ನಿಧಿಗಾಗಿ ಮಹಿಳೆಯ ಬೆತ್ತಲೆ ಪೂಜೆ ನಡೆಸಿದ ಆರು ಜನರ ಬಂಧನ|
ರಾಮನಗರ: ನಿಧಿ ಆಸೆಗಾಗಿ ಬೆತ್ತಲೆ ಪೂಜೆ ಸೇರಿದಂತೆ ಮೌಢ್ಯದ ಆಚರಣೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಆರು ಮಂದಿಯನ್ನು ಜಿಲ್ಲೆಯ ಸಾತನೂರು ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ತಮಿಳುನಾಡು ಮೂಲದವರಾದ ಪಾರ್ಥಸಾರಥಿ, ನಾಗರಾಜು, ಶಶಿಕುಮಾರ್, ಲೋಕೇಶ್, ಮೋಹನ್, ಲಕ್ಷ್ಮಿನರಸಪ್ಪ ಬಂಧಿತರು. ಇವರೊಂದಿಗೆ ಇದ್ದ ಕಾರ್ಮಿಕ ಮಹಿಳೆಯನ್ನು ಪೊಲೀಸರು ರಕ್ಷಿಸಿರುವುದಾಗಿ ತಿಳಿದುಬಂದಿದೆ. ಕನಕಪುರ ತಾಲ್ಲೂಕಿನ ಸಾತನೂರು ಸಮೀಪದ ಭೂಹಳ್ಳಿ ಗ್ರಾಮದ ಶ್ರೀನಿವಾಸ ಎಂಬುವರ ಮನೆಯಲ್ಲಿ ಆಗಾಗ ಗುಟ್ಟಾಗಿ ಪೂಜೆ ನಡೆಯುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ […]
ನಿಧಿಗಾಗಿ ಮಹಿಳೆಯ ಬೆತ್ತಲೆ ಪೂಜೆ ನಡೆಸಿದ ಆರು ಜನರ ಬಂಧನ| Read More »









