ಕ್ರೈಂ

ಬ್ರಹ್ಮಾವರ: ವಿಶಾಲಾ ಗಾಣಿಗ ಕೊಲೆ ಪ್ರಕರಣ – ಮತ್ತೋರ್ವ ಆರೋಪಿಗಾಗಿ ಬಲೆ ಬೀಸಿದ ಪೊಲೀಸರು

ಬ್ರಹ್ಮಾವರ: ಉಪ್ಪಿನಕೋಟೆಯ ಕುಮ್ರಗೋಡು ಎಂಬಲ್ಲಿ ಫ್ಲ್ಯಾಟ್ ನಲ್ಲಿ ವಿಶಾಲಾ ಗಾಣಿಗ ಕೊಲೆಯಾಗಿ ಒಂದೂವರೆ ತಿಂಗಳು ಕಳೆದಿದೆ. ಕೊಲೆಯಾದ ಕೆಲವೇ ದಿನಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ವಿಶಾಲಾಳ ಪತಿ ಸಮೇತ ಇಬ್ಬರನ್ನು ಬಂಧಿಸಲಾಯಿತು. ಇದೀಗ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ಮೂರನೇ ವ್ಯಕ್ತಿ ಗೆ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣದ ಬಯಲಿಗೆಳೆಯಲು ಸಾಕಷ್ಟು ಶ್ರಮ ಪಟ್ಟಿದ್ದ ಪೊಲೀಸರು, ನೇಪಾಳ ಗಡಿಯ ಸಮೀಪದಿಂದ ಸ್ವಾಮಿಂತ್ ನಿಶಾದ್ ಎಂಬಾತನನ್ನು ಬಂಧಿಸಿದ್ದರು. ವಿಶಾಲಾಳ ಪತಿ ರಾಮಕೃಷ್ಣ ಗಾಣಿಗ ತನ್ನ ಪತ್ನಿಯ ಮೇಲೆ ತುಂಬಾ […]

ಬ್ರಹ್ಮಾವರ: ವಿಶಾಲಾ ಗಾಣಿಗ ಕೊಲೆ ಪ್ರಕರಣ – ಮತ್ತೋರ್ವ ಆರೋಪಿಗಾಗಿ ಬಲೆ ಬೀಸಿದ ಪೊಲೀಸರು Read More »

ಮಂಗಳೂರು: ರೈಲಿನಡಿಗೆ ಸಿಲುಕಿ ಮಹಿಳೆಯರಿಬ್ಬರು ದುರ್ಮರಣ

ಮಂಗಳೂರು: ಹಳಿ ದಾಟುವಾಗ ರೈಲಿನಡಿಗೆ ಸಿಲುಕಿ ಮಹಿಳೆಯರಿಬ್ಬರು ಸಾವನಪ್ಪಿದ ಘಟನೆ ನಗರದ ಮಹಾಕಾಳಿ ಪಡ್ಪು ಎಂಬಲ್ಲಿ ಆ. 21 ರ ಶನಿವಾರ ಬೆಳಿಗ್ಗೆ ಸಂಭವಿಸಿದ. ಮೃತರನ್ನು ಸ್ಥಳೀಯ ನಿವಾಸಿಗಳಾದ ವಸಂತಿ (50) ಮತ್ತು ಪ್ರೇಮಾ (48) ಎಂದು ಗುರುತಿಸಲಾಗಿದೆ. ಬೀಡಿ ಕಾರ್ಮಿಕರಾಗಿದ್ದ ಇವರಿಬ್ಬರು ದಿನಿತ್ಯ ಕುಡುಪ್ಪಾಡಿ ದೋಟ ಎಂಬಲ್ಲಿಂದ ಮಹಾಕಾಳಿಪಡ್ಪುವಿನಲ್ಲಿರುವ ಬ್ರ್ಯಾಂಚ್ ಗೆ ರೈಲು ಹಳಿಯನ್ನು ದಾಟಿ ಬೀಡಿ ಕೊಂಡೊಯ್ಯುತ್ತಿದ್ದರು. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಪಾರ್ಥಿವ ಶರೀರವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮಂಗಳೂರು: ರೈಲಿನಡಿಗೆ ಸಿಲುಕಿ ಮಹಿಳೆಯರಿಬ್ಬರು ದುರ್ಮರಣ Read More »

ಸುಳ್ಯ | ಹಿಂದೂ ಯುವತಿಯರ ಜೊತೆ ಮುಸ್ಲಿಂ ಯುವಕನ ಪ್ರಯಾಣ…!? ತಪ್ಪು ಮಾಹಿತಿ‌ಯಿಂದ ಬಸ್ ಅಡ್ಡಗಟ್ಟಿ ಪೇಚಿಗೆ ಸಿಲುಕಿದ ಹಿಂಜಾವೇ | ಇತ್ಯರ್ಥ ಬಳಿಕವೂ ನಿಲ್ಲದ ಆವೇಶ, ಪೊಲೀಸರಿಗೇ ಧಮ್ಕಿ….!

ಸುಳ್ಯ: ರಾತ್ರಿ ಬಸ್ಸಿನಲ್ಲಿ ಹಿಂದೂ ಯುವತಿಯರ ಜೊತೆ ಮುಸ್ಲಿಂ ಯುವಕನೊಬ್ಬ ಪ್ರಯಾಣಿಸುತ್ತಿರುವುದಾಗಿ ತಪ್ಪು ಮಾಹಿತಿ ಪಡೆದ ಹಿಂಜಾವೇ ಕಾರ್ಯಕರ್ತರು ಬಸ್ಸನ್ನು ತಡೆದು ಬಳಿಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ಇತ್ಯರ್ಥವಾದ ನಂತರವೂ ಪೊಲೀಸರ ಮೇಲೆಯೇ ಧಮ್ಕಿ ಹಾಕಿದ ಘಟನೆ ನಿನ್ನೆ ರಾತ್ರಿ ಸುಳ್ಯದಲ್ಲಿ ನಡೆದಿದೆ. ಪುತ್ತೂರಿನಿಂದ ನಿನ್ನೆ ರಾತ್ರಿ ಬೆಂಗಳೂರಿಗೆ ಹೊರಟಿದ್ದ ಸಾರಿಗೆ ಬಸ್ಸಿನಲ್ಲಿ ಬೆಂಗಳೂರಿನ ಇಬ್ಬರು ಯುವತಿಯರು ಪ್ರಯಾಣಿಸುತ್ತಿದ್ದರು. ಈ ವೇಳೆ ಪುತ್ತೂರಿನಿಂದ ಕುಂಬ್ರಕ್ಕೆ ಟಿಕೆಟ್ ಮಾಡಿದ್ದ ಮುಸ್ಲಿಮ್ ಯುವಕನೋರ್ವನೂ ಪ್ರಯಾಣಿಸುತ್ತಿದ್ದ. ಬಸ್ ಕುಂಬ್ರ ತಲುಪುತ್ತಿದ್ದಂತೆ ಬೆಂಗಳೂರಿನಿಂದ

ಸುಳ್ಯ | ಹಿಂದೂ ಯುವತಿಯರ ಜೊತೆ ಮುಸ್ಲಿಂ ಯುವಕನ ಪ್ರಯಾಣ…!? ತಪ್ಪು ಮಾಹಿತಿ‌ಯಿಂದ ಬಸ್ ಅಡ್ಡಗಟ್ಟಿ ಪೇಚಿಗೆ ಸಿಲುಕಿದ ಹಿಂಜಾವೇ | ಇತ್ಯರ್ಥ ಬಳಿಕವೂ ನಿಲ್ಲದ ಆವೇಶ, ಪೊಲೀಸರಿಗೇ ಧಮ್ಕಿ….! Read More »

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ| ರಾಜ್ ಕುಂದ್ರಾ ಕಂಪೆನಿ ನಿರ್ದೇಶಕ ಅರೆಸ್ಟ್

ಮುಂಬೈ : ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ಅವರ ಕಂಪನಿಯ ನಿರ್ದೇಶಕ ಅಭಿಜಿತ್ ಬೊಂಬ್ಲೆ ಎಂಬವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಚಿತ್ರ ನಿರ್ಮಾಣದ ಆರೋಪದಲ್ಲಿ ರಾಜ್ ಕುಂದ್ರಾ ಅವರನ್ನು ಕಳೆದ ತಿಂಗಳು ಬಂಧಿಸಲಾಗಿತ್ತು. ರೂಪದರ್ಶಿಯೊಬ್ಬರು ನೀಡಿದ್ದ ದೂರಿನ ಆಧಾರದಲ್ಲಿ ಮಾಲ್‌ವಾನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಕಿರುಚಿತ್ರಗಳು ಮತ್ತು ವೆಬ್ ಸೀರೀಸ್‌ಗಳಲ್ಲಿ ನಟಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿ ಬಳಿಕ ನಗ್ನ ದೃಶ್ಯಗಳಲ್ಲಿ ನಟಿಸುವಂತೆ ಒತ್ತಡ ಹೇರಲಾಗಿತ್ತು ಎಂದು ರೂಪದರ್ಶಿ

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ| ರಾಜ್ ಕುಂದ್ರಾ ಕಂಪೆನಿ ನಿರ್ದೇಶಕ ಅರೆಸ್ಟ್ Read More »

ಚಲಿಸುತ್ತಿದ್ದ ಕಾರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ವಿವಾಹಿತೆ| ಅನಾಮಿಕ ಕರೆಗೆ ಬಲಿಯಾದ ಸಂತ್ರಸ್ತೆ|

ನವದೆಹಲಿ: ಚಲಿಸುತ್ತಿದ್ದ ಕಾರಿನಲ್ಲಿ ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಕೃತ್ಯ ದೇಶದ ರಾಜಧಾನಿಯಲ್ಲಿ ನಡೆದಿದೆ.ಕೆಲಸ ಕೊಡಿಸುವುದಾಗಿ ಹೇಳಿ ಕಾರಿನೊಳಗೆ ಹತ್ತಿಸಿಕೊಂಡ ಇಬ್ಬರು ಕಾಮುಕರು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ. ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದು, ದುಷ್ಕೃತ್ಯದ ಬಗ್ಗೆ ಬಾಯ್ಬಿಟ್ಟರೆ ಕೊಲೆ ಮಾಡುವ ಬೆದರಿಕೆಯನ್ನೂ ಹಾಕಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಸಂತ್ರಸ್ತೆ ತನ್ನ ಪತಿಯೊಂದಿಗೆ ಗಾಜಿಯಾಬಾದ್ ಪ್ರದೇಶದಲ್ಲಿ ವಾಸವಾಗಿದ್ದು ಕೆಲವು ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯಿಂದ

ಚಲಿಸುತ್ತಿದ್ದ ಕಾರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ವಿವಾಹಿತೆ| ಅನಾಮಿಕ ಕರೆಗೆ ಬಲಿಯಾದ ಸಂತ್ರಸ್ತೆ| Read More »

ಹಣದಾಸೆಗೆ ಗಾಂಜಾ ಮಾರಾಟ ಮಾಡುತ್ತಿದ್ದ 19ರ ಪೋರ ಬಂಧನ

ನೆಲಮಂಗಲ: 19 ವರ್ಷದ ಯುವಕನೊಬ್ಬ ಹಣದಾಸೆಗೆ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪೋಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕಡಬಗೆರೆ ಬಳಿಯ ಜನಪ್ರಿಯ ನಿವಾಸಿ ಹರಿ ಗೋವಿಂದರಾಜು(19) ಬಂಧಿತ ಆರೋಪಿ. ಖಚಿತ ಮಾಹಿತಿ ತಿಳಿದು ಪೋಲೀಸರು ದಾಳಿ ಮಾಡಿದ್ದರು. ಈ ವೇಳೆ ಬೆಂಗಳೂರು ಹೊರವಲಯ ನೆಲಮಂಗಲದ ಇಂದಿರಾನಗರದಲ್ಲಿ ಯುವಕನನ್ನು ಬಂಧಿಸಿದಿದ್ದಾರೆ. ಬರೋಬ್ಬರಿ 600 ಗ್ರಾಂ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿ, ನ್ಯಾಯಾಲಯದ ವಶಕ್ಕೆ ನೀಡಿದ್ದಾರೆ. ಹೆಚ್ಚಿನ ತನಿಖೆಯನ್ನು ಪೋಲೀಸರು ಮುಂದುವರಿಸಿದ್ದಾರೆ.

ಹಣದಾಸೆಗೆ ಗಾಂಜಾ ಮಾರಾಟ ಮಾಡುತ್ತಿದ್ದ 19ರ ಪೋರ ಬಂಧನ Read More »

ರಾತ್ರಿ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಸ್ನೇಹಿತರಿಬ್ಬರು ರಾತ್ರಿ ಫುಲ್ ಎಣ್ಣೆ (ಮದ್ಯಪಾನ) ಪಾರ್ಟಿ ಮಾಡುತ್ತಿದ್ದ ವೇಳೇ ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಗರದ ಡಿಜೆಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿತೇಶ್ ಕೊಲೆಯಾದವನು. ಆತನ ಸ್ನೇಹಿತ ಪ್ರಶಾಂತ್ ಕೊಲೆ ಮಾಡಿದ ಆರೋಪಿ.ರಾತ್ರಿ ಇಬ್ಬರೂ ಒಟ್ಟಿಗೆ ಸೇರಿ ಪಾರ್ಟಿ ಮಾಡಿದ್ದು, ಪಾರ್ಟಿ ಬಳಿಕ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಶುರುವಾಗಿದೆ. ಈ ವೆಳೆ ನಿತೇಶ್ ಸ್ನೇಹಿತ ಪ್ರಶಾಂತ್ ಗೆ ಕಾಲಿನಿಂದ ಒದ್ದಿದ್ದ. ಕಾಲಿನಿಂದ ಒದ್ದ ಬಳಿಕ ಇಬ್ಬರು

ರಾತ್ರಿ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯ Read More »

ಬೈಕ್ ವಿಚಾರದಲ್ಲಿ ಸ್ನೇಹಿತರೊಂದಿಗೆ ಗಲಾಟೆ | ವಿದ್ಯಾರ್ಥಿ ನೇಣಿಗೆ ಶರಣು |ಮನನೊಂದ ತಾಯಿ ವಾಹನದಡಿಗೆ ಹಾರಿ ಆತ್ಮಹತ್ಯೆ…!?

ಬೆಂಗಳೂರು: ಬೈಕ್ ವಿಚಾರದಲ್ಲಿ ಸ್ನೇಹಿತರೊಂದಿಗೆ ಜಗಳವಾಡಿದ ಯುವಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮನನೊಂದ ಆತನ ತಾಯಿ ಕೂಡ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಜಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ, ಬಿಕಾಂ ವಿದ್ಯಾರ್ಥಿ ಮೋಹನ್ (20) ಆತ್ಮಹತ್ಯೆ ಮಾಡಿಕೊಂಡಾತ. ಆತನ ತಾಯಿ ಲೀಲಾವತಿ (45) ರಸ್ತೆ ಅಪಘಾತಕ್ಕೆ ಬಲಿಯಾದವರು. ಮೋಹನ್ ಮತ್ತು ಆತನ ಸ್ನೇಹಿತರಿಗೆ ಬೈಕ್ ವಿಚಾರದಲ್ಲಿ ಪರಸ್ಪರ ಜಗಳವಾಗುತ್ತಿತ್ತು. ಕೆಲ ದಿನಗಳಿಂದ ಸ್ನೇಹಿತರು ಮೋಹನ್ ಮನೆಯ ಮುಂದೆ ಬಂದು

ಬೈಕ್ ವಿಚಾರದಲ್ಲಿ ಸ್ನೇಹಿತರೊಂದಿಗೆ ಗಲಾಟೆ | ವಿದ್ಯಾರ್ಥಿ ನೇಣಿಗೆ ಶರಣು |ಮನನೊಂದ ತಾಯಿ ವಾಹನದಡಿಗೆ ಹಾರಿ ಆತ್ಮಹತ್ಯೆ…!? Read More »

ಮೂಡುಬಿದಿರೆ: ತಲೆಗೆ ಹೊಡೆದು ಪತ್ನಿಯ ಕೊಲೆಗೈದ ಪತಿ- ಆರೋಪಿ ಬಂಧನ

ಮೂಡುಬಿದಿರೆ: ಇಲ್ಲಿನ ದರೆಗುಡ್ಡೆ ಗ್ರಾ.ಪಂ ವ್ಯಾಪ್ತಿಯ ಮಠ ಎಂಬಲ್ಲಿ ಪತಿಯು ಪತ್ನಿಯನ್ನು ಕೊಲೆ ಮಾಡಿದ ಪ್ರಕರಣ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ ಮಂಗಳವಾರ ಸಾಯಂಕಾಲ ಪತಿ ದಿನ್ ರಾಜ್ ಹಾಗೂ ಪತ್ನಿ ಸುನೀತಾ(30) ಮಧ್ಯೆ ಜಗಳ ನಡೆದಿದ್ದು ಈ ಸಂದರ್ಭ ದಿನ್ ರಾಜ್ ‘ಬಲಾಯಿ’ ದಿಂದ ಹೆಂಡತಿಯ ತಲೆಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಬಳಿಕ ಸುನೀತಾ ತಲೆಯಿಂದ ರಕ್ತ ಸೋರುತ್ತಿರುವುದನ್ನು ಕಂಡ ದಿನ್ ರಾಜ್ ಸುನೀತಾ ಅವರ ಸಹೋದರ ಸಂಬಂಧಿಗೆ ಕರೆ ಮಾಡಿದ್ದಾನೆ. ಸುನೀತಾ ಸಹೋದರ ಆಸ್ಪತ್ರೆಗೆ

ಮೂಡುಬಿದಿರೆ: ತಲೆಗೆ ಹೊಡೆದು ಪತ್ನಿಯ ಕೊಲೆಗೈದ ಪತಿ- ಆರೋಪಿ ಬಂಧನ Read More »

ಪುತ್ತೂರು: ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಹಲ್ಲೆ ಆರೋಪ: ಆಸ್ಪತ್ರೆಗೆ ದಾಖಲು

ಪುತ್ತೂರು: ತಡ ರಾತ್ರಿ ಯುವಕರ ತಂಡವೊಂದು ಮನೆಗೆ ಅಕ್ರಮವಾಗಿ ನುಗ್ಗಿ ಮಹಿಳೆಯೋರ್ವರಿಗೆ ಹಲ್ಲೆ ಮಾಡಿದ ಆರೋಪದ ಹಿನ್ನಲೆ ಮಹಿಳೆ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಗಾಳಿಮುಖದ ದಿ. ರಾಜು ಮಾದಿಗ ಎಂಬವರ ಪತ್ನಿ ಆಶಾ (35) ಎಂಬವರು ಸಂತ್ರೆಸ್ತೆ. ಖಾದರ್, ಮಹಮ್ನದ್, ಶಾಬೀರ್, ಶಾಪಿ, ಅಶ್ರಪ್ ಕೊಟ್ಯಾಡಿ ಪ್ರಕರಣದ ಆರೋಪಿಗಳು. `ನಾನು ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದು ಆ.16ರ ರಾತ್ರಿ ಊಟಕ್ಕೆ ಕೂತ್ತಿದ್ದೆ. ಈ ವೇಳೆ ಗಾಳಿಮುಖದ ಯುವಕರು ಸೇರಿದಂತೆ ಸುಮಾರು 20 ಮಂದಿಯ ತಂಡವೊಂದು

ಪುತ್ತೂರು: ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಹಲ್ಲೆ ಆರೋಪ: ಆಸ್ಪತ್ರೆಗೆ ದಾಖಲು Read More »