ಕ್ರೈಂ

ಹೆತ್ತಮ್ಮನನ್ನೇ ಉಸಿರುಗಟ್ಟಿಸಿ ಕೊಲೆಗೈದಳಾ ಬಾಲೆ 15ರ ಬಾಲಕಿ ಕೊಲೆಗಾತಿಯಾಗಿದ್ಯಾಕೆ ಗೊತ್ತಾ?

ಮುಂಬೈ: ಅಪ್ರಾಪ್ತೆ ಬಾಲಕಿಯೋರ್ವಳು ಕರಾಟೆ ಬೆಲ್ಟ್ ನಿಂದ ಹೆತ್ತ ತಾಯಿಯ ಕುತ್ತಿಗೆಯನ್ನು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬಂದಿದೆ.ಆ ತಾಯಿಗೆ ತನ್ನ ಮಗಳು ವೈದ್ಯಕೀಯ ಶಿಕ್ಷಣ ಅಭ್ಯಾಸ ಮಾಡ ಬೇಕು ಎಂದು ಆಸೆ ಹೊತ್ತಿದ್ದಳು. ಹಾಗಾಗಿ ಈ ವಿಚಾರವನ್ನು ಮಗಳ ಜೊತೆ ಚರ್ಚೆ ಮಾಡುತ್ತಿದ್ದಳು. ಆದರೆ ಮಗಳಿಗೆ ಇದು ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಅಮ್ಮ-ಮಗಳ ನಡುವೆ ಪದೇಪದೆ ಜಗಳ ಆಗುತ್ತಲೇ ಇತ್ತು. ಹಾಗಾಗಿ ಇದೇ ವಿಚಾರಕ್ಕೆ ಅಮ್ಮನ ವಿರುದ್ಧ ಕಳೆದ ತಿಂಗಳು ಈಕೆ ಪೊಲೀಸರಿಗೆ ದೂರನ್ನೂ […]

ಹೆತ್ತಮ್ಮನನ್ನೇ ಉಸಿರುಗಟ್ಟಿಸಿ ಕೊಲೆಗೈದಳಾ ಬಾಲೆ 15ರ ಬಾಲಕಿ ಕೊಲೆಗಾತಿಯಾಗಿದ್ಯಾಕೆ ಗೊತ್ತಾ? Read More »

ಕಾಸರಗೋಡು: ಕೊಲೆ ಕೃತ್ಯಕ್ಕೆ ಬಳಸಿದ್ದ ಬೈಕ್ ಠಾಣೆಯಿಂದ ನಾಪತ್ತೆ – ತನಿಖೆಯ ಹಾದಿ ತಪ್ಪಿಸಲು ಯತ್ನಿಸಿದರೇ ಖದೀಮರು?

ಕಾಸರಗೋಡು: ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಕೃಪೇಶ್ ಮತ್ತು ಶರತ್ ಲಾಲ್ ಕೊಲೆ ಪ್ರಕರಣದ ಎಂಟನೇ ಆರೋಪಿ ಜೊತೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದ ಬೈಕ್ ಪೊಲೀಸ್ ಠಾಣೆಯಿಂದ ನಾಪತ್ತೆಯಾಗಿದೆ. ಎಂಟನೇ ಆರೋಪಿ ಪನಯಾಲ್‌‌ನ ಸುಬೀಶ್ (29) ಕೃತ್ಯ ನಡಿಸಿದ ದಿನ ಸಂಚರಿಸಿದ್ದ ಬೈಕ್ ಬೇಕಲ ಪೊಲೀಸ್ ಠಾಣೆಯಿಂದ ಕಾಣೆಯಾಗಿರುವುದು ಬೆಳಕಿಗೆ ಬಂದಿದ್ದು ತನಿಖೆಯ ಹಾದಿ ತಪ್ಪಿಸಲು ಈ ಕೃತ್ಯ ನಡೆಸಿರುವುದಾಗಿ ಆರೋಪ ಕೇಳಿ ಬರುತ್ತಿದೆ. ಸಿಬಿಐ ಈಗ ತನಿಖೆ ನಡೆಸುತ್ತಿದ್ದು, ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾರಕಾಸ್ತ್ರ, ವಾಹನ ಮೊದಲಾದವುಗಳ

ಕಾಸರಗೋಡು: ಕೊಲೆ ಕೃತ್ಯಕ್ಕೆ ಬಳಸಿದ್ದ ಬೈಕ್ ಠಾಣೆಯಿಂದ ನಾಪತ್ತೆ – ತನಿಖೆಯ ಹಾದಿ ತಪ್ಪಿಸಲು ಯತ್ನಿಸಿದರೇ ಖದೀಮರು? Read More »

ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ

ಬೆಂಗಳೂರು: ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ರಮೇಶ್ ಜಾರಕಿಹೊಳಿ ವಿರುದ್ಧ ಸಹಕಾರಿ ಬ್ಯಾಂಕ್ ಗೆ ನೀಡಿದ್ದ 5.2ಕೋಟಿ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಸಹಕಾರಿ ಬ್ಯಾಂಕ್ ಖಾಸಗಿ ದೂರು ದಾಖಲಿಸಿತ್ತು. ಆದರೆ ಬ್ಯಾಂಕ್ ಪರ ವಕೀಲರು ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಚಿಕ್ಕೋಡಿ ನ್ಯಾಯಾಲಯ ಪ್ರಕರಣ ವಜಾಗೊಳಿಸಿ ಆದೇಶ ನೀಡಿತ್ತು. ಈ ಆದೇಶ

ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ Read More »

‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ದುರಂತ: ಐವರ ಮೇಲೆ FIR

ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಸಂಭವಿಸಿದ ಘಟನೆ ಸಂಬಂಧ ಇದೀಗ ಐವರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲು ಮಾಡಲಾಗಿದೆ. ನಿರ್ದೇಶಕ ಶಂಕರ್ ರಾಜ್, ಫೈಟ್ ಮಾಸ್ಟರ್ ವಿನೋದ್ ಹಾಗೂ ಜೆಸಿಬಿ ಡ್ರೈವರ್ ಸೇರಿ ಐವರ ಮೇಲೆ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಸ್ಯಾಂಡಲ್‍ವುಡ್‍ನಲ್ಲಿ ಮತ್ತೊಂದು ದೊಡ್ಡ ಅವಘಡ ಸಂಭವಿಸಿದೆ. 2016ರಲ್ಲಿ ‘ಮಾಸ್ತಿ ಗುಡಿ’ ಸಿನಿಮಾದ ವೇಳೆ ಫೈಟರ್ ಅನಿಲ್, ಉದಯ್ ಸಾವನ್ನಪ್ಪಿದ್ದರು. ಇದೀಗ ಅಂತದ್ದೇ ಇನ್ನೊಂದು ದುರ್ಘಟನೆ ಸಂಭವಿಸಿದೆ.‘ಲವ್

‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ದುರಂತ: ಐವರ ಮೇಲೆ FIR Read More »

ಸುಳ್ಯ|ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ ಮಗ ಪತ್ನಿ ಜೊತೆ ನಿಗೂಢ ಕಣ್ಮರೆ

ಸುಳ್ಯ: ಕೊರೊನಾ ಪಾಸಿಟಿವ್ ಬಂದ ಮಗ ತನ್ನ ಹೆತ್ತ ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ ಸಂಪರ್ಕಕ್ಕೆ ಸಿಗದೆ ಪತ್ನಿ ಜೊತೆ ನಾಪತ್ತೆಯಾದ ಘಟನೆ ಸುಳ್ಯ ನಗರದಲ್ಲಿ ಬೆಳಕಿಗೆ ಬಂದಿದೆ. ಸುಳ್ಯ ಪರಿಸರದಲ್ಲಿ ಬಳೆ ಮಾರಿ ಜೀವನ ಸಾಗಿಸುತ್ತಿದ್ದ ರಾಜೇಶ್ವರಿ ಮತ್ತು ವಿನಯ ಕುಮಾರ್ ಸಂಪರ್ಕಕ್ಕೆ ಸಿಗದೆ ಇರುವ ದಂಪತಿ. ಇವರು ವೃದ್ದ ತಾಯಿಯ ಜತೆ ಗಾಂಧಿನಗರ ಸಂತೋಷ್ ಚಿತ್ರಮಂದಿರದ ಎದುರಿನ ಬಿಲ್ಡಿಂಗ್‍ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಳೆದ ವಾರ ದಂಪತಿ ಕೊರೊನಾ ಪರೀಕ್ಷೆ ನಡೆಸಿದಾಗ ಅದರ ವರದಿ

ಸುಳ್ಯ|ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ ಮಗ ಪತ್ನಿ ಜೊತೆ ನಿಗೂಢ ಕಣ್ಮರೆ Read More »

‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ಭೀಕರ ದುರಂತ : ಫೈಟರ್ ಸಾವು

ಬೆಂಗಳೂರು: ಲವ್ ಯು ರಚ್ಚು ಸಿನಿಮಾ ಶೂಟಿಂಗ್ ವೇಳೆ ದುರಂತ ಸಂಭವಿಸಿದ್ದು, ಹೈಟೆನ್ಷನ್ ವೈರ್ ತಗುಲಿ ಫೈಟರ್ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ವಿವೇಕ್ (35) ಮೃತ ಫೈಟರ್. ಬಿಡದಿಯ ಈಗಲ್‍ಟನ್ ರೆಸಾರ್ಟ್ ಬಳಿಯಲ್ಲಿ ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿನಯಿಸುತ್ತಿರುವ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಫೈಟ್ ಮಾಸ್ಟರ್ ವಿನೋದ್ ಸಾಹಸ ನಿರ್ದೇಶನದಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಕಳೆದ ಐದು ದಿನಗಳಿಂದ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಚಿತ್ರೀಕರಣದ ವೇಳೆ ಮುಂಜಾಗ್ರತ ಕ್ರಮಗಳ ತೆಗೆದುಕೊಂಡಿದ್ರಾ ಅಥವಾ

‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ಭೀಕರ ದುರಂತ : ಫೈಟರ್ ಸಾವು Read More »

ಪ್ರೀತ್ಸೇ ಪ್ರೀತ್ಸೆ ಎಂದು ದುಂಬಾಲು ಬಿದ್ದ ಮೀಸೆ ಚಿಗುರದ ಪೋರ| ಕಾಟ‌ ತಾಳಲಾರದೆ ಬಾಲಕಿ ಆತ್ಮಹತ್ಯೆ

ರಾಯಚೂರು: ಪ್ರೀತಿಗಾಗಿ ಪೀಡಿಸ್ತಿದ್ದ ಬಾಲಕನ ನಿತ್ಯ ಕಿರುಕುಳ ತಾಳಲಾಗದೆ 14 ವರ್ಷದ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಂಧನೂರ ತಾಲೂಕಿನ ಬಾಂಗ್ಲಾ ಕ್ಯಾಂಪ್ನಲ್ಲಿ ನಡೆದಿದೆ. ತಮನ್ನ (14) ಕ್ರಿಮಿನಾಷಕ ಸೇವಿಸಿ ಅತ್ನಹತ್ಯೆ ಮಾಡಿಕೊಂಡ ಬಾಲಕಿ. ಬಿನ್ನಿಮಯಿ ಬಿಸ್ವಾಸ (17) ಎಂಬ ಬಾಲಕ ತಮನ್ನ ಎಂಬ ಬಾಲಕಿಗೆ ನಿತ್ಯ ಚುಡಾಯಿಸ್ತಿದ್ದ. ಬಾಲಕಿ ತನ್ನ ಅಜ್ಜನ ಮನೆಗೆ ಹೊಗುವಾಗೆಲ್ಲ ಆಕೆಯನ್ನು ಹಿಂಬಾಲಿಸಿ ಪ್ರೀತಿ ಮಾಡುವಂತೆ ಒತ್ತಾಯಿಸ್ತಿದ್ದ. ಮದುವೆಯಾಗುವಂತೆ ಪೀಡಿಸ್ತಿದ್ದ. ಪ್ರೀತ್ಸೆ ಪ್ರೀತ್ಸೆ ಅಂತ ನಿತ್ಯ ಆತ ಕೊಡ್ತಿದ್ದ

ಪ್ರೀತ್ಸೇ ಪ್ರೀತ್ಸೆ ಎಂದು ದುಂಬಾಲು ಬಿದ್ದ ಮೀಸೆ ಚಿಗುರದ ಪೋರ| ಕಾಟ‌ ತಾಳಲಾರದೆ ಬಾಲಕಿ ಆತ್ಮಹತ್ಯೆ Read More »

ಬಾಲಕಿಯ ಅತ್ಯಾಚಾರಕ್ಕೆ ಯತ್ನ: ಆರೋಪಿಗೆ ಭರ್ಜರಿ ಗೂಸ

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ ಸ್ಥಳೀಯರು ಭರ್ಜರಿ ಗೂಸ ಕೊಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಶಿರಾ ಮೂಲದ ತಿಪ್ಪಯ್ಯ(42) ಗೂಸಾ ತಿಂದ ಆರೋಪಿ. ಈತ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಶುಗರ್ ಫ್ಯಾಕ್ಟರಿಯ ಕಾರ್ಮಿಕರಿಗಾಗಿ ನಿರ್ಮಿಸಿರುವ ಸಾಲು ಮನೆಗಳ ಬಳಿ ಬಾಡಿಗೆ ಮನೆಯಲ್ಲಿ ಕಳೆದ ಒಂದು ತಿಂಗಳಿಂದ ವಾಸವಾಗಿದ್ದ. ಇದೇ ವೇಳೆ 8 ವರ್ಷದ ಅಪ್ರಾಪ್ತ ಬಾಲಕಿಗೆ ಚಾಕ್ಲೇಟ್ ಆಮಿಷವೊಡ್ಡಿ ಕರೆದೊಯ್ದು, ಬಾಲಕಿಯನ್ನು ವಿವಸ್ತ್ರಗೊಳಿಸಿ

ಬಾಲಕಿಯ ಅತ್ಯಾಚಾರಕ್ಕೆ ಯತ್ನ: ಆರೋಪಿಗೆ ಭರ್ಜರಿ ಗೂಸ Read More »

ವಿದ್ಯಾಭ್ಯಾಸಕ್ಕೆ ಬಡತನ ಅಡ್ಡಿ: ಯುವತಿ ಆತ್ಮಹತ್ಯೆ

ದಾವಣಗೆರೆ: ಮನೆಯಲ್ಲಿ ಬಡತನದ ಕಾರಣದಿಂದ ಮುಂದೆ ಓದಿಸುವುದು ಕಷ್ಟ ಎಂದು ತಾಯಿ ಹೇಳಿದ್ದರಿಂದ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಉಜ್ಜಪ್ಪ ವಡೇರಹಳ್ಳಿಯಲ್ಲಿ ನಡೆದಿದೆ. ಉಜ್ಜಪ್ಪ ವಡೇರಹಳ್ಳಿಯಲ್ಲಿ ಗ್ರಾಮದ ನಾಗರಾಜಪ್ಪ ಮತ್ತು ಚಂದ್ರಮ್ಮನ ಅವರ ಪುತ್ರಿ ರಕ್ಷಿತಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ದಾವಣಗೆರೆಯ ಸೀತಮ್ಮ ಪಿಯು ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ಓದುತ್ತಿದ್ದಳು. ಕೆಲ ದಿನಗಳ ಹಿಂದೆ ಪಿಯುಸಿ ಪಾಸ್ ಆಗಿದ್ದು, ಮುಂದೆ ಪದವಿ ವ್ಯಾಸಂಗ ಮಾಡಬೇಕು ಎನ್ನುವ ಆಸೆಯನ್ನು ಹೊಂದಿದ್ದಳು. ಆದರೆ

ವಿದ್ಯಾಭ್ಯಾಸಕ್ಕೆ ಬಡತನ ಅಡ್ಡಿ: ಯುವತಿ ಆತ್ಮಹತ್ಯೆ Read More »

ಕಂಬಳ ಕ್ಷೇತ್ರದ ಸಾಧಕ ರಸ್ತೆ ಅಪಘಾತಕ್ಕೆ ಬಲಿ

ಮಂಗಳೂರು: ಕಂಬಳ ಕ್ಷೇತ್ರದ ಸಾಧಕ ಗುರುವಪ್ಪ ಪೂಜಾರಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಗುರುಪುರ ಸೇತುವೆ ಸಮೀಪ ಇಂದು ಸಂಭವಿಸಿದೆ. ನಗರದ ಹೊರ ವಲಯದ ಗುರುಪುರ ಸೇತುವೆ ಸಮೀಪದ ಕುಕ್ಕುದಕಟ್ಟೆಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಗುರುವಪ್ಪ ಪೂಜಾರಿ ಮೃತಪಟ್ಟಿದ್ದಾರೆ. ಕುಕ್ಕುದಕಟ್ಟೆಯಲ್ಲಿರುವ ಡೈರಿಗೆ ಎಂದಿನಂತೆ ಹಾಲು ಕೊಂಡೊಯ್ಯುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.

ಕಂಬಳ ಕ್ಷೇತ್ರದ ಸಾಧಕ ರಸ್ತೆ ಅಪಘಾತಕ್ಕೆ ಬಲಿ Read More »