ಕ್ರೈಂ

ಕಾವೇರಿ ನದಿಯಲ್ಲಿ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಜಲಸಮಾಧಿ

ಸಮಗ್ರ ನ್ಯೂಸ್: ಕಾವೇರಿ ನದಿಯಲ್ಲಿ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಜಲಸಮಾಧಿ ಆಗಿರುವಂತಹ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಸಂಭವಿಸಿದೆ. ಚೌಡಯ್ಯ(70), ಭರತ್(13) ಮತ್ತು ಧನುಷ್(10) ಮೃತರು. ನದಿ ನೀರಿನಲ್ಲಿ ಮುಳುಗುತ್ತಿದ್ದ ಮೊಮ್ಮಕ್ಕಳ ರಕ್ಷಣೆಗೆ ತಾತ ಚೌಡಯ್ಯ ಇಳಿದಿದ್ದಾರೆ. ಇಬ್ಬರು ಮೊಮ್ಮಕ್ಕಳನ್ನು ರಕ್ಷಿಸಲಾಗದೆ ಚೌಡಯ್ಯ ಕೂಡ ನೀರುಪಾಲಾಗಿದ್ದಾರೆ. ಮೃತರನ್ನು ಟಿ. ನರಸೀಪುರ ಪಟ್ಟಣದ ತಿರುಮಕೂಡಲಿನ ನಿವಾಸಿಗಳು ಎಂದು ಗುರುತಿಸಲಾಗಿದೆ. ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದ್ದು, ಟಿ.ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ […]

ಕಾವೇರಿ ನದಿಯಲ್ಲಿ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಜಲಸಮಾಧಿ Read More »

ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ

ಸಮಗ್ರ ನ್ಯೂಸ್: ಬಹುಭಾಷಾ ಪಂಡಿತ, ಕನ್ನಡದ ಹಿರಿಯ ಸಾಹಿತಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಡಾ. ಪಂಚಾಕ್ಷರಿ ಹಿರೇಮಠ (92) ಅವರು ಶುಕ್ರವಾರ (ಮಾರ್ಚ್ 14 ರಂದು) ವಿಧಿವಶರಾದರು. ಧಾರವಾಡದ ಜಯನಗರ ನಿವಾಸಿ ಹಾಗೂ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕರಾಗಿದರು. ಪಂಚಾಕ್ಷರಿ ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಕನ್ನಡದ ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಅವರು 19 ಕಾವ್ಯ ಸಂಕಲನಗಳು, 11 ಕಥಾ ಸಂಕಲನಗಳು, ಉರ್ದು ಮತ್ತು ಹಿಂದಿಯಿಂದ ಕನ್ನಡಕ್ಕೆ ತಂದ

ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ Read More »

ಪೋಕ್ಸೊ ಪ್ರಕರಣ| ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಬಿ.ಎಸ್.ವೈ ಬಚಾವ್

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ವೈ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನೀಡಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ವಿಶೇಷ ನ್ಯಾಯಾಲಯದ ಸಮನ್ಸ್ ಹಾಗೂ ಕೋರ್ಟ್ ಕಾಗ್ನಿಜೆನ್ಸ್ ರದ್ದು ಮಾಡುವಂತೆ ಕೋರಿ ಬಿಎಸ್‍ವೈ ಮತ್ತು ಇತರ ಮೂವರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ ಸಮನ್ಸ್ ಆದೇಶಕ್ಕೆ ತಡೆ ನೀಡಿದೆ. ಮುಂದಿನ ವಿಚಾರಣೆಯವರೆಗೂ ಫಾಸ್ಟ್ ಟ್ರ್ಯಾಕ್ ಕೋರ್ಟ್‍ಗೆ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ. ಈ

ಪೋಕ್ಸೊ ಪ್ರಕರಣ| ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಬಿ.ಎಸ್.ವೈ ಬಚಾವ್ Read More »

ಮಂಗಳೂರು: ಕೊಲೆ ಉದ್ದೇಶದಿಂದ ಪಾದಾಚಾರಿ ಮಹಿಳೆ ಹಾಗೂ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಕಾರು| ಓರ್ವನ ವಿರುದ್ಧ ಎಫ್ಐಆರ್; ಚಾಲಕ ಅರೆಸ್ಟ್

ಸಮಗ್ರ ನ್ಯೂಸ್: ಕೊಲೆ ಉದ್ದೇಶದಿಂದ ಬೈಕ್‌ ಸವಾರನಿಗೆ ಹಾಗೂ ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಉರ್ವ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾರನ್ನು ಹಾಗೂ ಅದನ್ನು ಚಲಾಯಿಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಬಿಎಸ್‌ಎನ್‌ಎಲ್ ಸಂಸ್ಥೆಯ ನಿವೃತ್ತ ಉದ್ಯೋಗಿ ಸತೀಶ್ ಕುಮಾರ್.ಕೆ.ಎಂ ಕಾರು ಚಲಾಯಿಸಿದ್ದ ಆರೋಪಿ’ ಎಂದು ಪೊಲೀಸರು ತಿಳಿಸಿದ್ದಾರೆ. ‘ಗುರುವಾರ ಬೆಳಿಗ್ಗೆ ಬಿಜೈ ಕಾಪಿಕಾಡ್‌ನ 6ನೇ ಮುಖ್ಯ ರಸ್ತೆಯಲ್ಲಿ ನಾನು ಬೈಕ್‌ನಲ್ಲಿ ಸಾಗುತ್ತಿದ್ದೆ. ಆಗ ನಮ್ಮ ಎದುರು ಮನೆಯ ನಿವಾಸಿ

ಮಂಗಳೂರು: ಕೊಲೆ ಉದ್ದೇಶದಿಂದ ಪಾದಾಚಾರಿ ಮಹಿಳೆ ಹಾಗೂ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಕಾರು| ಓರ್ವನ ವಿರುದ್ಧ ಎಫ್ಐಆರ್; ಚಾಲಕ ಅರೆಸ್ಟ್ Read More »

ಮಂಗಳೂರು: ಪತ್ನಿಯ ಕೊಲೆ, ಪತಿಗೆ ಜೀವಾವಧಿ ಶಿಕ್ಷೆ

ಸಮಗ್ರ ನ್ಯೂಸ್:  ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಲೆಗೈದ ವ್ಯಕ್ತಿಗೆ ನ್ಯಾಯಾಧೀಶೆ ಸಂಧ್ಯಾ ಎಸ್ ಅಧ್ಯಕ್ಷತೆಯ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಆರೋಪಿಯನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ ಗ್ರಾಮದ ಕುಂಪಲ ಚೇತನ್ ನಗರದ ನಿವಾಸಿ ಜೋಸೆಫ್ ಫ್ರಾನ್ಸಿಸ್ ರೆನ್ಸನ್ ಅಲಿಯಾಸ್ ರೆನ್ಸನ್ (53) ಎಂದು ಗುರುತಿಸಲಾಗಿದೆ. ಅವರ ಪತ್ನಿ ಶೈಮಾ ಬಲಿಯಾದವರು. ಜೋಸೆಫ್ ಫ್ರಾನ್ಸಿಸ್ ರೆನ್ಸನ್ ಮದ್ಯಪಾನ, ಜೂಜಾಟ ಮತ್ತು ಇತರ ದುಶ್ಚಟಗಳಿಗೆ ವ್ಯಸನಿಯಾಗಿದ್ದಳರು ಎಂದು ವರದಿಯಾಗಿದೆ.

ಮಂಗಳೂರು: ಪತ್ನಿಯ ಕೊಲೆ, ಪತಿಗೆ ಜೀವಾವಧಿ ಶಿಕ್ಷೆ Read More »

16 ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್  ತಾಯಿ ಮಡಿಲಿಗೆ

ಸಮಗ್ರ ನ್ಯೂಸ್:  ರಾಜ್ಯಾದ್ಯಂತ ಗಮನ ಸೆಳೆದಿದ್ದ ದಿಗಂತ್ ಯೆಂಬ ಯುವಕನ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ಫರಂಗಿಪೇಟೆ ಬಳಿಯ ಕಿಡೆಬೆಟ್ಟುವಿನ ಪದ್ಮನಾಭ ಅವರ ಮಗ ದಿಗಂತ್ ಫೆ. 25 ರ ರಾತ್ರಿ ಫರಂಗಿಪೇಟೆ ರೈಲ್ವೆ ಹಳಿಗಳಿಂದ ನಾಪತ್ತೆಯಾಗಿದ್ದ. ತನ್ನ ಕಾಲೇಜಿನಿಂದ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪಡೆದ ನಂತರ, ಸಂಜೆ ದೇವಸ್ಥಾನಕ್ಕೆ ಹೋಗಿ ಅಲ್ಲಿಂದ ನಾಪತ್ತೆಯಾಗಿದ್ದ ಎಂದು ವರದಿಯಾಗಿತ್ತು. ಈ ನಿಗೂಢ ಕಣ್ಮರೆ ಹಲವು ಗೊಂದಲಕ್ಕೆ ಕಾರಣವಾಗಿದಲ್ಲದೆ ವಿವಿಧ ವದಂತಿಗಳಿಗೆ ಕಾರಣವಾಗಿತ್ತು. I ನಡುವೆ ಆತನನ್ನು ಸುರಕ್ಷಿತವಾಗಿ

16 ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್  ತಾಯಿ ಮಡಿಲಿಗೆ Read More »

ಮಾನವಕುಲವೇ ತಲೆತಗ್ಗಿಸುವ ಘಟನೆ: ಮಗಳನ್ನೇ ಗರ್ಭಿಣಿ ಮಾಡಿದ್ದ ಕಾಮುಕ ತಂದೆ

ಸಮಗ್ರ ನ್ಯೂಸ್: ಈ ಸಮಾಜದಲ್ಲಿ ಒಂದೊಂದು ಘಟನೆಗಳು ವಿಚಿತ್ರವಾಗಿ ಇರುತ್ತದೆ. ಹೌದು ಹೆಣ್ಣು ಮಕ್ಕಳು ಅಮ್ಮನಿಗಿಂತ ಅಪ್ಪನ ಮೇಲೆ ಹೆಚ್ಚು ಪ್ರೀತಿ ಹೊಂದಿರುತ್ತಾರೆ. ಆದರೆ ಇಲ್ಲೊಬ್ಬ ತಂದೆ ಈ ಮಾತಿಗೆ ಕಪ್ಪು ಚುಕ್ಕೆ ತಂದಿದ್ದಾನೆ. ತನ್ನ ಮಗಳು ಎನ್ನುವುದನ್ನು ನೋಡದೇ ಈ ತಂದೆಯೇ ಆಕೆ ಮೇಲೆ ತನ್ನ ವಿಕೃತ ಕಾಮದ ತೀಟೆ ತೀರಿಸಿಕೊಂಡಿದ್ದಾನೆ. ಇದರ ಪರಿಣಾಮ ಇದೀಗ ಮಗಳು ಗರ್ಭಿಣಿಯಾಗಿದ್ದಾಳೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಈ ಪೈಶಾಚಿಕ ಕೃತ್ಯ ನಡೆದಿದೆ. ಅಪ್ಪಯ್ಯಪ್ಪ ಎನ್ನುವ ವ್ಯಕ್ತಿ ತನ್ನ

ಮಾನವಕುಲವೇ ತಲೆತಗ್ಗಿಸುವ ಘಟನೆ: ಮಗಳನ್ನೇ ಗರ್ಭಿಣಿ ಮಾಡಿದ್ದ ಕಾಮುಕ ತಂದೆ Read More »

ಕೊಟ್ಟಿಗೆಹಾರ: ಅಬಕಾರಿ ಅಧಿಕಾರಿಗಳಿಂದ ಮೂಡಿಗೆರೆಯಲ್ಲಿ ದಾಳಿ – ಕಳ್ಳಭಟ್ಟಿ ವಶ

ಸಮಗ್ರ ನ್ಯೂಸ್: ಅಬಕಾರಿ ಇಲಾಖೆ ಅಧಿಕಾರಿಗಳು ಮೂಡಿಗೆರೆ ತಾಲ್ಲೂಕಿನಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಕಳ್ಳಭಟ್ಟಿಯನ್ನ ವಶಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಅಬಕಾರಿ ಉಪ ಆಯುಕ್ತರು ರೂಪ ಎಂ, ಹಾಗೂ ಅಬಕಾರಿ ಅಧೀಕ್ಷಕರು ಸಂತೋಷ್ ಕುಮಾರ್ ಕೆ.ಜಿ.ಇವರ ನಿರ್ದೇಶನದಲ್ಲಿ , ಮೂಡಿಗೆರೆ ಉಪ ಅಧೀಕ್ಷಕರು ಎಂ.ಆರ್. ಶೇಖರ್ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆಯಿತು. ತಾಲೂಕಿನ ಕಣಚೂರು ಗ್ರಾಮದ ನಾಗೇಶ ಶೆಟ್ಟಿ ಬಿನ್ ಈರಶೆಟ್ಟಿ ಎಂಬಾತನ ಮನೆಯಲ್ಲಿ ನಡೆಸಿದ ದಾಳಿಯಲ್ಲಿ 30 ಲೀಟರ್ ಕಳ್ಳಭಟ್ಟಿ ತಯಾರಿಸುವ ಬೆಲ್ಲದ ಕೊಳೆ ವಶಪಡಿಸಿಕೊಳ್ಳಲಾಗಿದೆ.

ಕೊಟ್ಟಿಗೆಹಾರ: ಅಬಕಾರಿ ಅಧಿಕಾರಿಗಳಿಂದ ಮೂಡಿಗೆರೆಯಲ್ಲಿ ದಾಳಿ – ಕಳ್ಳಭಟ್ಟಿ ವಶ Read More »

ಮಗನಿಗೆ ಹೆಚ್‌ಐವಿ ಸೋಂಕುತಾಯಿ-ಮಗ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮೃತ ಭರತ್ ಹೆಚ್‌ಐವಿ ಸೋಂಕಿತನಾಗಿದ್ದ ಎಂಬ ಸತ್ಯವನ್ನು ಆತನ ಪತ್ನಿ ಕುಟುಂಬದವರು ಇದೀಗ ಬಹಿರಂಗಪಡಿಸಿದ್ದಾರೆ. ಪತ್ನಿ ಕುಟುಂಬಸ್ಥರು ಭರತ್‌ಗೆ 8 ತಿಂಗಳ ಹಿಂದೆ ನಾಲ್ಕು ಲಕ್ಷ ಹಣ, 100 ಗ್ರಾಂ ಚಿನ್ನ ನೀಡಿ ಮಗಳನ್ನು ಮದುವೆ ಮಾಡಿಕೊಟ್ಟಿದ್ದರು. ಆದರೆ ಭರತ್ ಮೂರು ವರ್ಷಗಳ ಹಿಂದಿನಿಂದಲೇ ಹೆಚ್‌ಐವಿ ಸೋಂಕಿತನಾಗಿದ್ದ. ಮಾರಣಾಂತಿಕ ಕಾಯಿಲೆ ಸೋಂಕು ತಗುಲಿರುವುದನ್ನು ಮುಚ್ಚಿಟ್ಟು

ಮಗನಿಗೆ ಹೆಚ್‌ಐವಿ ಸೋಂಕುತಾಯಿ-ಮಗ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ Read More »

ದೇವಾಲಯಕ್ಕೆನೇ ವಾಮಾಚಾರನ..?

ಸಮಗ್ರ ನ್ಯೂಸ್: ದೇವಾಲಯದ ಎದುರು ವಾಮಾಚಾರ ಮಾಡಿದ ಘಟನೆ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನಲ್ಲಿ ಕಂಡುಬಂದಿದೆ. ವಾಮಾಚಾರ ಮಾಡಿ ಶಕ್ತಿ ದೇವತೆ ಕೆಂಪಮ್ಮ ದೇವಿ ದೇವಾಲಯದ ಬಾಗಿಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನಲ್ಲಿ ನಡೆದಿದೆ. ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಇರುವ ಕೆಂಪಮ್ಮ ದೇವಿ ದೇವಾಲಯಕ್ಕೆ ಮಂಗಳವಾರ ಸಂಜೆ ಯಾರೂ ಇಲ್ಲದ ವೇಳೆ ಪಶ್ಚಿಮದ ಬಾಗಿಲಿಗೆ ವಾಮಾಚಾರ ಮಾಡಿ, ನಂತರ ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಈ

ದೇವಾಲಯಕ್ಕೆನೇ ವಾಮಾಚಾರನ..? Read More »