ಕ್ರೈಂ

ಮತ್ತೊಬ್ಬ ಬಿಜೆಪಿ ಶಾಸಕನ ಅಶ್ಲೀಲ ಸಿಡಿ ಬಿಡುಗಡೆ ಫೋಟೋ ವೈರಲ್| ಯತ್ನಾಳ ಬೆಂಬಲಿಗರಿಂದ ದೂರು ದಾಖಲು| ಅಂತದ್ದೇನೈತಿ ಆ ಫೋಟೋದಾಗ ಗೊತ್ತೇನ್ರಿ?

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸಂಬಂಧಿಸಿದ ಅಶ್ಲೀಲ ಸಿಡಿ ಬಿಡುಗಡೆಯಾಗಲಿದೆ ಎಂಬ ಸುದ್ದಿ ಸಾಮಾಜಿಕ ಜಾಲ ತಾಣದಲ್ಲಿ ಭಾರೀ ಸದ್ದು ಮಾಡತೊಡಗಿದೆ. ‘ಹಿಂದೂ ಹುಲಿಯ ಸಿಡಿ ಬಿಡುಗಡೆಗೆ ಕ್ಷಣ ಗಣನೆ, ಭರ್ಜರಿ ಯಶಸ್ಸು ಕಾಣಲಿ’ ಎಂಬ ಬರಹ ಹಾಗೂ ಶಾಸಕ ಯತ್ನಾಳ ಅವರ ಭಾವಚಿತ್ರ ಇರುವ ಪೋಸ್ಟ್ ಹರಿದಾಡತೊಡಗಿದೆ. ಈ ಸಂಬಂಧ ಯತ್ನಾಳ ಅವರ ಆಪ್ತ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯ ಲಕ್ಷ್ಮಣ ಜಾಧವ್ ಅವರು ವಿಜಯಪುರದ ಸೈಬರ್ […]

ಮತ್ತೊಬ್ಬ ಬಿಜೆಪಿ ಶಾಸಕನ ಅಶ್ಲೀಲ ಸಿಡಿ ಬಿಡುಗಡೆ ಫೋಟೋ ವೈರಲ್| ಯತ್ನಾಳ ಬೆಂಬಲಿಗರಿಂದ ದೂರು ದಾಖಲು| ಅಂತದ್ದೇನೈತಿ ಆ ಫೋಟೋದಾಗ ಗೊತ್ತೇನ್ರಿ? Read More »

ಹಾವು ಕಚ್ಚಿಸಿ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆಯ ತೀರ್ಪು| ಅತಿ ಅಪರೂಪದ ಪ್ರಕರಣವೆಂದ ಕೋರ್ಟ್|

ಕೊಲ್ಲಂ: ತನ್ನ ಪತ್ನಿಗೆ ವಿಷಪೂರಿತ ನಾಗರ ಹಾವು ಕಚ್ಚಿಸಿ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಸೂರಜ್ ಎಸ್ ಕುಮಾರ್‌ಗೆ ಬುಧವಾರ ಕೇರಳದ ಕೊಲ್ಲಂ ಹೆಚ್ಚುವರಿ ಸೆಷನ್ಸ್‌‌ ನ್ಯಾಯಾಲಯವು ಎರಡು ಬಾರಿ ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ ನ್ಯಾಯಾಧೀಶ ಎಂ.ಮನೋಜ್ ಅವರು ಈ ಪ್ರಕರಣವು ‘ಅಪರೂಪದಲ್ಲಿ ಅಪರೂಪ’ ಎಂದು ಹೇಳಿದ್ದಾರೆ. ಆರೋಪಿಗೆ ಮರಣ ದಂಡನೆ ನೀಡಬೇಕು ಎಂದು ಉತ್ರಾ ಪರವಾಗಿ ವಾದಿಸಿದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಜಿ ಮೋಹನರಾಜ್ ನ್ಯಾಯಾಲಯಕ್ಕೆ ವಿನಂತಿಸಿದ್ದರು. ಆದರೆ ಆರೋಪಿಯ

ಹಾವು ಕಚ್ಚಿಸಿ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆಯ ತೀರ್ಪು| ಅತಿ ಅಪರೂಪದ ಪ್ರಕರಣವೆಂದ ಕೋರ್ಟ್| Read More »

ನದಿಗೆ ಉರುಳಿದ ಬಸ್ಸ್| 32 ಮಂದಿ ದುರ್ಮರಣ| ಏರಿಕೆಯಾಗುತ್ತಿದೆ ಸಾವಿನ ಸಂಖ್ಯೆ

ನೇಪಾಳ: ಕಣಿವೆ ದೇಶದಲ್ಲಿ ಭಾರೀ ಅನಾಹುತ ಸಂಭವಿಸಿದ್ದು, ಮುಗು ಜಿಲ್ಲೆಯ ಗಮಗಧಿಗೆ ತೆರಳುತ್ತಿದ್ದ ಬಸ್‌ ಸ್ಕಿಡ್‌ ಆಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಸುಮಾರು 300 ಮೀಟರ್‌ ದೂರದಲ್ಲಿರುವ ನದಿಗೆ ಉರುಳಿಬಿದ್ದಿದೆ. ಘಟನೆಯಿಂದಾಗಿ 29ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇದುವರೆಗೆ ಸಾವನ್ನಪ್ಪಿರುವವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ವಿಜಯದಶಮಿ ಹಬ್ಬವನ್ನು ಆಚರಿಸುವ ಸಲುವಾಗಿ ಜನರು ಬಸ್ಸಿನ ಮೂಲಕ ತಮ್ಮ ಊರುಗಳಿಗೆ ತೆರಳುತ್ತಿದ್ದರು ಎನ್ನಲಾಗುತ್ತಿದೆ. ಬಸ್ಸಿನಲ್ಲಿ ಒಟ್ಟು ಎಷ್ಟು

ನದಿಗೆ ಉರುಳಿದ ಬಸ್ಸ್| 32 ಮಂದಿ ದುರ್ಮರಣ| ಏರಿಕೆಯಾಗುತ್ತಿದೆ ಸಾವಿನ ಸಂಖ್ಯೆ Read More »

ಕಾರ್ಕಳ| ಪತ್ರಿಕೋದ್ಯಮ ‌ಕಲಿಯುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ

ಕಾರ್ಕಳ: ಮಾನಸಿಕ ಖಿನ್ನತೆಗೆ ಒಳಗಾದ ವಿಧ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿ ಶಿರ್ಲಾಲು ಎಂಬಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಶಬರೀಶ್ (20) ಎಂದು ಗುರುತಿಸಲಾಗಿದ್ದು, ಈತ ಕಾರ್ಕಳದ ಎಂಪಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ. ಕೆಲದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಹೇಳಲಾಗಿದ್ದು,ಮಂಗಳವಾರ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ| ಪತ್ರಿಕೋದ್ಯಮ ‌ಕಲಿಯುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ Read More »

ಮತಾಂತರಕ್ಕೆ ಯತ್ನ ಆರೋಪ| ಪ್ರಾರ್ಥನೆ ನಡೆಯುತ್ತಿದ್ದ ಮನೆ ಮೇಲೆ ಭಜರಂಗದಳದಿಂದ ದಾಳಿ

ಧಾರವಾಡ: ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಧಾರವಾಡ ಜಿಲ್ಲೆ ಅಳ್ನಾವರದಲ್ಲಿ ಪ್ರಾರ್ಥನೆ ನಡೆಯುತ್ತಿದ್ದ ಮನೆ ಮೇಲೆ ದಾಳಿ ನಡೆಸಲಾಗಿದೆ. ದಯಾಸಾಗರ ಎಂಬುವವರ ಮನೆ ಮೇಲೆ ಭಜರಂಗದಳದ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮನೆಯಲ್ಲಿ ಪ್ರಾರ್ಥನೆ ಮಾಡುತ್ತಿದ್ದವರನ್ನು ಕಾರ್ಯಕರ್ತರು ಹೊರಕಳಿಸಿದ್ದಾರೆ. ಅಳ್ನಾವರ ಮತ್ತು ಸುತ್ತಮುತ್ತಲಿನ ಗ್ರಾಮಗಳ‌ ಹಿಂದೂಗಳು ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಾರೆ. ಹಿಂದೂಗಳನ್ನು ಸೇರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುತ್ತಿದ್ದರು ಎಂದು ಆರೋಪ ಮಾಡಲಾಗಿದೆ. ಇತ್ತೀಚೆಗೆ ಮತಾಂತರಗೊಂಡಿರುವ ಕೆಲವರಿಂದ ಪ್ರಾರ್ಥನೆ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಅಳ್ನಾವರ ಪೊಲೀಸ್ ಠಾಣೆಯಲ್ಲಿ ಈ

ಮತಾಂತರಕ್ಕೆ ಯತ್ನ ಆರೋಪ| ಪ್ರಾರ್ಥನೆ ನಡೆಯುತ್ತಿದ್ದ ಮನೆ ಮೇಲೆ ಭಜರಂಗದಳದಿಂದ ದಾಳಿ Read More »

ಅಣ್ಣನಿಲ್ಲದ‌ ಸಮಯದಲ್ಲಿ ಅತ್ತಿಗೆಯ ಸರಸಕ್ಕೆ ಎಳೆದ ಮೈದುನ| ದೂರು ದಾಖಲು

ಭೋಪಾಲ್: ಇಲ್ಲಿನ ಮಹಿಳೆಯೊಬ್ಬಳಿಗೆ ಆಕೆಯ ಮೈದುನ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಆತನ ವಿರುದ್ದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ಶನಿವಾರ ರಾತ್ರಿ ತನ್ನ ಪತಿ ಇಲ್ಲದಿದ್ದಾಗ ಮೈದುನ ಕಿರುಕುಳ ನೀಡಿರುವುದಾಗಿ ಮಹಿಳೆ ಆರೋಪಿಸಿ ದೂರು ನೀಡಿದ್ದಾಳೆ. ಪೊಲೀಸರ ಪ್ರಕಾರ, ದೂರುದಾರ ಮಹಿಳೆ ಸುಖಿ-ಸೆವಾನಿಯಾ ನಿವಾಸಿಯಾಗಿದ್ದು, ಶನಿವಾರ ರಾತ್ರಿ ವೃತ್ತಿಯಲ್ಲಿ ಚಾಲಕನಾಗಿರುವ ಪತಿ ಕೆಲಸದ ನಿಮಿತ್ತ ಊರ ಹೊರಗಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದಾಳೆ. ಆಕೆಯ ಮೈದುನ ಪತಿಯನ್ನು ಭೇಟಿಯಾಗಲು ಅವರ ಮನೆಗೆ ಬಂದಿದ್ದ.

ಅಣ್ಣನಿಲ್ಲದ‌ ಸಮಯದಲ್ಲಿ ಅತ್ತಿಗೆಯ ಸರಸಕ್ಕೆ ಎಳೆದ ಮೈದುನ| ದೂರು ದಾಖಲು Read More »

ಕಡಬ| ಮಳೆ ನೀರಲ್ಲಿ ಕೊಚ್ಚಿ ಬಂದ ತಲೆಬುರುಡೆ, ಅಸ್ಥಿಪಂಜರ ಪ್ರಕರಣ| ಆ ಅವಶೇಷ ಇವರದ್ದಾ? ದಾಖಲಾಯ್ತು ನಾಪತ್ತೆ ದೂರು..!

ಕಡಬ: ಇಲ್ಲಿನ ಕುಂತೂರುಪದವು ಸಮೀಪದ ಅನ್ನಡ್ಕದಲ್ಲಿ ಹರಿಯುವ ಸಣ್ಣ ತೊರೆಯಲ್ಲಿ ತಲೆಬುರುಡೆ ಮತ್ತು ಅಸ್ತಿಪಂಜರ ಪತ್ತೆಯಾದ ಬೆನ್ನಲ್ಲೇ ಅದೇ ಗ್ರಾಮದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ದೂರು ದಾಖಲಾಗಿದೆ. ಕಡಬ ತಾಲೂಕಿನ ಕುಂತೂರು ಗ್ರಾಮದ ಎರ್ಮಾಳದ ಸತೀಶ್(50ವ) ಎಂಬವರು ಎರಡು ತಿಂಗಳ ಹಿಂದೆಯೇ ನಾಪತ್ತೆಯಾಗಿದ್ದು ಪತಿ ನಾಪತ್ತೆಯಾದ ಬಗ್ಗೆ ಪತ್ನಿ ಗೀತಾ ಅವರು ಠಾಣೆಗೆ ದೂರು ನೀಡಿದ್ದಾರೆ. ಕಳೆದ ಆಗಸ್ಟ್ 2 ರಂದು ಮನೆಬಿಟ್ಟು ಹೋದವರು ಬಳಿಕ ನಾಪತ್ತೆಯಾಗಿದ್ದಾರೆ. ತನ್ನ ಗಂಡ ಮದ್ಯಪಾನ ವ್ಯಸನಿಯಾಗಿದ್ದು, ವಿನಾಕಾರಣ

ಕಡಬ| ಮಳೆ ನೀರಲ್ಲಿ ಕೊಚ್ಚಿ ಬಂದ ತಲೆಬುರುಡೆ, ಅಸ್ಥಿಪಂಜರ ಪ್ರಕರಣ| ಆ ಅವಶೇಷ ಇವರದ್ದಾ? ದಾಖಲಾಯ್ತು ನಾಪತ್ತೆ ದೂರು..! Read More »

ಹೀಗೊಂದು ವಿಚಿತ್ರ ರೇಪ್| ರೇಪಿಸ್ಟ್ ಅಂದರ್

ಬೆಳಗಾವಿ: ಬಸ್‌ಗಾಗಿ ಕಾಯುತ್ತಿದ್ದ ಯುವಕನೊಬ್ಬನನ್ನು ಡ್ರಾಪ್ ಕೊಡುವ ನೆಪದಲ್ಲಿ ಕರೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಅನೈಸರ್ಗಿಕ ಲೈಂಗಿಕ ಸಂಪರ್ಕ ನಡೆಸಿರುವ ಘಟನೆ ಜಿಲ್ಲೆಯ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆ ಯುವಕ ಬಸ್‌ಗಾಗಿ ಕಾಯುತ್ತಿದ್ದು, ಅದೇ ರಸ್ತೆಯಾಗಿ ಬೈಕ್ ನಲ್ಲಿ ಬಂದ ರಾಜು ನೀಲವ್ವ ಆಚಾರಟ್ಟಿ ಎಂಬಾತ ಡ್ರಾಪ್ ಕೊಡುವುದಾಗಿ ನಂಬಿಸಿ ಬಸ್ ಗೆ ಕಾಯುತ್ತಿದ್ದ ಯುವಕನನ್ನು ಬೈಕ್ ಹತ್ತಿಸಿಕೊಂಡಿದ್ದಾನೆ. ಬಳಿಕ ಬೈಕನ್ನು ನಿರ್ಜನ ಪ್ರದೇಶಕ್ಕೆ ಕೊಂಡು ಹೋಗಿದ್ದು, ಅಲ್ಲಿ ಯುವಕನ ಇಚ್ಛೆಗೆ ವಿರುದ್ಧವಾಗಿ ಅನೈಸರ್ಗಿಕ

ಹೀಗೊಂದು ವಿಚಿತ್ರ ರೇಪ್| ರೇಪಿಸ್ಟ್ ಅಂದರ್ Read More »

ಅಣ್ಣನ ಮಗಳ ಬೆತ್ತಲೆ ಫೋಟೋ ಸೆರೆಹಿಡಿದು ಲೈಂಗಿಕ ಕಿರುಕುಳ ನೀಡಿದ ಕಾಮಿ ಚಿಕ್ಕಪ್ಪ| ಪೊಲೀಸರಿಂದ ಆರೋಪಿ ಬಂಧನ

ಶಿವಮೊಗ್ಗ: ಅಣ್ಣನ ಪುತ್ರಿಯ ಬೆತ್ತಲೆ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆ ಹಿಡಿದು ಲೈಂಗಿಕ ಕಿರುಕುಳ ಕೊಟ್ಟಿರುವ ಪಾಪಿ ಚಿಕ್ಕಪ್ಪನೀಗ ಪೊಲೀಸ್ ಅತಿಥಿಯಾಗಿದ್ದಾನೆ. ಸೊರಬ ತಾಲೂಕಿನಲ್ಲಿ ಪಾಪಿ ಚಿಕ್ಕಪ್ಪನೋರ್ವ ಈ ರೀತಿಯ ವಿಕೃತಿ ಮೆರೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತೇಜಪ್ಪ(38) ಎಂಬಾತನೇ ಮಗಳ ಸಮಾನಳಾದ ಅಣ್ಣನ ಪುತ್ರಿಯ ಮೇಲೆ ಕಣ್ಣು ಹಾಕಿದ ಆರೋಪಿ. ಅಲ್ಲದೆ ಆಕೆಯ ಬೆತ್ತಲೆ ದೃಶ್ಯವನ್ನು ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಮಾಡಿ ವಿಕೃತಿ ಮೆರೆದಿದ್ದಾನೆ. ಆರೋಪಿ ತೇಜಪ್ಪ 3 ದಿನಗಳ ಹಿಂದೆ ಈತ ಅಣ್ಣನ ಪುತ್ರಿಯನ್ನು

ಅಣ್ಣನ ಮಗಳ ಬೆತ್ತಲೆ ಫೋಟೋ ಸೆರೆಹಿಡಿದು ಲೈಂಗಿಕ ಕಿರುಕುಳ ನೀಡಿದ ಕಾಮಿ ಚಿಕ್ಕಪ್ಪ| ಪೊಲೀಸರಿಂದ ಆರೋಪಿ ಬಂಧನ Read More »

ಪುತ್ತೂರು: ಲಾರಿಗೆ ಬೈಕ್ ಅಪಘಾತ : ಸವಾರ ಮೃತ್ಯು

ಪುತ್ತೂರು: ಗೊಬ್ಬರದ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಅ.10 ರಂದು ಬೆಳಗ್ಗೆ ನಡೆದಿದೆ. ಮೃತಪಟ್ಟವರನ್ನು ಗೋಲ್ಡನ್ ಬೇಕರಿಯ ಮಾಲೀಕ ಅಝೀಝ್ ಎಂದು ಗುರುತಿಸಲಾಗಿದೆ. ಅವರು ಭಾನುವಾರ ಬೆಳಗ್ಗೆ ತನ್ನ ಅಂಗಡಿಗೆ ಹೋಗುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು: ಲಾರಿಗೆ ಬೈಕ್ ಅಪಘಾತ : ಸವಾರ ಮೃತ್ಯು Read More »