ಕ್ರೈಂ

ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಹಾಗೂ ರಿಕ್ಷಾ ಡ್ರೈವರ್ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ ಪತ್ತೆ ಆಗಿರುವಂತಹ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಬಳಿ ನಡೆದಿದೆ. ಆಟೋ ಚಾಲಕ ಪ್ರದೀಪ್(42), 15 ವರ್ಷದ ವಿದ್ಯಾರ್ಥಿನಿ (ಗುರುತು ಪತ್ತೆಯಾಗಿಲ್ಲ) ಮೃತರು. ಪ್ರದೀಪ್ ಅಪ್ರಾಪ್ತೆಯ ಮನೆಗೆ ನಿತ್ಯ ಭೇಟಿ ನೀಡುತ್ತಿದ್ದು, ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.11ರಂದು ರಾತ್ರಿ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ನಿವಾಸಿಗಳಾದ ಪ್ರದೀಪ್ ಮತ್ತು ಅಪ್ರಾಪ್ತ ವಿದ್ಯಾರ್ಥಿನಿ […]

ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಹಾಗೂ ರಿಕ್ಷಾ ಡ್ರೈವರ್ ಶವವಾಗಿ ಪತ್ತೆ Read More »

ಎರಡು ಬೈಕ್ ಮುಖಾಮುಖಿ ಡಿಕ್ಕಿ.. ನಾಲ್ವರು ಯುವಕರು ದುರಂತ ಅಂತ್ಯ

ಸಮಗ್ರ ನ್ಯೂಸ್ : ಎರಡು ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಯುವಕರು ಸಾವನ್ನಪ್ಪಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ (ಟಿ) ಗ್ರಾಮದ ಬಳಿ ಸಂಭವಿಸಿದೆ. ಸಿದ್ದು, ಸರೇಶ್ ರೆಡ್ಡಿ, ಮಲ್ಲು ಪೂಜಾರಿ ಮತ್ತು ಪ್ರಕಾಶ್ ಪೂಜಾರಿ ಮೃತರು. ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್ಗೆ ಎದುರಿಗೆ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿವೆ. ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸೇಡಂ ಠಾಣೆಯ ಪೊಲೀಸರು ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಸಿಕೊಂಡಿದ್ದಾರೆ.

ಎರಡು ಬೈಕ್ ಮುಖಾಮುಖಿ ಡಿಕ್ಕಿ.. ನಾಲ್ವರು ಯುವಕರು ದುರಂತ ಅಂತ್ಯ Read More »

ನಾಪತ್ತೆಯಾಗಿ 10 ದಿನ ಕಳೆದರೂ ಪತ್ತೆಯಾಗದ ದಿಗಂತ್| ಕುಟುಂಬಸ್ಥರಿಂದ ಹೈಕೋರ್ಟ್ ಗೆ ಹೆಬಿಯಸ್ ಕಾರ್ಪಸ್ ಅರ್ಜಿ| ಮಾ 12ರ ಒಳಗಾಗಿ‌ ವರದಿ ಸಲ್ಲಿಸಲು ಕೋರ್ಟ್ ಆದೇಶ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಫೆ. 25ರಿಂದ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ. ನಾಪತ್ತೆಯಾಗಿ 10 ದಿನವಾದರೂ ವಿದ್ಯಾರ್ಥಿಯ ಸುಳಿವು ಸಿಗದ ಕಾರಣ, ಪೋಷಕರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯವು ಪೊಲೀಸರಿಗೆ ತನಿಖೆ ನಡೆಸಿ ಮಾ.12ರೊಳಗೆ ವರದಿ ಸಲ್ಲಿಸುವಂತೆ ಆದೇಶಿಸಿದೆ. ವಿದ್ಯಾರ್ಥಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದರು. ಮಗನನ್ನು ಪತ್ತೆ ಮಾಡಿಕೊಡಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ದಿಗಂತ್ ತಂದೆ ಪದ್ಮನಾಭ್ ಹೇಬಿಯಸ್ ಕಾರ್ಪಸ್

ನಾಪತ್ತೆಯಾಗಿ 10 ದಿನ ಕಳೆದರೂ ಪತ್ತೆಯಾಗದ ದಿಗಂತ್| ಕುಟುಂಬಸ್ಥರಿಂದ ಹೈಕೋರ್ಟ್ ಗೆ ಹೆಬಿಯಸ್ ಕಾರ್ಪಸ್ ಅರ್ಜಿ| ಮಾ 12ರ ಒಳಗಾಗಿ‌ ವರದಿ ಸಲ್ಲಿಸಲು ಕೋರ್ಟ್ ಆದೇಶ Read More »

ಯೂಟ್ಯೂಬರ್ ಸಮೀರ್ ವಿರುದ್ಧ ಎಫ್ಐಆರ್‌ಗೆ ಹೈಕೋರ್ಟ್ ತರಾಟೆ| ಪ್ರಕರಣ ವಜಾಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದ ಯೂಟ್ಯೂಬರ್ ಸಮೀರ್ ಎಂಡಿ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಸಮೀರ್ ವಿರುದ್ಧ ಬಳ್ಳಾರಿ ಜಿಲ್ಲೆಯ ಕೌಲ್‌ಬಝಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸ್ವಯಂ ಪ್ರೇರಿತ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ. ಸಮೀರ್ ಅವರ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಹೊರಿಸಲಾಗಿತ್ತು. “ಸಮೀರ್ ಅವರ ವೀಡಿಯೋದಿಂದ ಧರ್ಮಸ್ಥಳ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿಗಳ ಬಗ್ಗೆ ಧಾರ್ಮಿಕ

ಯೂಟ್ಯೂಬರ್ ಸಮೀರ್ ವಿರುದ್ಧ ಎಫ್ಐಆರ್‌ಗೆ ಹೈಕೋರ್ಟ್ ತರಾಟೆ| ಪ್ರಕರಣ ವಜಾಗೊಳಿಸಿದ ಹೈಕೋರ್ಟ್ Read More »

ಬೆಳಗಾವಿ: ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಬೆಳಗಾವಿಯ ರಾಯಬಾಗದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಬಳಿ ನಡೆದಿದೆ. ತಾಯಿ ಶಾರದಾ (32), ಮಕ್ಕಳಾದ ಅಮೃತಾ, ಆದರ್ಶ ಹಾಗೂ ಅನುಷ್ಕಾ ಮೃತ ದುರ್ದೈವಿಗಳು. ತಾಯಿ, ಮಕ್ಕಳು ನದಿಗೆ ಹಾರಿದ್ದನ್ನು ನೋಡಿದ ಸ್ಥಳೀಯರು ನೀರಿನಲ್ಲಿ ಮುಳುಗುತ್ತಿದ್ದ ಅನುಕ್ಷಾಳನ್ನು ರಕ್ಷಣೆ ಮಾಡಿದ್ದರು. ನಂತರ ಆಕೆಯನ್ನು ರಾಯಬಾಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೂ ಚಿಕಿತ್ಸೆಗೆ ಸ್ಪಂದಿಸದೆ ಆಕೆಯೂ

ಬೆಳಗಾವಿ: ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ Read More »

ಸೌಜನ್ಯ ಕೇಸ್ ನಲ್ಲಿ ಧ್ವನಿ‌ ಎತ್ತಿದ ಕನ್ನಡದ ಯೂಟ್ಯೂಬರ್ ಸಮೀರ್ ಗೆ ಜೀವ ಬೆದರಿಕೆ| ಯಾವಾಗ ಏನು ಬೇಕಾದರೂ ಆಗಬಹುದು ಎಂದು ಪೋಸ್ಟ್ ಹಾಕಿದ ‘ಧೂತ’

ಸಮಗ್ರ ನ್ಯೂಸ್: ಕನ್ನಡದ ಯುಟ್ಯೂಬರ್ ಸಮೀರ್ ಎಂಬಾತ ತನ್ನ ವಿಭಿನ್ನ ವಿಡಿಯೊಗಳಿಂದ ಯುವ ವೀಕ್ಷಕ ವರ್ಗವನ್ನು ತನ್ನತ್ತ ಸೆಳೆದವರು. ಮಾಟ, ದೆವ್ವ ಹಾಗೂ ವಿಸ್ಮಯಗಳಂತಹ ವಿಭಿನ್ನ ವಿಡಿಯೊಗಳನ್ನು ಮಾಡುತ್ತಾ ಬರುತ್ತಿದ್ದ ಸಮೀರ್ ಆಗಾಗ ಕೆಲ ಘಟನೆಗಳ ಕುರಿತು ಸಹ ವಿಡಿಯೊಗಳನ್ನು ಮಾಡುತ್ತಿದ್ದರು. ಹೀಗೆ ಒಳ್ಳೊಳ್ಳೆ ಅಂಶಗಳಿರುವ ವಿಡಿಯೊಗಳನ್ನು ಮಾಡುತ್ತಾ ಬಂದಿರುವ ಸಮೀರ್ ಸದ್ಯ ತನ್ನ ಯುಟ್ಯೂಬ್ ಚಾನೆಲ್‌ನಲ್ಲಿ ಹೊಸ ವಿಡಿಯೊವೊಂದನ್ನು ಹಂಚಿಕೊಂಡಿದ್ದು ಸದ್ಯ ಆ ವಿಡಿಯೊ ತೀವ್ರ ವಿರೋಧವನ್ನು ಹುಟ್ಟುಹಾಕಿದೆ. ದಶಕದ ಹಿಂದೆ ನಡೆದಿದ್ದ ಸೌಜನ್ಯಾ ರೇಪ್

ಸೌಜನ್ಯ ಕೇಸ್ ನಲ್ಲಿ ಧ್ವನಿ‌ ಎತ್ತಿದ ಕನ್ನಡದ ಯೂಟ್ಯೂಬರ್ ಸಮೀರ್ ಗೆ ಜೀವ ಬೆದರಿಕೆ| ಯಾವಾಗ ಏನು ಬೇಕಾದರೂ ಆಗಬಹುದು ಎಂದು ಪೋಸ್ಟ್ ಹಾಕಿದ ‘ಧೂತ’ Read More »

ಕಾಸರಗೋಡು: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು| ಒಂದೇ ಕುಟುಂಬದ ಮೂವರು ದುರ್ಮರಣ

ಸಮಗ್ರ ನ್ಯೂಸ್: ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ವಾಮಂಜೂರು ಚೆಕ್​ಪೋಸ್ಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್​ಗೆ ಡಿಕ್ಕಿಯಾಗಿದೆ. ಸೋಮವಾರ ತಡರಾತ್ರಿ ಘಟನೆ ನಡೆದಿದೆ. ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜನಾರ್ದನ, ಪುತ್ರ ವರುಣ್ ಹಾಗೂ ಕಿಶನ್ ಮೃತ ದುರ್ದೈವಿಗಳು. ರತ್ನಾ ಎಂಬುವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಉಪ್ಪಳದ ಪೈವಳಿಕೆ ಬಾಯಿಕಟ್ಟೆ ನಿವಾಸಿಗಳು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಂಜೇಶ್ವರ ಪೊಲೀಸ್

ಕಾಸರಗೋಡು: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು| ಒಂದೇ ಕುಟುಂಬದ ಮೂವರು ದುರ್ಮರಣ Read More »

ಗಂಟಲಲ್ಲಿ ಮೀನು ಸಿಲುಕಿ ಯುವಕ ಸಾವು

ಸಮಗ್ರ ನ್ಯೂಸ್: ಯುವಕನ ಗಂಟಲಲ್ಲಿ ಮೀನು ಸಿಲುಕಿ ಸಾವನ್ನಪ್ಪಿದ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಕಾಯಕುಳಂನಲ್ಲಿ‌ ನಡೆದಿದೆ.. ಮೃತನನ್ನು ಪುತುಪ್ಪಳ್ಳಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಭಾನುವಾರ ಸಂಜೆ 4.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಆದರ್ಶ್ ತನ್ನ ಸ್ನೇಹಿತರೊಂದಿಗೆ ಭತ್ತದ ಗದ್ದೆಯನ್ನು ಬರಿದು ಮಾಡಿ ಮೀನುಗಾರಿಕೆ ನಡೆಸುತ್ತಿದ್ದನು. ಈ ವೇಳೆ ಆತ ತನ್ನ ಬಾಯಿಯಲ್ಲಿ ಹಿಡಿದಿದ್ದ ಮೀನು ಜಾರಿ ಗಂಟಲಲ್ಲಿ ಸಿಲುಕಿಕೊಂಡಿದೆ. ಕೂಡಲೇ ಯುವಕನನ್ನು ಓಚಿರಾ ಬಳಿಯ

ಗಂಟಲಲ್ಲಿ ಮೀನು ಸಿಲುಕಿ ಯುವಕ ಸಾವು Read More »

ಸೂಟ್‌ಕೇಸ್‌ನಲ್ಲಿ ‘ಕೈ’ ಕಾರ್ಯಕರ್ತೆ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಹರಿಯಾಣ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ. ಈ ಹಿಂದೆ ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ (22) ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಇನ್ನೂ ಈ ಸಾವಿನ ಬಗ್ಗೆ ಅನುಮಾನಗಳು ಭುಗಿಲೆದ್ದಿದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ನಾಯಕರು ಹಾಗೂ ಮುಖಂಡರು ಆಗ್ರಹಿಸಿದ್ದಾರೆ. ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್ ಅನ್ನು ಪತ್ತೆಹಚ್ಚಿದ್ದು, ಅನುಮಾನಗೊಂಡು ಪೊಲೀಸರಿಗೆ

ಸೂಟ್‌ಕೇಸ್‌ನಲ್ಲಿ ‘ಕೈ’ ಕಾರ್ಯಕರ್ತೆ ಮೃತದೇಹ ಪತ್ತೆ Read More »

ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ : ಇಬ್ಬರು ಯಾತ್ರಿಕರ ಸಾವು

ಸಮಗ್ರ ನ್ಯೂಸ್: ಪ್ರಯಾಗ್ ರಾಜ್ ನಲ್ಲಿ ಕುಂಭ ಮೇಳ ನಡೆಯುತ್ತಿದ್ದು, ಅಲ್ಲಿಗೆ ತೆರಳುತ್ತಿದ್ದ ರಾಜ್ಯದ ಇಬ್ಬರು ಯಾತ್ರಿಗಳು ಗುಜರಾತ್​​ನ ಪೋರ್ ​ಬಂದರ್​​ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ನಿವಾಸಿಗಳಾದ ವಿಶ್ವನಾಥ ಅವಜಿ (55), ಮಲ್ಲಿಕಾರ್ಜುನ ಸದ್ದಲಗಿ (40) ಮೃತ ದುರ್ದೈವಿಗಳು. ವಾಹನದಲ್ಲಿ ಒಟ್ಟು 17 ಜನ ಪ್ರಯಾಗ್​ರಾಜ್​ಗೆ ತೆರಳುತ್ತಿದ್ದರು. ಯಾತ್ರಾರ್ಥಿಗಳಿದ್ದ ವಾಹನ ಮಾರ್ಗ ಮಧ್ಯೆ ನಿಂತಿದ್ದ ಟಿಪ್ಪರ್​​ಗೆ ಡಿಕ್ಕಿಯಾಗಿದೆ. ವಾಹನದಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಪೋರಬಂದರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ

ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ : ಇಬ್ಬರು ಯಾತ್ರಿಕರ ಸಾವು Read More »