ಕ್ರೈಂ

ಉದ್ಯಮಿ ‘ಮುಮ್ರಾಜ್ ಅಲಿ’ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್

ಸಮಗ್ರ ನ್ಯೂಸ್: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಲ್ತಾಜ್ ಅಲಿ ಮೃತದೇಹ 28 ಗಂಟೆಗಳ ಕಾರ್ಯಾಚರಣೆ ಬಳಿಕ ಕೂಳೂರಿನ ಸೇತುವೆ ಬಳಿ ಪತ್ತೆಯಾಗಿದೆ. ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗರವಾಲ್, ಮಲ್ತಾಜ್ ಅಲಿ ಅವರ ಆತ್ಮಹತ್ಯೆಗೆ ಹನಿಟ್ರ್ಯಾಪ್ ಕಾರಣ ಎಂದು ದೂರಿನಲ್ಲಿ ಅವರ ಸಹೋದರ ಉಲ್ಲೆಖಿಸಿದ್ದಾರೆ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಲ್ತಾಜ್ ಅಲಿ ಆತ್ಮಹತ್ಯೆಗೆ ಸಂಬಂಧಪಟ್ಟ ಆರೋಪಿಗಳು ದೇಶ ಬಿಟ್ಟು ಹೋಗದಂತೆ ಎಲ್ […]

ಉದ್ಯಮಿ ‘ಮುಮ್ರಾಜ್ ಅಲಿ’ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್ Read More »

ಐವರು ಯುವಕರಿಂದ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ| ರಕ್ಷಣೆ ಮಾಡುವ ಭರವಸೆ ನೀಡಿ ಕೃತ್ಯ ಎಸಗಿದ ಕಿರಾತಕರು

ಸಮಗ್ರ ನ್ಯೂಸ್: ಪುನರ್ವಸತಿ ಕೇಂದ್ರದಿಂದ ಓಡಿ ಹೋಗಿದ್ದ ಇಬ್ಬರು ಬಾಲಕಿಯರ ಮೇಲೆ ಐವರು ಯುವಕರು ಅತ್ಯಾಚಾರ ಎಸಗಿರುವ ಘಟನೆ ಹೈದರಾಬಾದ್​​ನಲ್ಲಿ ನಡೆದಿದೆ. ಸೈದಾಬಾದ್​​ ಪೊಲೀಸರ ಪ್ರಕಾರ, ಖಾಸಗಿ ಸಂಸ್ಥೆಯೊಂದು ಐಎಸ್ ​ಸದನ್​​ ವಿಭಾಗದ ಅಡಿ ಬಾಲಕಿಯರ ಪುನರ್ವಸತಿ ಕೇಂದ್ರವನ್ನು ನಡೆಸುತ್ತಿದೆ. ಈ ಕೇಂದ್ರದಲ್ಲಿ 14 ವರ್ಷದ ಬಾಲಕಿ ಮೂರು ತಿಂಗಳಿನಿಂದ ಹಾಗೂ 15 ವರ್ಷದ ಬಾಲಕಿ ಸೆ.18ರಿಂದ ಆಶ್ರಯ ಪಡೆಯುತ್ತಿದ್ದರು. ಈ ಇಬ್ಬರೂ ಅಪ್ರಾಪ್ತರಿಗೆ ಪೋಷಕರಿದ್ದಾರೆ. ಆದರೆ ಬೇರೆ ಬೇರೆ ಕಾರಣಗಳಿಂದ ಪುನರ್ವಸತಿ ಕೇಂದ್ರಕ್ಕೆ ದಾಖಲಾಗಿದ್ದರು. ಈ

ಐವರು ಯುವಕರಿಂದ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ| ರಕ್ಷಣೆ ಮಾಡುವ ಭರವಸೆ ನೀಡಿ ಕೃತ್ಯ ಎಸಗಿದ ಕಿರಾತಕರು Read More »

ಚಿಕ್ಕಮಗಳೂರು: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರು ಮೂಲದ ಚಾಲಕ ಹೃದಯಾಘಾತದಿಂದ ಮೃತ್ಯು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಹೋಮ್ ಸ್ಟೇವೊಂದಕ್ಕೆ ಬೆಂಗಳೂರಿನ ಪ್ರವಾಸಿಗರನ್ನು ಕರೆ ತಂದಿದ್ದ ಟಿಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಅ.06 ರಂದು ವರದಿಯಾಗಿದೆ. ಬೆಂಗಳೂರಿನ ಸೋಮನಹಳ್ಳಿ ನಿವಾಸಿಯಾಗಿರುವ ಅವಿನಾಶ್(25) ರವರು ಅ.06 ರಂದು ಬೆಳಗ್ಗೆ ಬೆಂಗಳೂರಿನ ಪ್ರವಾಸಿಗರನ್ನು ಚಿಕ್ಕಮಗಳೂರಿಗೆ ಟಿಟಿ ವಾಹನದಲ್ಲಿ ಕರೆ ತಂದಿದ್ದಾನೆ.ಪ್ರವಾಸಿಗರನ್ನು ನಗರ ಸಮೀಪದ ಹೋಮ್ ಸ್ಟೇವೊಂದಕ್ಕೆ ಬಿಟ್ಟಿದ್ದು, ಕೆಲವೇ ಹೊತ್ತಿನಲ್ಲಿ ಚಾಲಕ ಹೃದಯಾಘಾತಕ್ಕೊಳಗಾಗಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. ಘಟನೆ ಸಂಬಂಧ ಚಿಕ್ಕಮಗಳೂರು

ಚಿಕ್ಕಮಗಳೂರು: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರು ಮೂಲದ ಚಾಲಕ ಹೃದಯಾಘಾತದಿಂದ ಮೃತ್ಯು Read More »

ಮಂಗಳೂರು: ಕೂಳೂರು ಸೇತುವೆ ಬಳಿ ಮುಮ್ತಾಝ್ ಅಲಿ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಮಂಗಳೂರಿನ ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ರವಿವಾರ ಬೆಳಗ್ಗೆ ಉಡುಪಿ – ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಮುಮ್ತಾಝ್ ಅವರ ಕಾರು ಪತ್ತೆಯಾಗಿತ್ತು. ಅಲ್ಲದೆ, ಕಾರಿನ ಮುಂಭಾಗದ ಬಲ‌ಬದಿ ಅಪಘಾತ ನಡೆದಿರುವ ಕುರುಹುಗಳು ಪತ್ತೆಯಾಗಿತ್ತು. ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ

ಮಂಗಳೂರು: ಕೂಳೂರು ಸೇತುವೆ ಬಳಿ ಮುಮ್ತಾಝ್ ಅಲಿ ಮೃತದೇಹ ಪತ್ತೆ Read More »

ಮಂಗಳೂರು: ಇನ್ನೂ ಪತ್ತೆಯಾಗದ ಮಮ್ತಾಜ್ ಅಲಿ| ಫಲ್ಗುಣಿ ನದಿಯಲ್ಲಿ ತೀವ್ರ ಶೋಧ

ಸಮಗ್ರ ನ್ಯೂಸ್: ಮುಸ್ಲಿಂ ಮುಖಂಡ, ಇಲ್ಲಿನ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷ ಬಿ.ಎಂ.ಮುಮ್ತಾಜ್ ಅಲಿ (52) ಅವರು ಭಾನುವಾರ ಮುಂಜಾನೆಯಿಂದ ನಾಪತ್ತೆಯಾಗಿದ್ದಾರೆ. ಅವರ ಬಿಎಂಡಬ್ಲ್ಯು ಕಾರು ನಗರದ ಹೊರವಲಯದ ಕೂಳೂರು ಸೇತುವೆಯಲ್ಲಿ ಪತ್ತೆಯಾಗಿದೆ. ಅವರಿಗಾಗಿ ಬೆಳಿಗ್ಗೆ 7 ಗಂಟೆಯಿಂದ ಕೂಳೂರು ಬಳಿ ಫಲ್ಗುಣಿ ನದಿಯಲ್ಲಿ ಶೋಧಕಾರ್ಯ ನಡೆದಿದ್ದು, ಇನ್ನೂ ಅವರ ಸುಳಿವು ಸಿಕ್ಕಿಲ್ಲ. ರಾಜ್ಯ ವಿಪತ್ತು ನಿರ್ವಹಣಾ ಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಕರಾವಳಿ ರಕ್ಷಣಾ ಪಡೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತಂಡಗಳು ಆರೇಳು ದೋಣಿಗಳಲ್ಲಿ

ಮಂಗಳೂರು: ಇನ್ನೂ ಪತ್ತೆಯಾಗದ ಮಮ್ತಾಜ್ ಅಲಿ| ಫಲ್ಗುಣಿ ನದಿಯಲ್ಲಿ ತೀವ್ರ ಶೋಧ Read More »

ಹೃದಯಾಘಾತದಿಂದ ತೆಲುಗು ನಟ ರಾಜೇಂದ್ರ ಪ್ರಸಾದ್ ಪುತ್ರಿ ಗಾಯಿತ್ರಿ ನಿಧನ

ಸಮಗ್ರ ನ್ಯೂಸ್: ಟಾಲಿವುಡ್ ಹಿರಿಯ ನಟ ರಾಜೇಂದ್ರ ಪ್ರಸಾದ್ ಅವರ ಪುತ್ರಿ ಗಾಯತ್ರಿ (38) ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಗಾಯಿತ್ರಿ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಹೈದರಾಬಾದ್ ನ AIG ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗಿದೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಹೃದಯಾಘಾತದಿಂದ ತೆಲುಗು ನಟ ರಾಜೇಂದ್ರ ಪ್ರಸಾದ್ ಪುತ್ರಿ ಗಾಯಿತ್ರಿ ನಿಧನ Read More »

ಕಾರು-ಬೈಕ್ ಡಿಕ್ಕಿ;ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ಕಾರು-ಬೈಕ್ ನಡುವೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟ ಘಟನೆ ಅ.05 ರಂದು ಕಡಬದಲ್ಲಿ ನಡೆದಿದೆ. ಮೃತರನ್ನು‌ ಕಡಬ ಹಳೇಸ್ಟೇಷನ್ ನಿವಾಸಿ ಹಸೈನಾರ್ ಎಂದು ಗುರುತಿಸಲಾಗಿದೆ. ಹಸೈನಾರ್ ತನ್ನ ಮನೆಯಿಂದ ಕಡಬ ಕಡೆಗೆ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರೊಂದು ಢಿಕ್ಕಿ ಹೊಡೆದ ದುರ್ಘಟನೆ ಸಂಭವಿಸಿದೆ. ಅಪಘಾತದ ದೃಶ್ಯ ಸ್ಥಳೀಯ ಇಂಡಸ್ಟ್ರೀಸ್ ಒಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ

ಕಾರು-ಬೈಕ್ ಡಿಕ್ಕಿ;ಬೈಕ್ ಸವಾರ ಸಾವು Read More »

ಬೆಳ್ತಂಗಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬರು ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಅ.04 ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ನಡೆದಿದೆ. ಮೃತರನ್ನು ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್ (35) ಎಂದು ಗುರುತಿಸಲಾಗಿದೆ. ಮಿಯಾ‌ರ್ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ ಪ್ರವೀಣ್ ಇವರು ಬೆಳಗ್ಗೆ 10 ಗಂಟೆಗೆ ಮರದ ರೆಂಬೆ ತೆಗೆಯುತಿದ್ದ ವೇಳೆ ಮರದಲ್ಲೇ ಅಸ್ವಸ್ಥಗೊಂಡು ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆತರಲಾಯಿತು, ಆದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು. ಮೃತರು ವಿವಾಹಿತರಾಗಿದ್ದು ಪತ್ನಿ, ಇಬ್ಬರು ಮಕ್ಕಳು

ಬೆಳ್ತಂಗಡಿ: ಮರದಿಂದ ಬಿದ್ದು ವ್ಯಕ್ತಿ ಸಾವು Read More »

ರೇಣುಕಾಸ್ವಾಮಿ ಕೊಲೆ ಪ್ರಕರಣದ 3 ಆರೋಪಿಗಳು ರಿಲೀಸ್

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಹಿನ್ನೆಲೆ ಜಾಮೀನು ಸಿಕ್ಕ ಬಳಿಕವೂ ಬಿಡುಗಡೆಯಾಗದೇ ಇದ್ದ ಮೂವರು ಆರೋಪಿಗಳು ಇಂದು (ಅ.2) ತುಮಕೂರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸೆ.23 ರಂದು ಎ-16 ಆರೋಪಿ ಕೇಶವಮೂರ್ತಿಗೆ ಹೈಕೋಟ್‌ನಿಂದ ಹಾಗೂ ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್‌ಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಕೋರ್ಟ್ 2 ಲಕ್ಷ ರೂ. ಹಣ ಹಾಗೂ ಇಬ್ಬರು ಶೂರಿಟಿದಾರರನ್ನ ಹೊಂದಿಸಲು ಆರೋಪಿಗಳ ಕುಟುಂಬಸ್ಥರ ಬಳಿ ಕೇಳಿದ್ದರು. ಆದರೆ ಜಾಮೀನು ಶೂರಿಟಿಗೂ ಹಣವಿಲ್ಲದೇ ಆರೋಪಿಗಳ ಕುಟುಂಬಸ್ಥರು

ರೇಣುಕಾಸ್ವಾಮಿ ಕೊಲೆ ಪ್ರಕರಣದ 3 ಆರೋಪಿಗಳು ರಿಲೀಸ್ Read More »

ಜಮೀನಿನಲ್ಲಿ ಆಟವಾಡುತ್ತಿದ್ದ ಪುಟ್ಟ ಬಾಲಕಿಯರು ಕೃಷಿ ಹೊಂಡಕ್ಕೆ ಬಿದ್ದು ಸಾವು..!

ಸಮಗ್ರ ನ್ಯೂಸ್:ದಾವಣಗೆರೆಯ ಜಗಳೂರಿನ ಅಸಗೋಡು ಗ್ರಾಮದಲ್ಲಿ ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ್ಧಾರೆ. ಅಲ್ಲಿದ್ದ ಪೋಷಕರು ಮಕ್ಕಳ ರಕ್ಷಣೆಗೆ ಧಾವಿಸಿದ್ದಾರೆ,ಅಷ್ಟರಲ್ಲಾಗಲೇ ಬಾಲಕಿಯರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತ ಬಾಲಕಿಯರನ್ನು ಗಂಗಮ್ಮ (12) ಹಾಗೂ ಕಾವ್ಯ (8) ಎಂದು ಗುರುತಿಸಲಾಗಿದೆ. ಮಕ್ಕಳ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಜಗಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಮೀನಿನಲ್ಲಿ ಆಟವಾಡುತ್ತಿದ್ದ ಪುಟ್ಟ ಬಾಲಕಿಯರು ಕೃಷಿ ಹೊಂಡಕ್ಕೆ ಬಿದ್ದು ಸಾವು..! Read More »