ಕ್ರೈಂ

ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಆರೋಪ| ಅಂಚೆವಿತರಕ ಸುರೇಶ್ ಬಂಧನ

ಸಮಗ್ರ ನ್ಯೂಸ್: ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿ ಪ್ರಸ್ತುತ ಅರಸಿಮಕ್ಕಿ ಗ್ರಾಮೀಣ ಅಂಚೆ ವಿತರಕ ಸುರೇಶ್ (35) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯನ್ನು 2023ರ ಡಿಸೆಂಬರ್ ನಲ್ಲಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.7 ರಂದು ದೂರು ನೀಡಿದ್ದರು. ಪ್ರಕರಣದ ಬಗ್ಗೆ […]

ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಆರೋಪ| ಅಂಚೆವಿತರಕ ಸುರೇಶ್ ಬಂಧನ Read More »

ಮಾಣಿ: ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು| ಚಾಲಕ ಸಾವು; ಮೂವರು ಗಂಭೀರ

ಸಮಗ್ರ ನ್ಯೂಸ್: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಬುಧವಾರ ಮಧ್ಯಾಹ್ನ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ (ಡಿವೈಡರ್) ಢಿಕ್ಕಿ ಹೊಡೆದು ಪಲ್ಟಿಯಾದ ಭೀಕರ ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಚಾಲಕ ಜಾಗದಲ್ಲೇ ಮೃತಪಟ್ಟಿದ್ದು, ಮೂವರು ಸಹಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಹಾಸನ ಮೂಲದ ಲಕ್ಷ್ಮೀಕಾಂತ್ ಮೃತಪಟ್ಟ ದುರ್ದೈವಿ ಚಾಲಕ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಸಹಪ್ರಯಾಣಿಕರಾದ ರಂಜಿತ್, ದರ್ಶನ್ ಮತ್ತು ಶೋಭಾ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ

ಮಾಣಿ: ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು| ಚಾಲಕ ಸಾವು; ಮೂವರು ಗಂಭೀರ Read More »

ಪುತ್ತೂರು: ಲವ್, ಸೆಕ್ಸ್ ಮತ್ತು ದೋಖಾ| ಆರೋಪಿ ಕೃಷ್ಣ ಜೆ.ರಾವ್ ಹಾಗೂ ಪೋಷಕರಿಗೆ ಹೈಕೋರ್ಟ್ ‌ತರಾಟೆ

ಸಮಗ್ರ ನ್ಯೂಸ್: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮಾಜಿ ನಾಯಕನ ಪುತ್ರ, ಆರೋಪಿ ಕೃಷ್ಣ ಜೆ. ರಾವ್ ಹಾಗೂ ಆತನ ಪೋಷಕರನ್ನು ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸಂತ್ರಸ್ತೆ ಹಾಗೂ ಆಕೆಯ 10 ತಿಂಗಳ ಮಗುವಿನ ಜೀವನ ನಿರ್ವಹಣೆಗೆ ಹಣ ಠೇವಣಿ ಇಡಬೇಕೆಂಬ ನ್ಯಾಯಾಲಯದ ಹಿಂದಿನ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಕೃಷ್ಣ

ಪುತ್ತೂರು: ಲವ್, ಸೆಕ್ಸ್ ಮತ್ತು ದೋಖಾ| ಆರೋಪಿ ಕೃಷ್ಣ ಜೆ.ರಾವ್ ಹಾಗೂ ಪೋಷಕರಿಗೆ ಹೈಕೋರ್ಟ್ ‌ತರಾಟೆ Read More »

ಜೈಲಿನಲ್ಲಿರುವ ದರ್ಶನ್ ಫೋಟೋ ವೈರಲ್| ಸೊರಗುತ್ತಿರುವ ದಾಸನ ಕಂಡು ಮರುಗಿದ ಜನ

ಸಮಗ್ರ ನ್ಯೂಸ್ : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರದ್ದು ಎನ್ನಲಾದ ಫೋಟೋ ಒಂದು ವೈರಲ್‌ ಆಗಿದೆ. ತಮ್ಮ ಹಿಂದಿನ ಎಲ್ಲಾ ವರ್ಚಸ್ಸು, ದೇಹದಾರ್ಢ್ಯತೆಗಳನ್ನು ಕಳೆದುಕೊಂಡಂತೆ ಕಾಣುತ್ತಿರುವ ನಟ ದರ್ಶನ್‌ , ತೀವ್ರವಾಗಿ ಸೊರಗಿದಂತೆ ಕಂಡು ಬರುತ್ತಿದ್ದು ಈ ಫೋಟೋ ಅಭಿಮಾನಿಗಳನ್ನು ಆತಂಕಕ್ಕೀಡುಮಾಡಿದೆ. ನಟ ದರ್ಶನ್‌ ಗೆ ಜೈಲಿನಲ್ಲಿ ಮೂಲಭೂತ ಸೌಲಭ್ಯಗಳನ್ನು ನೀಡಲಾಗುತ್ತಿಲ್ಲ ಎಂದು ಆರೋಪಿಸಿ ದರ್ಶನ್‌ ಪರ ವಕೀಲರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು

ಜೈಲಿನಲ್ಲಿರುವ ದರ್ಶನ್ ಫೋಟೋ ವೈರಲ್| ಸೊರಗುತ್ತಿರುವ ದಾಸನ ಕಂಡು ಮರುಗಿದ ಜನ Read More »

ಕಾಸರಗೋಡು: ವಿಷ ಸೇವಿಸಿ ನವವಿವಾಹಿತೆ ಆತ್ಮಹತ್ಯೆ

ಸಮಗ್ರ ನ್ಯೂಸ್: ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ಇಲಿ ಪಾಷಾಣ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಅಶ್ವತಿ ಪಿ.ವಿ. (24) ಮೃತಪಟ್ಟ ದುರ್ದೈವಿ. ಕಾಸರಗೋಡು ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕುಟ್ಟಿಕ್ಕೋಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇತೂರುಪಾರದ ವಟ್ಟಂತಟ್ಟ ನಿವಾಸಿಯಾದ ಪುಷ್ಪಾ ಮತ್ತು ದಿವಂಗತ ಸುಕು ದಂಪತಿಯ ಪುತ್ರಿ ಅಶ್ವತಿ, ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್

ಕಾಸರಗೋಡು: ವಿಷ ಸೇವಿಸಿ ನವವಿವಾಹಿತೆ ಆತ್ಮಹತ್ಯೆ Read More »

Mangaluru : ಪೊಲೀಸರಿಗೆ ಕಾರು ಡಿಕ್ಕಿ, ಓರ್ವ ಗಂಭೀರ 

ಸಮಗ್ರ ನ್ಯೂಸ್ : ನಗರದ ಮಣ್ಣಗುಡ್ಡದ ಗೋದಾಮು ಸಮೀಪ ಮೇ. 27ರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಸಂಚಾರ ಪೊಲೀಸರು ಗಾಯಗೊಂಡಿದ್ದು, ಓರ್ವರ ಸ್ಥಿತಿ ಗಂಭೀರವಾಗಿದೆ. ಮಂಗಳೂರು ನಗರ ಸಂಚಾರ ಪಶ್ಚಿಮ ಠಾಣೆಯ ಹೆಡ್ ಕಾನ್‌ಸ್ಟೆಬಲ್ ವಿಠಲ್ ದಾಸ್ ಹಾಗೂ ಕಾನ್‌ಸ್ಟೆಬಲ್ ಕುಮಾರ್ ಗಾಯಗೊಂಡವರು. ಇವರಲ್ಲಿ ವಿಠಲ್ ದಾಸ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರ ಮಾಹಿತಿ ಪ್ರಕಾರ, ಮಂಗಳವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಮತ್ತೊಂದು

Mangaluru : ಪೊಲೀಸರಿಗೆ ಕಾರು ಡಿಕ್ಕಿ, ಓರ್ವ ಗಂಭೀರ  Read More »

ಕಾಸರಗೋಡು: ಪತಿ ಮತ್ತು ಅತ್ತೆಯ ಕಣ್ಣೆದುರಲ್ಲೇ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೈದ ನವ ವಿವಾಹಿತೆ

ಸಮಗ್ರ ನ್ಯೂಸ್: ಪತಿ ಮತ್ತು ಅತ್ತೆಯ ಕಣ್ಣೆದುರಲ್ಲೇ ನವ ವಿವಾಹಿತೆಯೊಬ್ಬರು ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಇಲ್ಲಿನ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಣಲಂನಲ್ಲಿ ನಡೆದಿದೆ. ಚಿನ್ನದ ಆಭರಣಗಳಿಗಾಗಿ ಪತಿಯ ಕುಟುಂಬದವರು ನೀಡುತ್ತಿದ್ದ ಸರಣಿ ಕಿರುಕುಳವೇ ಈ ದುರಂತಕ್ಕೆ ಕಾರಣ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದು, ಪೊಲೀಸರು ಆರೋಪಿ ಪತಿಯನ್ನು ವಶಕ್ಕೆ ಪಡೆದಿದ್ದಾರೆ. ಮೂಲತಃ ಬದಿಯಡ್ಕದ ಚೆರ್ಲಡುಕ್ಕಂ ನಿವಾಸಿಯಾದ ಫಾತಿಮತ್ ಸುಫೈದಾ (24) ಮೃತ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಆಕೆಯ ಪತಿ ಆದಿಲ್‌ನನ್ನು ವಿದ್ಯಾನಗರ

ಕಾಸರಗೋಡು: ಪತಿ ಮತ್ತು ಅತ್ತೆಯ ಕಣ್ಣೆದುರಲ್ಲೇ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೈದ ನವ ವಿವಾಹಿತೆ Read More »

ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಎಂಟು ಮಂದಿ ದುರ್ಮರಣ

ಸಮಗ್ರ ನ್ಯೂಸ್: ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಎಂಟು ಮಂದಿ ದುರ್ಮರಣಕ್ಕೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ತಟ್ಟೆಹಕ್ಕಲು ಕಡಲ ತೀರದಲ್ಲಿ ಸಂಭವಿಸಿದೆ. ಮೃತದೇಹಗಳು ಅಳ್ವೆಕೋಡಿ ಸಮೀಪ ಪತ್ತೆಯಾಗಿದ್ದು, 1. ಲಕ್ಷ್ಮಿ ಮಹಾದೇವ ನಾಯ್ಕ (42),2. ಉಮೇಶ ನಾಯ್ಕ (30).3. ಲಕ್ಷ್ಮಿ ನಾಯ್ಕ (30).4. ಲಕ್ಷ್ಮಿ ಅಣ್ಣಪ್ಪ ನಾಯ್ಕ (60).5. ಲಕ್ಷ್ಮಿ ಶಿವರಾಮ ನಾಯ್ಕ (49)6. ಜ್ಯೋತಿ ನಾಗಪ್ಪ ನಾಯ್ಕ (34).7. ಮಾಲತಿ ನಾಯ್ಕ (38).8. ಮಾಸ್ತಮ್ಮ ನಾಯ್ಕ ಎಂದು ಗುರುತಿಸಲಾಗಿದೆ. ಸ್ಥಳೀಯ ಪೊಲೀಸರ

ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಎಂಟು ಮಂದಿ ದುರ್ಮರಣ Read More »

ಉಪ್ಪಿನಂಗಡಿ, ಬೆಳ್ತಂಗಡಿಯಲ್ಲಿ ಸರಣಿ ಕಳ್ಳತನ| ಆರೋಪಿಯ ಪತ್ತೆಗೆ ಸಹಕರಿಸಲು ಪೊಲೀಸ್ ಮನವಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಡೆದಿರುವ ಸರಣಿ ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ಸಾರ್ವಜನಿಕರಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ. ಜೊತೆಗೆ ತಲೆಮರೆಸಿಕೊಂಡಿರುವ ಶಂಕಿತ ಆರೋಪಿಯ ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿದೆ. ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ತಳಿಪರಂಬು ನಿವಾಸಿಯಾಗಿರುವ ತಂಗಚ್ಚ ಯಾನೆ ಮ್ಯಾಥ್ಯೂ ಯಾನೆ ಬಶೀರ್ ಎಂಬಾತನ ಮೇಲೆ ಪೊಲೀಸರಿಗೆ ತೀವ್ರ ಅನುಮಾನ ವ್ಯಕ್ತವಾಗಿದೆ. ದಸ್ತಗಿರಿ ವಾರೆಂಟ್

ಉಪ್ಪಿನಂಗಡಿ, ಬೆಳ್ತಂಗಡಿಯಲ್ಲಿ ಸರಣಿ ಕಳ್ಳತನ| ಆರೋಪಿಯ ಪತ್ತೆಗೆ ಸಹಕರಿಸಲು ಪೊಲೀಸ್ ಮನವಿ Read More »

ಮಂಗಳೂರು: ಲಿಪ್ಟ್ ನಲ್ಲಿ ಸಿಲುಕಿ ಯುವಕ‌ ದುರ್ಮರಣ

ಸಮಗ್ರ ನ್ಯೂಸ್: ಮಂಗಳೂರು ನಗರದ ಕುಂಟಿಕಾನ ಸಮೀಪದ ಮಾರ್ಟ್ ಒಂದರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಟ್ಟಡದ ಲಿಫ್ಟ್ನಲ್ಲಿ ಸಿಲುಕಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪೂಂಜಕೆರೆ ನಿವಾಸಿ ನೌಫಲ್ (28) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.ನೌಫಲ್ ಅವರು ಎಂದಿನಂತೆ ಕೆಲಸದ ನಿಮಿತ್ತ ಮಾರ್ಟ್ಗೆ ತೆರಳಿದ್ದಾಗ ಈ ಅವಘಡ ಸಂಭವಿಸಿದೆ. ಕಟ್ಟಡದ ಮೊದಲ ಮತ್ತು ಎರಡನೇ ಮಹಡಿಯ ನಡುವೆ ಲಿಫ್ಟ್ ತಾಂತ್ರಿಕ ದೋಷದಿಂದಾಗಿ ಸಿಲುಕಿಕೊಂಡಿದೆ. ಈ ವೇಳೆ ಲಿಫ್ಟ್ನೊಳಗೆ ನೌಫಲ್ ಸಿಲುಕಿಕೊಂಡಿರುವುದನ್ನು ಗಮನಿಸಿದ ಅವರ

ಮಂಗಳೂರು: ಲಿಪ್ಟ್ ನಲ್ಲಿ ಸಿಲುಕಿ ಯುವಕ‌ ದುರ್ಮರಣ Read More »