ಕ್ರೈಂ

ಆರ್’ಎಸ್’ಎಸ್ ಮುಖಂಡನಿಂದ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ

ಮಧ್ಯಪ್ರದೇಶ: ಆರ್’ಎಸ್’ಎಸ್ ಹಾಗೂ ಬಿಜೆಪಿ ಮುಖಂಡನೊಬ್ಬ ತನ್ನ ಸ್ವಂತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಘಟನೆ ರಾಜ್ಯದ ಪೋವಾಯಿಯ ಮುದ್ವಾರಿ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಆತನ 17 ವರ್ಷದ ಅಪ್ರಾಪ್ತ ಮಗಳು ನೀಡಿದ ದೂರಿನನ್ವಯ ಮುಖಂಡ ಸತೀಶ್ ಮಿಶ್ರ ಎಂಬಾತನನ್ನು ಬಂದಿಸಲಾಗಿದೆ. ಈ ಘಟನೆ ಮಧ್ಯಪ್ರದೇಶ ರಾಜ್ಯ ಬಿಜೆಪಿ ಗೆ ತೀವ್ರ ಮುಜುಗರ ಉಂಟುಮಾಡಿದೆ. ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿ ಆರೋಪದಲ್ಲಿ ಪೊಲೀಸರು ಆತನನ್ನು ಬಂಧಿಸಿದ ಬೆನ್ನಲ್ಲೇ, ಬಿಜೆಪಿ ಮುಖಂಡರೊಂದಿಗೆ ಇರುವ ಆತನ ಫೋಟೋ […]

ಆರ್’ಎಸ್’ಎಸ್ ಮುಖಂಡನಿಂದ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ Read More »

ತಪ್ಪಿದ ಕರೆಯಿಂದ ಹುಟ್ಟಿದ ಪ್ರೀತಿ ಬದುಕಿನ ಹಳಿ ತಪ್ಪಿಸಿತು | ಮದುವೆಯಾದ ಕೆಲವೇ ತಿಂಗಳಲ್ಲಿ ಯುವತಿ ನಿಗೂಢ ಸಾವು | ಇದು ಕೊಲೆಯೋ…? ಆತ್ಮಹತ್ಯೆಯೋ….?

ಶಿವಮೊಗ್ಗ: ಮಿಸ್ಸ್’ಡ್ ಕಾಲ್’ನಿಂದ ಪರಿಚಯವಾದ ಯುವಕನನ್ನು ಪ್ರೀತಿಸಿ ಮದುವೆಯಾಗಿ ದಾಂಪತ್ಯ ಜೀವನದ ಏಳೇ ತಿಂಗಳಿನಲ್ಲಿ ಯುವತಿ ಒಬ್ಬಳು ನಿಗೂಢವಾಗಿ ಸಾವನ್ನಪ್ಪಿದ ಘಟನೆ ಹೊಸನಗರ ತಾಲೂಕಿನ ಕಾಡಿಗ್ಗೇರಿಯಲ್ಲಿ ನಡೆದಿದೆ. ಹಾಸನದ ಸಕಲೇಶಪುರ ತಾಲೂಕಿನ ಗೋಳಗೊಂಡ ಗ್ರಾಮದ ಸುಂದರ ಯುವತಿ ಸೌಂದರ್ಯ(21) ಗೆ ಒಂದು ಮಿಸ್ಸ್’ಡ್ ಕಾಲ್ ಮೂಲಕ ಕಾಡಿಗ್ಗೇರಿಯ ಯುವಕ ಉಮೇಶ್ ಎಂಬಾತನ ಪರಿಚಯವಾಗಿದೆ. ನಂತರ ಫೇಸ್ಬುಕ್’ನಲ್ಲಿ ಸ್ನೇಹಿತರಾಗಿದ್ದಾರೆ. ದಿನಕಳೆದಂತೆ ವಾಟ್ಸಾಪ್’ಲ್ಲಿ ಇಬ್ಬರ ನಡುವೆ ಪ್ರೀತಿ ಚಿಗುರೊಡೆದು ಬೆಳೆದಿದೆ. ಯುವತಿ ಮನೆಯವರ ವಿರೋಧದ ನಡುವೆಯೂ ಕಳೆದ ಏಳು ತಿಂಗಳ

ತಪ್ಪಿದ ಕರೆಯಿಂದ ಹುಟ್ಟಿದ ಪ್ರೀತಿ ಬದುಕಿನ ಹಳಿ ತಪ್ಪಿಸಿತು | ಮದುವೆಯಾದ ಕೆಲವೇ ತಿಂಗಳಲ್ಲಿ ಯುವತಿ ನಿಗೂಢ ಸಾವು | ಇದು ಕೊಲೆಯೋ…? ಆತ್ಮಹತ್ಯೆಯೋ….? Read More »

ಸುಳ್ಳು ತಂದ ಯಡವಟ್ಟು, ಅಪ್ರಾಪ್ತನನ್ನು ಮದ್ವೆಯಾದ 20ರ ಯುವತಿ!

ಚಿಕ್ಕಮಗಳೂರು: ಅಪ್ರಾಪ್ತ ಯುವಕನನ್ನು ಯುವತಿಯೊಬ್ಬಳು ಮದುವೆಯಾದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಬಿಸಿಲೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ 20 ವರ್ಷದ ಯುವತಿ ಮಡಿಕೇರಿಯ ವಿರಾಜಪೇಟೆಯಲ್ಲಿ ನರ್ಸಿಂಗ್ ಮಾಡುತ್ತಿದ್ದ ವೇಳೆ ಕಡೂರು ತಾಲೂಕಿನ ಬ್ರಹ್ಮಸಮುದ್ರ ಗ್ರಾಮದ 17 ವರ್ಷದ ಹುಡುಗನೊಂದಿಗೆ ಸಾಮಾಜಿಕ ಜಾಲತಾಣದ ಮೂಲಕ ಸ್ನೇಹವಾಗಿತ್ತು. ಇಬ್ಬರ ಸ್ನೇಹ ಪ್ರೀತಿಗೆ ತಿರುಗಿತ್ತು. ಹುಡುಗ ಕೂಡ ನನಗೆ 21 ವರ್ಷ ಎಂದು ಹೇಳಿಕೊಂಡಿದ್ದ. ಇಬ್ಬರೂ ವಿವಾಹವಾಗಲು ನಿರ್ಧರಿಸಿದ್ದರು. ಹುಡುಗಿ ಮನೆಯವರಿಗೆ ವಿಷಯ ತಿಳಿಸಿದಾಗ ಆಕೆಯ ಪೋಷಕರು

ಸುಳ್ಳು ತಂದ ಯಡವಟ್ಟು, ಅಪ್ರಾಪ್ತನನ್ನು ಮದ್ವೆಯಾದ 20ರ ಯುವತಿ! Read More »

ಟಿಪ್ಪರ್ ಚಾಲಕನ ನಿರ್ಲಕ್ಷ್ಯ: ಚಕ್ರಕ್ಕೆ ಸಿಲುಕಿ ಯುವಕ ದಾರುಣ ಸಾವು!

ವಿಜಯಪುರ: ಟಿಪ್ಪರ್ ಚಾಲಕನೊಬ್ಬನ ನಿರ್ಲಕ್ಷ್ಯದಿಂದಾಗಿ ಯುವಕನೊಬ್ಬ ಪ್ರಾಣ ಕಳೆದುಕೊಂಡ ಘಟನೆ ವಿಜಯಪುರ ಜಿಲ್ಲೆ ಇಂಡಿ ರಸ್ತೆಯ ಹೊರವಲಯದಲ್ಲಿ ನಡೆದಿದೆ. ನಗರದ ನಿವಾಸಿ ರೆಹಮಾನ್ ಮೃತಪಟ್ಟ ವ್ಯಕ್ತಿ. ಟಿಪ್ಪರ್ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದಿದ್ದರಿಂದಾಗಿ ಯುವಕ ರೆಹಮಾನ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮುಂದಿನ ಚಕ್ರದಡಿ ಆತನ ದೇಹ ಸಿಲುಕಿಕೊಂಡಿದ್ದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತವಾದ ಸ್ಥಳಕ್ಕೆ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಕೊಂಡಿದ್ದಾರೆ.

ಟಿಪ್ಪರ್ ಚಾಲಕನ ನಿರ್ಲಕ್ಷ್ಯ: ಚಕ್ರಕ್ಕೆ ಸಿಲುಕಿ ಯುವಕ ದಾರುಣ ಸಾವು! Read More »

ಗಂಡ-ಹೆಂಡತಿ ಜಗಳವಾಡಿ ಸ್ವಂತ ಮಗುವನ್ನೇ ಕೊಂದರು…! ಹಾಸನದಲ್ಲಿ ನಡೆಯಿತು ಅಮಾನವೀಯ ಘಟನೆ

ಹಾಸನ: ಗಂಡ ಹೆಂಡತಿ ಜಗಳವಾಡಿ ಕೊನೆಗೆ ತಮ್ಮ ಸ್ವಂತ ಮಗುವನ್ನೇ ಹತ್ಯೆ ಮಾಡಿದ ಹೃದಯ ವಿದ್ರಾವಕ ಘಟನೆ ಹಾಸನದಲ್ಲಿ ನಡೆದಿದೆ. ಮಗುವನ್ನು ಕೊಂದ ತಂದೆ ತಾಯಿ ಬಳಿಕ ಶವವನ್ನು ಕಾಫಿ ತೋಟದಲ್ಲಿ ಹೂತು ಹಾಕಿದ್ದಾರೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕಾಡ್ಲೂರುಕೊಪ್ಪಲು ಗ್ರಾಮದಲ್ಲಿ ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಸ್ಸಾಂನಿಂದ ಕೆಲಸಕ್ಕೆಂದು ಹಾಸನಕ್ಕೆ ಬಂದಿದ್ದ ಕುಟುಂಬವೊಂದು ಇಲ್ಲೇ ಸಂಸಾರ ಸಮೇತವಾಗಿ ವಾಸವಾಗಿತ್ತು. ಅವರ ಒಂದೂವರೆ ವರ್ಷದ ಮಗು ಸಫೀಕ್ ಉಲ್ಲಾ ಇಸ್ಲಾಂನನ್ನು ಕೊಂದಿರುವ ಪೋಷಕರು

ಗಂಡ-ಹೆಂಡತಿ ಜಗಳವಾಡಿ ಸ್ವಂತ ಮಗುವನ್ನೇ ಕೊಂದರು…! ಹಾಸನದಲ್ಲಿ ನಡೆಯಿತು ಅಮಾನವೀಯ ಘಟನೆ Read More »

ಕೋಲಾರ ಬೀದರ್’ನಲ್ಲಿ ಎನ್ ಸಿಬಿ ದಾಳಿ | ನಗದು ಸಹಿತ ಬರೋಬ್ಬರಿ 98 ಕೆಜಿ ಡ್ರಗ್ಸ್ ಜಪ್ತಿ

ಬೆಂಗಳೂರು: ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ಘಟಕ (ಎನ್‌ಸಿಬಿ) ಅಧಿಕಾರಿಗಳು, ಕೋಲಾರ ಹಾಗೂ ಬೀದರ್‌ನಲ್ಲಿ ಪ್ರತ್ಯೇಕ ದಾಳಿ ನಡೆಸಿ ಬರೋಬ್ಬರಿ 91 ಕೆಜಿ ಮಾದಕ ದ್ರವ್ಯ ಮತ್ತು 62 ಲಕ್ಷ ರೂ ನಗದು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧಾರದಲ್ಲಿ ಎನ್ ಸಿ ಬಿ ಆಂಧ್ರ ಮೂಲದ ಎನ್ ವಿ ರೆಡ್ಡಿ ಎಂಬಾತನಿಗೆ ಸೇರಿದ ಕೋಲಾರ ಕೈಗಾರಿಕಾ ಪ್ರದೇಶದಲ್ಲಿದ್ದ ಅಕ್ರಮ ಕಾರ್ಖಾನೆ, ಬೀದರ್ನಲ್ಲಿದ್ದ ಕಾರ್ಖಾನೆ ಹಾಗೂ ಆತನ ಮನೆ ಮೇಲೆ ಎನ್‌ಸಿಬಿ ದಾಳಿ‌ ನಡೆಸಿದೆ. ಸ್ಥಳದಲ್ಲಿ ನಿಷೇದಿತ ಆಲ್ಪಾಜೋಲಮ್ ಪೌಡರ್

ಕೋಲಾರ ಬೀದರ್’ನಲ್ಲಿ ಎನ್ ಸಿಬಿ ದಾಳಿ | ನಗದು ಸಹಿತ ಬರೋಬ್ಬರಿ 98 ಕೆಜಿ ಡ್ರಗ್ಸ್ ಜಪ್ತಿ Read More »

ಮಾಸ್ಕ್ ಇಲ್ಲದೇ‌ ಬ್ಯಾಂಕ್ ಪ್ರವೇಶಿಸಿದ ಗ್ರಾಹಕ, ಸೆಕ್ಯೂರಿಟಿ ಗಾರ್ಡ್ ನಿಂದ ಫೈರಿಂಗ್

ಉತ್ತರ ಪ್ರದೇಶ: ಮಾಸ್ಕ್ ಧರಿಸಿದೆ ಬ್ಯಾಂಕ್ ಒಳಪ್ರವೇಶಿಸಲು ಯತ್ನಿಸಿದ ಗ್ರಾಹಕನ ಮೇಲೆ ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಗ್ರಾಹಕ ರಾಜೇಶ್ ಕುಮಾರ್ ಬರೇಲಿಯಲ್ಲಿರುವ ಬ್ಯಾಂಕ್ ಆಫ್ ಬರೋಡ ಶಾಖೆಗೆ ಆಗಮಿಸಿದ್ದಾನೆ. ಬ್ಯಾಂಕ್‌ನಲ್ಲಿನ ಕೆಲಸಕ್ಕೆ 11.30ಕ್ಕೆ ಆಗಮಿಸಿದ ರಾಜೇಶ್ ಕುಮಾರ್ ಮಾಸ್ಕ್ ಧರಿಸಿರಲಿಲ್ಲ. ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಮಾಸ್ಕ್ ಧರಿಸಿದೆ ಒಳ ಪ್ರವೇಶಿಸಲು ಸಾಧ್ಯವಿಲ್ಲ ಎಂದಿದ್ದಾನೆ.ಸೆಕ್ಯೂರಿಟಿ ಗಾರ್ಡ್ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ ಗ್ರಾಹಕ ನೇರವಾಗಿ ಬ್ಯಾಂಕ್ ಒಳ ಪ್ರವೇಶಿಸಲು

ಮಾಸ್ಕ್ ಇಲ್ಲದೇ‌ ಬ್ಯಾಂಕ್ ಪ್ರವೇಶಿಸಿದ ಗ್ರಾಹಕ, ಸೆಕ್ಯೂರಿಟಿ ಗಾರ್ಡ್ ನಿಂದ ಫೈರಿಂಗ್ Read More »

ರೇಖಾ ಕದಿರೇಶ್ ಹತ್ಯೆ ಆರೋಪಿಗಳ ಮೇಲೆ ಫೈರಿಂಗ್

ಬೆಂಗಳೂರು: ನಿನ್ನೆ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬೆಂಗಳೂರಿನ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರ ಕೊಲೆ ಪ್ರಕರಣದ ಆರೋಪಿಗಳನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಹತ್ಯೆಯ ಪ್ರಮುಖ ಆರೋಪಿಗಳಾದ ಪೀಟರ್ ಮತ್ತು ಸೂರ್ಯ ಎಂಬ ಇಬ್ಬರು ನಗರದ ಸುಮನಹಳ್ಳಿ ಎಂಬಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ತೆರಳಿದ್ದಾರೆ. ಆರೋಪಿಗಳನ್ನು ಕಂಡ ಕೂಡಲೇ ಪೊಲೀಸರು ಶರಣಾಗುವಂತೆ ತಿಳಿಸಿದ್ದಾರೆ. ಆದರೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿ ಸಿದ್ದಾರೆ. ಈ ವೇಳೆ ಪೊಲೀಸರು ಸ್ವರಕ್ಷಣೆಗಾಗಿ ಪೀಟರ್ ಮತ್ತು ಸೂರ್ಯ

ರೇಖಾ ಕದಿರೇಶ್ ಹತ್ಯೆ ಆರೋಪಿಗಳ ಮೇಲೆ ಫೈರಿಂಗ್ Read More »

ಪ್ರೀತಿಸಿ ಮದುವೆಯಾಗಿ ಎರಡು ಮಕ್ಕಳಾಗಿದೆ | ಇದೀಗ ಜಾತಿ ನೆಪ ಹೇಳಿ ಬೇರೆ ಮದುವೆಯಾದ ಪತಿ

ಕೋಲಾರ: ಪ್ರೀತಿಸಿ ಮದುವೆಯಾಗಿ ಎರಡು ಮಕ್ಕಳಾದ ಬಳಿಕ ಜಾತಿ ಹೆಸರಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬಿಟ್ಟು ಮತ್ತೊಂದು ಮದುವೆಯಾಗಿರುವ ಘಟನೆ ನಗರದಲ್ಲಿ ನಡೆದಿದೆ. 5 ವರ್ಷದ ಹಿಂದೆ ಬಂಗಾರಪೇಟೆ ತಾಲೂಕಿನ ದೊಡ್ಡ ಚಿನ್ನಹಳ್ಳಿಯ ಸುನಿಲ್, ಚಿಕ್ಕ ಅಂಕಂಡಹಳ್ಳಿಯ ಕಾವ್ಯಾ ಪ್ರೀತಿಸಿ ಮದುವೆಯಾಗಿದ್ದಾರೆ. ಇಬ್ಬರ ಪ್ರೀತಿಗೆ ಸಾಕ್ಷಿಯಾಗಿ 4 ವರ್ಷದ ಹಾಗೂ 9 ತಿಂಗಳ ಎರಡು ಗಂಡು ಮಕ್ಕಳಿವೆ. ಈ ಮಧ್ಯೆ ಪತಿ ತನ್ನ ತಾಯಿಯ ಮನೆಗೆ ಹೋಗಿ ಬರುತ್ತಿದ್ದು, ಮನೆಯವರ ಮಾತು ಕೇಳಿರುವ ಸುನಿಲ್, ಮತ್ತೊಂದು

ಪ್ರೀತಿಸಿ ಮದುವೆಯಾಗಿ ಎರಡು ಮಕ್ಕಳಾಗಿದೆ | ಇದೀಗ ಜಾತಿ ನೆಪ ಹೇಳಿ ಬೇರೆ ಮದುವೆಯಾದ ಪತಿ Read More »

ಮುಸ್ಲಿಂ ಯುವತಿ, ದಲಿತ ಯುವಕನ ಬರ್ಬರ ಹತ್ಯೆ ಪ್ರಕರಣ | ಕಲ್ಲು ಎತ್ತಿ ಹಾಕಿದ ಆರೋಪಿಗಳು ಅಂದರ್

ವಿಜಯಪುರ: ಮುಸ್ಲಿಂ ಯುವತಿ ಹಾಗೂ ದಲಿತ ಯುವಕನನ್ನು ಬರ್ಬರ ಹತ್ಯೆ ಮಾಡಿ, ಜಿಲ್ಲೆಯ ಸಲಾಡಹಳ್ಳಿ ಗುಡ್ಡಪ್ರದೇಶದಲ್ಲಿ ಇಬ್ಬರ ಶವನ್ನು ಎಸೆಯಲಾಗಿತ್ತು. ಇದೀಗ ಈ ಪ್ರಕರಣ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಲಕೇರಿ ಠಾಣಾ ವ್ಯಾಪ್ತಿಯಲ್ಲಿ ಮೊನ್ನೆ ಮಧ್ಯಾಹ್ನ ಬಸವರಾಜ್ (19), ದಾವಲಭಿ (18) ಎಂಬ ಪ್ರೇಮಿಗಳ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ ಮಾಡಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಯುವತಿ ತಂದೆ ಬಂದಗಿಸಾಬ್ ತಂಬದ್ (50), ಸಹೋದರ ದಾವಲ್ ಪಟೇಲ್ (29), ಅಳಿಯರಾದ

ಮುಸ್ಲಿಂ ಯುವತಿ, ದಲಿತ ಯುವಕನ ಬರ್ಬರ ಹತ್ಯೆ ಪ್ರಕರಣ | ಕಲ್ಲು ಎತ್ತಿ ಹಾಕಿದ ಆರೋಪಿಗಳು ಅಂದರ್ Read More »