ ಬಣ್ಣದ ಪ್ಲಾಸ್ಟಿಕ್ ಕವರಿನಲ್ಲಿ ಒಂದು ಗ್ರೆನೇಡ್ ಇದ್ದು ಇತರ ನಾಲ್ಕು ಗ್ರೆನೇಡ್ ಗಳು ಸ್ಥಳದಲ್ಲೆ ಬಿದ್ದಿತ್ತು.

ಬೆಳ್ತಂಗಡಿ: ಇಳಂತಿಲದಲ್ಲಿ ಐದು ಗ್ರೆನೇಡ್ ಪತ್ತೆ! ಪೊಲೀಸರಿಂದ ಚುರುಕುಗೊಂಡ ತನಿಖೆ| Read More »

ಅಡಿಕೆ ಕದ್ದ ನೆಪದಲ್ಲಿ ಬಾಲಕನಿಗೆ ಹಿಗ್ಗಾಮುಗ್ಗ ಹಲ್ಲೆ ಪ್ರಕರಣ| ಆರೋಪಿಗಳಿಗೆ ಜಾಮೀನು ದಯಪಾಲಿಸಿದ ಕೋರ್ಟ್..!

ಪುತ್ತೂರು: ಅಡಿಕೆ ಕದ್ದ ನೆಪದಲ್ಲಿ ಗುತ್ತಿಗಾರಿನ 16 ವರ್ಷದ ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕ ಆಕ್ರೋಶ ಕೇಳಿಬಂದಿದ್ದರಿಂದ ಸುಬ್ರಹ್ಮಣ್ಯ ಠಾಣೆಯ ಪೊಲೀಸರು ಮೊದಲಿಗೆ ಸುಮೊಟೊ ಕೇಸು ದಾಖಲಿಸಿದ್ದರು. ಆನಂತರ, ಸ್ವತಃ ಬಾಲಕನೇ ಹೆತ್ತವರ ಜೊತೆಗೆ ಬಂದು ಠಾಣೆಯಲ್ಲಿ ದೂರು ದಾಖಲಿಸಿದ್ದ. ಗುತ್ತಿಗಾರಿನ ಕಡ್ತಲ್ ಕಜೆ ಎಂಬಲ್ಲಿ ಅ.27ರಂದು ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ಹಣ್ಣಡಿಕೆಯನ್ನು ಗೋಣಿಯಲ್ಲಿ ತುಂಬಿಸಿ ಒಯ್ಯುತ್ತಿದ್ದ ಬಾಲಕನನ್ನು, ಆತ ಕದ್ದು ತಂದ

ಅಡಿಕೆ ಕದ್ದ ನೆಪದಲ್ಲಿ ಬಾಲಕನಿಗೆ ಹಿಗ್ಗಾಮುಗ್ಗ ಹಲ್ಲೆ ಪ್ರಕರಣ| ಆರೋಪಿಗಳಿಗೆ ಜಾಮೀನು ದಯಪಾಲಿಸಿದ ಕೋರ್ಟ್..! Read More »

ಪುತ್ತೂರು: ಮೀನು ಹಿಡಿಯಲು ಹೋದ ಯುವಕ ಕೆರೆಪಾಲು

ಪುತ್ತೂರು: ಮೀನು ಹಿಡಿಯಲೆಂದು‌‌ ಸ್ನೇಹಿತರ ಜೊತೆ ಹೋದ ಯುವಕನೊಬ್ಬ ಕೆರೆಯಲ್ಲಿ ಮುಳುಗಿ‌ ಸಾವನ್ನಪ್ಪಿದ ಘಟನೆ ಬೆಳ್ಳಾರೆಯಿಂದ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಪುತ್ತೂರು ಸಂಪ್ಯದ ಮೂಲೆ ನಿವಾಸಿ ಸುಂದರ ಅವರ ಪುತ್ರ ಅವಿನಾಶ್ (23ವ) ಎಂದು ಗುರುತಿಸಲಾಗಿದೆ. ಈತ ಬೆಳ್ಳಾರೆಯ ಮೊಗಪ್ಪೆ ಕೆರೆಯಲ್ಲಿ ಮೀನು ಹಿಡಯಲೆಂದು ಸ್ನೇಹಿತರೊಂದಿಗೆ ತೆರಳಿದ್ದು, ಬಳಿಕ ಕೆರೆಯಲ್ಲಿ ಕಣ್ಮರೆಯಾಗಿರುವುದಾಗಿ ಹೇಳಲಾಗಿದೆ. ಬಳಿಕ ಪುತ್ತೂರು ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಅವಿನಾಶ್ ಅವರ ಮೃತದೇಹವನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು: ಮೀನು ಹಿಡಿಯಲು ಹೋದ ಯುವಕ ಕೆರೆಪಾಲು Read More »

ಅಪ್ರಾಪ್ತೆಯ ಮೇಲೆ ಎರಗಿದ ಕಾಮಾಂಧರು| ಮೂವರು ಅರೆಸ್ಟ್

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಬಾಲಕಿಯ ತಾಯಿ ದೂರು ನೀಡಿದ್ದು ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪ್ರಾಪ್ತೆ ಬಾಲಕಿಯ ತಾಯಿ ದೂರು ನೀಡಿದ ಆಧಾರದಲ್ಲಿ ರಿಕ್ಷಾ ಚಾಲಕ ರಿಜ್ವಾನ್ ಎಂದು ಗುರುತಿಸಲಾಗಿದ್ದು ವ್ಯಕ್ತಿಯನ್ನು ದಸ್ತಗಿರಿಗೊಳಪಡಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ. ಇಷ್ಟು ಮಾತ್ರವಲ್ಲದೇ ಅದೇ ಬಾಲಕಿಯು ತನ್ನ ತಾಯಿಯೊಂದಿಗೆ ಹಾಜರಾಗಿ ಸುಮಾರು 5 ತಿಂಗಳ ಹಿಂದೆ ಇಬ್ಬರು ಯುವಕರು ಪರಿಚಿತರಾಗಿ ತನ್ನನ್ನು

ಅಪ್ರಾಪ್ತೆಯ ಮೇಲೆ ಎರಗಿದ ಕಾಮಾಂಧರು| ಮೂವರು ಅರೆಸ್ಟ್ Read More »

ಉಪ್ಪಿನಂಗಡಿ: ನವವಿವಾಹಿತ ಆತ್ಮಹತ್ಯೆ| ಅನುಮಾನ ಹುಟ್ಟಿಸುತ್ತಿದೆ ದುರಂತ|

ಉಪ್ಪಿನಂಗಡಿ: ನವವಿವಾಹಿತ ವ್ಯಕ್ತಿಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಕುದ್ರಡ್ಕ ಎಂಬಲ್ಲಿ ನಡೆದಿದೆ. ಕುದ್ರಡ್ಕ ಕಲ್ಲಿನ ಕೋರೆ ಬಳಿ ಮೃತ ದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ನಾಸಿರ್(27) ಎಂದು ಗುರುತಿಸಲಾಗಿದೆ. ಕಳೆದ ಆದಿತ್ಯವಾರವಷ್ಟೇ ಮೃತ ನಾಸಿರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಒಂದು ವಾರಗಳು ಆಗುವ ಮೊದಲೇ ಆತ್ಮಹತ್ಯೆಗೈದ ರೀತಿಯಲ್ಲಿ ಮೃತದೇಹ ಪತ್ತೆಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಒಂದು ಕಡೆ

ಉಪ್ಪಿನಂಗಡಿ: ನವವಿವಾಹಿತ ಆತ್ಮಹತ್ಯೆ| ಅನುಮಾನ ಹುಟ್ಟಿಸುತ್ತಿದೆ ದುರಂತ| Read More »

ಸುಳ್ಯ| ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ಶಾಕ್ ತಗುಲಿ ಸಾವು

ಸುಳ್ಯ| ತಾಲೂಕಿನ ದೇವಚಳ್ಳ ಗ್ರಾಮದ ಕರಂಗಲ್ಲು ಎಂಬಲ್ಲಿ ನದಿಗೆ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೋರ್ವರು ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಪಟ್ಟವರನ್ನು ಕರಂಗಲ್ಲಿನ ಪ್ರಕಾಶ್(37) ಎಂದು ಗುರುತಿಸಲಾಗಿದೆ. ಪ್ರಕಾಶ್ ನ.5 ರ ತಡರಾತ್ರಿ ಸಮೀಪದ ಕೊಲ್ಲಮೊಗ್ರು ಬಳಿಯ ಮಾಡಬಾಕಿಲು ಭಾಗದಲ್ಲಿ ನದಿಗೆ ಗೆಳೆಯನೊಂದಿಗೆ ಮೀನು ಹಿಡಿಯಲು ತೆರಳಿದ್ದರು. ಬ್ಯಾಟರಿ ಬಳಸಿ ಮೀನು ಹಿಡಿಯುತ್ತಿರುವ ಸಂದರ್ಭದಲ್ಲಿ ಇನ್ವರ್ಟರ್ ಬ್ಯಾಟರಿಯ ವಿದ್ಯುತ್ ಪ್ರವಹಿಸಿ ಪ್ರಕಾಶ್ ಮೃತರಾಗಿರುವುದಾಗಿ ತಿಳಿದು ಬಂದಿದೆ. ಸುಬ್ರಹ್ಮಣ್ಯ ಠಾಣಾ ಎಸ್ ಐ ಜಂಬೂರಾಜ್

ಸುಳ್ಯ| ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ಶಾಕ್ ತಗುಲಿ ಸಾವು Read More »

ಕಾಪು: ಗದ್ದೆಗೆ ದೀಪದ ಬೆಳಕು ತೋರಿಸಲು ಹೋದ ಯುವಕ ವಿಷಜಂತು ಕಡಿದು ಸಾವು

ಕಾಪು: ದೀಪಾವಳಿ ಹಬ್ಬಕ್ಕಾಗಿ ಗದ್ದೆಗೆ ದೀಪದ ಬೆಳಕು ತೋರಿಸಲು ಗದ್ದೆಗೆ ಹೋಗಿದ್ದ ಯುವಕನಿಗೆ ವಿಷ ಜಂತು ಕಡಿದು ಮೃತಪಟ್ಟ ಘಟನೆ ಕಾಪುವಿನಲ್ಲಿ ನ. 11 ರ ಶುಕ್ರವಾರ ನಡೆದಿದೆ. ಮೃತ ಯುವಕನನ್ನು ಕಾಪು ಕಲ್ಯ ನಿವಾಸಿ ರೋಹಿತ್ ಕುಮಾರ್ (26) ಎಂದು ಗುರುತಿಸಲಗಿದೆ. ಲೀಂದ್ರ ಪೂಜೆಯ ಪ್ರಯುಕ್ತ ಗುರುವಾರ ರಾತ್ರಿ ರೋಹಿತ್ ಕುಮಾರ್ ಮತ್ತು ಸಹೋದರರು ಗದ್ದೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಅವರಿಗೆ ವಿಷ ಜಂತು ಕಡಿದಿತ್ತು. ಕುಟುಂಬಸ್ಥರು ನಾಟಿ ವೈದ್ಯರ ಬಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು.

ಕಾಪು: ಗದ್ದೆಗೆ ದೀಪದ ಬೆಳಕು ತೋರಿಸಲು ಹೋದ ಯುವಕ ವಿಷಜಂತು ಕಡಿದು ಸಾವು Read More »

ಕಡಬ: ಆರೋಪಿಯಿಂದ ಹಣ ಪೀಕಿಸುವ ನೆಪದಲ್ಲಿ ಬೆದರಿಕೆ ಆರೋಪ| ಪತ್ರಕರ್ತ ಗಣೇಶ್ ಇಡಾಳ ವಿರುದ್ದ ಎಫ್ಐಆರ್

ಮಂಗಳೂರು: ಮಾನಭಂಗ ಯತ್ನ ಪ್ರಕರಣದ ಆರೋಪಿಯಿಂದ ಹಣ ವಸೂಲಿ ಮಾಡಲು ಬೆದರಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಕಡಬದ ಸ್ಥಳೀಯ ಪತ್ರಕರ್ತನೊಬ್ಬನ ಮೇಲೆ ಪ್ರಕರಣ ದಾಖಲಾಗಿದೆ. ಪತ್ರಕರ್ತ ಗಣೇಶ ಇಡಾಳ ಎಂಬಾತನ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಸೊಬಗು ಟಿವಿ’ ಹಾಗೂ ಅದರ ಮಾಲಿಕರ ಹೆಸರಿನಲ್ಲಿ ಹಣ ವಸೂಲಿ ಮಾಡಲು ಯತ್ನಿಸಿದಲ್ಲದೇ , ಅವರನ್ನು ಅವಾಚ್ಯ ಶಬ್ದಗಳಿಂದ ನಿಂಧಿಸಿ ಕೊಲೆ ಬೆದರಿಕೆ ಹಾಕಿರುವ ದೂರಿಗೆ ಸಂಬಂಧಪಟ್ಟಂತೆ ಪುತ್ತೂರು ಜೆ.ಎಮ್.ಎಫ್.ಸಿ ನ್ಯಾಯಾಲಯದ ಆದೇಶದಂತೆ , ಗಣೇಶ ಇಡಾಳ

ಕಡಬ: ಆರೋಪಿಯಿಂದ ಹಣ ಪೀಕಿಸುವ ನೆಪದಲ್ಲಿ ಬೆದರಿಕೆ ಆರೋಪ| ಪತ್ರಕರ್ತ ಗಣೇಶ್ ಇಡಾಳ ವಿರುದ್ದ ಎಫ್ಐಆರ್ Read More »