ಕ್ರೈಂ

ವಿರಾಜಪೇಟೆ: 14 ದಿನದ ಬಾಣಂತಿ ನೇಣಿಗೆ ಶರಣು

ಸಮಗ್ರ ನ್ಯೂಸ್: 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಬಾಣಂತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತಹ ಆಘಾತಕಾರಿ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಟ್ಟೋಳಿಯಲ್ಲಿ ನಡೆದಿದೆ. ವಿರಾಜಪೇಟೆ ತಾಲೂಕಿನ ಕರಡ ನಿವಾಸಿ ದಿವಂಗತ ಕಟ್ಟಿ ಬಿದ್ದಪ್ಪ-ಶೀಲಾ ದಂಪತಿ ಪುತ್ರಿ ಕೊಟ್ಟೋಳಿ ಗ್ರಾಮದ ನಿವಾಸಿ, ಎಂಎಂ ದಿನೇಶ್ ಎಂಬುವವರ ಪತ್ನಿ ಕಾವೇರಮ್ಮ (24) ನೇಣಿಗೆ ಶರಣಾದ ಬಾಣಂತಿ. ಕಾವೇರಮ್ಮ ಹಾಗೂ ದಿನೇಶ್ ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದರು. 14 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದಳು. […]

ವಿರಾಜಪೇಟೆ: 14 ದಿನದ ಬಾಣಂತಿ ನೇಣಿಗೆ ಶರಣು Read More »

ಬೆಳ್ತಂಗಡಿ: ಊರಿಗೆ ಮರಳಲು ತಯಾರಾಗಿದ್ದ ವ್ಯಕ್ತಿ ವಿದೇಶದಲ್ಲಿ ಸಾವು

ಸಮಗ್ರ ನ್ಯೂಸ್: ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಊರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತನ್ನ ಕಾರನ್ನು ತರಲು ಹೇಳಿ ಜಿದ್ದಾದಿಂದ ರಾತ್ರಿ 10:30 ರ ವಿಮಾನದಲ್ಲಿ ಹೊರಟು ಬೆಳಗಿನ ಜಾವ ಮಂಗಳೂರು ತಲುಪುವವರಿದ್ದರು. ಜಿದ್ದಾ ವಿಮಾನ ನಿಲ್ದಾಣಕ್ಕೆ ಕಾರಲ್ಲಿ ಬಂದು ತಲುಪಿದ್ದಂತೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ತಕ್ಷಣ ಅವರನ್ನು

ಬೆಳ್ತಂಗಡಿ: ಊರಿಗೆ ಮರಳಲು ತಯಾರಾಗಿದ್ದ ವ್ಯಕ್ತಿ ವಿದೇಶದಲ್ಲಿ ಸಾವು Read More »

ಪದ್ಮಶ್ರೀ ಪುರಸ್ಕೃತೆ, ಜಾನಪದ ಗಾನಕೋಗಿಲೆ ಸುಕ್ರಿ‌ ಬೊಮ್ಮಗೌಡ ವಿಧಿವಶ

ಸಮಗ್ರ ನ್ಯೂಸ್: ಪದ್ಮಶ್ರೀ ಮತ್ತು ನಾಡೋಜಾ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಜನಪದ ಕೋಗಿಲೆ ಎಂದೇ ಹೆಸರು ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನ ಬಡಿಗೇರಿಯ ಸುಕ್ರಿ ಬೊಮ್ಮಗೌಡ ವಯೋಸಹಜ ಕಾಯಿಲೆಗಳಿಂದಾಗಿ ವಿಧಿವಶರಾಗಿದ್ದಾರೆ. ಹಾಲಕ್ಕಿ ಬುಡಕಟ್ಟು ಜನಾಂಗದಲ್ಲಿ ಹುಟ್ಟಿದ ಇವರು ವಿದ್ಯಾಭ್ಯಾಸ ಮಾಡದಿದ್ದರೂ ಹಾಲಕ್ಕಿ ಜನಾಂಗದ ಜನಪದ ಹಾಡುಗಳನ್ನು ಹಾಡುವ ಮೂಲಕ ಹಳ್ಳಿ ಸೊಗಡನ್ನು ದಿಲ್ಲಿಗೆ ಕೊಂಡೊಯ್ದಿದ್ದರು. ಇದಲ್ಲದೇ ಮದ್ಯ ಮುಕ್ತ ಗ್ರಾಮ ಮಾಡುವ ಹೋರಾಟದಲ್ಲಿ

ಪದ್ಮಶ್ರೀ ಪುರಸ್ಕೃತೆ, ಜಾನಪದ ಗಾನಕೋಗಿಲೆ ಸುಕ್ರಿ‌ ಬೊಮ್ಮಗೌಡ ವಿಧಿವಶ Read More »

ಮೂಡಿಗೆರೆ: ಕಾರು ಅಡ್ಡಗಟ್ಟಿ ಗುಂಡು ಹಾರಿಸಿ ಹುಚ್ಚಾಟ; ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ಕಾರು ಅಡ್ಡಗಟ್ಟಿ ಗುಂಡು ಹಾರಿಸಿ ಹುಚ್ಚಾಟ ಮೆರೆದ ಘಟನೆ ಬೇಲೂರು ಮೂಡಿಗೆರೆ ನಡುವಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗುಂಡು ಹಾರಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೂಡಿಗೆರೆ ತಾಲೂಕಿನ ಕಸ್ಕೆಬೈಲು ಗ್ರಾಮದ ರೋಷನ್ ಎಂದು ಗುರುತಿಸಲಾಗಿದೆ. ಸ್ನೇಹಿತರಾದ ಉಮೇಶ್, ಯೋಗೇಶ್, ಪ್ರಭಾಕರ್, ಶರತ್ ಮತ್ತು ಕುಮಾರ್ ಕಾರಿನಲ್ಲಿ ಗೋಣಿಬೀಡು ಗ್ರಾಮದ ಕಾರ್ತಿಕ್ ಎಂಬವರ ಮನೆಯಲ್ಲಿ ಊಟ ಮುಗಿಸಿ ರಾತ್ರಿ ವಾಪಸ್ ಆಗುತ್ತಿದ್ದರು. ಈ ವೇಳೆ ರೋಷನ್ ಹಾಗೂ ಸ್ನೇಹಿತರು ಕಸ್ಕೆಬೈಲಿನ ಚರ್ಚ್

ಮೂಡಿಗೆರೆ: ಕಾರು ಅಡ್ಡಗಟ್ಟಿ ಗುಂಡು ಹಾರಿಸಿ ಹುಚ್ಚಾಟ; ಆರೋಪಿ ಅರೆಸ್ಟ್ Read More »

ಎನ್‌ಆರ್ ಪುರ: ಕಾಡಾನೆ ದಾಳಿಗೆ ಮಹಿಳೆ ಬಲಿ

ಸಮಗ್ರ ನ್ಯೂಸ್: ಕಾಫಿನಾಡಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು, ಇದೀಗ ಮತ್ತೊಬ್ಬ ಕಾರ್ಮಿಕ ಮಹಿಳೆ ಕಾಡಾನೆ ದಾಳಿಯಿಂದ ದಾರುಣವಾಗಿ ಸಾವನ್ನಪ್ಪಿದ್ದಾರೆ. ಎನ್.ಆರ್.ಪುರ ತಾಲೂಕಿನ ಕತ್ತಲೇಖಾನ್ ಎಸ್ಟೇಟ್ ನಲ್ಲಿ ಈ ಘಟನೆ ನಡೆದಿದೆ. ವಿನೋದಾ (39) ಮೃತ ಕಾರ್ಮಿಕ ಮಹಿಳೆಯಾಗಿದ್ದಾರೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ಮೂಲದ ವಿನೋದಾ ಬಾಯಿ, ಕೂಲಿಗಾಗಿ ವಿಜಯನಗರ ಜಿಲ್ಲೆಯಿಂದ ತಮ್ಮ ಕುಟುಂಬದೊಂದಿಗೆ ವಲಸೆ ಬಂದಿದ್ದರು. ಇಂದು ಬೆಳಗ್ಗೆ ಕಾಫಿ ಹಣ್ಣು ಕೊಯ್ಯುವಾಗ ತೋಟದಲ್ಲಿದ್ದ ಕಾಡಾನೆ ಏಕಾಏಕಿ ದಾಳಿ ಮಾಡಿದ್ದು, ಪರಿಣಾಮವಾಗಿ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ

ಎನ್‌ಆರ್ ಪುರ: ಕಾಡಾನೆ ದಾಳಿಗೆ ಮಹಿಳೆ ಬಲಿ Read More »

ಮಂಜೇಶ್ವರ: ಬಸ್ ನಲ್ಲಿ ಕಳ್ಳತನ ಮಾಡಿದ ಮೂವರು ಮಹಿಳೆಯರ ಬಂಧನ

ಸಮಗ್ರ ನ್ಯೂಸ್: ಬಸ್ಸಿನಲ್ಲಿ ಪ್ರಯಾಣಿಕರ ಹಣ ಹಾಗೂ ಮೊಬೈಲ್ ಫೋನ್ ಕಳವುಗೈದ ಆರೋಪದಲ್ಲಿ ಮೂವರು ಮಹಿಳೆಯರನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳವಾರ ಮಧ್ಯಾಹ್ನ ಕರ್ನಾಟಕ ಸಾರಿಗೆ ನಿಗಮದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕುಂಜತ್ತೂರಿನ ತಾರಾಮಣಿ ಎಂಬವರ ಮೊಬೈಲ್ ಫೋನ್, ಎಂಟು ಸಾವಿರ ರೂ.ನಗದು ಒಳಗೊಂಡ ಬ್ಯಾಗನ್ನು ಕಳವಾಗಿತ್ತು. ಈ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ವಿವಿಧ ಸ್ಥಳ ಗಳಲ್ಲಿನ ಸಿಸಿಟಿವಿ ಕ್ಯಾಮರಾಗಳನ್ನು ಕೇಂದ್ರೀಕರಿಸಿ ನಡೆಸಿದ ತನಿಖೆಯಂತೆ ಪೊಲೀಸರು ಶಂಕಿತ

ಮಂಜೇಶ್ವರ: ಬಸ್ ನಲ್ಲಿ ಕಳ್ಳತನ ಮಾಡಿದ ಮೂವರು ಮಹಿಳೆಯರ ಬಂಧನ Read More »

ಪುತ್ತೂರು: ಭೀಕರ ರಸ್ತೆ ಅಪಘಾತ| ಖಾಸಗಿ ವಾಹಿನಿಯ ಛಾಯಾಗ್ರಾಹಕ ದುರ್ಮರಣ

ಸಮಗ್ರ ನ್ಯೂಸ್: ಪುತ್ತೂರಿನ ಹೊರವಲಯ ಮುರ ಎಂಬಲ್ಲಿ ನಿನ್ನೆ (ಫೆ 4) ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಚೇತನ್‌ ಕೆಮ್ಮಿಂಜೆ ಮೃತಪಟ್ಟವರು ಎಂದು ವರದಿಯಾಗಿದೆ. ಇವರು ಖಾಸಗಿ ವಾಹಿನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಎಂಬಲ್ಲಿ ಬೈಕ್‌ ಹಾಗೂ ಆಟೋ ರಿಕ್ಷಾ ಮಧ್ಯೆ ಈ ಅಪಘಾತ ಸಂಭವಿಸಿದೆ. ಬೈಕ್‌ ನಲ್ಲಿ ಚೇತನ್‌ ಜತೆಗೆ ಇನ್ನೋರ್ವ ಬಾಲಕ ಕೂಡ ಇದ್ದ ಎಂದು ತಿಳಿದು ಬಂದಿದೆ. ಚೇತನ್‌

ಪುತ್ತೂರು: ಭೀಕರ ರಸ್ತೆ ಅಪಘಾತ| ಖಾಸಗಿ ವಾಹಿನಿಯ ಛಾಯಾಗ್ರಾಹಕ ದುರ್ಮರಣ Read More »

ಕಡಬ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಹಾಲುಮಡ್ಡಿ ಮರ; ಸವಾರ ಗಂಭೀರ

ಸಮಗ್ರ ನ್ಯೂಸ್. ಚಲಿಸುತ್ತಿದ್ದ ಬೈಕ್ ಮೇಲೆ ಹಾಲು ಮಡ್ಡಿ (ಧೂಪ) ಮರ ಬಿದ್ದು ಬೈಕ್‌ ಸವಾರ ಗಾಯಗೊಂಡ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಸಮೀಪ ಮಂಗಳವಾರ(ಫೆ.4) ಸಂಜೆ ನಡೆದಿದೆ. ಕಳೆದ ಕೆಲವು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ದೂಪದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದರು. ಅದಾದ ಬಳಿಕ ಸಾರ್ವಜನಿಕರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಒತ್ತಾಯಿಸಿದ್ದರು. ಇದೀಗ ಮತ್ತೆ ಅಂತಹುದೇ ಘಟನೆ

ಕಡಬ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಹಾಲುಮಡ್ಡಿ ಮರ; ಸವಾರ ಗಂಭೀರ Read More »

‘ಟೈಮ್ಸ್ ಆಫ್ ಕುಡ್ಲ’ ಸಂಪಾದಕ ಶಶಿ ಆರ್. ಬಂಡಿಮಾರ್ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್. ಬಂಡಿಮಾರ್ (41) ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಗಾಲ್ಯಾಂಡ್ ನಲ್ಲಿ ತನ್ನ ಮರದ ಫ್ಯಾಕ್ಟರಿಗೆ ಹೋಗಿದ್ದಾಗ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ತುಳು ಸಂಸ್ಕೃತಿ ಆಚಾರ ವಿಚಾರದ ಉಳಿವಿಗಾಗಿ ಶ್ರಮಿಸಿ “ಟೈಮ್ಸ್ ಆಫ್ ಕುಡ್ಲ” ಎಂಬ ತುಳು ವಾರಪತ್ರಿಕೆಯನ್ನು 15 ವರ್ಷಗಳಿಂದ ನಡೆಸಿಕೊಂಡು ಬಂದಿದ್ದರು. ಸಣ್ಣ ಕೈಗಾರಿಕೆಯಲ್ಲೂ, ಆತಿಥ್ಯ ಕ್ಷೇತ್ರ ದಲ್ಲೂ ಸಕ್ರಿಯವಾಗಿದ್ದರು . ಶಶಿ ಬಂಡಿಮಾರ್ ಅವರಿಗೆ ಜೈ ತುಳುನಾಡ್

‘ಟೈಮ್ಸ್ ಆಫ್ ಕುಡ್ಲ’ ಸಂಪಾದಕ ಶಶಿ ಆರ್. ಬಂಡಿಮಾರ್ ಹೃದಯಾಘಾತದಿಂದ ಸಾವು Read More »

ಮಹಾಕುಂಭ ಕಾಲ್ತುಳಿತ ಪ್ರಕರಣ| ಬೆಳಗಾವಿಯ ತಾಯಿ-ಮಗಳು ಸಾವು

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮೃತರನ್ನು ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ (50), ಮೇಘಾ ಹತ್ತರವಾಠ ಎಂದು ಗುರುತಿಸಲಾಗಿದೆ. ಮೃತ ಜ್ಯೋತಿ ಸಹೋದರ ಗುರುರಾಜ್ ಹುದ್ದಾರ ಈ ಕುರಿತು ಮಾಹಿತಿ ನೀಡಿದ್ದಾರೆ. ಮಹಾಕುಂಭ ಮೇಳದಲ್ಲಿ ಕಾಲ್ತುಳಿತದಲ್ಲಿ ಗಾಯಗೊಂಡ ಬಳಿಕ ಅವರನ್ನು ಇಂದು‌‌(ಜ.29) ಬೆಳಗ್ಗೆ ಪ್ರಯಾಗ್​ರಾಜ್​ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ತಾಯಿ –

ಮಹಾಕುಂಭ ಕಾಲ್ತುಳಿತ ಪ್ರಕರಣ| ಬೆಳಗಾವಿಯ ತಾಯಿ-ಮಗಳು ಸಾವು Read More »