ಕ್ರೈಂ

ಸುಳ್ಯ : ಅಡ್ಕಾರ್ ನಲ್ಲಿ ಕಾರು ಅಪಘಾತ: ಮೂವರು ಗಂಭೀರ

ಸುಳ್ಯ : ಅಡ್ಕಾರ್ ಮಾವಿನ ಕಟ್ಟೆಯಲ್ಲಿ ಕಾರು ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಇಂದು ಸಂಭವಿಸಿದೆ. ಮುಂಜಾನೆಯಿಂದ ಸುರಿಯುತ್ತಿರುವ ಮಳೆಯಿಂದ ಹಾಗೂ ವೇಗವಾಗಿ ಬಂದ ಹಿನ್ನೆಲೆ ಚಾಲಕ ನಿಯಂತ್ರಣ ಕಳೆದು ಕೊಂಡಿದ್ದಾನೆ, ಬಳಿಕ ಕಾರು ಪಲ್ಟಿಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.ಇದೇ ವೇಳೆ ಕಾರಿನಲ್ಲಿ ಇದ್ದ ಮೂವರು ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರನ್ನು ಮೈಸೂರಿನ ಶ್ರೇಯಸ್ಸ್, ಭುವನ್ ಹಾಗೂ ಸರ್ವೇಶ್ ಎಂದು ಗುರುತಿಸಲಾಗಿದೆ, ಅವರು ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಳ್ಯ : ಅಡ್ಕಾರ್ ನಲ್ಲಿ ಕಾರು ಅಪಘಾತ: ಮೂವರು ಗಂಭೀರ Read More »

ವೈದ್ಯರ ನಿರ್ಲಕ್ಷ್ಯದಿಂದ ಪ್ರೈವೇಟ್ ಪಾರ್ಟ್ ಡ್ಯಾಮೇಜ್| ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು ಅಚಾತುರ್ಯ|

ಚಿಕ್ಕಮಗಳೂರು: ಆಪರೇಷನ್ ಗೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬರ ಖಾಸಗಿ ಅಂಗಕ್ಕೆ ಗಾಯಗೊಳಿಸಿರುವ ಘಟನೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ಗಾಯಗೊಂಡಿರುವ ಗಾಯಾಳು ಪೊಲೀಸರ ಮೊರೆ ಹೋಗಿದ್ದಾರೆ. ಹರ್ನಿಯಾ ಆಪರೇಷನ್ ಗೆಂದು ಅಕ್ಟೋಬರ್ 12ರಂದು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಯೋಗೇಂದ್ರ ಎಂಬವರು ದಾಖಲಾಗಿದ್ದು, ಆಪರೇಷನ್ ವೇಳೆಯಲ್ಲಿ ಅವರ ಖಾಸಗಿ ಅಂಗಕ್ಕೆ ಪೈಪ್ ಸಿಕ್ಕಿಸಲಾಗಿತ್ತು.ತೀವ್ರ ತರವಾಗಿ ಪೈಪ್ ಚುಚ್ಚಿದ್ದರಿಂದ ಅವರ ಖಾಸಗಿ ಅಂಗಕ್ಕೆ ಗಾಯವಾಗಿತ್ತು. ಈ ಬಗ್ಗೆ ಅವರು ಆಸ್ಪತ್ರೆ ಸಿಬ್ಬಂದಿ ಸಹಿತ ವೈದ್ಯರ ಬಳಿಯಲ್ಲಿ ವಿಚಾರಿಸಿದಾಗ ಉಡಾಫೆಯಾಗಿ ಉತ್ತರಿಸಿದ್ದು

ವೈದ್ಯರ ನಿರ್ಲಕ್ಷ್ಯದಿಂದ ಪ್ರೈವೇಟ್ ಪಾರ್ಟ್ ಡ್ಯಾಮೇಜ್| ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು ಅಚಾತುರ್ಯ| Read More »

ಪುತ್ತೂರು:ಅಪ್ರಾಪ್ತೆಗೆ ಗರ್ಭದಾನ ಮಾಡಿದ ರಾಜಕೀಯ ಮುಂದಾಳು| ಆರೋಪಿಯ ಬಂಧನಕ್ಕೆ ದಲಿತ ಸಂಘಟನಾ ಸಮಿತಿ‌ ಆಗ್ರಹ

ಪುತ್ತೂರು: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಪಕ್ಷವೊಂದರ ಹಿರಿಯ ಮುಖಂಡ ಅತ್ಯಾಚಾರ ನಡೆಸಿದ್ದು, ಆತನನ್ನು ತಕ್ಷಣವೇ ಬಂಧಿಸಬೇಕು ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಒತ್ತಾಯ ಮಾಡಿದೆ. ಈ ಬಗ್ಗೆ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಸಮಿತಿ ಸದಸ್ಯರು, ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಹಿರಿಯ ರಾಜಕೀಯ ನೇತಾರ ನಾರಾಯಣ ರೈ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ಕುಟುಂಬ ಅಲ್ಲಿನ ಭೂ ಮಾಲಕ

ಪುತ್ತೂರು:ಅಪ್ರಾಪ್ತೆಗೆ ಗರ್ಭದಾನ ಮಾಡಿದ ರಾಜಕೀಯ ಮುಂದಾಳು| ಆರೋಪಿಯ ಬಂಧನಕ್ಕೆ ದಲಿತ ಸಂಘಟನಾ ಸಮಿತಿ‌ ಆಗ್ರಹ Read More »

ನಡುರಸ್ತೆಯಲ್ಲೇ ಮಹಿಳೆಯ ಕತ್ತು ಸೀಳಿ ಕೊಲೆ| ಆಸ್ತಿಗಾಗಿ ಹೆತ್ತ‌ಮ್ಮನಿಗೆ ಸ್ಕೆಚ್ ಹಾಕಿದ್ನಾ ಪುತ್ರ..?

ಚಿಕ್ಕಬಳ್ಳಾಪುರ: ಮಹಿಳೆಯೊಬ್ಬರು ದಸರಾ ಹಬ್ಬದ ಪ್ರಯುಕ್ತ ದೇವಸ್ಥಾನಕ್ಕೆ ತೆರಳಿ ರಾತ್ರಿ ಮನೆಗೆ ವಾಪಸ್ ಬರುತ್ತಿದ್ದಂತೆ ಇಬ್ಬರು ಸೇರಿ ಚಾಕುವಿನಿಂದ ಕತ್ತು ಸೀಳಿ ಭೀಕರವಾಗಿ ಕೊಲೆಗೈದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಧರ್ಮಛತ್ರ ರಸ್ತೆಯಲ್ಲಿ ಶುಕ್ರವಾರ ರಾತ್ರಿ 9.30ರ ಸುಮಾರಿಗೆ ಘಟನೆ ನಡೆದಿದೆ. ಧರ್ಮಛತ್ರ ರಸ್ತೆಯ ನಿವಾಸಿ 55 ವರ್ಷದ ನಳಿನಿ ಕೊಲೆಯಾದವರು. ಕೃತ್ಯದ ವೇಳೆ ಚೀರಾಡುವ ಶಬ್ದ ಕೇಳಿ ಓಡಿಬಂದ ಸ್ಥಳೀಯರು ಇಬ್ಬರು ಕೊಲೆಗಡುಕರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೃತ್ಯಕ್ಕೆ ಕುಟುಂಬದ

ನಡುರಸ್ತೆಯಲ್ಲೇ ಮಹಿಳೆಯ ಕತ್ತು ಸೀಳಿ ಕೊಲೆ| ಆಸ್ತಿಗಾಗಿ ಹೆತ್ತ‌ಮ್ಮನಿಗೆ ಸ್ಕೆಚ್ ಹಾಕಿದ್ನಾ ಪುತ್ರ..? Read More »

ಪುತ್ರಿಯನ್ನೇ ಅತ್ಯಾಚಾರ ನಡೆಸಿದ ಎಸ್.ಪಿ ಜಿಲ್ಲಾಧ್ಯಕ್ಷ| ಇತರ ನಾಯಕರೊಂದಿಗೂ ಮಲಗಲು ಬಲವಂತ| ಈತನೂ ಒಬ್ಬ ತಂದೆಯೇ..?

ಲಕ್ನೋ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಾರ್ಟಿ ಜಿಲ್ಲಾಧ್ಯಕ್ಷನೊಬ್ಬ ತನ್ನ ಪುತ್ರಿಯ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ, ಹಣಕ್ಕಾಗಿ ರಾಜಕೀಯ ನಾಯಕರ ಜೊತೆಗೆ ಸಹಕರಿಸುವಂತೆ ಬಲವಂತ ಪಡಿಸಿದ ಘಟನೆ ಬೆಳಕಿಗೆ ಬಂದಿದ್ದು 28 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಲಲಿತ್ ಪುರ ಜಿಲ್ಲೆಯಲ್ಲಿ ಘಟನೆ ನಡೆದಿದ್ದು ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿದ್ದಾರೆ. 11ನೇ ಕ್ಲಾಸ್ ಓದುತ್ತಿರುವ ಅಪ್ರಾಪ್ತ ಬಾಲಕಿ ಸಂತ್ರಸ್ತೆಯಾಗಿದ್ದು, ತನ್ನ ಮೇಲೆ ಅತ್ಯಾಚಾರ ನಡೆಸಿರುವ 28 ಮಂದಿ ವಿರುದ್ಧ ದೂರು ನೀಡಿದ್ದಾಳೆ. ಈಕೆಯ ತಂದೆ ತಿಲಕ್ ಯಾದವ್

ಪುತ್ರಿಯನ್ನೇ ಅತ್ಯಾಚಾರ ನಡೆಸಿದ ಎಸ್.ಪಿ ಜಿಲ್ಲಾಧ್ಯಕ್ಷ| ಇತರ ನಾಯಕರೊಂದಿಗೂ ಮಲಗಲು ಬಲವಂತ| ಈತನೂ ಒಬ್ಬ ತಂದೆಯೇ..? Read More »

ಪೇಸ್ಬುಕ್ ಗೆಳೆಯನಿಂದ ಅಪ್ರಾಪ್ತೆಯ ಅತ್ಯಾಚಾರ

ಬಲಿಯಾ: ಫೇಸ್‍ಬುಕ್ ಜಾಲತಾಣದಲ್ಲಿ ಪರಿಚಯಗೊಂಡ ಕಾಮುಕನೊಬ್ಬನ 16 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣ ಉತ್ತರಪ್ರದೇಶದ ಬಲಿಯಾ ಜಿಲ್ಲೆಯ ದೊಕಾಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹರ್ದೋಯಿ ಜಿಲ್ಲೆಯ 31 ವರ್ಷದ ಯುವಕ ಫೇಸ್‍ಬುಕ್‍ನಲ್ಲಿ ಬಾಲಕಿಯನ್ನು ಪರಿಚಯಿಸಿಕೊಂಡು ನಿನ್ನನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಆತನ ಮಾತು ನಂಬಿ ಕಳೆದ ಆ.25 ರಂದು ಬಾಲಕಿ ಆತನ ಬಳಿಗೆ ತೆರಳಿದ್ದಾಗ ಆತ ಪುಸಲಾಯಿಸಿ ಅತ್ಯಚಾರ ನಡೆಸಿ ಅಪ್ರಾಪ್ತೆಯೊಂದಿಗೆ ತಲೆಮರೆಸಿಕೊಂಡಿದ್ದ. ತನ್ನ ಮಗಳ ನಾಪತ್ತೆ ಕುರಿತಂತೆ ಬಾಲಕಿಯ

ಪೇಸ್ಬುಕ್ ಗೆಳೆಯನಿಂದ ಅಪ್ರಾಪ್ತೆಯ ಅತ್ಯಾಚಾರ Read More »

ಎಂಡೋಪೀಡಿತ ಯುವಕನ ಮೇಲೆ ಅತ್ಯಾಚಾರ| ಆರೋಪಿ ಅಂದರ್

ಪುತ್ತೂರು: ಅನ್ಯಕೋಮಿನ ವ್ಯಕ್ತಿಯಿಂದ ಎಂಡೋಸಲ್ಪಾನ್ ಪೀಡಿತ 20 ವರ್ಷದ ಯುವಕನೊಬ್ಬನ ಮೇಲೆ ಅತ್ಯಾಚಾರ ನಡೆದ ಘಟನೆ ಪುತ್ತೂರಿನ ಮುರದಲ್ಲಿ ಬೆಳಕಿಗೆ ಬಂದಿದೆ. ಬಂಧಿತ ಆರೋಪಿ ಮುರ ನಿವಾಸಿ ಮಹಮ್ಮದ್ ಹನೀಫ್ (50) ಎನ್ನಲಾಗಿದೆ. ಈ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಯುವಕನ ತಂದೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯನ್ನು ಪುತ್ತೂರು ನಗರ ಠಾಣೆಯಲ್ಲಿ ಬಂಧಿಸಿ, ತನಿಖೆ ನಡೆಸಲಾಗುತ್ತಿದೆ. ಶುಕ್ರವಾರ ಸಂಜೆ ಯುವಕ ಸಂಜೆ 6.00 ಗಂಟೆಗೆ ವಾಕಿಂಗ್ ಗೆಂದು ಮನೆಯಿಂದ ಹೋಗಿದ್ದು ಮನೆಗೆ ಮರಳಿದ ಸಂದರ್ಭದಲ್ಲಿ ಆತನ

ಎಂಡೋಪೀಡಿತ ಯುವಕನ ಮೇಲೆ ಅತ್ಯಾಚಾರ| ಆರೋಪಿ ಅಂದರ್ Read More »

ಭೀಕರ ಅಪಘಾತ| ಪುಂಜಾಲಕಟ್ಟೆ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಾವು|

ಬೆಳ್ತಂಗಡಿ: ಬೈಕ್ ಮತ್ತು ಆಕ್ಟಿವ್ ನಡುವೆ ಭೀಕರ ಅಪಘಾತ ಸಂಭವಿಸಿ ಪುಂಜಾಲಕಟ್ಟೆಯ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ಪುಂಜಾಲಕಟ್ಟೆ ಸಮೀಪದ ನೇರಳಕಟ್ಟೆ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅಬೂಬಕ್ಕರ್(48) ಎಂದು ಗುರುತಿಸಲಾಗಿದೆ. ಅಬೂಬಕ್ಕರ್ ಅವರು ಕರ್ತವ್ಯ ಮುಗಿಸಿ ತನ್ನ ಬೈಕಿನಲ್ಲಿ ಮನೆಗೆ ತಡರಳುತ್ತಿದ್ದಾಗ ಎದುರಿನಿಂದ ಬಂದ ಜುಪಿಟರ್ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಭೀಕರ ಅಪಘಾತ| ಪುಂಜಾಲಕಟ್ಟೆ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಾವು| Read More »

ತಾಯಿ-ಮಗನಿಗೆ ಗುಂಡಿಕ್ಕಿ ‌ವ್ಯಕ್ತಿ ಆತ್ಮಹತ್ಯೆ

ಕೊಡಗು: ತಾಯಿ, ಮಗನಿಗೆ ಗುಂಡಿಕ್ಕಿ ವ್ಯಕ್ತಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕಿರಗೂರು ಗ್ರಾಮದಲ್ಲಿ ನಡೆದಿದೆ. ಮಗ ಮಧು(42) ಸಾವು, ತಾಯಿ ಯಶೋದಾ ಸ್ಥಿತಿ ಗಂಭೀರವಾಗಿದ್ದು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪಿ ಆಲೆಮಾಡ ಸಾಗರ್(52) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಆರೋಪಿ ಆಲೆಮಾಡ ಸಾಗರ್ ತಾಯಿ, ಮಗನಿಗೆ ಶೋಟ್ ಮಾಡಿದ್ದಾನೆ. ಈ ಪೈಕಿ ಮಗ ಮಧು ಸ್ಥಳದಲ್ಲೇ ಮೃತಪಟ್ಟಿದ್ದು ತಾಯಿ ಯಶೋದಾ ಸ್ಥಿತಿ ಗಂಭೀರವಾಗಿದೆ. ಇನ್ನು ಶೋಟ್ ಮಾಡಿದ ಬಳಿಕ ಆರೋಪಿ

ತಾಯಿ-ಮಗನಿಗೆ ಗುಂಡಿಕ್ಕಿ ‌ವ್ಯಕ್ತಿ ಆತ್ಮಹತ್ಯೆ Read More »

ಆಸ್ಪತ್ರೆಯಲ್ಲಿ ‌ಮಗುವನ್ನು ಬದಲಾಯಿಸಿದರಾ ನರ್ಸ್ ಗಳು| ಲೇಡಿಗೋಷನ್ ಆಸ್ಪತ್ರೆ ಸಿಬ್ಬಂದಿ ಮೇಲೆ ಪೋಷಕರ ಆರೋಪ

ಮಂಗಳೂರು : ನಗರದ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಮಗುವನ್ನು ಅದಲು ಬದಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು ಡಿಸ್ಚಾರ್ಜ್ ವೇಳೆ ಆಸ್ಪತ್ರೆ ಸಿಬ್ಬಂದಿ ಗಂಡು ಮಗು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸೆಪ್ಟಂಬರ್ 28 ರಂದು ಉಡುಪಿ ಜಿಲ್ಲೆಯ ಕುಂದಾಪುರ ನಿವಾಸಿ ಅಂಬ್ರೀನ್ ಅವರಿಗೆ ಮಂಗಳೂರಿನ ಲೇಡಿಗೋಶನ್ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಹೆರಿಗೆ ಆಗಿತ್ತು. ಆಸ್ಪತ್ರೆಯಲ್ಲಿ ಇದ್ದಷ್ಟು ದಿನ ಮಗುವನ್ನು ತೋರಿಸಲು ಸಿಬ್ಬಂದಿಗಳು ನಿರಾಕರಿಸಿದ್ದರು ಹಾಗೂ 18 ದಿನಗಳ ಕಾಲ

ಆಸ್ಪತ್ರೆಯಲ್ಲಿ ‌ಮಗುವನ್ನು ಬದಲಾಯಿಸಿದರಾ ನರ್ಸ್ ಗಳು| ಲೇಡಿಗೋಷನ್ ಆಸ್ಪತ್ರೆ ಸಿಬ್ಬಂದಿ ಮೇಲೆ ಪೋಷಕರ ಆರೋಪ Read More »