ಕಡಬ| ಮಳೆ ನೀರಲ್ಲಿ ಕೊಚ್ಚಿ ಬಂದ ತಲೆಬುರುಡೆ, ಅಸ್ಥಿಪಂಜರ ಪ್ರಕರಣ| ಆ ಅವಶೇಷ ಇವರದ್ದಾ? ದಾಖಲಾಯ್ತು ನಾಪತ್ತೆ ದೂರು..!
ಕಡಬ: ಇಲ್ಲಿನ ಕುಂತೂರುಪದವು ಸಮೀಪದ ಅನ್ನಡ್ಕದಲ್ಲಿ ಹರಿಯುವ ಸಣ್ಣ ತೊರೆಯಲ್ಲಿ ತಲೆಬುರುಡೆ ಮತ್ತು ಅಸ್ತಿಪಂಜರ ಪತ್ತೆಯಾದ ಬೆನ್ನಲ್ಲೇ ಅದೇ ಗ್ರಾಮದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ದೂರು ದಾಖಲಾಗಿದೆ. ಕಡಬ ತಾಲೂಕಿನ ಕುಂತೂರು ಗ್ರಾಮದ ಎರ್ಮಾಳದ ಸತೀಶ್(50ವ) ಎಂಬವರು ಎರಡು ತಿಂಗಳ ಹಿಂದೆಯೇ ನಾಪತ್ತೆಯಾಗಿದ್ದು ಪತಿ ನಾಪತ್ತೆಯಾದ ಬಗ್ಗೆ ಪತ್ನಿ ಗೀತಾ ಅವರು ಠಾಣೆಗೆ ದೂರು ನೀಡಿದ್ದಾರೆ. ಕಳೆದ ಆಗಸ್ಟ್ 2 ರಂದು ಮನೆಬಿಟ್ಟು ಹೋದವರು ಬಳಿಕ ನಾಪತ್ತೆಯಾಗಿದ್ದಾರೆ. ತನ್ನ ಗಂಡ ಮದ್ಯಪಾನ ವ್ಯಸನಿಯಾಗಿದ್ದು, ವಿನಾಕಾರಣ […]









