ಕ್ರೈಂ

ಆಟವಾಡಲು ತೆರಳಿದ್ದಾಗ ಕೆಂಗೇರಿ ಕೆರೆಗೆ ಬಿದ್ದು ಅಣ್ಣಾ ತಂಗಿ ಸಾವು..!

ಸಮಗ್ರ ನ್ಯೂಸ್: ಬೆಂಗಳೂರಿನ ಕೆಂಗೇರಿ ಕೆರೆ ಬಳಿ ನಿನ್ನೆ ಸಂಜೆ ಆಟವಾಡಲು ಹೋಗಿದ್ದ ಅಣ್ಣ-ತಂಗಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಜಾನ್ ಸೀನಾ (13), ಮಹಾಲಕ್ಷ್ಮೀ(11) ನಾಪತ್ತೆಯಾದವರು. ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಎಂಬುವರ ಮಕ್ಕಳು ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಕೆಂಗೇರಿ ಕೆರೆ ನೀರು ತರಲು ಹೋಗಿದ್ದರು. ಇದೆ ಸಂದರ್ಭದಲ್ಲಿ ನೀರು ತರಲು ಹೋದವರು ಕೆರೆ ಬಳಿ ಆಟವಾಡುತ್ತಿದ್ದರು. ಆಟವಾಡುತ್ತಾ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದಿದ್ದು , ಕೆರೆಯ ದಂಡೆ ಮೇಲೆ […]

ಆಟವಾಡಲು ತೆರಳಿದ್ದಾಗ ಕೆಂಗೇರಿ ಕೆರೆಗೆ ಬಿದ್ದು ಅಣ್ಣಾ ತಂಗಿ ಸಾವು..! Read More »

ಕಳಚಿದ ಯಕ್ಷಲೋಕದ ಹಿರಿಯ ಕೊಂಡಿ| ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್: ತೆಂಕುತಿಟ್ಟಿನ ಯಕ್ಷಗಾನದ ಹಾಸ್ಯರಾಜ ಎಂದೇ ಪ್ರಖ್ಯಾತಿ ಪಡೆದ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಬೆಂಗಳೂರಿನಲ್ಲಿ ಹೃದಯಘಾತವಾಗಿದೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಅ. 21ರಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದ್ದರು. ಜೊತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ

ಕಳಚಿದ ಯಕ್ಷಲೋಕದ ಹಿರಿಯ ಕೊಂಡಿ| ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ Read More »

ನಟ ಸುದೀಪ್ ಗೆ ಮಾತೃವಿಯೋಗ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ನಿಧನ ಹೊಂದಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮಧ್ಯಾಹ್ನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.

ನಟ ಸುದೀಪ್ ಗೆ ಮಾತೃವಿಯೋಗ Read More »

ಮಗನ ಹುಟ್ಟುಹಬ್ಬಕ್ಕಾಗಿ ಕಡವೆ ಬೇಟೆಯಾಡಿ ಪ್ರಿಡ್ಜ್ ನಲ್ಲಿಟ್ಟರು| ಅಧಿಕಾರಿಗಳ ದಾಳಿಯಲ್ಲಿ ಮಾಂಸ, ಕೋವಿ ವಶ

ಸಮಗ್ರ ನ್ಯೂಸ್: ಮಗನ ಹುಟ್ಟು ಹಬ್ಬಕ್ಕಾಗಿ ಕಡವೆಯನ್ನು ಗುಂಡಿಕ್ಕಿ ಕೊಂದ ಮಾಂಸವನ್ನು ಮನೆಯ ಫ್ರಿಡ್ಜ್ನಲ್ಲಿ ದಾಸ್ತಾನು ಇರಿಸಲಾದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ಸ್ವಾಧೀನಪಡಿಸಿಕೊಂಡಿದೆ. ಶಿರಾಡಿ ಗ್ರಾಮದ ಗುಂಡ್ಯ ನಿವಾಸಿ ಸುರೇಶ್‌ ಮತ್ತವರ ಸಹವರ್ತಿಗಳು ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದಕ್ಕೆ ಗುಂಡಿಕ್ಕಿ ಹತ್ಯೆಗೈದಿದ್ದರು. ಅದನ್ನು ಮಗನ ಹುಟ್ಟು ಹಬ್ಬದ ಔತಣ ಕೂಟಕ್ಕೆಂದು ಮಾಂಸ ಮಾಡಿ ಮನೆಯ ಪ್ರೀಝರ್‌ನಲ್ಲಿ ಇರಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ವಲಯ

ಮಗನ ಹುಟ್ಟುಹಬ್ಬಕ್ಕಾಗಿ ಕಡವೆ ಬೇಟೆಯಾಡಿ ಪ್ರಿಡ್ಜ್ ನಲ್ಲಿಟ್ಟರು| ಅಧಿಕಾರಿಗಳ ದಾಳಿಯಲ್ಲಿ ಮಾಂಸ, ಕೋವಿ ವಶ Read More »

ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಅಪಘಾತ| ಐವರ್ನಾಡು ಸಹಕಾರ ಸಂಘದ ಉದ್ಯೋಗಿ ಸಾವು

ಸಮಗ್ರ ನ್ಯೂಸ್: ದ್ವಿಚಕ್ರ ವಾಹನಗಳ ನಡುವಿನ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ಸುಳ್ಯದ ಪೈಚಾರು – ಸೋಣಂಗೇರಿ ರಸ್ತೆಯ ಆರ್ತಾಜೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿ ಭೋಜಪ್ಪ (50) ಮೃತ ದುರ್ದೈವಿ. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸುಳ್ಯ ಕಡೆಯಿಂದ ಸೋಣಂಗೇರಿ ಕಡೆಗೆ ಸಂಚರಿಸುತ್ತಿದ್ದ ಬುಲೆಟ್‌ ಹಾಗೂ ಐವರ್ನಾಡಿನಿಂದ ಸುಳ್ಯ ಕಡೆಗೆ ಸಾಗುತ್ತಿದ್ದ ಭೋಜಪ್ಪ ಅವರ ಹೋಂಡ ಬೈಕ್‌ ಢಿಕ್ಕಿಯಾಗಿದೆ. ಬುಲೆಟ್‌ನಲ್ಲಿದ್ದ

ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಅಪಘಾತ| ಐವರ್ನಾಡು ಸಹಕಾರ ಸಂಘದ ಉದ್ಯೋಗಿ ಸಾವು Read More »

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಸಮಗ್ರ ನ್ಯೂಸ್: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕ ಗ್ರಾಮದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ಗ್ರಾಮದಲ್ಲಿ ನಡೆದಿದೆ.ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅವಿನಾಶ್ ಮನೆಯಲ್ಲಿ ಹಣದ ಸಮಸ್ಯೆಯಿತ್ತು. ಸಾಲ ಸೂಲ ಮಾಡಿಕೊಂಡ ಕುಟುಂಬ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು.ಈ ವಿಚಾರಕ್ಕೆ ಮನನೊಂದ ಪತ್ನಿ ಮಮತಾ ಆತ್ಮಹತ್ಯೆ ದಾರಿ ಹಿಡಿದಿದ್ದಾರೆ.ಗಂಡ ಅವಿನಾಶ್ ಕೆಲಸಕ್ಕೆ ಹೋದ ಬಳಿಕ ಮಮತಾ ತನ್ನ ಇಬ್ಬರು ಮಕ್ಕಳನ್ನು ನೇಣು ಬಿಗಿದುಕೊಂದು ತಾನೂ ಕೂಡ ನೇಣಿಗೆ ಶರಣಾಗಿದ್ದಾರೆ.ನಂತರ ಸಂಜೆ ಅವಿನಾಶ್ ಹಲವು ಬಾರಿ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ನಟ ದರ್ಶನ್ ಗೆ ಮತ್ತಷ್ಟು ದಿನ ಜೈಲೇ‌ ಗತಿ| ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಸಮಗ್ರ ನ್ಯೂಸ್: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಜಾಮೀನು ಅರ್ಜಿ ಅರ್ಜಿ ವಜಾ ಆಗಿದೆ. ಈ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದ್ದಂತ ನ್ಯಾಯಾಲಯವು, ತೀರ್ಪು ಇಂದಿಗೆ ಕಾಯ್ದಿರಿಸಿತ್ತು. ಇದೀಗ ನಟ ದರ್ಶನ್ ಜಾಮೀನು ಅರ್ಜಿ ವಜಾ ಆಗಿದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿರುವಂತ ನಟ ದರ್ಶನ್ ಜಾಮೀನು ಕೋರಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಅಭಿಯೋಜಕ ಎಸ್ ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ| ನಟ ದರ್ಶನ್ ಗೆ ಮತ್ತಷ್ಟು ದಿನ ಜೈಲೇ‌ ಗತಿ| ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್ Read More »

ಬಾಬಾ ಸಿದ್ದಿಕಿಯ ಭೀಕರ ಮರ್ಡರ್..! ಹತ್ಯೆ ಹೊಣೆ ಹೊತ್ತುಕೊಂಡ ಬೀಷ್ಣೋಯ್ ಗ್ಯಾಂಗ್

ಸಮಗ್ರ ನ್ಯೂಸ್: ಮಹಾರಾಷ್ಟ್ರ NCP ನಾಯಕ ಬಾಬಾ ಸಿದ್ದಿಕಿಯನ್ನ ಮುಂಬೈನಲ್ಲಿ ಗುಂಡಿಕ್ಕಿ ಹತ್ಯೆಗೈಯಲಾಗಿತ್ತು. ಡಿಸಿಎಂ ಅಜಿತ್ ಪವಾರ್ ಬಣದಲ್ಲಿ ಗುರುತಿಸಿಕೊಂಡ ಬಾಬಾ ಸಿಧ್ಧಿಕಿಯನ್ನು ಕಚೇರಿ ಸಮೀಪದ ರಾಮಮಂದಿರ ಬಳಿ ಶೂಟ್ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹರ್ಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂಬ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಮೂರನೆಯವರು ಪರಾರಿಯಾಗಿದ್ದಾರೆ. ದಾಳಿಗೂ ಮುನ್ನಾ ಮೂವರು ಆರೋಪಿಗಳು ರಾತ್ರಿ ಆಟೋ ರಿಕ್ಷಾದಲ್ಲಿ ಬಂದಿದ್ದು, ಸ್ವಲ್ಪ ಸಮಯ

ಬಾಬಾ ಸಿದ್ದಿಕಿಯ ಭೀಕರ ಮರ್ಡರ್..! ಹತ್ಯೆ ಹೊಣೆ ಹೊತ್ತುಕೊಂಡ ಬೀಷ್ಣೋಯ್ ಗ್ಯಾಂಗ್ Read More »

ರಾಜ್ಯದಲ್ಲೊಂದು ಪೈಶಾಚಿಕ ಘಟನೆ|ಪ್ರಿಯಕರನೊಂದಿಗೆ ಸೆಕ್ಸ್ ಗೆ ಅಡ್ಡಿಯಾದ ಮಕ್ಕಳನ್ನು ಹತ್ಯೆ ಮಾಡಿದ ಪಾಪಿತಾಯಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪೈಶಾಚಿಕ ಘಟನೆಯೊಂದು ನಡೆದಿದ್ದು, ಲೈಂಗಿಕ ಕ್ರಿಯೆಗೆ ಅಡ್ಡಿ ಬರುತ್ತಿದ್ದಾರೆ ಎಂದು ಇಬ್ಬರು ಮಕ್ಕಳನ್ನು ತಾಯಿಯೊಬ್ಬಳು ಪ್ರಿಯಕರನ ಜೊತೆಗೆ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದ ಕೆಂಪೇಗೌಡ ಸರ್ಕಲ್ ನಲ್ಲಿ ಪ್ರಿಯಕರನ ಜೊತೆಗೆ ಸೇರಿ ತಾಯಿಯೊಬ್ಬಳು 3 ವರ್ಷದ ಕಬಿಲ್ ಹಾಗೂ 11 ತಿಂಗಳ ಕಬಿಲನ್ ಎಂಬ ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾಳೆ. ತಾಯಿ ಸ್ವೀಟಿ ಹಾಗೂ ಆಕೆಯ ಪ್ರಿಯಕರ ಗ್ರಗೋರಿ ಫ್ರಾನ್ಸಿಸ್ ಎಂಬಾತ ಇಬ್ಬರು ಲೈಂಗಿಕ ಕ್ರಿಯೆ ಮಾಡುವಾಗ

ರಾಜ್ಯದಲ್ಲೊಂದು ಪೈಶಾಚಿಕ ಘಟನೆ|ಪ್ರಿಯಕರನೊಂದಿಗೆ ಸೆಕ್ಸ್ ಗೆ ಅಡ್ಡಿಯಾದ ಮಕ್ಕಳನ್ನು ಹತ್ಯೆ ಮಾಡಿದ ಪಾಪಿತಾಯಿ Read More »

ಶಿರಾಡಿ: ಗುಂಡ್ಯ ಹೊಳೆಗೆ ಬಿದ್ದ ಖಾಸಗಿ‌ ಬಸ್; ಡ್ರೈವರ್‌ ಸಾವು

ಸಮಗ್ರ ನ್ಯೂಸ್: ಬೆಂಗಳೂರು ಮೂಲದ ಖಾಸಗಿ ಸ್ಲೀಪರ್‌ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಸಮೀಪದ ಲಾವಂತ್ತಡ್ಕ ಎಂಬಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ 11 ಗಂಟೆಗೆ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಬಸ್‌ನ ಡ್ರೈವರ್‌ ಬಸ್‌ನ ಅಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ಬೆಂಗಳೂರು ಮೂಲದವನೆಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬಂದಿಲ್ಲ. ಈ ಖಾಸಗಿ ಸ್ಲೀಪರ್‌ ಬಸ್‌ ಗುರುವಾರ ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ನಿನ್ನೆ

ಶಿರಾಡಿ: ಗುಂಡ್ಯ ಹೊಳೆಗೆ ಬಿದ್ದ ಖಾಸಗಿ‌ ಬಸ್; ಡ್ರೈವರ್‌ ಸಾವು Read More »