ಕ್ರೈಂ

ಮಲೆನಾಡಿನಲ್ಲಿ ಮತ್ತೆ ಕೆಂಪುಉಗ್ರರ ಕರಿನೆರಳು| ಕೊಪ್ಪದಲ್ಲಿ ಇಬ್ಬರು ನಕ್ಸಲ್ ಬೆಂಬಲಿತ ಶಂಕಿತರಿಬ್ಬರು ವಶಕ್ಕೆ|ಧರ್ಮಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು

ಚಿಕ್ಕಮಗಳೂರು : ದಶಕಗಳ ಬಳಿಕ ಮಲೆನಾಡಿನಲ್ಲಿ ನಕ್ಸಲರ ಸದ್ದು ಹೆಚ್ಚಾಗಿದೆ ಎನ್ನುವ ಬಗ್ಗೆ ಅಂತಕಕಾರಿ ಮಾಹಿತಿ ಹೊರಬಿದ್ದಿದೆ. 2014 ರ ನಂತರ ಮಲೆನಾಡಿನಲ್ಲಿ ಕೆಂಪು ಉಗ್ರರ ಹೆಜ್ಜೆ ಮತ್ತೆ 2024 ರಲ್ಲಿ ಗುರುತು ಪತ್ತೆಯಾಗಿದೆ. ಮಲೆನಾಡಿನಲ್ಲಿ ಒತ್ತುವರಿ ತೆರವು ಗುಮ್ಮ, ಕಸ್ತೂರಿ ರಂಗ್ ವರದಿ ಭಯದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಗ್ರಾಮಸ್ಥರ ಸಂಪರ್ಕ ಮಾಡುತ್ತಿರುವ ಕೆಂಪು ಉಗ್ರರ ಬಗ್ಗೆ ಪೊಲೀಸರು ಜಾಡು ಹಿಡಿದಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸರು ಹಾಗೂ ಎ.ಎನ್.ಎಫ್ ಪೊಲೀಸರು ನಕ್ಸಲ್ ಬೆಂಬಲಿಗರನ್ನು ದಕ್ಷಿಣ […]

ಮಲೆನಾಡಿನಲ್ಲಿ ಮತ್ತೆ ಕೆಂಪುಉಗ್ರರ ಕರಿನೆರಳು| ಕೊಪ್ಪದಲ್ಲಿ ಇಬ್ಬರು ನಕ್ಸಲ್ ಬೆಂಬಲಿತ ಶಂಕಿತರಿಬ್ಬರು ವಶಕ್ಕೆ|ಧರ್ಮಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು Read More »

ಪಕ್ಷಿಕೆರೆ ಕೊಲೆ ಪ್ರಕರಣ| ಕಾರ್ತಿಕ್ ಭಟ್ ತಾಯಿ, ಸಹೋದರಿ ಅರೆಸ್ಟ್| ಠಾಣೆಯಲ್ಲಿ ನಡೆಯಿತು ಮೆಗಾ ಹೈಡ್ರಾಮ!

ಸಮಗ್ರ ನ್ಯೂಸ್: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ತಿಕ್ ಭಟ್ ತಾಯಿ ಹಾಗೂ ಅಕ್ಕನನ್ನು ಪೊಲೀಸರು ಬಂದಿಸಿದ್ದಾರೆ. ಶ್ಯಾಮಲಾ ಭಟ್(61) ಹಾಗೂ ಸುರತ್ಕಲ್ ಬಾಳ ನಿವಾಸಿ ಕಣ್ಮಣಿ ರಾವ್(36) ಬಂಧಿತರು. ಇಬ್ಬರ ವಿರುದ್ಧ ಕಾರ್ತಿಕ್ ಭಟ್ ಪತ್ನಿಯ ತಾಯಿ ಸಾವಿತ್ರಿ ನೀಡಿದ ದೂರಿನಂತೆ 308 ಭಾರತೀಯ ನ್ಯಾಯ ಸಂಹಿತೆ ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲಾಗಿದ್ದು ಇಬ್ಬರನ್ನು ಮುಲ್ಕಿ ಪೊಲೀಸರು ಬಂಧಿಸಿ ಮೂಡಬಿದ್ರೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕಳೆದ ದಿನದ ಹಿಂದೆ ಪೊಲೀಸ್

ಪಕ್ಷಿಕೆರೆ ಕೊಲೆ ಪ್ರಕರಣ| ಕಾರ್ತಿಕ್ ಭಟ್ ತಾಯಿ, ಸಹೋದರಿ ಅರೆಸ್ಟ್| ಠಾಣೆಯಲ್ಲಿ ನಡೆಯಿತು ಮೆಗಾ ಹೈಡ್ರಾಮ! Read More »

ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ‌‌ ಹಾರಿ‌ ಬಾಣಂತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಿಂದ ವರದಿಯಾಗಿದೆ. ನಗರದ ಲೇಡಿಗೋಷನ್‌ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಕಾರ್ಕಳದ ರಂಜಿತಾ (28) ಹಾರಿ ಮೃತಪಟ್ಟ ಘಟನೆ ನ.11ರಂದು ಬೆಳಗ್ಗೆ ನಡೆದಿದೆ. ರಂಜಿತಾ ಅವರು ಹೆರಿಗೆಗೆಂದು ಕಾರ್ಕಳದ ಆಸ್ಪತ್ರೆಗೆ ದಾಖಲಾಗಿದ್ದು, ನಂತರ ಕ್ಲಿಷ್ಟ ಆರೋಗ್ಯ ಸಮಸ್ಯೆ ಉಂಟಾಗಿದ್ದಕ್ಕೆ ಮಂಗಳೂರಿನ ಲೇಡಿಗೋಷನ್‌ ಆಸ್ಪತ್ರೆಗೆ ಅ.28 ರಂದು ದಾಖಲು ಮಾಡಲಾಗಿತ್ತು. ಅ.30 ಕ್ಕೆ ಸಿಸೇರಿಯನ್‌ ಮೂಲಕ ಹೆರಿಗೆಯಾಗಿತ್ತು. ಮಗು ಎನ್‌ಐಸಿಯುನಲ್ಲಿತ್ತು. ಆದರೆ ನ.3 ರಂದು ಮಗು

ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿ ಆತ್ಮಹತ್ಯೆ Read More »

ಮೂಲ್ಕಿ: ಪತ್ನಿ, ಮಗುವನ್ನು ಕೊಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪತಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮಗನನ್ನು ಕೊಂದು ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಪಕ್ಷಿಕೆರೆ ಗ್ರಾಮದಲ್ಲಿ ಕಾರ್ತಿಕ್ ಭಟ್ (32) ಪತ್ನಿ ಪ್ರಿಯಾಂಕ (28) ಪುತ್ರ ಹೃದಯ್ (4) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ವ್ಯಯಕ್ತಿಕ ಕಾರಣಕ್ಕೆ ಪತ್ನಿ ಮಗನನ್ನು ಕೊಂದು ಕಾರ್ತಿಕ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೊದಲು ಪತ್ನಿ ಪ್ರಿಯಾಂಕ ಹಾಗೂ ಹೃದಯ್

ಮೂಲ್ಕಿ: ಪತ್ನಿ, ಮಗುವನ್ನು ಕೊಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪತಿ Read More »

ಅಜ್ಜಿಗೆ ಕ್ರಿಕೆಟ್‌ ಬ್ಯಾಟ್‌ನಿಂದ ಥಳಿಸಿದ ಮೊಮ್ಮಗ! ರಾಕ್ಷಸ ಎಂದ ನಿಟ್ಟಿಗರು

ಸಮಗ್ರ ನ್ಯೂಸ್:ವೃದ್ಧೆಯೊಬ್ಬಳಿಗೆ ಮೊಮ್ಮಗ ಕ್ರಿಕೆಟ್ ಬ್ಯಾಟ್‌ನಿಂದ ಮನಬಂದಂತೆ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ರಾಯ್‌ಪುರದ ಪುರಾನಿ ಬಸ್ತಿ ಪೊಲೀಸ್ ಪ್ರದೇಶದ ಅಮರ್ ಪುರಿ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. ವೃದ್ಧೆಯ ಮೇಲೆ ಹಲ್ಲೆ ನಡೆಸಿದ ಬಳಿಕ ಯುವಕ ಆಕೆಗೆ ಎಚ್ಚರಿಕೆ ನೀಡಿ ಮತ್ತೆ ಮನೆಯೊಳಗೆ ಹೋಗಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಯಾವ ಕಾರಣಕ್ಕೆ ವೃದ್ದೆ ಮೇಲೆ ಹಲ್ಲೆ ಮಾಡಿದ್ದಾನೆ. ಈ ಘಟನೆ ನಡೆಸಿರುವುದು ಯಾವಾಗ ಎನ್ನುವ ಹೆಚ್ಚಿನ ಮಾಹಿತಿ ಇಲ್ಲ. ಆದರೆ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ

ಅಜ್ಜಿಗೆ ಕ್ರಿಕೆಟ್‌ ಬ್ಯಾಟ್‌ನಿಂದ ಥಳಿಸಿದ ಮೊಮ್ಮಗ! ರಾಕ್ಷಸ ಎಂದ ನಿಟ್ಟಿಗರು Read More »

ಬೆಂಗಳೂರಿನಲ್ಲಿ ಭೀಕರ ಅಪಘಾತ| ಬೆಳ್ತಂಗಡಿಯ ಯುವಕ‌ ದುರ್ಮರಣ

ಸಮಗ್ರ ನ್ಯೂಸ್: ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ ನ. 8ರ ಬೆಳಗಿನ ಜಾವ ನಡೆದ ಬೈಕ್ ಮತ್ತು ಲಾರಿ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಸನಾತನಿ ಮನೆ ನಿವಾಸಿ ವಸಂತ ಗೌಡರ ಪುತ್ರ, ಯುವಕ ತುಷಾರ್ ಗೌಡ (22) ಅವರು ದುರ್ಮರಣ ಹೊಂದಿದ್ದಾರೆ. ತುಷಾರ್ ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ಎಂ.ಬಿ.ಎ. ವಿದ್ಯಾರ್ಥಿಯಾಗಿದ್ದರು. ಆತನ ತಂದೆ ವಸಂತ ಗೌಡ, ತಾಯಿ ಅನುಗ್ರಹ ಶಾಲೆಯ ಶಿಕ್ಷಕಿ ವಿನಯಲತಾ, ತಂಗಿ ತುಷಿತಾರನ್ನು ಅಗಲಿದ್ದಾರೆ. ಈ ಪ್ರಕರಣದ ಕುರಿತು ಬೆಂಗಳೂರಿನ ಯಲಹಂಕ ನ್ಯೂ ಟೌನ್

ಬೆಂಗಳೂರಿನಲ್ಲಿ ಭೀಕರ ಅಪಘಾತ| ಬೆಳ್ತಂಗಡಿಯ ಯುವಕ‌ ದುರ್ಮರಣ Read More »

ಸುಳ್ಯ: ಬಸ್ – ಸ್ಕೂಟಿ ನಡುವೆ ಭೀಕರ ಅಪಘಾತ| ಕಾಲೇಜು ವಿದ್ಯಾರ್ಥಿನಿ ಮೃತ್ಯು

ಸಮಗ್ರ ನ್ಯೂಸ್: ಬಸ್ ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಸುಳ್ಯ – ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ಸಂಭವಿಸಿದೆ. ಮೃತಳನ್ನು ಉಬರಡ್ಕ ಗ್ರಾಮದ ನಾರಾಯಣ ಕಾಡುತೋಟ ರವರ ಮಗಳು ರಚನಾ ಎಂದು ಗುರುತಿಸಲಾಗಿದೆ. ಇನ್ನೊರ್ವ ಸಹ ಸವಾರೆ ಮೃತಳ ಸಹೋದರಿ ಸುಳ್ಯ ಜೂನಿಯ‌ರ್ ಕಾಲೇಜ್ ವಿದ್ಯಾರ್ಥಿನಿ ಅನನ್ಯ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ ವಿದ್ಯಾರ್ಥಿನಿ ಪುತ್ತೂರು ವಿವೇಕಾನಂದ ಕಾಲೇಜಿನ ತೃತೀಯ ವರ್ಷದ

ಸುಳ್ಯ: ಬಸ್ – ಸ್ಕೂಟಿ ನಡುವೆ ಭೀಕರ ಅಪಘಾತ| ಕಾಲೇಜು ವಿದ್ಯಾರ್ಥಿನಿ ಮೃತ್ಯು Read More »

ಕಡಬ: ನೆರೆಮನೆಯವರೊಂದಿಗೆ ಜಗಳ; ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ನೆರೆಮನೆಯವರೊಂದಿಗಿನ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಗೋಳಿತ್ತೊಟ್ಟುವಿನಲ್ಲಿ ನಡೆದಿದೆ. ಕಡಬ ತಾಲೂಕು ಗೋಳಿತ್ತೊಟ್ಟು ಗ್ರಾಮದ ಅಲಾಂತಾಯ ನಿವಾಸಿ ವೆಂಕಪ್ಪ ಗೌಡರ ಪುತ್ರ ರಮೇಶ್ (51 ವ) ಕೊಲೆಯಾದವರು. ನೆರೆಮನೆಯ ಸಂಬಂಧಿ ಹರೀಶ ಎಂಬಾತ ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪಿ ಎಂದು ತಿಳಿದು ಬಂದಿದೆ. ಕೊಲೆಗೆ ಜಾಗದ ತಕರಾರು ಕಾರಣ ಎನ್ನಲಾಗಿದ್ದು ಈ ಬಗ್ಗೆ ಖಚಿತ ಮಾಹಿತಿ ತಿಳಿದಿಲ್ಲ, ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ

ಕಡಬ: ನೆರೆಮನೆಯವರೊಂದಿಗೆ ಜಗಳ; ಕೊಲೆಯಲ್ಲಿ ಅಂತ್ಯ Read More »

ಜೀವಂತವಾಗಿ ಹೂತುಹಾಕಿದ ಹಂತಕರು: ಸತ್ತಂತೆ ನಟಿಸಿ ಗುಂಡಿಯಿಂದ ಎದ್ದು ಬಂದ ಯೋಗ ಶಿಕ್ಷಕಿ

ಸಮಗ್ರ ನ್ಯೂಸ್:ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಟ್ಟೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್‌ರೆಡ್ಡಿ, ರಮಣ, ಸಲ್ಮಾನ್, ರವಿ ದಿಟ್ಟೂರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅಪಹರಣಕ್ಕೊಳಗಾಗಿದ್ದ ಯೋಗ ಶಿಕ್ಷಕಿ ಮೂಲತಃ ದೇವನಹಳ್ಳಿ ತಾಲೂಕಿನವರು. ಮದುವೆಯಾಗಿ ಪತಿಯಿಂದ ಪ್ರತ್ಯೇಕವಾಗಿ ವಾಸವಿದ್ದರು. ಶಿಕ್ಷಕಿ ಬಳಿ ಸತೀಶ್‌ರೆಡ್ಡಿ ಯೋಗ ಕಲಿಯುವುದಕ್ಕೆ ಹೋಗುತ್ತಿದ್ದ. ನಂತರ ಗನ್ ತರಬೇತಿ ನೀಡುವುದಾಗಿ ಮನೆಗೆ ಬಂದಿದ್ದ. ಸತೀಶ್‌ರೆಡ್ಡಿ ಮಾಜಿ ಸೈನಿಕ ಎನ್ನಲಾಗಿದೆ. ಕೊಪ್ಪಳದಲ್ಲಿ ಕಾರು ಕದ್ದು

ಜೀವಂತವಾಗಿ ಹೂತುಹಾಕಿದ ಹಂತಕರು: ಸತ್ತಂತೆ ನಟಿಸಿ ಗುಂಡಿಯಿಂದ ಎದ್ದು ಬಂದ ಯೋಗ ಶಿಕ್ಷಕಿ Read More »

ಉಜಿರೆಯ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಉಜಿರೆಯ ಯುವಕ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ತಾಲೂಕಿನ ಉಜಿರೆ ಓಡಲ ನಿವಾಸಿ ದಿ. ಸಂಜೀವ ನಾಯ್ಕರ ಪುತ್ರ ವಿನೋದ್( 36) ಮೃತಪಟ್ಟ ದುರ್ದೈವಿ. ವಿನೋದ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ನ.4 ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ತಾಯಿ ಗೀತಾ, ಸಹೋದರಿಯರಾದ ಹೇಮಾವತಿ, ಪದ್ಮಶ್ರೀ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಉಜಿರೆಯ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವು Read More »