ಶ್ರದ್ಧಾಂಜಲಿ ಸಲ್ಲಿಸಿ ಆತ್ಮಹತ್ಯೆಗೆ ಶರಣಾದ ಅಪ್ಪು ಅಭಿಮಾನಿ
ಬೆಳಗಾವಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿನಿಂದ ನೊಂದ ಅಭಿಮಾನಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಥಣಿಯಲ್ಲಿ ವರದಿಯಾಗಿದೆ. ಮೃತರನ್ನು ರಾಹುಲ್ ಗಾಡಿವಡ್ಡರ (26) ಎಂದು ಗುರುತಿಸಲಾಗಿದೆ.ಪುನೀತ್ ಅವರ ಅಪ್ಪಟ ಅಭಿಮಾನಿಯಾಗಿದ್ದ ಇವರು ಶುಕ್ರವಾರ ಸಂಜೆ ಗೆಳೆಯರೊಂದಿಗೆ ಸೇರಿ ಪುನೀತ್ ರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮನೆಗೆ ತೆರಳಿದ್ದರು. ಮನೆಗೆ ತೆರಳಿದ ಸಂದರ್ಭದಲ್ಲಿ ಅತೀವ್ರ ದುಃಖದಲ್ಲಿದ್ದ ವ್ಯಕ್ತಿ ಇದ್ದಕ್ಕಿಂದ್ದಂತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರದ್ಧಾಂಜಲಿ ಸಲ್ಲಿಸಿ ಆತ್ಮಹತ್ಯೆಗೆ ಶರಣಾದ ಅಪ್ಪು ಅಭಿಮಾನಿ Read More »









