ಕ್ರೈಂ

ವಿಟ್ಲ: ತೋಟಕ್ಕೆ ಬಂದಿದ್ದ ಬಾಲಕಿಯನ್ನು ಗುಡ್ಡಕ್ಕೆ ಕರೆದ ಮಾಲೀಕ| ಫೋಕ್ಸೋ ಪ್ರಕರಣ ದಾಖಲು

ಸಮಗ್ರ ನ್ಯೂಸ್: ‘ನೀನು ಚನ್ನಾಗಿದ್ದೀಯಾ. ಗುಡ್ಡೆಗೆ ಬರುತ್ತೀಯ?’ ಎಂದು ಅಪ್ರಾಪ್ತೆ ವಯಸ್ಸಿನ ಬಾಲಕಿ ಜೊತೆ ಅನುಚಿತ ವರ್ತನೆ ಮಾಡಿದವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. 15 ವರ್ಷದ ಬಾಲಕಿ ಜೊತೆ ಅನುಚಿತ ವರ್ತಿಸಿದ ಮಹೇಶ್ ಭಟ್ ಎನ್ನುವಾತನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಹಾಗೂ ಜಾತಿನಿಂದನೆ ದೂರು ದಾಖಲಾಗಿದೆ. ಜನವರಿ 12ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಿಕಿಗೆ ಬಂದಿದೆ. ಜನವರಿ 12ರಂದು ತಂದೆ ಕೆಲಸ ಮಾಡುವ ತೋಟಕ್ಕೆ […]

ವಿಟ್ಲ: ತೋಟಕ್ಕೆ ಬಂದಿದ್ದ ಬಾಲಕಿಯನ್ನು ಗುಡ್ಡಕ್ಕೆ ಕರೆದ ಮಾಲೀಕ| ಫೋಕ್ಸೋ ಪ್ರಕರಣ ದಾಖಲು Read More »

ಕಡಬ: ಊಟ ಮಾಡಿ‌ ಮಲಗಿದ್ದ ಎರಡೂವರೆ ವರ್ಷದ ಕಂದಮ್ಮ ಮಲಗಿದ್ದಲ್ಲೇ ಸಾವು| ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಸಮಗ್ರ ನ್ಯೂಸ್: ಊಟ ಮಾಡಿ ಮಲಗಿದ್ದ ಎರಡೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ಕೊಣಾಜೆ ಮಾಲ ನಿವಾಸಿ ಲಿಂಡೋರಾಜ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿರುವ ಉತ್ತರ ಪ್ರದೇಶ ಮೂಲದ ರಾಜಾ ಸಿಂಗ್ ಮತ್ತು ದಿವ್ಯಾಂಶಿ ಸಿಂಗ್ ದಂಪತಿಯ ಎರಡೂವರೆ ವರ್ಷದ ಪುತ್ರ ರುದ್ರ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಊಟ‌ ಮಾಡಿ ಮಲಗಿದ್ದ ಮಗುವನ್ನು ಎಬ್ಬಿಸಲೆಂದು ನೋಡುವಾಗ ಏಳದೇ ಇದ್ದುದರಿಂದ ತಕ್ಷಣವೇ

ಕಡಬ: ಊಟ ಮಾಡಿ‌ ಮಲಗಿದ್ದ ಎರಡೂವರೆ ವರ್ಷದ ಕಂದಮ್ಮ ಮಲಗಿದ್ದಲ್ಲೇ ಸಾವು| ಮುಗಿಲು ಮುಟ್ಟಿದ ಪೋಷಕರ ಆಕ್ರಂದನ Read More »

ಮಂಗಳೂರು: ಪಿಜಿ ಗೆ ರೇಟಿಂಗ್ ಕಡಿಮೆ ಕೊಟ್ಟಿದ್ದಕ್ಕೆ ವಿದ್ಯಾರ್ಥಿ ಮೇಲೆ‌‌ ಹಲ್ಲೆಗೈದ ಮಾಲೀಕ

ಸಮಗ್ರ ನ್ಯೂಸ್: ಬಾಯ್ಸ್ ಪಿಜಿ ಸ್ವಚ್ಛತೆ ಇಲ್ಲದೇ, ಊಟ-ತಿಂಡಿ ವ್ಯವಸ್ಥೆ ಸರಿಯಿಲ್ಲದೇ ಅವ್ಯವಸ್ಥೆಯ ಆಗರವಾಗಿದ್ದರೂ ಗೂಗಲ್ ರೇಟಿಂಗ್ ನಲ್ಲಿ ಹೆಚ್ಚಿನ ಸ್ಟಾರ್ ನೀಡಿ ಒಳ್ಳೆಯ ಕಮೆಂಟ್ ಹಾಕುವಂತೆ ಪಿಜಿ ಮಾಲೀಕ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿಯಲ್ಲಿ ನಡೆದಿದೆ. ವಿಕಾಸ್ (19) ಹಲ್ಲೆಗೊಳಗಾದ ವಿದ್ಯಾರ್ಥಿ. ಕಲಬುರಗಿ ಮೂಲದ ವಿಕಾಸ್ ಕಳೆದ 6 ತಿಂಗಳಿದ ಕದ್ರಿ ಬಾಯ್ಸ್ ಪಿಜಿಯಲ್ಲಿ ವಾಸವಾಗಿದ್ದ. ಪಿಜಿಯಲ್ಲಿ ಊಟ-ತಿಂಡಿ ವ್ಯವಸ್ಥೆ ಸರಿಯಿಲ್ಲವಂತೆ, ಸ್ವಚ್ಛತೆ ಬಗ್ಗೆ ಕೇಳಲೇಬೇಡಿ. ಇನ್ನು ಶೌಚಾಲಯ,

ಮಂಗಳೂರು: ಪಿಜಿ ಗೆ ರೇಟಿಂಗ್ ಕಡಿಮೆ ಕೊಟ್ಟಿದ್ದಕ್ಕೆ ವಿದ್ಯಾರ್ಥಿ ಮೇಲೆ‌‌ ಹಲ್ಲೆಗೈದ ಮಾಲೀಕ Read More »

ದಲಿತ ಮಹಿಳೆ ಮೇಲೆ ಹಲ್ಲೆ|ನಾಲ್ವರ ಬಂಧನ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ವಿಜಯನಗರ ಜಿಲ್ಲೆ ಮೂಲದ ದಲಿತ ಮಹಿಳೆಯನ್ನು ಮೀನು ಕದ್ದ ಆರೋಪದಲ್ಲಿ ಮರಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಮಾ.18 ರಂದು ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಪೊಲೀಸರು ಬಂಧಿಸಿದವರು ಸ್ಥಳೀಯರಾದ ಲಕ್ಷ್ಮೀಬಾಯಿ, ಸುಂದರ್, ಶಿಲ್ಪಾ ಎಂದು ಗುರುತಿಸಲಾಗಿದೆ. ಮಹಿಳೆಯ ಮೇಲೆ ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸಿದ ಮಲ್ಪೆ ಪೊಲೀಸರು,

ದಲಿತ ಮಹಿಳೆ ಮೇಲೆ ಹಲ್ಲೆ|ನಾಲ್ವರ ಬಂಧನ Read More »

ಪತ್ನಿ ಮತ್ತು ಆಕೆಯ ಕುಟುಂಬಸ್ಥರಿಂದ ಮಾನಸಿಕವಾಗಿ ಹಲ್ಲೆ : ಪತಿಯಿಂದ ದೂರು

ಸಮಗ್ರ ನ್ಯೂಸ್ : ಹಣಕ್ಕಾಗಿ ಪತ್ನಿ ಮತ್ತು ಆಕೆಯ ಕುಟುಂಬಸ್ಥರು ನನಗೆ ಮಾನಸಿಕವಾಗಿ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದಾರೆ ಎಂದು ಟೆಕ್ಕಿ ಶ್ರೀಕಾಂತ್ ಎಂಬವರು ಆರೋಪ ಮಾಡಿದ್ದಾರೆ. ಪತಿ ಶ್ರೀಕಾಂತ್ ಪತ್ನಿ ಬಿಂದುಶ್ರೀ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಬಿಂದುಶ್ರೀಯನ್ನು 2022ರ ಆಗಸ್ಟ್ನಲ್ಲಿ ವಿವಾಹವಾಗಿದ್ದೇನೆ. ಮದುವೆಯಾಗಿ ಎರಡು ವರ್ಷಗಳಾದರೂ ಸಹ ಒಂದು ದಿನ ಸರಿಯಾಗಿ ಸಂಸಾರ ಮಾಡಿಲ್ಲ. ಬಲವಂತವಾಗಿ ಮುಟ್ಟಿದರೆ ಡೆತ್ನೋಟ್ ಬರೆದಿಟ್ಟು ಸಾಯುತ್ತೇನೆ ಅಂತ ಬ್ಲಾಕ್ ಮೇಲ್ ಮಾಡುತ್ತಾರೆ. ಹಣಕ್ಕಾಗಿ ದೈಹಿಕವಾಗಿ

ಪತ್ನಿ ಮತ್ತು ಆಕೆಯ ಕುಟುಂಬಸ್ಥರಿಂದ ಮಾನಸಿಕವಾಗಿ ಹಲ್ಲೆ : ಪತಿಯಿಂದ ದೂರು Read More »

ಮುಲ್ಕಿ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ| ಸವಾರರಿಬ್ಬರು ದುರ್ಮರಣ

ಸಮಗ್ರ ನ್ಯೂಸ್: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ವೇಗವಾಗಿ ಬಂದ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಮೇಲೆ ಸಂಚರಿಸುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕಿನ್ನಿಗೋಳಿ ಎಂಬ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಆತ್ಮಾನಂದ (27) ನವೀನ್ ಹೂಗಾರ (26) ಮೃತ ಬೈಕ್ ಸವಾರರು ಎಂದು ತಿಳಿದುಬಂದಿದೆ. ಮೃತರು ಧಾರವಾಡ ಜಿಲ್ಲೆಯ ಕಲ್ಲೂರಿನ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಮಂಗಳೂರು ಉತ್ತರ ಸಂಚಾರಿ

ಮುಲ್ಕಿ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ| ಸವಾರರಿಬ್ಬರು ದುರ್ಮರಣ Read More »

ಕಾವೇರಿ ನದಿಯಲ್ಲಿ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಜಲಸಮಾಧಿ

ಸಮಗ್ರ ನ್ಯೂಸ್: ಕಾವೇರಿ ನದಿಯಲ್ಲಿ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಜಲಸಮಾಧಿ ಆಗಿರುವಂತಹ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಸಂಭವಿಸಿದೆ. ಚೌಡಯ್ಯ(70), ಭರತ್(13) ಮತ್ತು ಧನುಷ್(10) ಮೃತರು. ನದಿ ನೀರಿನಲ್ಲಿ ಮುಳುಗುತ್ತಿದ್ದ ಮೊಮ್ಮಕ್ಕಳ ರಕ್ಷಣೆಗೆ ತಾತ ಚೌಡಯ್ಯ ಇಳಿದಿದ್ದಾರೆ. ಇಬ್ಬರು ಮೊಮ್ಮಕ್ಕಳನ್ನು ರಕ್ಷಿಸಲಾಗದೆ ಚೌಡಯ್ಯ ಕೂಡ ನೀರುಪಾಲಾಗಿದ್ದಾರೆ. ಮೃತರನ್ನು ಟಿ. ನರಸೀಪುರ ಪಟ್ಟಣದ ತಿರುಮಕೂಡಲಿನ ನಿವಾಸಿಗಳು ಎಂದು ಗುರುತಿಸಲಾಗಿದೆ. ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದ್ದು, ಟಿ.ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ

ಕಾವೇರಿ ನದಿಯಲ್ಲಿ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಜಲಸಮಾಧಿ Read More »

ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ

ಸಮಗ್ರ ನ್ಯೂಸ್: ಬಹುಭಾಷಾ ಪಂಡಿತ, ಕನ್ನಡದ ಹಿರಿಯ ಸಾಹಿತಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಡಾ. ಪಂಚಾಕ್ಷರಿ ಹಿರೇಮಠ (92) ಅವರು ಶುಕ್ರವಾರ (ಮಾರ್ಚ್ 14 ರಂದು) ವಿಧಿವಶರಾದರು. ಧಾರವಾಡದ ಜಯನಗರ ನಿವಾಸಿ ಹಾಗೂ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕರಾಗಿದರು. ಪಂಚಾಕ್ಷರಿ ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಕನ್ನಡದ ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಅವರು 19 ಕಾವ್ಯ ಸಂಕಲನಗಳು, 11 ಕಥಾ ಸಂಕಲನಗಳು, ಉರ್ದು ಮತ್ತು ಹಿಂದಿಯಿಂದ ಕನ್ನಡಕ್ಕೆ ತಂದ

ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ Read More »

ಪೋಕ್ಸೊ ಪ್ರಕರಣ| ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಬಿ.ಎಸ್.ವೈ ಬಚಾವ್

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ವೈ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನೀಡಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ವಿಶೇಷ ನ್ಯಾಯಾಲಯದ ಸಮನ್ಸ್ ಹಾಗೂ ಕೋರ್ಟ್ ಕಾಗ್ನಿಜೆನ್ಸ್ ರದ್ದು ಮಾಡುವಂತೆ ಕೋರಿ ಬಿಎಸ್‍ವೈ ಮತ್ತು ಇತರ ಮೂವರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ ಸಮನ್ಸ್ ಆದೇಶಕ್ಕೆ ತಡೆ ನೀಡಿದೆ. ಮುಂದಿನ ವಿಚಾರಣೆಯವರೆಗೂ ಫಾಸ್ಟ್ ಟ್ರ್ಯಾಕ್ ಕೋರ್ಟ್‍ಗೆ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ. ಈ

ಪೋಕ್ಸೊ ಪ್ರಕರಣ| ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಬಿ.ಎಸ್.ವೈ ಬಚಾವ್ Read More »

ಮಂಗಳೂರು: ಕೊಲೆ ಉದ್ದೇಶದಿಂದ ಪಾದಾಚಾರಿ ಮಹಿಳೆ ಹಾಗೂ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಕಾರು| ಓರ್ವನ ವಿರುದ್ಧ ಎಫ್ಐಆರ್; ಚಾಲಕ ಅರೆಸ್ಟ್

ಸಮಗ್ರ ನ್ಯೂಸ್: ಕೊಲೆ ಉದ್ದೇಶದಿಂದ ಬೈಕ್‌ ಸವಾರನಿಗೆ ಹಾಗೂ ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಉರ್ವ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾರನ್ನು ಹಾಗೂ ಅದನ್ನು ಚಲಾಯಿಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಬಿಎಸ್‌ಎನ್‌ಎಲ್ ಸಂಸ್ಥೆಯ ನಿವೃತ್ತ ಉದ್ಯೋಗಿ ಸತೀಶ್ ಕುಮಾರ್.ಕೆ.ಎಂ ಕಾರು ಚಲಾಯಿಸಿದ್ದ ಆರೋಪಿ’ ಎಂದು ಪೊಲೀಸರು ತಿಳಿಸಿದ್ದಾರೆ. ‘ಗುರುವಾರ ಬೆಳಿಗ್ಗೆ ಬಿಜೈ ಕಾಪಿಕಾಡ್‌ನ 6ನೇ ಮುಖ್ಯ ರಸ್ತೆಯಲ್ಲಿ ನಾನು ಬೈಕ್‌ನಲ್ಲಿ ಸಾಗುತ್ತಿದ್ದೆ. ಆಗ ನಮ್ಮ ಎದುರು ಮನೆಯ ನಿವಾಸಿ

ಮಂಗಳೂರು: ಕೊಲೆ ಉದ್ದೇಶದಿಂದ ಪಾದಾಚಾರಿ ಮಹಿಳೆ ಹಾಗೂ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಕಾರು| ಓರ್ವನ ವಿರುದ್ಧ ಎಫ್ಐಆರ್; ಚಾಲಕ ಅರೆಸ್ಟ್ Read More »