ಕ್ರೈಂ

ಬೆಂಗಳೂರು: ಕುತ್ತಿಗೆ ಕೊಯ್ದು ಮಹಿಳೆಯ ಬರ್ಬರ ಕೊಲೆ

ಬೆಂಗಳೂರು: ಮನೆಯಲ್ಲಿ ಯಾರೂ ಇರದ ಸಂದರ್ಭ ಒಳ ನುಗ್ಗಿ ಮಹಿಳೆಯೊಬ್ಬರನ್ನು ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಜ್ಞಾನಜ್ಯೋತಿ ನಗರದಲ್ಲಿ ನಿನ್ನೆ ನಡೆದಿದೆ. ಸ್ಥಳೀಯ ಮನೆಯೊಂದರಲ್ಲಿ ವಾಸವಿದ್ದ 26 ವರ್ಷದ ಮಹಿಳೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಮಹಿಳೆಯ ಪತಿ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದು ಶನಿವಾರ ಕೆಲಸಕ್ಕೆ ತೆರಳಿದ್ದರು. ಸಂಜೆ ಗಂಡನ ಸಹೋದರ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾವುದೇ ಕಳವು ನಡೆದಿಲ್ಲ. ಆದ್ದರಿಂದ ವೈಯಕ್ತಿಕ ದ್ವೇಷದ ಕಾರಣಕ್ಕೆ ಕೊಲೆ ಮಾಡಲಾಗಿದೆ […]

ಬೆಂಗಳೂರು: ಕುತ್ತಿಗೆ ಕೊಯ್ದು ಮಹಿಳೆಯ ಬರ್ಬರ ಕೊಲೆ Read More »

ಬಂಟ್ವಾಳ: ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಮನೆ ಮೇಲೆ ಪಲ್ಟಿ: ಓರ್ವ ಗಂಭೀರ

ಬಂಟ್ವಾಳ: ಹಿಟಾಚಿ ಸಾಗಿಸುತ್ತಿದ್ದ ವೇಳೆ ಟಿಪ್ಪರೊಂದು ಮನೆಯ ಮೇಲೆ ಬಿದ್ದು ಟಿಪ್ಪರ್ ನಲ್ಲಿದ್ದ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ಅಮ್ಟಾಡಿಯ ಕೆಂಪುಗುಡ್ಡೆ ಕ್ರಾಸ್ ಬಳಿ ಇಂದು ನಡೆದಿದೆ. ಟಿಪ್ಪರ್ ನಲ್ಲಿದ್ದ ವಿಠಲ್ ರವರು ಗಾಯಗೊಂಡವರು. ಇವರು ಟಿಪ್ಪರ್ ಅಡಿಗೆ ಸಿಲುಕಿದ್ದು, ಬಿ.ಸಿ.ರೋಡಿನ ವಿಜಯಲಕ್ಷ್ಮಿ ಕ್ರೇನ್ ತಕ್ಷಣ ಸ್ಥಳಕ್ಕೆ ತೆರಳಿ ಟಿಪ್ಪರನ್ನು ಮೇಲಕ್ಕೆತ್ತಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯಲ್ಲಿ ನಾರಾಯಣ ಭಂಡಾರಿ ಅವರ ಮನೆ ಸಂಪೂರ್ಣ ಜಖಂಗೊಂಡಿದ್ದು, ಮನೆ ಮಂದಿಗೆ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ

ಬಂಟ್ವಾಳ: ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಮನೆ ಮೇಲೆ ಪಲ್ಟಿ: ಓರ್ವ ಗಂಭೀರ Read More »

ಐಎಂಎ ವಂಚನೆ ಪ್ರಕರಣ: ರೋಷನ್ ಬೇಗ್ ಆಸ್ತಿ‌ ಮುಟ್ಟುಗೋಲು

ಐಎಂಎ ಸಂಸ್ಥೆಯ ಬಹುಕೋಟಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ‌ ಸಚಿವ ರೋಷನ್ ಬೇಗ್ ಆಸ್ತಿಯನ್ನು ಸರ್ಕಾರ ಬುಧವಾರ ಜಪ್ತಿ‌ ಮಾಡಿದೆ. ಪ್ರಕರಣದಲ್ಲಿ 36ನೇ ಆರೋಪಿಯಾಗಿರುವ ರೋಷನ್ ಬೇಗ್ ರ ಬ್ಯಾಂಕ್ ಖಾತೆ ಹಾಗೂ‌ ಸ್ಥಿರಾಸ್ತಿಯನ್ನ ಜಪ್ತಿ‌ ಮಾಡಲಾಗಿದ್ದು, ಎಷ್ಟು ಮೊತ್ತದ ಆಸ್ತಿ ಜಪ್ತಿಯಾಗಿದೆ ಎಂಬುದು ತಿಳಿದುಬಂದಿಲ್ಲ. ಐಎನ್ಎ ಸಂಸ್ಥಾಪಕ ಹಾಗೂ ಪ್ರಕರಣದ ಪ್ರಮುಖ ‌ಆರೋಪಿ ಮನ್ಸೂರ್ ಅಲಿಖಾನ್ ನಿಂದ ಅಕ್ರಮವಾಗಿ ಹಣ ಸಂಪಾದನೆ ಮಾಡಿದ್ದಾರೆ ಅನ್ನೋದು‌ ಸಾಬೀತಾದ ಬಳಿಕ ಕೋರ್ಟ್ ಆಸ್ತಿ ಜಪ್ತಿಗೆ ಆದೇಶಿಸಿತ್ತು. ಅದರಂತೆ ಇದೀಗ

ಐಎಂಎ ವಂಚನೆ ಪ್ರಕರಣ: ರೋಷನ್ ಬೇಗ್ ಆಸ್ತಿ‌ ಮುಟ್ಟುಗೋಲು Read More »

ಮಡಿಕೇರಿ: ಅಕ್ರಮ‌ ಗಾಂಜಾ ಬೆಳೆ ಪತ್ತೆ, ಆರೋಪಿ ‌ವಶಕ್ಕೆ

ಮಡಿಕೇರಿ: ಮನೆಗೆ ಸಮೀಪದಲ್ಲಿರುವ ತೋಟದಲ್ಲಿ ಗಾಂಜಾ ಗಿಡ ಬೆಳೆದಿರುವದನ್ನು ಪತ್ತೆ ಹಚ್ಚಿದ ಮಡಿಕೇರಿ ಗ್ರಾಮಾಂತರ ಪೋಲಿಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮೂರ್ನಾಡು ಸಮೀಪದ ಕಟ್ಟೆಮಾಡು ಗ್ರಾಮದ ಕೊಪ್ಪಂಗೇರಿ ಪೈಸಾರಿ ನಿವಾಸಿ ಎಚ್.ಎಸ್.ಲೋಕೇಶ್ ಅಣ್ಣಯ್ಯ ಬಂಧಿತ ಆರೋಪಿ.ಲೋಕೇಶ್ ತನ್ನ ಮನೆಯ ಸಮೀಪವಿರುವ ತೋಟದಲ್ಲಿ ಗಾಂಜಾ ಗಿಡ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೋಲಿಸರು ದಾಳಿ ಮಾಡಿದ್ದಾರೆ. ಈ ಸಂದರ್ಭ ತೋಟದಲ್ಲಿ ಎರಡು ಬೆಳೆದು ಕಟಾವಿಗೆ ಬಂದಿರುವ ಗಿಡಗಳು ಪತ್ತೆಯಾಗಿವೆ. ಗಿಡಗಳನ್ನು ವಶಪಡಿಸಿಕೊಂಡ ಪೋಲಿಸರು, ಆರೋಪಿ ಲೋಕೇಶ್‌ನನ್ನು ಬಂಧಿಸಿ ಮುಂದಿನ

ಮಡಿಕೇರಿ: ಅಕ್ರಮ‌ ಗಾಂಜಾ ಬೆಳೆ ಪತ್ತೆ, ಆರೋಪಿ ‌ವಶಕ್ಕೆ Read More »

ಮಾಜಿ ಕೇಂದ್ರ ಸಚಿವರ‌ ಪತ್ನಿ‌ ಬರ್ಬರ ಹತ್ಯೆ. ಮನೆ ದರೋಡೆ

ನವದೆಹಲಿ: ಕೇಂದ್ರದ ಮಾಜಿ ಸಚಿವ, ಬಿಜೆಪಿ ನಾಯಕ ದಿವಂಗತ ಪಿ.ರಂಗರಾಜನ್ ಕುಮಾರಮಂಗಲಂ ಅವರ ಪತ್ನಿಯನ್ನು ಮಂಗಳವಾರ ರಾತ್ರಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಿಟ್ಟಿ ಕುಮಾರಮಂಗಲಂ ಮೃತರು. 2000ರ ಆಗಸ್ಟ್​ 23ರಂದು ಪಿ.ರಂಗರಾಜನ್ ಮೃತಪಟ್ಟಿದ್ದರು. ಕಿಟ್ಟಿ ಕುಮಾರಮಂಗಲಂ ಅವರು ವೃತ್ತಿಯಲ್ಲಿ ವಕೀಲರಾಗಿದ್ದರು. ದೆಹಲಿಯ ವಸಂತ ವಿಹಾರದಲ್ಲಿರುವ ಅವರ ನಿವಾಸದಲ್ಲಿ ಕಳೆದ ರಾತ್ರಿ ಹತ್ಯೆಗೀಡಾಗಿದ್ದು, ಇದುವರೆಗೆ ಓರ್ವ ಶಂಕಿತನನ್ನು ಬಂಧಿಸಿ ಮತ್ತಿಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ನೈರುತ್ಯ ವಲಯ ಡಿಸಿಪಿ ತಿಳಿಸಿದ್ದಾರೆ. ನಿನ್ನೆ ರಾತ್ರಿ 8.30ರ ಸುಮಾರಿಗೆ ಲಾಂಡ್ರಿಮ್ಯಾನ್

ಮಾಜಿ ಕೇಂದ್ರ ಸಚಿವರ‌ ಪತ್ನಿ‌ ಬರ್ಬರ ಹತ್ಯೆ. ಮನೆ ದರೋಡೆ Read More »

ಪ್ರೇಮಪಾಶದಲ್ಲಿ ಕುರುಡಾದ ಮಗ ತಂದೆಗೆ ತ್ರಿಶೂಲದಿಂದ ತಿವಿದ…!

ಲಕ್ನೋ: ಪ್ರೇಮಪಾಶದಲ್ಲಿ ಬಿದ್ದು ಕೊಲೆಗಾರರಾಗುವ ಅನೇಕ ಪ್ರೇಮಿಗಳಿದ್ದಾರೆ. ಯಾಕೆಂದರೆ ಅವರಿಗೆ ತಮ್ಮ ಪ್ರೀತಿಯನ್ನು ಹೊರತುಪಡಿಸಿ ಮತ್ತೇನೂ ಕಾಣುವುದಿಲ್ಲ. ಇಂತಹುದೇ ಶಾಕಿಂಗ್ ಘಟನೆ ಉತ್ತರ ಪ್ರದೆಶದ ಔರೆಯಾದಲ್ಲಿ ನಡೆದಿದೆ. ಇಲ್ಲೊಬ್ಬ ಮಗ ಇಲ್ಲೊಬ್ಬ ಮಗ ತನ್ನ ಗರ್ಲ್‌ಫ್ರೆಂಡ್‌ ಜೊತೆ ಮಾತನಾಡಲು ಸಾಧ್ಯವಾಗಲಿಲ್ಲವೆಂದು ತಂದೆಯನ್ನು ನಿದ್ದೆ ಮಾಡುವಾಗಲೇ ಕೊಲೆಗೈದಿದ್ದಾನೆ. ಶಿವಂ ಹೆಸರಿನ ಯುವಕ ಗಾಢ ನಿದ್ರೆಯಲ್ಲಿದ್ದ ತಂದೆಯ ಅರವಿಂದ್ ಹೊಟ್ಟೆಗೆ ತ್ರಿಶೂಲ ಚುಚ್ಚಿ ಕೊಲೆಗೈದಿದ್ದಾನೆ. ಯುವಕನಿಗೆ ಗರ್ಲ್‌ಫ್ರೆಂಡ್‌ ಜೊತೆ ಮಾತನಾಡಲು ತಂದೆ ಅಡ್ಡಿಪಡಿಸುತ್ತಿದ್ದರೆಂಬುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಘಟನೆ ದಿನವೂ

ಪ್ರೇಮಪಾಶದಲ್ಲಿ ಕುರುಡಾದ ಮಗ ತಂದೆಗೆ ತ್ರಿಶೂಲದಿಂದ ತಿವಿದ…! Read More »

ಡಿಸಿಎಂ ಸವದಿ ಪುತ್ರನ ಕಾರು ಡಿಕ್ಕಿ, ರೈತ ಸಾವು

ಬಾಗಲಕೋಟೆ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರನ ಕಾರು ಬೈಕ್ ಗೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ರೈತ ಮೃತಪಟ್ಟ ಘಟನೆ ನಡೆದಿದೆ. ಕೂಡಲ ಸಂಗಮ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನಲ್ಲಿ ಅಪಘಾತ ಸಂಭವಿಸಿದೆ. ಲಕ್ಷ್ಮಣ ಸವದಿ ಹಿರಿಯ ಮಗ ಚಿದಾನಂದ ಸವದಿ ಸೇರಿದಂತೆ 12 ಜನರು ಎರಡು ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಹುನಗುಂದ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎನ್ನಲಾಗಿದೆ. ಅಪಘಾತದ ನಂತರ ತಮ್ಮ ವಾಹನದ

ಡಿಸಿಎಂ ಸವದಿ ಪುತ್ರನ ಕಾರು ಡಿಕ್ಕಿ, ರೈತ ಸಾವು Read More »

ಸ್ನಾನಕ್ಕಿಳಿದ ಸಹೋದರರು ನೇತ್ರಾವತಿ ಪಾಲು

ಮಂಗಳೂರು: ಇಲ್ಲಿನ ನೇತ್ರಾವತಿ ನದಿ ನೀರಿಗೆ ಸ್ನಾನಕ್ಕೆ ಇಳಿದ ಗದಗ ಮೂಲಕದ ಇಬ್ಬರು ಸಹೋದರರು ಸೋಮವಾರ ನೀರುಪಾಲಾಗಿ ಮೃತಪಟ್ಟಿದ್ದಾರೆ. ಉಪ್ಪಿನಂಗಡಿಯಲ್ಲಿ ತೋಟದ ಕಾರ್ಮಿಕರಾದ, ಮೂಲತಃ ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಸುಬ್ಬನಹಳ್ಳಿ ನಿವಾಸಿಯಾದ ಧರ್ಮ ಮತ್ತು ಮೀನಾಕ್ಷಿ ದಂಪತಿಯ ಮಕ್ಕಳಾದ ನಿಂಗರಾಜು (16) ಮತ್ತು ಸತೀಶ್ (14) ಮೃತರು. ‌ಬೆಳ್ತಂಗಡಿ ತಾಲ್ಲೂಕು ಮುಂಡಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಿಂಗರಾಜು ಹತ್ತನೇ ತರಗತಿಯಲ್ಲಿ, ಆತನ ಸಹೋದರ ಸತೀಶ್, ಪುತ್ತೂರು ಬಲ್ನಾಡು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿಯಲ್ಲಿ

ಸ್ನಾನಕ್ಕಿಳಿದ ಸಹೋದರರು ನೇತ್ರಾವತಿ ಪಾಲು Read More »

ಶಿಕಾರಿಗೆ ಕರೆದೊಯ್ದು ಗೆಳೆಯನನ್ನೇ ಬೇಟೆಯಾಡಿದರೇ…!? | ಸಾವಿನ ಸುತ್ತ ಅನುಮಾನದ ಹುತ್ತ

ಹಾಸನ: ಶಿಕಾರಿಗೆ ಕಾಡಿಗೆ ತೆರಳಿದ್ದ ವೇಳೆ ಸಹಚರರ ಗುಂಡೇಟಿಗೆ ಯುವಕನೊಬ್ಬ ಬಲಿಯಾಗಿದ್ದಾನೆ. ಘಟನೆ ಬೆನ್ನಲ್ಲೇ ಸಹಚರರು ಪರಾರಿಯಾಗಿದ್ದು ಇದು ಕೊಲೆಯೇ ಎಂಬ ಅನುಮಾನ ಹುಟ್ಟುಹಾಕಿದೆ. ಬೇಲೂರು ತಾಲೂಕಿನ ಕುಶಾವರ ಗ್ರಾಮದ ನಿವಾಸಿ ಮಧು (24) ಮೃತ ಯುವಕ. ಮಧು ತನ್ನ ಸ್ನೇಹಿತರೊಂದಿಗೆ ಶಿಕಾರಿಗೆ ತೆರಳುವುದಾಗಿ ಮನೆಯವರೊಂದಿಗೆ ಹೇಳಿಹೋಗಿದ್ದ. ಈ ಸಂದರ್ಭ ಕಲ್ಲಹಳ್ಳಿ ಕಾಡಿನಲ್ಲಿ ಮಿಸ್ ಫೈಯರ್ ಆಗಿ ಮಧು ತಲೆಗೆ ಗುಂಡೇಟು ಬಿದ್ದಿದೆ ಎನ್ನಲಾಗಿದೆ. ಗುಂಡು ತಗುಲಿ ಗಾಯಗೊಂಡ ಯುವಕನನ್ನು ಜೊತೆಗಿದ್ದವರು ಆಸ್ಪತ್ರೆಗೆ ಸೇರಿಸಿ ಪರಾರಿಯಾಗಿದ್ದಾರೆ. ಗಂಭೀರ

ಶಿಕಾರಿಗೆ ಕರೆದೊಯ್ದು ಗೆಳೆಯನನ್ನೇ ಬೇಟೆಯಾಡಿದರೇ…!? | ಸಾವಿನ ಸುತ್ತ ಅನುಮಾನದ ಹುತ್ತ Read More »

ಅಪ್ರಾಪ್ತ ತಂಗಿಯನ್ನೇ ಹರಿದು‌ ಮುಕ್ಕಿದ ಪಾಪಿ‌ ಅಣ್ಣ…! ಗರ್ಭವತಿಯಾದ ಬಾಲಕಿ

ತಿರುಪತಿ​: ಸ್ವಂತ ತಂಗಿಯ ಮೇಲೆ ಅಣ್ಣನೊಬ್ಬ ನಿರಂತರ ಅತ್ಯಾಚಾರವೆಸಗಿ, ಆಕೆಯನ್ನು ಗರ್ಭವತಿಯನ್ನಾಗಿಸಿದ ಘಟನೆ ತಿರುಪತಿ ಅಲಿಪಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕ ತನ್ನ ತಂಗಿಯನ್ನು ಹೆದರಿಸಿ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದನಂತೆ. ಪರಿಣಾಮ ಬಾಲಕಿ ಗರ್ಭವತಿಯಾಗಿದ್ದಾಳೆ. ಇವರ ತಂದೆ 20 ವರ್ಷಗಳ ಹಿಂದೆ ಮದುವೆಯಾಗಿದ್ದ. ಈತನಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಈತನ ಮೊದಲನೇ ಹೆಂಡತಿ ಮನೆ ಬಿಟ್ಟು ಹೋಗಿದ್ದು ಎರಡನೇ ಮದುವೆಯಾಗಿದ್ದ. ಎರಡನೇ ಹೆಂಡತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು.ಮೊದಲನೇ ಹೆಂಡತಿಯ ಮಗ

ಅಪ್ರಾಪ್ತ ತಂಗಿಯನ್ನೇ ಹರಿದು‌ ಮುಕ್ಕಿದ ಪಾಪಿ‌ ಅಣ್ಣ…! ಗರ್ಭವತಿಯಾದ ಬಾಲಕಿ Read More »