ಕ್ರೈಂ

ಅಡಿಕೆ ಕದ್ದ ನೆಪದಲ್ಲಿ ಬಾಲಕನಿಗೆ ಹಿಗ್ಗಾಮುಗ್ಗ ಹಲ್ಲೆ ಪ್ರಕರಣ| ಆರೋಪಿಗಳಿಗೆ ಜಾಮೀನು ದಯಪಾಲಿಸಿದ ಕೋರ್ಟ್..!

ಪುತ್ತೂರು: ಅಡಿಕೆ ಕದ್ದ ನೆಪದಲ್ಲಿ ಗುತ್ತಿಗಾರಿನ 16 ವರ್ಷದ ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕ ಆಕ್ರೋಶ ಕೇಳಿಬಂದಿದ್ದರಿಂದ ಸುಬ್ರಹ್ಮಣ್ಯ ಠಾಣೆಯ ಪೊಲೀಸರು ಮೊದಲಿಗೆ ಸುಮೊಟೊ ಕೇಸು ದಾಖಲಿಸಿದ್ದರು. ಆನಂತರ, ಸ್ವತಃ ಬಾಲಕನೇ ಹೆತ್ತವರ ಜೊತೆಗೆ ಬಂದು ಠಾಣೆಯಲ್ಲಿ ದೂರು ದಾಖಲಿಸಿದ್ದ. ಗುತ್ತಿಗಾರಿನ ಕಡ್ತಲ್ ಕಜೆ ಎಂಬಲ್ಲಿ ಅ.27ರಂದು ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ಹಣ್ಣಡಿಕೆಯನ್ನು ಗೋಣಿಯಲ್ಲಿ ತುಂಬಿಸಿ ಒಯ್ಯುತ್ತಿದ್ದ ಬಾಲಕನನ್ನು, ಆತ ಕದ್ದು ತಂದ […]

ಅಡಿಕೆ ಕದ್ದ ನೆಪದಲ್ಲಿ ಬಾಲಕನಿಗೆ ಹಿಗ್ಗಾಮುಗ್ಗ ಹಲ್ಲೆ ಪ್ರಕರಣ| ಆರೋಪಿಗಳಿಗೆ ಜಾಮೀನು ದಯಪಾಲಿಸಿದ ಕೋರ್ಟ್..! Read More »

ಪುತ್ತೂರು: ಮೀನು ಹಿಡಿಯಲು ಹೋದ ಯುವಕ ಕೆರೆಪಾಲು

ಪುತ್ತೂರು: ಮೀನು ಹಿಡಿಯಲೆಂದು‌‌ ಸ್ನೇಹಿತರ ಜೊತೆ ಹೋದ ಯುವಕನೊಬ್ಬ ಕೆರೆಯಲ್ಲಿ ಮುಳುಗಿ‌ ಸಾವನ್ನಪ್ಪಿದ ಘಟನೆ ಬೆಳ್ಳಾರೆಯಿಂದ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಪುತ್ತೂರು ಸಂಪ್ಯದ ಮೂಲೆ ನಿವಾಸಿ ಸುಂದರ ಅವರ ಪುತ್ರ ಅವಿನಾಶ್ (23ವ) ಎಂದು ಗುರುತಿಸಲಾಗಿದೆ. ಈತ ಬೆಳ್ಳಾರೆಯ ಮೊಗಪ್ಪೆ ಕೆರೆಯಲ್ಲಿ ಮೀನು ಹಿಡಯಲೆಂದು ಸ್ನೇಹಿತರೊಂದಿಗೆ ತೆರಳಿದ್ದು, ಬಳಿಕ ಕೆರೆಯಲ್ಲಿ ಕಣ್ಮರೆಯಾಗಿರುವುದಾಗಿ ಹೇಳಲಾಗಿದೆ. ಬಳಿಕ ಪುತ್ತೂರು ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಅವಿನಾಶ್ ಅವರ ಮೃತದೇಹವನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು: ಮೀನು ಹಿಡಿಯಲು ಹೋದ ಯುವಕ ಕೆರೆಪಾಲು Read More »

ಅಪ್ರಾಪ್ತೆಯ ಮೇಲೆ ಎರಗಿದ ಕಾಮಾಂಧರು| ಮೂವರು ಅರೆಸ್ಟ್

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಬಾಲಕಿಯ ತಾಯಿ ದೂರು ನೀಡಿದ್ದು ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪ್ರಾಪ್ತೆ ಬಾಲಕಿಯ ತಾಯಿ ದೂರು ನೀಡಿದ ಆಧಾರದಲ್ಲಿ ರಿಕ್ಷಾ ಚಾಲಕ ರಿಜ್ವಾನ್ ಎಂದು ಗುರುತಿಸಲಾಗಿದ್ದು ವ್ಯಕ್ತಿಯನ್ನು ದಸ್ತಗಿರಿಗೊಳಪಡಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ. ಇಷ್ಟು ಮಾತ್ರವಲ್ಲದೇ ಅದೇ ಬಾಲಕಿಯು ತನ್ನ ತಾಯಿಯೊಂದಿಗೆ ಹಾಜರಾಗಿ ಸುಮಾರು 5 ತಿಂಗಳ ಹಿಂದೆ ಇಬ್ಬರು ಯುವಕರು ಪರಿಚಿತರಾಗಿ ತನ್ನನ್ನು

ಅಪ್ರಾಪ್ತೆಯ ಮೇಲೆ ಎರಗಿದ ಕಾಮಾಂಧರು| ಮೂವರು ಅರೆಸ್ಟ್ Read More »

ಉಪ್ಪಿನಂಗಡಿ: ನವವಿವಾಹಿತ ಆತ್ಮಹತ್ಯೆ| ಅನುಮಾನ ಹುಟ್ಟಿಸುತ್ತಿದೆ ದುರಂತ|

ಉಪ್ಪಿನಂಗಡಿ: ನವವಿವಾಹಿತ ವ್ಯಕ್ತಿಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಕುದ್ರಡ್ಕ ಎಂಬಲ್ಲಿ ನಡೆದಿದೆ. ಕುದ್ರಡ್ಕ ಕಲ್ಲಿನ ಕೋರೆ ಬಳಿ ಮೃತ ದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ನಾಸಿರ್(27) ಎಂದು ಗುರುತಿಸಲಾಗಿದೆ. ಕಳೆದ ಆದಿತ್ಯವಾರವಷ್ಟೇ ಮೃತ ನಾಸಿರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಒಂದು ವಾರಗಳು ಆಗುವ ಮೊದಲೇ ಆತ್ಮಹತ್ಯೆಗೈದ ರೀತಿಯಲ್ಲಿ ಮೃತದೇಹ ಪತ್ತೆಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಒಂದು ಕಡೆ

ಉಪ್ಪಿನಂಗಡಿ: ನವವಿವಾಹಿತ ಆತ್ಮಹತ್ಯೆ| ಅನುಮಾನ ಹುಟ್ಟಿಸುತ್ತಿದೆ ದುರಂತ| Read More »

ಸುಳ್ಯ| ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ಶಾಕ್ ತಗುಲಿ ಸಾವು

ಸುಳ್ಯ| ತಾಲೂಕಿನ ದೇವಚಳ್ಳ ಗ್ರಾಮದ ಕರಂಗಲ್ಲು ಎಂಬಲ್ಲಿ ನದಿಗೆ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೋರ್ವರು ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಪಟ್ಟವರನ್ನು ಕರಂಗಲ್ಲಿನ ಪ್ರಕಾಶ್(37) ಎಂದು ಗುರುತಿಸಲಾಗಿದೆ. ಪ್ರಕಾಶ್ ನ.5 ರ ತಡರಾತ್ರಿ ಸಮೀಪದ ಕೊಲ್ಲಮೊಗ್ರು ಬಳಿಯ ಮಾಡಬಾಕಿಲು ಭಾಗದಲ್ಲಿ ನದಿಗೆ ಗೆಳೆಯನೊಂದಿಗೆ ಮೀನು ಹಿಡಿಯಲು ತೆರಳಿದ್ದರು. ಬ್ಯಾಟರಿ ಬಳಸಿ ಮೀನು ಹಿಡಿಯುತ್ತಿರುವ ಸಂದರ್ಭದಲ್ಲಿ ಇನ್ವರ್ಟರ್ ಬ್ಯಾಟರಿಯ ವಿದ್ಯುತ್ ಪ್ರವಹಿಸಿ ಪ್ರಕಾಶ್ ಮೃತರಾಗಿರುವುದಾಗಿ ತಿಳಿದು ಬಂದಿದೆ. ಸುಬ್ರಹ್ಮಣ್ಯ ಠಾಣಾ ಎಸ್ ಐ ಜಂಬೂರಾಜ್

ಸುಳ್ಯ| ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ಶಾಕ್ ತಗುಲಿ ಸಾವು Read More »

ಕಾಪು: ಗದ್ದೆಗೆ ದೀಪದ ಬೆಳಕು ತೋರಿಸಲು ಹೋದ ಯುವಕ ವಿಷಜಂತು ಕಡಿದು ಸಾವು

ಕಾಪು: ದೀಪಾವಳಿ ಹಬ್ಬಕ್ಕಾಗಿ ಗದ್ದೆಗೆ ದೀಪದ ಬೆಳಕು ತೋರಿಸಲು ಗದ್ದೆಗೆ ಹೋಗಿದ್ದ ಯುವಕನಿಗೆ ವಿಷ ಜಂತು ಕಡಿದು ಮೃತಪಟ್ಟ ಘಟನೆ ಕಾಪುವಿನಲ್ಲಿ ನ. 11 ರ ಶುಕ್ರವಾರ ನಡೆದಿದೆ. ಮೃತ ಯುವಕನನ್ನು ಕಾಪು ಕಲ್ಯ ನಿವಾಸಿ ರೋಹಿತ್ ಕುಮಾರ್ (26) ಎಂದು ಗುರುತಿಸಲಗಿದೆ. ಲೀಂದ್ರ ಪೂಜೆಯ ಪ್ರಯುಕ್ತ ಗುರುವಾರ ರಾತ್ರಿ ರೋಹಿತ್ ಕುಮಾರ್ ಮತ್ತು ಸಹೋದರರು ಗದ್ದೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಅವರಿಗೆ ವಿಷ ಜಂತು ಕಡಿದಿತ್ತು. ಕುಟುಂಬಸ್ಥರು ನಾಟಿ ವೈದ್ಯರ ಬಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು.

ಕಾಪು: ಗದ್ದೆಗೆ ದೀಪದ ಬೆಳಕು ತೋರಿಸಲು ಹೋದ ಯುವಕ ವಿಷಜಂತು ಕಡಿದು ಸಾವು Read More »

ಕಡಬ: ಆರೋಪಿಯಿಂದ ಹಣ ಪೀಕಿಸುವ ನೆಪದಲ್ಲಿ ಬೆದರಿಕೆ ಆರೋಪ| ಪತ್ರಕರ್ತ ಗಣೇಶ್ ಇಡಾಳ ವಿರುದ್ದ ಎಫ್ಐಆರ್

ಮಂಗಳೂರು: ಮಾನಭಂಗ ಯತ್ನ ಪ್ರಕರಣದ ಆರೋಪಿಯಿಂದ ಹಣ ವಸೂಲಿ ಮಾಡಲು ಬೆದರಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಕಡಬದ ಸ್ಥಳೀಯ ಪತ್ರಕರ್ತನೊಬ್ಬನ ಮೇಲೆ ಪ್ರಕರಣ ದಾಖಲಾಗಿದೆ. ಪತ್ರಕರ್ತ ಗಣೇಶ ಇಡಾಳ ಎಂಬಾತನ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಸೊಬಗು ಟಿವಿ’ ಹಾಗೂ ಅದರ ಮಾಲಿಕರ ಹೆಸರಿನಲ್ಲಿ ಹಣ ವಸೂಲಿ ಮಾಡಲು ಯತ್ನಿಸಿದಲ್ಲದೇ , ಅವರನ್ನು ಅವಾಚ್ಯ ಶಬ್ದಗಳಿಂದ ನಿಂಧಿಸಿ ಕೊಲೆ ಬೆದರಿಕೆ ಹಾಕಿರುವ ದೂರಿಗೆ ಸಂಬಂಧಪಟ್ಟಂತೆ ಪುತ್ತೂರು ಜೆ.ಎಮ್.ಎಫ್.ಸಿ ನ್ಯಾಯಾಲಯದ ಆದೇಶದಂತೆ , ಗಣೇಶ ಇಡಾಳ

ಕಡಬ: ಆರೋಪಿಯಿಂದ ಹಣ ಪೀಕಿಸುವ ನೆಪದಲ್ಲಿ ಬೆದರಿಕೆ ಆರೋಪ| ಪತ್ರಕರ್ತ ಗಣೇಶ್ ಇಡಾಳ ವಿರುದ್ದ ಎಫ್ಐಆರ್ Read More »

ಸುಳ್ಯ| ಅಡಿಕೆ ಕದ್ದ ಬಾಲಕನಿಗೆ ಮಾರಣಾಂತಿಕ ಹಲ್ಲೆ| 10 ಮಂದಿ ಮೇಲೆ ಎಫ್ಐಆರ್| ತಲೆಮರೆಸಿಕೊಂಡ ಆರೋಪಿಗಳು

ಸುಳ್ಯ: ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆಯ ಪುರ್ಲುಮಕ್ಕಿ ಎಂಬಲ್ಲಿ ಕಳೆದ ವಾರ ಹಣ್ಣು ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನಿಗೆ ಹಲ್ಲೆ ನಡೆಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದು ಹಲ್ಲೆ ನಡೆಸಿದ 10 ಮಂದಿ ಮೇಲೆ ಎಫ್ ಐ ಆರ್ ದಾಖಲಾಗಿದೆ. ಗುತ್ತಿಗಾರಿನ 16 ವರ್ಷದ ಬಾಲಕನಿಗೆ ಅಡಿಕೆ ಕದ್ದ ಆರೋಪದಲ್ಲಿ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಮಾತ್ರವಲ್ಲದೆ ಹಲ್ಲೆ ನಡೆಸಿದ ವಿಡಿಯೋ ಕೂಡ ಗ್ರೂಪ್‌ಗಳಲ್ಲಿ ಹರಿಯಬಿಡಲಾಗಿದೆ. ಇದರ

ಸುಳ್ಯ| ಅಡಿಕೆ ಕದ್ದ ಬಾಲಕನಿಗೆ ಮಾರಣಾಂತಿಕ ಹಲ್ಲೆ| 10 ಮಂದಿ ಮೇಲೆ ಎಫ್ಐಆರ್| ತಲೆಮರೆಸಿಕೊಂಡ ಆರೋಪಿಗಳು Read More »

ಸುಳ್ಯ| ಹಳೆ ಕಬ್ಬಿಣ ಸಾಮಾಗ್ರಿ ತೆರವು ವೇಳೆ ಕುಸಿದ ಗೋಡೆ| ಗುಜರಿ ವ್ಯಾಪಾರಿ ದುರ್ಮರಣ

ಸುಳ್ಯ: ಇಲ್ಲಿನ ಗಾಂಧಿನಗರ ಬಳಿಯ ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡದ ಕಬ್ಬಿಣ ಸಮಾಗ್ರಿಗಳನ್ನು ತೆಗೆಯುತ್ತಿದ್ದ ವೇಳೆ ಗೋಡೆ ಕುಸಿದ ಪರಿಣಾಮ ಗುಜರಿ ವ್ಯಾಪಾರಿಯೊಬ್ಬರು ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತ ವ್ಯಕ್ತಿಯನ್ನು ಸುಳ್ಯದ ಎಪಿಎಂಸಿ ಬಳಿ ಗುಜಿರಿ ವ್ಯಾಪಾರ ನಡೆಸುತ್ತಿದ್ದ ಅಬ್ದುಲ್ ಖಾದರ್ (ಅಂದುಕಾರ್)ಎಂದು ಗುರುತಿಸಲಾಗಿದೆ. 48 ವರ್ಷ ವಯಸ್ಸಿನ ಅಬ್ದುಲ್ ಖಾದರ್ ಹಲವಾರು ವರ್ಷಗಳಿಂದ ಸುಳ್ಯದಲ್ಲಿ ಗುಜರಿ ವ್ಯಾಪಾರ ನಡೆಸುತ್ತಿದ್ದು, ಹಳೆ ಕಟ್ಟಡದ ಕಬ್ಬಿಣ ಸಾಮಾಗ್ರಿಗಳನ್ನು ತೆಗೆಯುವ ವ್ಯಾಪಾರ ನಡೆಸುತ್ತಿದ್ದರು. ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿ

ಸುಳ್ಯ| ಹಳೆ ಕಬ್ಬಿಣ ಸಾಮಾಗ್ರಿ ತೆರವು ವೇಳೆ ಕುಸಿದ ಗೋಡೆ| ಗುಜರಿ ವ್ಯಾಪಾರಿ ದುರ್ಮರಣ Read More »

ಗೃಹ ಸಚಿವರ ಹೆಸರಲ್ಲಿ ವಂಚನೆ| ಆರೋಪಿ ಅಂದರ್

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ್ದ ಬಿಜೆಪಿ ಮುಖಂಡನನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಮತ್ತು ಕಬ್ಬನ್‌ಪಾರ್ಕ್ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಭವಾನಿ ರಾವ್‌ ಮೋರೆ(37) ಬಂಧಿತ ಆರೋಪಿಯಾಗಿದ್ದು, ಈತ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ವಿಸ್ತಾರಕ ಕೂಡ ಆಗಿದ್ದ.

ಗೃಹ ಸಚಿವರ ಹೆಸರಲ್ಲಿ ವಂಚನೆ| ಆರೋಪಿ ಅಂದರ್ Read More »