ಕ್ರೈಂ

ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಸುಬ್ರಹ್ಮಣ್ಯ: ಇಲ್ಲಿನ ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯೊಬ್ವರ ಮೃತದೇಹ ಪತ್ತೆಯಾಗಿದೆ. ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳೀಯರ ನೆರವಿನೊಂದಿಗೆ ಕುಮಾರಧಾರ ನದಿಯಿಂದ ಮೃತ ದೇಹವನ್ನು ಮೇಲೆಕ್ಕೆತ್ತಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪ್ರಾಥಮಿಕ ಅರೋಗ್ಯ ಕೇಂದ್ರದ ಶವಾಗಾರದಲ್ಲಿ ಮೃತ ದೇಹವನ್ನು ಇರಿಸಲಾಗಿದೆ. ಮೃತ ಮಹಿಳೆಯ ಪ್ರಾಯ ಸುಮಾರು 55 ವರ್ಷ ಆಗಬಹುದೆಂದು ಅಂದಾಜಿಸಲಾಗಿದೆ. ವಿಳಾಸ ಪತ್ತೆ ಇನ್ನಷ್ಟೇ ಆಗಬೇಕಿದ್ದು,ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಜಂಬೂರಾಜ್ ಮಹಾಜನ್, ಎ. ಎಸ್.ಐ ಮೋಹನ್. ಕೆ,ಮಹಾಲಕ್ಷ್ಮಿ, ಮಹೇಶ್ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ Read More »

ಬಂಟ್ವಾಳ: ಭಗವಧ್ವಜ ಕಟ್ಟೆಗೆ ಕಿಡಿಗೇಡಿಗಳಿಂದ ಹಾನಿ| ಸಿಸಿ ಟಿವಿಯಲ್ಲಿ ಕೃತ್ಯ ದಾಖಲು|

ಬಂಟ್ವಾಳ: ಇಲ್ಲಿನ ಎಸ್ ವಿಎಸ್ ಕಾಲೇಜಿನ ಬಳಿ ಇರುವ ಮಂಡಾಡಿ ಮಾರ್ಗಸೂಚಿ ಕಟ್ಟೆ ಹಾಗೂ ಅದರಲ್ಲಿದ್ದ ಭಗವಾಧ್ವಜ ಹಾಗೂ ಹನುಮನ ಚಿತ್ರವನ್ನು ದುಷ್ಕರ್ಮಿಗಳು ಹಾನಿ ಮಾಡಿದ ಘಟನೆ ಅ.18ರಂದು ತಡರಾತ್ರಿ ನಡೆದಿದೆ. ಕಳೆದ 10-12 ವರ್ಷಗಳಿಂದ ಈ ಕಟ್ಟೆ ಇದ್ದು , ಕಳೆದ ಕೆಲವು ದಿನಗಳ ಹಿಂದೆ ವಿಶ್ವ ಹಿಂದೂ ಪರಿಷತ್ ಮಂಡಾಡಿ ಶಾಖೆಯು ನವೀಕರಣಗೊಳಿಸಿತ್ತು. ಅದಕ್ಕೆ ಹನುಮಂತನ ಚಿತ್ರ , ಭಗವಾಧ್ವಜ ಅಳವಡಿಸಿ ನವೀಕರಣಗೊಳಿಸಿತ್ತು. ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಕಟ್ಟೆಯನ್ನು ಒಡೆದುಹಾಕಿ, ಭಗವಾಧ್ವಜವನ್ನು ಕಿತ್ತೊಯ್ದಿದ್ದಾರೆ. ನಿನ್ನೆ

ಬಂಟ್ವಾಳ: ಭಗವಧ್ವಜ ಕಟ್ಟೆಗೆ ಕಿಡಿಗೇಡಿಗಳಿಂದ ಹಾನಿ| ಸಿಸಿ ಟಿವಿಯಲ್ಲಿ ಕೃತ್ಯ ದಾಖಲು| Read More »

ತಡರಾತ್ರಿ ಮಂಗಳೂರಿನಲ್ಲಿ ಝಳಪಿಸಿದ ತಲ್ವಾರ್| ಹಿಂದೂ ಕಾರ್ಯಕರ್ತನ ಹತ್ಯೆಗೆ ವಿಫಲ ಯತ್ನ|

ಮಂಗಳೂರು: ಬೈಕಲ್ಲಿ ಹೊಂಚು ಹಾಕಿ ಕುಳಿತಿದ್ದ ಮೂವರು ಅಪರಿಚಿತರು ಬಿಜೆಪಿ ಪ್ರಮುಖನ ಮೇಲೆ ತಲವಾರು ದಾಳಿ ನಡೆಸಿ, ಕೊಲೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಕೊಣಾಜೆ ವಿ.ವಿ ಕ್ಯಾಂಪಸ್ ಹಾಸ್ಟೆಲ್ ಬಳಿ ನಡೆದಿದೆ. ಕೊಣಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಬಿಜೆಪಿ ಪ್ರಮುಖರಾದ ಪ್ರಕಾಶ್ ಶೆಟ್ಟಿ(41) ಎಂಬವರ ಮೇಲೆ ತಲವಾರು ದಾಳಿ ನಡೆದಿದೆ. ಸಮಯ ಪ್ರಜ್ಞೆ ಮೆರೆದ ಪ್ರಕಾಶ್ ಅವರು ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ. ಕೊಣಾಜೆ ವಿವಿ ಆವರಣದ ಹಾಸ್ಟೆಲ್ ಬಳಿಯ ದುರ್ಗಾ ಫ್ಯಾನ್ಸಿ &

ತಡರಾತ್ರಿ ಮಂಗಳೂರಿನಲ್ಲಿ ಝಳಪಿಸಿದ ತಲ್ವಾರ್| ಹಿಂದೂ ಕಾರ್ಯಕರ್ತನ ಹತ್ಯೆಗೆ ವಿಫಲ ಯತ್ನ| Read More »

ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಬೈಕ್‌ ನಡುವೆ ಢಿಕ್ಕಿ| ಸವಾರ ಸ್ಥಳದಲ್ಲೇ ಸಾವು

ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿಯ ವಳಾಲು ಸಮೀಪದ ಗೋಳಿತೊಟ್ಟು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ಸಮೀಪದ ಕುಂಟಲ್ಪಾಡಿ ಪದವು ನಿವಾಸಿ ಸಚಿನ್(29) ಎಂದು ತಿಳಿದು ಬಂದಿದೆ. ಉಪ್ಪಿನಂಗಡಿಯಿಂದ ನೆಲ್ಯಾಡಿಗೆ ಹೊರಟಿದ್ದ ಬೈಕ್ ಮತ್ತು ಮಂಗಳೂರಿಗೆ ಬರುತ್ತಿದ್ದ ಮೀನಿನ ಲಾರಿ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆಯ ಮೇಲೆ ಲಾರಿ ಹರಿದಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಬೈಕ್‌ ನಡುವೆ ಢಿಕ್ಕಿ| ಸವಾರ ಸ್ಥಳದಲ್ಲೇ ಸಾವು Read More »

ಇಂಟರ್ನ್ ಷಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ| ಖ್ಯಾತ ವಕೀಲರ ವಿರುದ್ದ ಎಫ್ ಐ ಆರ್

ಮಂಗಳೂರು: ಇಂಟರ್ನ್‌ಶಿಪ್‌ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಂಗಳೂರಿನ ಖ್ಯಾತ ವಕೀಲ ಕೆ .ಎಸ್.ಎನ್.ರಾಜೇಶ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತ ವಿದ್ಯಾರ್ಥಿನಿಯು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ವಕೀಲರ ವಿರುದ್ಧ ನಿನ್ನೆ ರಾತ್ರಿ ನೀಡಿದ ದೂರಿನ ಮೇರೆಗೆ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಪ್ರಕರಣ ಬಯಲಾಗುತ್ತಿದ್ದಂತೆ ವಕೀಲ ರಾಜೇಶ್ ಭಟ್ ನಾಪತ್ತೆಯಾಗಿದ್ದಾರೆ. ಮಂಗಳೂರು ಎಸಿಬಿ, ಲೋಕಾಯುಕ್ತಕ್ಕೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ರಾಜೇಶ್ ಭಟ್, ನಗರದ ಪ್ರಸಿದ್ಧ ಬ್ಯಾಂಕ್‌ಗಳು ಸೇರಿ ಹಲವು ಕಂಪನಿಗಳಿಗೆ ಲೀಗಲ್ ಅಡ್ವೈಸರ್

ಇಂಟರ್ನ್ ಷಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ| ಖ್ಯಾತ ವಕೀಲರ ವಿರುದ್ದ ಎಫ್ ಐ ಆರ್ Read More »

ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊಲೆ ಬೆದರಿಕೆ| ತ್ರಿಶೂಲದಲ್ಲಿ ಮೊದಲ ಬೇಟೆ ನೀನೆ ಎಂದವನಾರು?

ಬೆಂಗಳೂರು: ಮಾಜಿ ಸಿಎಂ ಹಾಗೂ ವಿಪಕ್ಷನಾಯಕ ಸಿದ್ದರಾಮಯ್ಯ ಅವರಿಗೆ ಟ್ವಿಟರ್‌ನಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ. ಟ್ವಿಟರ್‌ನಲ್ಲಿ #prakash ಎನ್ನುವ ಹೆಸರಿನಲ್ಲಿರುವ ಟ್ವಿಟ್‌ ಬಳಕೆ ದಾರ ಸಿದ್ದರಾಮಯ್ಯ ಅವರ ಟ್ವಿಟ್‌ ಅನ್ನು ರೀಟ್ವಿಟ್‌ ಮಾಡಿ ನಮ್ಮ ಸಿಎಂ ಅವರಿಗೆ ಯಾರ ಕೈಗೆ ಏನು ಕೊಡಬೇಕೆಂದು ಚೆನ್ನಾಗಿ ಗೊತ್ತು! ತ್ರಿಶೂಲ ಕೊಟ್ಟರೆ ಮೊದಲ ಬೇಟೆ ನೀನೇ ಅಂತ ಕೊಲೆ ಬೆದರಿಕೆ ಹಾಕಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ವೈರಲ್ ಆಗಿದೆ.ಖುದ್ದು ಸಾರ್ವಜನಿಕವಾಗಿ ಆವಾಜ್ ಹಾಕಿದವನ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.

ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊಲೆ ಬೆದರಿಕೆ| ತ್ರಿಶೂಲದಲ್ಲಿ ಮೊದಲ ಬೇಟೆ ನೀನೆ ಎಂದವನಾರು? Read More »

ಪುತ್ತೂರು: ಹೊಸಬಟ್ಟೆ ಧರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿ| ಕಾರಣ ನಿಗೂಢ

ಮಂಗಳೂರು: ಕೃಷಿಕ ದಂಪತಿಗಳು ಹೊಸ ಬಟ್ಟೆ ಧರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಾದೆಕರ್ಯದಲ್ಲಿ ಘಟನೆ ನಡೆದಿದೆ. ಪಾದೆಕರ್ಯದ ನಿವಾಸಿಗಳಾದ ಕೃಷಿಕ ಸುಬ್ರಹ್ಮಣ್ಯ ಭಟ್ (65) ಮತ್ತು ಶಾರಾದ (50) ಆತ್ಮಹತ್ಯೆ ಮಾಡಿಕೊಂಡ ದಂಪತಿಗಳು. ಇವರಿಬ್ಬರು ರಾತ್ರಿ ತಮ್ಮ ಮನೆಯ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಿಗ್ಗೆ ಮಕ್ಕಳು ಬಾಗಿಲು ತೆಗೆದು ನೋಡಿದಾಗ ಇಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇವರು ಹೊಸ ಬಟ್ಟೆ ಧರಿಸಿಕೊಂಡು ಆತ್ಮಹತ್ಯೆ

ಪುತ್ತೂರು: ಹೊಸಬಟ್ಟೆ ಧರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿ| ಕಾರಣ ನಿಗೂಢ Read More »

ಸುಳ್ಯ : ಅಡ್ಕಾರ್ ನಲ್ಲಿ ಕಾರು ಅಪಘಾತ: ಮೂವರು ಗಂಭೀರ

ಸುಳ್ಯ : ಅಡ್ಕಾರ್ ಮಾವಿನ ಕಟ್ಟೆಯಲ್ಲಿ ಕಾರು ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಇಂದು ಸಂಭವಿಸಿದೆ. ಮುಂಜಾನೆಯಿಂದ ಸುರಿಯುತ್ತಿರುವ ಮಳೆಯಿಂದ ಹಾಗೂ ವೇಗವಾಗಿ ಬಂದ ಹಿನ್ನೆಲೆ ಚಾಲಕ ನಿಯಂತ್ರಣ ಕಳೆದು ಕೊಂಡಿದ್ದಾನೆ, ಬಳಿಕ ಕಾರು ಪಲ್ಟಿಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.ಇದೇ ವೇಳೆ ಕಾರಿನಲ್ಲಿ ಇದ್ದ ಮೂವರು ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರನ್ನು ಮೈಸೂರಿನ ಶ್ರೇಯಸ್ಸ್, ಭುವನ್ ಹಾಗೂ ಸರ್ವೇಶ್ ಎಂದು ಗುರುತಿಸಲಾಗಿದೆ, ಅವರು ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಳ್ಯ : ಅಡ್ಕಾರ್ ನಲ್ಲಿ ಕಾರು ಅಪಘಾತ: ಮೂವರು ಗಂಭೀರ Read More »

ವೈದ್ಯರ ನಿರ್ಲಕ್ಷ್ಯದಿಂದ ಪ್ರೈವೇಟ್ ಪಾರ್ಟ್ ಡ್ಯಾಮೇಜ್| ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು ಅಚಾತುರ್ಯ|

ಚಿಕ್ಕಮಗಳೂರು: ಆಪರೇಷನ್ ಗೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬರ ಖಾಸಗಿ ಅಂಗಕ್ಕೆ ಗಾಯಗೊಳಿಸಿರುವ ಘಟನೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ಗಾಯಗೊಂಡಿರುವ ಗಾಯಾಳು ಪೊಲೀಸರ ಮೊರೆ ಹೋಗಿದ್ದಾರೆ. ಹರ್ನಿಯಾ ಆಪರೇಷನ್ ಗೆಂದು ಅಕ್ಟೋಬರ್ 12ರಂದು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಯೋಗೇಂದ್ರ ಎಂಬವರು ದಾಖಲಾಗಿದ್ದು, ಆಪರೇಷನ್ ವೇಳೆಯಲ್ಲಿ ಅವರ ಖಾಸಗಿ ಅಂಗಕ್ಕೆ ಪೈಪ್ ಸಿಕ್ಕಿಸಲಾಗಿತ್ತು.ತೀವ್ರ ತರವಾಗಿ ಪೈಪ್ ಚುಚ್ಚಿದ್ದರಿಂದ ಅವರ ಖಾಸಗಿ ಅಂಗಕ್ಕೆ ಗಾಯವಾಗಿತ್ತು. ಈ ಬಗ್ಗೆ ಅವರು ಆಸ್ಪತ್ರೆ ಸಿಬ್ಬಂದಿ ಸಹಿತ ವೈದ್ಯರ ಬಳಿಯಲ್ಲಿ ವಿಚಾರಿಸಿದಾಗ ಉಡಾಫೆಯಾಗಿ ಉತ್ತರಿಸಿದ್ದು

ವೈದ್ಯರ ನಿರ್ಲಕ್ಷ್ಯದಿಂದ ಪ್ರೈವೇಟ್ ಪಾರ್ಟ್ ಡ್ಯಾಮೇಜ್| ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು ಅಚಾತುರ್ಯ| Read More »

ಪುತ್ತೂರು:ಅಪ್ರಾಪ್ತೆಗೆ ಗರ್ಭದಾನ ಮಾಡಿದ ರಾಜಕೀಯ ಮುಂದಾಳು| ಆರೋಪಿಯ ಬಂಧನಕ್ಕೆ ದಲಿತ ಸಂಘಟನಾ ಸಮಿತಿ‌ ಆಗ್ರಹ

ಪುತ್ತೂರು: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಪಕ್ಷವೊಂದರ ಹಿರಿಯ ಮುಖಂಡ ಅತ್ಯಾಚಾರ ನಡೆಸಿದ್ದು, ಆತನನ್ನು ತಕ್ಷಣವೇ ಬಂಧಿಸಬೇಕು ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಒತ್ತಾಯ ಮಾಡಿದೆ. ಈ ಬಗ್ಗೆ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಸಮಿತಿ ಸದಸ್ಯರು, ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಹಿರಿಯ ರಾಜಕೀಯ ನೇತಾರ ನಾರಾಯಣ ರೈ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ಕುಟುಂಬ ಅಲ್ಲಿನ ಭೂ ಮಾಲಕ

ಪುತ್ತೂರು:ಅಪ್ರಾಪ್ತೆಗೆ ಗರ್ಭದಾನ ಮಾಡಿದ ರಾಜಕೀಯ ಮುಂದಾಳು| ಆರೋಪಿಯ ಬಂಧನಕ್ಕೆ ದಲಿತ ಸಂಘಟನಾ ಸಮಿತಿ‌ ಆಗ್ರಹ Read More »