ಕ್ರೈಂ

ಬೆಂಗಳೂರಿನಲ್ಲಿ ಭೀಕರ ಅಪಘಾತ| ಬೆಳ್ತಂಗಡಿಯ ಯುವಕ‌ ದುರ್ಮರಣ

ಸಮಗ್ರ ನ್ಯೂಸ್: ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ ನ. 8ರ ಬೆಳಗಿನ ಜಾವ ನಡೆದ ಬೈಕ್ ಮತ್ತು ಲಾರಿ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಸನಾತನಿ ಮನೆ ನಿವಾಸಿ ವಸಂತ ಗೌಡರ ಪುತ್ರ, ಯುವಕ ತುಷಾರ್ ಗೌಡ (22) ಅವರು ದುರ್ಮರಣ ಹೊಂದಿದ್ದಾರೆ. ತುಷಾರ್ ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ಎಂ.ಬಿ.ಎ. ವಿದ್ಯಾರ್ಥಿಯಾಗಿದ್ದರು. ಆತನ ತಂದೆ ವಸಂತ ಗೌಡ, ತಾಯಿ ಅನುಗ್ರಹ ಶಾಲೆಯ ಶಿಕ್ಷಕಿ ವಿನಯಲತಾ, ತಂಗಿ ತುಷಿತಾರನ್ನು ಅಗಲಿದ್ದಾರೆ. ಈ ಪ್ರಕರಣದ ಕುರಿತು ಬೆಂಗಳೂರಿನ ಯಲಹಂಕ ನ್ಯೂ ಟೌನ್ […]

ಬೆಂಗಳೂರಿನಲ್ಲಿ ಭೀಕರ ಅಪಘಾತ| ಬೆಳ್ತಂಗಡಿಯ ಯುವಕ‌ ದುರ್ಮರಣ Read More »

ಸುಳ್ಯ: ಬಸ್ – ಸ್ಕೂಟಿ ನಡುವೆ ಭೀಕರ ಅಪಘಾತ| ಕಾಲೇಜು ವಿದ್ಯಾರ್ಥಿನಿ ಮೃತ್ಯು

ಸಮಗ್ರ ನ್ಯೂಸ್: ಬಸ್ ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಸುಳ್ಯ – ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ಸಂಭವಿಸಿದೆ. ಮೃತಳನ್ನು ಉಬರಡ್ಕ ಗ್ರಾಮದ ನಾರಾಯಣ ಕಾಡುತೋಟ ರವರ ಮಗಳು ರಚನಾ ಎಂದು ಗುರುತಿಸಲಾಗಿದೆ. ಇನ್ನೊರ್ವ ಸಹ ಸವಾರೆ ಮೃತಳ ಸಹೋದರಿ ಸುಳ್ಯ ಜೂನಿಯ‌ರ್ ಕಾಲೇಜ್ ವಿದ್ಯಾರ್ಥಿನಿ ಅನನ್ಯ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ ವಿದ್ಯಾರ್ಥಿನಿ ಪುತ್ತೂರು ವಿವೇಕಾನಂದ ಕಾಲೇಜಿನ ತೃತೀಯ ವರ್ಷದ

ಸುಳ್ಯ: ಬಸ್ – ಸ್ಕೂಟಿ ನಡುವೆ ಭೀಕರ ಅಪಘಾತ| ಕಾಲೇಜು ವಿದ್ಯಾರ್ಥಿನಿ ಮೃತ್ಯು Read More »

ಕಡಬ: ನೆರೆಮನೆಯವರೊಂದಿಗೆ ಜಗಳ; ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ನೆರೆಮನೆಯವರೊಂದಿಗಿನ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಗೋಳಿತ್ತೊಟ್ಟುವಿನಲ್ಲಿ ನಡೆದಿದೆ. ಕಡಬ ತಾಲೂಕು ಗೋಳಿತ್ತೊಟ್ಟು ಗ್ರಾಮದ ಅಲಾಂತಾಯ ನಿವಾಸಿ ವೆಂಕಪ್ಪ ಗೌಡರ ಪುತ್ರ ರಮೇಶ್ (51 ವ) ಕೊಲೆಯಾದವರು. ನೆರೆಮನೆಯ ಸಂಬಂಧಿ ಹರೀಶ ಎಂಬಾತ ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪಿ ಎಂದು ತಿಳಿದು ಬಂದಿದೆ. ಕೊಲೆಗೆ ಜಾಗದ ತಕರಾರು ಕಾರಣ ಎನ್ನಲಾಗಿದ್ದು ಈ ಬಗ್ಗೆ ಖಚಿತ ಮಾಹಿತಿ ತಿಳಿದಿಲ್ಲ, ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ

ಕಡಬ: ನೆರೆಮನೆಯವರೊಂದಿಗೆ ಜಗಳ; ಕೊಲೆಯಲ್ಲಿ ಅಂತ್ಯ Read More »

ಜೀವಂತವಾಗಿ ಹೂತುಹಾಕಿದ ಹಂತಕರು: ಸತ್ತಂತೆ ನಟಿಸಿ ಗುಂಡಿಯಿಂದ ಎದ್ದು ಬಂದ ಯೋಗ ಶಿಕ್ಷಕಿ

ಸಮಗ್ರ ನ್ಯೂಸ್:ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಟ್ಟೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್‌ರೆಡ್ಡಿ, ರಮಣ, ಸಲ್ಮಾನ್, ರವಿ ದಿಟ್ಟೂರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅಪಹರಣಕ್ಕೊಳಗಾಗಿದ್ದ ಯೋಗ ಶಿಕ್ಷಕಿ ಮೂಲತಃ ದೇವನಹಳ್ಳಿ ತಾಲೂಕಿನವರು. ಮದುವೆಯಾಗಿ ಪತಿಯಿಂದ ಪ್ರತ್ಯೇಕವಾಗಿ ವಾಸವಿದ್ದರು. ಶಿಕ್ಷಕಿ ಬಳಿ ಸತೀಶ್‌ರೆಡ್ಡಿ ಯೋಗ ಕಲಿಯುವುದಕ್ಕೆ ಹೋಗುತ್ತಿದ್ದ. ನಂತರ ಗನ್ ತರಬೇತಿ ನೀಡುವುದಾಗಿ ಮನೆಗೆ ಬಂದಿದ್ದ. ಸತೀಶ್‌ರೆಡ್ಡಿ ಮಾಜಿ ಸೈನಿಕ ಎನ್ನಲಾಗಿದೆ. ಕೊಪ್ಪಳದಲ್ಲಿ ಕಾರು ಕದ್ದು

ಜೀವಂತವಾಗಿ ಹೂತುಹಾಕಿದ ಹಂತಕರು: ಸತ್ತಂತೆ ನಟಿಸಿ ಗುಂಡಿಯಿಂದ ಎದ್ದು ಬಂದ ಯೋಗ ಶಿಕ್ಷಕಿ Read More »

ಉಜಿರೆಯ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಉಜಿರೆಯ ಯುವಕ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ತಾಲೂಕಿನ ಉಜಿರೆ ಓಡಲ ನಿವಾಸಿ ದಿ. ಸಂಜೀವ ನಾಯ್ಕರ ಪುತ್ರ ವಿನೋದ್( 36) ಮೃತಪಟ್ಟ ದುರ್ದೈವಿ. ವಿನೋದ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ನ.4 ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ತಾಯಿ ಗೀತಾ, ಸಹೋದರಿಯರಾದ ಹೇಮಾವತಿ, ಪದ್ಮಶ್ರೀ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಉಜಿರೆಯ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವು Read More »

ಮೈಸೂರು: ಯುವತಿಯ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್!

ಸಮಗ್ರ ನ್ಯೂಸ್: ಕಳೆದ ಮೂರು ವರ್ಷಗಳ ಹಿಂದೆ ಮೈಸೂರಿನ ಹೊರವಲಯದಲ್ಲಿ ಬೆಚ್ಚಿ ಬೀಳಿಸಿದ ಪ್ರಕರಣ ಮಾಸುವ ಮೊದಲೇ ಇದೀಗ ಅಂತಹುದೇ ಪ್ರಕರಣ ಬೆಳಕಿಗೆ ಬಂದಿದೆ. ಯುವತಿಯೋರ್ವಳ ಮೇಲೆ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ನಡೆಸಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಆಕೆ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಯುವತಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಳೆ. ಮಡಿಕೇರಿ ಮೂಲದ ಯುವತಿಯಿಂದ ಇದೀಗ ಮೈಸೂರಿನ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಮೈಸೂರಿನ ವಿಜಯನಗರ ಠಾಣೆಯಲ್ಲಿ ಯುವತಿ

ಮೈಸೂರು: ಯುವತಿಯ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್! Read More »

ಚೂಯಿಂಗ್ ಗಮ್ ನುಂಗಿ ನಾಲ್ಕು ವರ್ಷದ ಮಗು ಸಾವು!

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಕಾಲ್ಪುರದಲ್ಲಿ ನಾಲ್ಕು ವರ್ಷದ ಮಗುವೊಂದು ಚೂಯಿಂಗ್ ಗಮ್ ಅನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿದೆ.ರಾಹುಲ್ ಕಶ್ಯಪ್ ಅವರ ಮಗ ಎಂದು ಗುರುತಿಸಲಾದ ಮಗು ನ.03 ರಂದು ಸಂಜೆ ಚೂಯಿಂಗ್ ಗಮ್ ಖರೀದಿಸಿತ್ತು ಎಂದು ವರದಿಯಾಗಿದೆ. ಅದನ್ನು ಸೇವಿಸಿದ ಸ್ವಲ್ಪ ಸಮಯದ ನಂತರ, ಚೂಯಿಂಗ್ ಗಮ್ ಅವನ ಗಂಟಲಿನಲ್ಲಿ ಸಿಲುಕಿಕೊಂಡು, ಉಸಿರಾಟದ ತೊಂದರೆಗೆ ಕಾರಣವಾಯಿತು. ಕುಟುಂಬ ಸದಸ್ಯರು ಚೂಯಿಂಗ್ ಗಮ್ ಅನ್ನು ತೆಗೆಯಲು ಹರಸಾಹಸ ಪಟ್ಟರು, ಆದರೆ ಅದು ಸಿಲುಕಿಕೊಂಡಿತ್ತು. ತಕ್ಷಣವೇ ಹುಡುಗನನ್ನು ಕಾನ್ಸುರದ

ಚೂಯಿಂಗ್ ಗಮ್ ನುಂಗಿ ನಾಲ್ಕು ವರ್ಷದ ಮಗು ಸಾವು! Read More »

ಬೆಳ್ತಂಗಡಿ: ಮಹಿಳೆಯಿಂದ ವಿದ್ಯಾರ್ಥಿಯನ್ನು ಹನಿಟ್ರ್ಯಾಪ್ ಗೆ ಕೆಡವಲು ಯತ್ನ| ಪೊಲೀಸರ ತನಿಖೆಯಿಂದ ಬಚಾವಾದ ವಿದ್ಯಾರ್ಥಿ

ಸಮಗ್ರ ನ್ಯೂಸ್: ಮಹಿಳೆಯೋರ್ವಳು ತನ್ನ ಫೇಸ್‌ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲೆತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಬೆಳಕಿಗೆ ಬಂದಿದೆ. ಆದರೆ ಪೊಲೀಸ್ ಇಲಾಖಾಧಿಕಾರಿಗಳು ಕಂಗೆಟ್ಟ ವಿದ್ಯಾರ್ಥಿಯನ್ನು ಸಕಾಲಿಕ ಕ್ರಮದಿಂದ ರಕ್ಷಿಸಿದ್ದಾರೆ. ಬೆಳ್ತಂಗಡಿ ನಿವಾಸಿಯಾಗಿರುವ ಕಾಲೇಜು ವಿದ್ಯಾರ್ಥಿಯೋರ್ವನ ಫೇಸ್‌ಬುಕ್ ಸಂಪರ್ಕದಲ್ಲಿದ್ದ ಮಹಿಳೆಯೋರ್ವಳು ಆತ್ಮೀಯತೆಯನ್ನು ಮೂಡಿಸಿ ವಿದ್ಯಾರ್ಥಿಗೆ ವೀಡಿಯೊ ಕರೆ ಮಾಡಿದ್ದಳು. ಕರೆ ಸ್ವೀಕರಿಸಿದ ವಿದ್ಯಾರ್ಥಿಗೆ ತನ್ನ ನಗ್ನ ದೇಹವನ್ನು ಕಾಣಿಸಿ ಆತನ ಭಾವನೆಯನ್ನು ಕೆರಳಿಸಲು ಯತ್ನಿಸಿದ್ದಾಳೆ. ಬಳಿಕ

ಬೆಳ್ತಂಗಡಿ: ಮಹಿಳೆಯಿಂದ ವಿದ್ಯಾರ್ಥಿಯನ್ನು ಹನಿಟ್ರ್ಯಾಪ್ ಗೆ ಕೆಡವಲು ಯತ್ನ| ಪೊಲೀಸರ ತನಿಖೆಯಿಂದ ಬಚಾವಾದ ವಿದ್ಯಾರ್ಥಿ Read More »

ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಕಾಡಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುಂಬ್ರದ ಒಳಮೊಗ್ರು ಕಾಡಿನಲ್ಲಿ ಒಂದು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಹಿಳೆಯ ತಲೆಬುರುಡೆ, ಎಲೆಬುಗಳು ಮಾತ್ರ ಇದ್ದು, ನೇಣಿನ ಕುಣಿಕೆಯಲ್ಲಿ ಶವ ನೇತಾಡುತ್ತಿತ್ತು.ಮೃತ ಮಹಿಳೆಯನ್ನು ನಳಿನಿ ಎಂದು ಗುರುತಿಸಲಾಗಿದೆ. ಊರ್ವ ನಿವಾಸಿಯಾಗಿದ್ದ ನಳಿನಿ ಸಂಜೀವ್ ಎಂಬುವವರನ್ನು ಒಂದುವರೆ ವರ್ಷದ ಹಿಂದೆ ವಿವಾಹವಾಗಿದ್ದರು. ಆಗಾಗ ತಾಯಿ ಮನೆಗೆ ಹೋಗಿ ಬರುತ್ತಿದ್ದರು. ಇದ್ದಕ್ಕಿದ್ದಂತೆ ನಳಿನಿ ಒಂದು ತಿಂಗಳ ಹಿಂದೆ ನಾಪತ್ತೆಯಾಗಿದರು. ಅ.8ರಂದು ಸಂಪ್ಯ

ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಕಾಡಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ Read More »

ಹೆಬ್ಬೆ ಜಲಪಾತದ ಬಳಿ ಈಜಲು ಹೋಗಿ ಯುವಕ ಸಾವು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಜಲಪಾತ ವೀಕ್ಷಣೆಗೆ ಬಂದಿದ್ದ ಛತ್ತಿಸಘಡದ ಮೂಲದ ಪ್ರವಾಸಿಗ ಜಲಪಾತದಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದಾನೆ. ಅಮೀತ್ ಕುಮಾರ್(30)ಮೃತ ದುರ್ದೈವಿ. ಈತ ಮೂಲತಃ ಛತ್ತಿಸಘಡದವನಾಗಿದ್ದು ಬೆಂಗಳೂರಿನಲ್ಲಿ ವಾಸವಾಗಿದ್ದು, ಭಾನುವಾರ ಸ್ನೇಹಿತರ ಜತೆ ಕೆಮ್ಮಣ್ಣುಗುಂಡಿ ಸಮೀಪದ ಹೆಬ್ಬೆ ಜಲಪಾತಕ್ಕೆ ತೆರಳಿದ ವೇಳೆ ಜಲಪಾತದ ಸಮೀಪ ಈಜಲು ಹೋಗಿ ಸಾವನ್ನಪ್ಪಿದ್ದಾನೆ.‌ ಘಟನೆ ಸಂಬಂಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ಬೆ ಜಲಪಾತದ ಬಳಿ ಈಜಲು ಹೋಗಿ ಯುವಕ ಸಾವು Read More »