ಕ್ರೈಂ

ಹೃದಯಾಘಾತದಿಂದ ತೆಲುಗು ನಟ ರಾಜೇಂದ್ರ ಪ್ರಸಾದ್ ಪುತ್ರಿ ಗಾಯಿತ್ರಿ ನಿಧನ

ಸಮಗ್ರ ನ್ಯೂಸ್: ಟಾಲಿವುಡ್ ಹಿರಿಯ ನಟ ರಾಜೇಂದ್ರ ಪ್ರಸಾದ್ ಅವರ ಪುತ್ರಿ ಗಾಯತ್ರಿ (38) ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಗಾಯಿತ್ರಿ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಹೈದರಾಬಾದ್ ನ AIG ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗಿದೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಹೃದಯಾಘಾತದಿಂದ ತೆಲುಗು ನಟ ರಾಜೇಂದ್ರ ಪ್ರಸಾದ್ ಪುತ್ರಿ ಗಾಯಿತ್ರಿ ನಿಧನ Read More »

ಕಾರು-ಬೈಕ್ ಡಿಕ್ಕಿ;ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ಕಾರು-ಬೈಕ್ ನಡುವೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟ ಘಟನೆ ಅ.05 ರಂದು ಕಡಬದಲ್ಲಿ ನಡೆದಿದೆ. ಮೃತರನ್ನು‌ ಕಡಬ ಹಳೇಸ್ಟೇಷನ್ ನಿವಾಸಿ ಹಸೈನಾರ್ ಎಂದು ಗುರುತಿಸಲಾಗಿದೆ. ಹಸೈನಾರ್ ತನ್ನ ಮನೆಯಿಂದ ಕಡಬ ಕಡೆಗೆ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರೊಂದು ಢಿಕ್ಕಿ ಹೊಡೆದ ದುರ್ಘಟನೆ ಸಂಭವಿಸಿದೆ. ಅಪಘಾತದ ದೃಶ್ಯ ಸ್ಥಳೀಯ ಇಂಡಸ್ಟ್ರೀಸ್ ಒಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ

ಕಾರು-ಬೈಕ್ ಡಿಕ್ಕಿ;ಬೈಕ್ ಸವಾರ ಸಾವು Read More »

ಬೆಳ್ತಂಗಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬರು ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಅ.04 ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ನಡೆದಿದೆ. ಮೃತರನ್ನು ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್ (35) ಎಂದು ಗುರುತಿಸಲಾಗಿದೆ. ಮಿಯಾ‌ರ್ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ ಪ್ರವೀಣ್ ಇವರು ಬೆಳಗ್ಗೆ 10 ಗಂಟೆಗೆ ಮರದ ರೆಂಬೆ ತೆಗೆಯುತಿದ್ದ ವೇಳೆ ಮರದಲ್ಲೇ ಅಸ್ವಸ್ಥಗೊಂಡು ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆತರಲಾಯಿತು, ಆದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು. ಮೃತರು ವಿವಾಹಿತರಾಗಿದ್ದು ಪತ್ನಿ, ಇಬ್ಬರು ಮಕ್ಕಳು

ಬೆಳ್ತಂಗಡಿ: ಮರದಿಂದ ಬಿದ್ದು ವ್ಯಕ್ತಿ ಸಾವು Read More »

ರೇಣುಕಾಸ್ವಾಮಿ ಕೊಲೆ ಪ್ರಕರಣದ 3 ಆರೋಪಿಗಳು ರಿಲೀಸ್

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಹಿನ್ನೆಲೆ ಜಾಮೀನು ಸಿಕ್ಕ ಬಳಿಕವೂ ಬಿಡುಗಡೆಯಾಗದೇ ಇದ್ದ ಮೂವರು ಆರೋಪಿಗಳು ಇಂದು (ಅ.2) ತುಮಕೂರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸೆ.23 ರಂದು ಎ-16 ಆರೋಪಿ ಕೇಶವಮೂರ್ತಿಗೆ ಹೈಕೋಟ್‌ನಿಂದ ಹಾಗೂ ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್‌ಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಕೋರ್ಟ್ 2 ಲಕ್ಷ ರೂ. ಹಣ ಹಾಗೂ ಇಬ್ಬರು ಶೂರಿಟಿದಾರರನ್ನ ಹೊಂದಿಸಲು ಆರೋಪಿಗಳ ಕುಟುಂಬಸ್ಥರ ಬಳಿ ಕೇಳಿದ್ದರು. ಆದರೆ ಜಾಮೀನು ಶೂರಿಟಿಗೂ ಹಣವಿಲ್ಲದೇ ಆರೋಪಿಗಳ ಕುಟುಂಬಸ್ಥರು

ರೇಣುಕಾಸ್ವಾಮಿ ಕೊಲೆ ಪ್ರಕರಣದ 3 ಆರೋಪಿಗಳು ರಿಲೀಸ್ Read More »

ಜಮೀನಿನಲ್ಲಿ ಆಟವಾಡುತ್ತಿದ್ದ ಪುಟ್ಟ ಬಾಲಕಿಯರು ಕೃಷಿ ಹೊಂಡಕ್ಕೆ ಬಿದ್ದು ಸಾವು..!

ಸಮಗ್ರ ನ್ಯೂಸ್:ದಾವಣಗೆರೆಯ ಜಗಳೂರಿನ ಅಸಗೋಡು ಗ್ರಾಮದಲ್ಲಿ ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ್ಧಾರೆ. ಅಲ್ಲಿದ್ದ ಪೋಷಕರು ಮಕ್ಕಳ ರಕ್ಷಣೆಗೆ ಧಾವಿಸಿದ್ದಾರೆ,ಅಷ್ಟರಲ್ಲಾಗಲೇ ಬಾಲಕಿಯರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತ ಬಾಲಕಿಯರನ್ನು ಗಂಗಮ್ಮ (12) ಹಾಗೂ ಕಾವ್ಯ (8) ಎಂದು ಗುರುತಿಸಲಾಗಿದೆ. ಮಕ್ಕಳ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಜಗಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಮೀನಿನಲ್ಲಿ ಆಟವಾಡುತ್ತಿದ್ದ ಪುಟ್ಟ ಬಾಲಕಿಯರು ಕೃಷಿ ಹೊಂಡಕ್ಕೆ ಬಿದ್ದು ಸಾವು..! Read More »

ಗನ್‌ನಿಂದ ಕಾಲಿಗೆ ಶೂಟ್ ಮಾಡಿಕೊಂಡ ನಟ ಗೋವಿಂದ

ಸಮಗ್ರ ನ್ಯೂಸ್:ನಟ ಗೋವಿಂದ ಅವರು ತಮ್ಮದೇ ಗನ್‌ನಿಂದ ಕಾಲಿಗೆ ಶೂಟ್ ಮಾಡಿಕೊಂಡಿದ್ದಾರೆ.ಮುಂಜನೆ 5 ಗಂಟೆ ಸುಮಾರಿಗೆ ಆಕಸ್ಮಿಕವಾಗಿ ನಡೆದಿರೋ ಘಟನೆ. ಬುಲೆಟ್‌ ಫೈಯರ್ ಆಗಿದ್ದು, ಅವರ ಕಾಲಿಗೆ ತಾಗಿದೆ.ಅವರನ್ನು ಅಂಧೇರಿಯ ಕೃತಿ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಂಬೈನಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.ಗುಂಡಿನ ಶಬ್ದ ಕೇಳಿದ ಬಳಿಕ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಗೋವಿಂದ ಅವರ ಗನ್‌ನ ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ. ‘ನಟ ಹಾಗೂ ಶಿವಸೇನಾ ಮುಖ್ಯಸ್ಥ ಗೋವಿಂದ ಕೋಲ್ಕತ್ತಾ ತೆರಳಲು

ಗನ್‌ನಿಂದ ಕಾಲಿಗೆ ಶೂಟ್ ಮಾಡಿಕೊಂಡ ನಟ ಗೋವಿಂದ Read More »

ಕಾರ್ಕಳ: ಮಿನಿಲಾರಿ – ದ್ವಿಚಕ್ರ ವಾಹನ ನಡುವೆ ಅಪಘಾತ| ಒಂದೇ ಕುಟುಂಬದ ನಾಲ್ವರು ದುರ್ಮರಣ

ಸಮಗ್ರ ನ್ಯೂಸ್: ಮಿನಿ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಸುರೇಶ್ ಆಚಾರ್ಯ (36), ಸಮೀಕ್ಷಾ (7) ಸುಶ್ಮೀತಾ (5) ಮತ್ತು ಸುಶಾಂತ್ (2) ಗುರುತಿಸಲಾಗಿದೆ. ಮೀನಾಕ್ಷಿ ಆಚಾರ್ಯ

ಕಾರ್ಕಳ: ಮಿನಿಲಾರಿ – ದ್ವಿಚಕ್ರ ವಾಹನ ನಡುವೆ ಅಪಘಾತ| ಒಂದೇ ಕುಟುಂಬದ ನಾಲ್ವರು ದುರ್ಮರಣ Read More »

ಕೊಟ್ಟಾಯಂನಲ್ಲಿ ತಾಯಿ ಮಡಿಲಲ್ಲೇ ಉಸಿರು ಚೆಲ್ಲಿದ ಮಗು..!

ಸಮಗ್ರ ನ್ಯೂಸ್: ಕೇರಳದ ಕೊಟ್ಟಾಯಂ ಪಾದಪ್ಪರಂನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 2 ವರ್ಷದ ಕಂದಮ್ಮ ಮೃತಪಟ್ಟಿದ್ದಾಳೆ. ನಾಸೀ‌ರ್ ಮತ್ತು ರಮಶೀನಾ ದಂಪತಿಯ ಪುತ್ರಿ ಇಫಾ,ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಮತ್ತು ಎದುರಿನಿಂದ ಬಂದ ಟ್ಯಾಂಕರ್ ಲಾರಿ ಡಿಕ್ಕಿಯಾದಾಗ, ಏರ್ ಬ್ಯಾಗ್‌ ಬಾಲಕಿಯ ಮುಖಕ್ಕೆ ಬಡಿದು ಸೀಟ್‌ ಬೆಲ್ಟ್ ಕುತ್ತಿಗೆಗೆ ಸಿಕ್ಕಿಹಾಕಿಕೊಂಡ ಪರಿಣಾಮ, ಇಫಾ ಉಸಿರುಗಟ್ಟಿ ಮೃತಪಟ್ಟಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಲಕಿಯ ತಂದೆ ಕೇವಲ ಎರಡು ದಿನಗಳ ಹಿಂದೆ ವಿದೇಶದಿಂದ ಬಂದಿದ್ದರು. ಭಾನುವಾರ ಬಾಲಕಿಯ

ಕೊಟ್ಟಾಯಂನಲ್ಲಿ ತಾಯಿ ಮಡಿಲಲ್ಲೇ ಉಸಿರು ಚೆಲ್ಲಿದ ಮಗು..! Read More »

ಬೆಳ್ತಂಗಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ| ಆರೋಪಿಗಳು ಪರಾರಿ

ಸಮಗ್ರ ನ್ಯೂಸ್: ಕೊಕ್ಕಡ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ಗುರುವಾರ ದಾಳಿ ನಡೆಸಿದ ಧರ್ಮಸ್ಥಳ ಪೊಲೀಸರು ಗೋಮಾಂಸ ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿನ ಉಸ್ಮಾನ್‌ ಅವರ ಅಡಿಕೆ ತೋಟದಲ್ಲಿ ಗೋಹತ್ಯೆಗೈದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಸುಳಿವು ದೊರೆತ ಪೊಲೀಸರು ದಾಳಿ ನಡೆಸಿದ್ದಾರೆ. ಸ್ಥಳದಲ್ಲಿ ಸುಮಾರು 10 ಕೆ.ಜಿ. ಜಾನುವಾರಿನ ಮಾಂಸ, ಜಾನುವಾರಿನ ದೇಹದ ಇತರ ಭಾಗಗಳು, ಬ್ಯಾಟರಿ ಚಾಲಿತ ತೂಕದ ಯಂತ್ರ-1,

ಬೆಳ್ತಂಗಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ| ಆರೋಪಿಗಳು ಪರಾರಿ Read More »

ಮಹಾಲಕ್ಷ್ಮಿ ಕೊಲೆ ಪ್ರಕರಣ| ಆರೋಪಿ ಮುಕ್ತಿ‌ರಂಜನ್ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಮಹಾಲಕ್ಷ್ಮಿ ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಿ ದೇಹವನ್ನು 59 ತುಂಡುಗಳಾಗಿ ಕತ್ತರಿಸಿದ ಹಂತಕ ಮುಕ್ತಿ ರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಮುಕ್ತಿ ರಂಜನ್ ರಾಯ್ ಪಶ್ಚಿಮ ಬಂಗಾಳಕ್ಕೆ ಹೋಗಿದ್ದಾನೆ ಎಂದು ವರದಿಯಾಗಿತ್ತು. ಆದರೆ ಆರೋಪಿ ಒಡಿಶಾದಲ್ಲಿ ಅಡಗಿದ್ದಾನೆ ಎಂಬ ಮಾಹಿತಿ ಇದೆ. ಪೊಲೀಸರು ಆರೋಪಿಯ ಜಾಡು ಹಿಡಿದು ಒಡಿಶಾಗೆ ತೆರಳಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದರು. ಇದೀಗ ಆರೋಪಿ

ಮಹಾಲಕ್ಷ್ಮಿ ಕೊಲೆ ಪ್ರಕರಣ| ಆರೋಪಿ ಮುಕ್ತಿ‌ರಂಜನ್ ಆತ್ಮಹತ್ಯೆಗೆ ಶರಣು Read More »