ಕ್ರೈಂ

ಸುಳ್ಯ: ಅಪಘಾತಕ್ಕೀಡಾದ ಮಹಿಳೆ ಮೃತ್ಯು

ಸುಳ್ಯ: ಇಲ್ಲಿನ ಐವರ್ನಾಡು ಹೈಸ್ಕೂಲು ಸಮೀಪ ಬೈಕಿನಿಂದ ಬಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ಆ.16ರಂದು ನಡೆದಿದೆ.ಮೃತರನ್ನು ಎಡಮಂಗಲದ ದೇವಸ್ಯ ವಿನೋದ ಶಶಿಧರ್(47) ಎಂದು ಗುರುತಿಸಲಾಗಿದೆ. ಇವರ ಮಗನಾದ ನಿಖಿಲ್ ಜೊತೆ ವಿನೋದರ ತಾಯಿಮನೆಗೆ ಹೋಗುತ್ತಿದ್ದರು. ಐವರ್ನಾಡು ಹೈಸ್ಕೂಲು ಸಮೀಪ ತಲುಪಿದಾಗ ಮಳೆ ಬಂದ ಕಾರಣ ವಿನೋದೆವರು ಕೊಡೆ ಬಿಡಿಸಲೆತ್ನಿಸಿದ್ದಾರೆ. ಈ ವೇಳೆ ಗಾಳಿಯ ರಭಸಕ್ಕೆ ಅವರು ನಿಯಂತ್ರಣ ಕಳೆದುಕೊಂಡು ರಸ್ತೆಗೆಸೆಯಲ್ಪಟ್ಟಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ತಲೆಗೆ ತೀವ್ರ ತರಹದ […]

ಸುಳ್ಯ: ಅಪಘಾತಕ್ಕೀಡಾದ ಮಹಿಳೆ ಮೃತ್ಯು Read More »

ವೃದ್ದೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕಾಮುಕರು

ಭೋಪಾಲ್ : ಮಧ್ಯಪ್ರದೇಶದ ಸಿಂಗ್ರಾಲಿ ಜಿಲ್ಲೆಯಲ್ಲಿ 60 ವರ್ಷ ವಯಸ್ಸಿನ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹದಿನೆಂಟು ವರ್ಷಕ್ಕಿಂತ ಕೆಳಗಿನ ಇಬ್ಬರು ಸೇರಿದಂತೆ ಐದು ಮಂದಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಸಿಂಗ್ರಾಲಿ ರೈಲ್ವೆ ಕ್ರಾಸಿಂಗ್ ಬಳಿ ರವಿವಾರ ರಾತ್ರಿ ಈ ಘಟನೆ ನಡೆದಿದ್ದು, ಮಹಿಳೆ ತನ್ನ ಮನೆಗೆ ಹೋಗುತ್ತಿದ್ದಾಗ ಪಾನಮತ್ತರಾಗಿದ್ದ ಐದು ಮಂದಿ ಮಹಿಳೆಯನ್ನು ಪೊದೆಗೆ ಎಳೆದೊಯ್ದು ಅತ್ಯಾಚಾರ ಎಸಗಿದರು ಎಂದು ಆಪಾದಿಸಲಾಗಿದೆ. ಮಹಿಳೆ ಹತ್ತಿರದ ಪೊಲೀಸ್ ಠಾಣೆಗೆ ಬಂದು ವಿಷಯ ಮುಟ್ಟಿಸುವ

ವೃದ್ದೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕಾಮುಕರು Read More »

ಪುತ್ತೂರು: ಮನೆ ಕೆಡವಿದ ಆರೋಪ: ದೇವಾಲಯದ ಕಾರ್ಯನಿರ್ವಹಣಾಧಿಕಾರಿಯ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಾಲಯಕ್ಕೆ ಸಂಬಂಧಿಸಿದ ಸ್ಥಳದಲ್ಲಿ ವಾಸವಿದ್ದ ಕುಟುಂಬದ ಮನೆಯನ್ನು ಕೆಡವಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೇವಾಲಯದ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಪ್ರಕರಣದ ಆರೋಪಿ. ದೇವಳದ ಮತ್ತು ನಗರಸಭೆ ಅನುಮತಿ ಪಡೆಯದೆ ಪತ್ರಕರ್ತ ಸಹೋದರರಾದ ಶೇಖ್ ಇಸಾಕ್ ಮತ್ತು ಶೇಖ್ ಜೈನುದ್ದೀನ್, ಕುಟುಂಬದವರು ತಾವಿರುವ ಹಳೆಯ ಮನೆಯನ್ನು ಕೆಡವಿ ಸ್ಥಳವನ್ನು ಕಬಳಿಸಿ ಅಕ್ರಮವಾಗಿ ಮೂರು ಮನೆ ನಿರ್ಮಾಣ ಮಾಡುತ್ತಿದ್ದಾರೆ. ಈ ರೀತಿ ದಿನೇಶ್ ಜೈನ್ ಎಂಬಾತ

ಪುತ್ತೂರು: ಮನೆ ಕೆಡವಿದ ಆರೋಪ: ದೇವಾಲಯದ ಕಾರ್ಯನಿರ್ವಹಣಾಧಿಕಾರಿಯ ವಿರುದ್ಧ ಪ್ರಕರಣ ದಾಖಲು Read More »

ಸಚಿವರ ಮೆರವಣಿಗೆ ವೇಳೆ ಪೊಲೀಸರ ಕಾಲಿನ ಮೇಲೆ ಹರಿದ ಜೀಪ್

ಬೆಂಗಳೂರು: ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ವೇಳೆ ಅವಘಡವೊಂದು ಸಂಭವಿಸಿದ್ದು, ಪೊಲೀಸರ ಕಾಲಿನ ಮೇಲೆಯೇ ಜೀಪಿನ ಚಕ್ರ ಹರಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರನ್ನು ಸ್ವಾಗತಿಸುವ ಕಾರ್ಯಕ್ರಮದ ವೇಳೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಸಚಿವ ನಾರಾಯಣಸ್ವಾಮಿ ಮೆರವಣಿಗೆ ನಡೆಸುತ್ತಿದ್ದ ಜೀಪ್ ನ ಚಕ್ರ ಪೊಲೀಸ್ ಸಿಬ್ಬಂದಿ ಕಾಲಿನ ಮೇಲೆ ಹರಿದಿದೆ. ಇಂದು ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಲು ದೆಹಲಿಯಿಂದ, ನಗರದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಚಿವರು

ಸಚಿವರ ಮೆರವಣಿಗೆ ವೇಳೆ ಪೊಲೀಸರ ಕಾಲಿನ ಮೇಲೆ ಹರಿದ ಜೀಪ್ Read More »

ಸಿಲಿಂಡರ್ ಸ್ಫೋಟ: ಓರ್ವ ಸಾವು, ಚಿಂತಾಜನಕ ಸ್ಥಿಯಲ್ಲಿ ಒಂದು ವರ್ಷದ ಮಗು

ಹುಬ್ಬಳ್ಳಿ: ಇಲ್ಲಿನ ಕಲಘಟಗಿ ಎಂಬಲ್ಲಿ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೊರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಕಲಘಟಗಿ ತಾಲೂಕಿನ ತಬಕದ ಹೊನ್ನಳ್ಳಿ ಗ್ರಾಮದ ತಮ್ಮಣ್ಣವರ ಮನೆಯಲ್ಲಿ ಘಟನೆ ನಡೆದಿದೆ. ಸ್ಫೋಟದ ತೀವ್ರತೆಯಿಂದ ಯಲ್ಲಪ್ಪ(35) ಎಂಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಂದು ವರ್ಷದ ಮಗು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುವಂತಾಗಿದೆ. ಇದೀಗ ಗಾಯಾಳು ಮಗುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟದ ತ್ರೀವತ್ರೆಗೆ ಮನೆಯ ಮೇಲ್ಛಾವಣಿ ಸಹ ಕುಸಿದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ ಉಳಿದವರು ಬಚಾವ್ ಆಗಿದ್ದಾರೆ. ಘಟನೆಯ ಕುರಿತು

ಸಿಲಿಂಡರ್ ಸ್ಫೋಟ: ಓರ್ವ ಸಾವು, ಚಿಂತಾಜನಕ ಸ್ಥಿಯಲ್ಲಿ ಒಂದು ವರ್ಷದ ಮಗು Read More »

ಅಕ್ಕನ ಜೊತೆ ಜಗಳವಾಡಿದ ಬಾವನ ಕೈ ಕತ್ತರಿಸಿದ ಬಾಮೈದ

ಮೈಸೂರು: ಗಂಡ ಹೆಂಡತಿ ನಡುವೆ ಗಲಾಟೆಯಾಗಿದ್ದ ಬಾಮೈದ ಬಾವನನ್ನೇ ಕೊಂದು ಹಾಕಿದ ಘಟನೆ ಮೈಸೂರಿನ ಗೌಸಿಯಾನಗರದಲ್ಲಿ ನಡೆದಿದೆ. ಮಹಮದ್ ಸರಾನ್ (27) ಕೊಲೆಯಾದವನು. ಕಳೆದ ಐದು ತಿಂಗಳ ಹಿಂದಷ್ಟೇ ಮಹಮ್ಮದ್ ಸರಾನ್ ಮತ್ತು ರೂಬೀನಾ ಎಂಬುವರನ್ನ ಮದುವೆಯಾಗಿದ್ದರು. ಇಬ್ಬರ ನಡುವೆ ಜಗಳ ಶುರುವಾಗಿತ್ತು. ಈ ಜಗಳದಲ್ಲಿ ಪತ್ನಿ ಕಡೆಯ ಸಂಬಂಧಿಕರು ಮಧ್ಯೆ ಪ್ರವೇಶಿಸಿದ್ದಾರೆ. ಜಗಳ ಅತಿರೇಕಕ್ಕೆ ಹೋಗಿದ್ದು ಪತ್ನಿಯ ಸಂಬಂಧಿಕರು ಪತಿ ಮಹಮದ್ ಸರಾನ್​ನ್ನು ಹತ್ಯೆಗೈದಿದ್ದಾರೆ. ಅಲ್ಲದೇ ಮಹಮದ್ ಸರಾನ್​ನ ಬಾಮೈದ ಕದೀರ್ ತನ್ನ ಬಾವನ ಕೈ

ಅಕ್ಕನ ಜೊತೆ ಜಗಳವಾಡಿದ ಬಾವನ ಕೈ ಕತ್ತರಿಸಿದ ಬಾಮೈದ Read More »

ಕುವೈಟ್ : ಬಹುಪತ್ನಿ ವಲ್ಲಭನ ಮದುವೆಯಾಗಿ ಮೋಸ ಹೋದ ಮಂಗಳೂರಿನ ಮಹಿಳೆ| ನ್ಯಾಯಕ್ಕಾಗಿ ತಾಯ್ನಾಡಿಗೆ ಮೊರೆ|

ಕುವೈಟ್: ಮಂಗಳೂರು ಮೂಲದ ಮಹಿಳೆಯೊಬ್ಬಳನ್ನು ಬಹುಪತ್ನಿ ವಲ್ಲಭನೋರ್ವ ಮೋಸದಿಂದ ಮದುವೆಯಾಗಿ ಕುವೈಟ್‌ನಲ್ಲಿ 6 ವರ್ಷಗಳಿಂದ ಗೃಹಬಂಧನದಲ್ಲಿ ಇರಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತ ಮಹಿಳೆ ಈಗ ನ್ಯಾಯಕ್ಕಾಗಿ ತಾಯ್ನಾಡಿನ ಪೊಲೀಸರ ಮೊರೆ ಹೋಗಲು ನಿರ್ಧರಿಸಿದ್ದಾರೆ. ಎರಡು ವಿವಾಹವಾಗಿ ವಿಚ್ಛೇದನ ಪಡೆದಿದ್ದೇನೆ ಎಂದು ಹೇಳಿ ಮೂರನೇ ವಿವಾಹವಾಗಿ, ಇಬ್ಬರು ಪತ್ನಿಯರ ಜತೆ ಕುವೈಟ್‌ನಲ್ಲಿ ಕದ್ದುಮುಚ್ಚಿ ಜೀವನ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಆತ ಮೊದಲ ಪತ್ನಿ ಮತ್ತು ಪುತ್ರನ ಜತೆ ಕುವೈಟ್‌ಗೆ ಮತ್ತೆ ತೆರಳಲು ಸಿದ್ಧತೆ ನಡೆಸಿರುವಂತೆಯೇ ಮಂಗಳೂರು ಮೂಲದ

ಕುವೈಟ್ : ಬಹುಪತ್ನಿ ವಲ್ಲಭನ ಮದುವೆಯಾಗಿ ಮೋಸ ಹೋದ ಮಂಗಳೂರಿನ ಮಹಿಳೆ| ನ್ಯಾಯಕ್ಕಾಗಿ ತಾಯ್ನಾಡಿಗೆ ಮೊರೆ| Read More »

ಮೂರು ತಿಂಗಳ ಹಸುಳೆ ಮೇಲೆ ಎರಗಿದ ಅಪ್ರಾಪ್ತ ವಿಕೃತಕಾಮಿ

ಮೂರು ತಿಂಗಳ ಹಸುಳೆ ಮೇಲೆ 17 ವರ್ಷದ ಅಪ್ರಾಪ್ತನೊಬ್ಬ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಎಟಾ ಜಿಲ್ಲೆಯ ಬಗ್ವಾಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಸುಳೆಯ ತಾಯಿ ಎಮ್ಮೆಗಳನ್ನು ಕಟ್ಟಲು ಹೋಗಿದ್ದ ವೇಳೆ ಈತ ಹೀಗೆ ಮಾಡಿದ್ದಾನೆ. ಎಮ್ಮೆಗಳನ್ನು ಕಟ್ಟಿ ಮರಳಿದ ತಾಯಿ ಅಳುತ್ತಿದ್ದ ತನ್ನ ಮಗುವನ್ನು ಅಪ್ರಾಪ್ತ ಸಮಾಧಾನ ಮಾಡುತ್ತಿರುವುದನ್ನು ಕಂಡಿದ್ದಾರೆ. ಈ ವೇಳೆ ಮಗುವಿನ ಖಾಸಗಿ ಅಂಗದಲ್ಲಿ ಗಾಯವಾಗಿ ತೀವ್ರ ರಕ್ತಸ್ರಾವವಾಗುತ್ತಿರುವುದನ್ನು ಕಂಡ ಮಗುವಿನ ತಾಯಿಗೆ ಅಲ್ಲಿ ಏನಾಗಿದೆ ಎಂಬುದು ಅರಿವಿಗೆ ಬಂದಿದೆ.

ಮೂರು ತಿಂಗಳ ಹಸುಳೆ ಮೇಲೆ ಎರಗಿದ ಅಪ್ರಾಪ್ತ ವಿಕೃತಕಾಮಿ Read More »

ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಬಿ. ವಿಜಯ್ ಕುಮಾರ್ ವಿಧಿವಶ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಬಿ. ವಿಜಯ್ ಕುಮಾರ್ (63) ಹೃದಯಘಾತದಿಂದಾಗಿ ನಿಧನರಾಗಿದ್ದಾರೆ. ವಿಜಯ್ ಕುಮಾರ್ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ನಿನ್ನೆ ರಾತ್ರಿ 9: 30 ರ ಸುಮಾರಿಗೆ ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ವಿಜಯ್​​ಕುಮಾರ್ ಅವರು ಸಿಂಹಾದ್ರಿಯ ಸಿಂಹ, ಲಯನ್ ಜಗಪತಿ ರಾವ್, ಮೌನಗೀತೆ, ಜಗದೇಕ ವೀರ, ಸ್ವಚ್ಛ ಭಾರತ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ,

ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಬಿ. ವಿಜಯ್ ಕುಮಾರ್ ವಿಧಿವಶ Read More »

ಕಬಕ: ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ ಎಸ್ ಡಿ‌ಪಿಐ ಕಾರ್ಯಕರ್ತರು| ಸಾವರ್ಕರ್- ಟಿಪ್ಪು ಹೆಸರಿನಲ್ಲಿ ತಗಾದೆ…!

ಪುತ್ತೂರು : ಸ್ವಾತಂತ್ರ್ಯ ರಥದಲ್ಲಿ ವೀರ ಸಾವರ್ಕರ್ ಫೋಟೊದ ಬದಲು ಟಿಪ್ಪು ಸುಲ್ತಾನ್ ಫೋಟೊ ಅಳವಡಿಸುವಂತೆ ಆಗ್ರಹಿಸಿ ಎಸ್ ಡಿಪಿಐ ಸಂಘಟನೆಯ ಕಾರ್ಯಕರ್ತರ ತಂಡ ರಥಕ್ಕೆ ತಡೆಒಡ್ಡಿದ ಘಟನೆ ಆ.15ರಂದು ಪುತ್ತೂರಿನ ಹೊರವಲಯ ಕಬಕದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬಳಿಕ ಪುತ್ತೂರು ನಗರ ಠಾಣೆ ಪೊಲೀಸರ ಸಕಾಲಿಕ ಕ್ರಮದಿಂದ ಸಂಭಾವ್ಯ ಸಂಘರ್ಷ ತಪ್ಪಿದೆ. ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯೋತ್ಸವದ ದಿನ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ಎಸ್ ಡಿ.ಪಿ.ಐ ಕಾರ್ಯರ್ತರು ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ತಡೆ

ಕಬಕ: ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ ಎಸ್ ಡಿ‌ಪಿಐ ಕಾರ್ಯಕರ್ತರು| ಸಾವರ್ಕರ್- ಟಿಪ್ಪು ಹೆಸರಿನಲ್ಲಿ ತಗಾದೆ…! Read More »