ಕ್ರೈಂ

ಸುಳ್ಳು ವರದಕ್ಷಿಣೆ ಆರೋಪ| ಸೊಸೆಯ ಕಿರುಕುಳ ತಾಳಲಾರದೆ ಮಾವ ಆತ್ಮಹತ್ಯೆ

ಪಂಜಾಬ್: ವರದಕ್ಷಿಣೆ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ, ಆತ್ಮಹತ್ಯೆ ಮಾಡಿಕೊಂಡ ಅದೆಷ್ಟೋ ಮಹಿಳೆಯರ ಕತೆಗಳನ್ನು ಕೇಳುತ್ತಲೇ ಇರುತ್ತೇವೆ. ಪಂಜಾಬ್​ನ ಲುಧಿಯಾನದ 60 ವರ್ಷದ ವ್ಯಕ್ತಿಯೊಬ್ಬರು ತಮ್ಮ ಸೊಸೆ ಮಾಡಿದ ಸುಳ್ಳು ವರದಕ್ಷಿಣೆ ಆರೋಪದಿಂದ ಅವಮಾನಗೊಂಡು, ತಮಗೆ ತಾವೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳಂತೆ ನೋಡಿಕೊಳ್ಳುತ್ತಿದ್ದ ಸೊಸೆ ವರದಕ್ಷಿಣೆ ಆರೋಪ ಮಾಡಿ, ಪೊಲೀಸರಿಗೆ ದೂರು ನೀಡುತ್ತೇವೆಂದು ಹೇಳಿದ್ದನ್ನು ಸಹಿಸಲಾಗದೆ ಆ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾರೆ. 60 ವರ್ಷದ ಆ ವ್ಯಕ್ತಿಗೆ ಸೊಸೆ ಹಾಗೂ ಆಕೆಯ […]

ಸುಳ್ಳು ವರದಕ್ಷಿಣೆ ಆರೋಪ| ಸೊಸೆಯ ಕಿರುಕುಳ ತಾಳಲಾರದೆ ಮಾವ ಆತ್ಮಹತ್ಯೆ Read More »

ಬಿಕ್ಷುಕರನ್ನು ಪಾಕಿಸ್ತಾನಕ್ಕೆ ತೆರಳುವಂತೆ ತಾಕೀತು ಮಾಡಿ ಥಳಿತ

ರಾಜಸ್ಥಾನ: ಭಿಕ್ಷುಕರನ್ನು ಪಾಕಿಸ್ತಾನಕ್ಕೆ ಹೋಗುವಂತೆ ಆಗ್ರಹಿಸಿ ದುಷ್ಕರ್ಮಿಗಳು ಥಳಿಸಿರುವ ಅಮಾನವೀಯ ಘಟನೆ ರಾಜಸ್ಥಾನದ ಅಜ್ಮೀರ್ ನಲ್ಲಿ ನಡೆದಿದೆ. ದುಷ್ಕರ್ಮಿಗಳ ತಂಡ ಇಬ್ಬರು ಪುರುಷ ಮತ್ತು ಓರ್ವ ಮಹಿಳಾ ಭಿಕ್ಷುಕಿ ಮೇಲೆ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿನ ದೃಶ್ಯಗಳಲ್ಲಿ ವ್ಯಕ್ತಿ ಮೇಲೆ ಥಳಿಸುವುದು ಮತ್ತು ಆತನ ಕುಟುಂಬಸ್ಥರನ್ನು ನಿಂದಿಸಿರುವುದು ಸೆರೆಯಾಗಿದೆ. ಘಟನೆಗೆ ಸಂಬಂಧಿಸಿ ಲಲಿತ್ ಶರ್ಮಾ, ಸುರೇಂದ್ರ , ತೇಜಪಾಲ್, ರೋಹಿತ್ ಶರ್ಮಾ, ಶೈಲೇಂದ್ರ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ನೀವು ಉತ್ತರ

ಬಿಕ್ಷುಕರನ್ನು ಪಾಕಿಸ್ತಾನಕ್ಕೆ ತೆರಳುವಂತೆ ತಾಕೀತು ಮಾಡಿ ಥಳಿತ Read More »

ಡ್ರಗ್ಸ್ ಕೇಸ್- ‘ನಮ್ಮನ್ನು ಬಿಟ್ಟುಬಿಡಿ ಪ್ಲೀಸ್’ – ಮಾಧ್ಯಮದೆದುರು ಸಂಜನಾ ತಾಯಿ ಕಣ್ಣೀರು

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ಸಂಜನಾ ಗಲ್ರಾಣಿ ಹಾಗೂ ರಾಗಿಣಿ ದ್ವಿವೇದಿ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಇದೀಗ ನಟಿಮಣಿಯರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಎಫ್‍ಎಸ್‍ಎಲ್ ವರದಿಯಲ್ಲಿ ಇಬ್ಬರೂ ಡ್ರಗ್ಸ್ ಸೇವನೆ ಮಾಡಿರುವುದು ದೃಢವಾಗಿದೆ. ಇದರ ಬೆನ್ನಲ್ಲೇ ನಟಿ ಸಂಜನಾ ಸಂಪರ್ಕಕ್ಕೆ ಸಿಗುತ್ತಿಲ್ಲ, ಇತ್ತ ಅವರ ತಾಯಿ ಮಾಧ್ಯಮದವರ ಮುಂದೆ ಕಣ್ಣೀರಿಟ್ಟಿದ್ದಾರೆ. ಈ ಕುರಿತು ಸಂಜನಾ ನಿವಾಸದ ಬಳಿ ಮಾತನಾಡಿರುವ ಸಂಜನಾ ತಾಯಿ, ಸಂಜನಾ ಈಗಾಗಲೇ ತುಂಬಾ ನೊಂದಿದ್ದಾರೆ. ಡ್ರಗ್ಸ್ ಸೇವನೆ

ಡ್ರಗ್ಸ್ ಕೇಸ್- ‘ನಮ್ಮನ್ನು ಬಿಟ್ಟುಬಿಡಿ ಪ್ಲೀಸ್’ – ಮಾಧ್ಯಮದೆದುರು ಸಂಜನಾ ತಾಯಿ ಕಣ್ಣೀರು Read More »

ಮತ್ತೋಮ್ಮೆ ಜೈಲೂಟ ತಿನ್ನುತ್ತಾರ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾಣಿ ? ಎಟಿಎಂ ಕಾರ್ಡ್, ನೋಟ್ ಮೂಲಕ ಮೂಗಿನಲ್ಲಿ ಡ್ರಗ್ಸ್ ಸೇವಿಸುತ್ತಿದ್ದ ನಟಿ ರಾಗಿಣಿ!!

ಎಟಿಎಂ ಕಾರ್ಡ್, ನೋಟ್ ಮೂಲಕ ಮೂಗಿನಲ್ಲಿ ಡ್ರಗ್ಸ್ ಸೇವಿಸುತ್ತಿದ್ದ ನಟಿ ರಾಗಿಣಿ!! ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾಣಿ ಡ್ರಗ್ಸ್ ಸೇವನೆ ಮಾಡುತ್ತಿರುವುದು ದೃಢಪಟ್ಟಿದ್ದು, ಇದೀಗ ಇಬ್ಬರಿಗೂ ಮತ್ತೆ ಜೈಲೂಟದ ಮತ್ತೆ ಸಂಕಷ್ಟ ಎದುರಾಗಿದೆ. ತಲೆ ಕೂದಲು ಮಾದರಿ ಪರೀಕ್ಷೆಯಲ್ಲಿ ಡ್ರಗ್ಸ್ ಸೇವನೆ ಮಾಡುತ್ತಿದ್ದಿದ್ದು ದೃಢಪಟ್ಟಿದೆ. ಬರೋಬ್ಬರಿ ೧೦ ತಿಂಗಳ ಬಳಿಕ ಎಎಎಲ್ ವರದಿ ಸಿಸಿಬಿ ಕೈ ಸೇರಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಜೈಲುವಾಸ ಅನುಭವಿಸಿರುವ ನಟಿಯರು ಮತ್ತೆ ಲಾಕ್ ಆಗುವ ಸಾಧ್ಯತೆಗಳು

ಮತ್ತೋಮ್ಮೆ ಜೈಲೂಟ ತಿನ್ನುತ್ತಾರ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾಣಿ ? ಎಟಿಎಂ ಕಾರ್ಡ್, ನೋಟ್ ಮೂಲಕ ಮೂಗಿನಲ್ಲಿ ಡ್ರಗ್ಸ್ ಸೇವಿಸುತ್ತಿದ್ದ ನಟಿ ರಾಗಿಣಿ!! Read More »

ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – ಇಬ್ಬರು ಬಲಿ ದುರ್ಮರಣ

ಬೆಂಗಳೂರು: ಫುಡ್ ಪ್ರಾಡಕ್ಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ದುರ್ಮರಣಗೊಂಡ ಘಟನೆ ನಗರದ ಮಾಗಡಿ ರಸ್ತೆಯ 5ನೇ ಕ್ರಾಸ್ ಬಳಿ ನಡೆದಿದೆ. ಬಿಹಾರ ಮೂಲದ ಸೌರಭ್ ಮತ್ತು ಮನೀಶ್ ಮೃತ ಪಟ್ಟವರು. ಘಟನೆಯಲ್ಲಿ ಸಚಿನ್, ಶಾಂತಿ ಹಾಗೂ ಧನಲಕ್ಷ್ಮಿ ಎಂಬವರಿಗೆ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.ವಿಜಯ್ ಮೆಹ್ತಾ ಒಡೆತನದ ಸ್ನ್ಯಾಕ್ಸ್ ತಿಂಡಿ ಪದಾರ್ಥ ತಯಾರಿ ಮಾಡುವ ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ. ಘಟನೆಯ ವೇಳೆ ಫ್ಯಾಕ್ಟರಿ ಒಳಗಡೆ ಒಟ್ಟು

ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – ಇಬ್ಬರು ಬಲಿ ದುರ್ಮರಣ Read More »

ಗೋವಾದಲ್ಲಿ ಕಾಂಚನಾ-3 ಸಿನಿಮಾದ ರಷ್ಯನ್ ನಟಿ ಅಲೆಕ್ಸಾಂಡ್ರಾ ಶವ ಪತ್ತೆ

ಗೋವಾ: ಕಾಲಿವುಡ್‍ನಲ್ಲಿ ಸೂಪರ್ ಡೂಪರ್ ಹಿಟ್ ಪಡೆದಿದ್ದ ಕಾಂಚನಾ-3 ಸಿನಿಮಾದ ರಷ್ಯನ್ ನಟಿ , ಮಾಡೆಲ್ ಅಲೆಕ್ಸಾಂಡ್ರಾ ಕ್ಸಾವಿ (23) ಮೃತದೇಹ ಪತ್ತೆಯಾಗಿದೆ. ಅಲೆಕ್ಸಾಂಡ್ರಾ ಅವರು ರಾಘವ ಲಾರೆನ್ಸ್ ಅವರ ಕಾಂಚನಾ 3 ಚಿತ್ರದಲ್ಲಿ ನಟಿಸಿದ್ದಾರೆ. ಗೋವಾದಲ್ಲಿರುವ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದು ಆತ್ಮಹತ್ಯೆ ಎಂದು ಪ್ರಾಥಮಿಕವಾಗಿ ತೀರ್ಮಾನವಾಗಿದ್ದರೂ ನಟಿಯ ಸಾವಿನ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಉತ್ತರ ಗೋವಾದ ಪಟ್ಟಣವೊಂದರಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಲೆಕ್ಸಾಂಡ್ರಾ ಮೃತದೇಹ ಮನೆಯಲ್ಲಿ ಪತ್ತೆಯಾಗಿದ್ದು ಇತ್ತೀಚೆಗೆ

ಗೋವಾದಲ್ಲಿ ಕಾಂಚನಾ-3 ಸಿನಿಮಾದ ರಷ್ಯನ್ ನಟಿ ಅಲೆಕ್ಸಾಂಡ್ರಾ ಶವ ಪತ್ತೆ Read More »

ಮಹಿಳೆಯರನ್ನು ಚುಡಾಯಿಸುತ್ತಿದ್ದವನಿಗೆ ಗ್ರಾಮಸ್ಥರು ಕೊಟ್ಟ ಶಿಕ್ಷೆ ಏನ್ ಗೊತ್ತ?

ಚಿಕ್ಕೋಡಿ: ಮಹಿಳೆಯರನ್ನು ಚುಡಾಯಿಸುತ್ತಿದ್ದ ವ್ಯಕ್ತಿಯ ತಲೆ ಬೋಳಿಸಿ ಗ್ರಾಮಸ್ಥರು ಬುದ್ಧಿ ಕಲಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಹೇಶವಾಡಗಿ ಗ್ರಾಮದಲ್ಲಿ ನಡೆದಿದ್ದರೆ, ಇನ್ನೊಂದೆಡೆ ಮಹಿಳೆಯನ್ನು ಕೊಲೆ ಮಾಡಿ ರಸ್ತೆ ಬದಿಗೆ ಬೀಸಾಕಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ರಾಯಭಾಗ ತಾಲೂಕಿನ ಕೋಳಿಗುಡ್ಡ ಗ್ರಾಮದಲ್ಲಿ ನಡೆದಿದೆ. ವಾಟ್ಸಪ್ ನಲ್ಲಿ ಅಸಹ್ಯವಾಗಿ ಮೆಸೇಜ್ ಮಾಡುತ್ತಿದ್ದ ಸುಧಾಕರ್ ಡುಮ್ಮಗೋಳ ಎಂಬಾತನಿಗೆ ಗ್ರಾಮಸ್ಥರೆಲ್ಲರೂ ಸೇರಿ ಧರ್ಮದೇಟು ನೀಡಿ ತಲೆ ಬೋಳಿಸಿ ಪಾಠ ಕಲಿಸಿದ್ದಾರೆ. ಹಲವು ಬಾರಿ ಎಚ್ಚರಿಕೆ ನೀಡಿದರೂ ಸಹ ತನ್ನ ಖಯಾಲಿ

ಮಹಿಳೆಯರನ್ನು ಚುಡಾಯಿಸುತ್ತಿದ್ದವನಿಗೆ ಗ್ರಾಮಸ್ಥರು ಕೊಟ್ಟ ಶಿಕ್ಷೆ ಏನ್ ಗೊತ್ತ? Read More »

ಕಾಸರಗೋಡು: ಬೈಕ್, ಓಮ್ನಿ ಅಪಘಾತ – ಯುವಕ ಮೃತ್ಯು

ಕಾಸರಗೋಡು: ಬೈಕ್ ಮತ್ತು ಓಮ್ನಿ ಯ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಆ.22 ಮಧ್ಯಾಹ್ನ ಪೈವಳಿಕೆ ಸಮೀಪದ ಬಾಯಿಕಟ್ಟೆಯಲ್ಲಿ ನಡೆದಿದೆ. ಚಿಪ್ಪಾರ್ ಸೋಕೆಯ ಮುಝಾಮ್ಮಿಲ್(19) ಅಪಘಾತದಲ್ಲಿ ಮೃತಪಟ್ಟವರು ಬಾಯಿಕಟ್ಟೆ ಚೆಕ್ ಪೋಸ್ಟ್ ಬಳಿ ಅಪಘಾತ ನಡೆದಿದ್ದು, ಮೃತ ದೇಹವನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಯಲ್ಲಿರಿಸಲಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಸರಗೋಡು: ಬೈಕ್, ಓಮ್ನಿ ಅಪಘಾತ – ಯುವಕ ಮೃತ್ಯು Read More »

ಹೈಪ್ರೊಫೈಲ್ ಸೆಕ್ಸ್ ದಂಧೆ ಬಯಲು -ವಾಟ್ಸಪ್ ನಲ್ಲಿಯೇ ಡೀಲ್ – ಆಂಟಿಗಳ ರೇಟ್ ಎಷ್ಟು ಗೊತ್ತ??

ಪಾಟ್ನಾ: ಹೋಟೆಲ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ 16 ಜನರನ್ನು ಪೊಲೀಸರು ವಶಕ್ಕೆ ಪಡೆದು ಪ್ರೊಫೈಲ್ ಸೆಕ್ಸ್ ದಂಧೆಯನ್ನು ಬಯಲಿಗೆಳೆದ ಘಟನೆ ಬಿಹಾರದ ರಾಜಧಾನಿ ಪಾಟ್ನಾದಲ್ಲಿಯ ಗರ್ದನಾಬಾಗಿ ಇಲಾಖೆಯ ಹೋಟೆಲ್ ನಲ್ಲಿ ನಡೆದಿದೆ. ಹೋಟೆಲ್ ನಲ್ಲಿ ಸಿಕ್ಕಿರುವ ಮಹಿಳೆಯರು ಕೋಲ್ಕತ್ತಾ ಮತ್ತು ಬನಾರಸ ಮೂಲದವರು ಎಂದು ತಿಳಿದು ಬಂದಿದೆ. ಎಸ್.ಪಿ. ಅಂಬರೀಶ್ ರಾಹುಲ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಆದ್ರೆ ಸ್ಥಳೀಯ ಪೊಲೀಸರಿಗೆ ದಾಳಿಯ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ದಾಳಿ

ಹೈಪ್ರೊಫೈಲ್ ಸೆಕ್ಸ್ ದಂಧೆ ಬಯಲು -ವಾಟ್ಸಪ್ ನಲ್ಲಿಯೇ ಡೀಲ್ – ಆಂಟಿಗಳ ರೇಟ್ ಎಷ್ಟು ಗೊತ್ತ?? Read More »

ಮಂಗಳೂರು: ಅಳಿವೆ ಬಾಗಿಲಲ್ಲಿ ಪತ್ತೆಯಾಯ್ತು ಯುವಕನ ಹೆಣ| ಅಷ್ಟಕ್ಕೂ ಅಲ್ಲಿ ಸತ್ತವ ಯಾರು ಗೊತ್ತಾ?

ಮಂಗಳೂರು ಅಗಸ್ಟ್ 22: ಉಳ್ಳಾಲ ನೇತ್ರಾವತಿ ನದಿ ಸಮೀಪದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೋಟೆಪುರ – ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಇಂದು ಪತ್ತೆಯಾಗಿದೆ. ಮೃತ ಯುವಕನನ್ನು ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ ಎಂದು ಗುರುತಿಸಲಾಗಿದ್ದು, ಇತನ ದ್ವಿಚಕ್ರ ವಾಹನ ಉಳ್ಳಾಲದ ನೇತ್ರಾವತಿ ನದಿಯ ಸೇತುವೆ ಬಳಿ ಪತ್ತೆಯಾಗಿತ್ತು. ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ. ರಾತ್ರಿಯಾದರೂ ಮರಳಿ ಬಾರದ ಕಾರಣ ಮನೆಮಂದಿ ಹುಡುಕಾಟ ಆರಂಭಿಸಿದ್ದರು. ಶನಿವಾರ ಬೆಳಗ್ಗೆ ನೇತ್ರಾವತಿ ಸೇತುವೆ

ಮಂಗಳೂರು: ಅಳಿವೆ ಬಾಗಿಲಲ್ಲಿ ಪತ್ತೆಯಾಯ್ತು ಯುವಕನ ಹೆಣ| ಅಷ್ಟಕ್ಕೂ ಅಲ್ಲಿ ಸತ್ತವ ಯಾರು ಗೊತ್ತಾ? Read More »