ಕ್ರೈಂ

ಬೆಳ್ತಂಗಡಿ: 7ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ 7ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ (13) ಮೃತ ವಿದ್ಯಾರ್ಥಿ. ಈತ ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯಾಗಿದ್ದು ಮನೆಯ ಕೋಣೆಯಲ್ಲಿ ಫೆಬ್ರವರಿ 18ರಂದು ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: 7ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು Read More »

ಜೆಸಿಬಿ‌ ಹರಿದು ಎರಡು ವರ್ಷದ ಮಗು ಸಾವು

ಸಮಗ್ರ ನ್ಯೂಸ್: ಜೆಸಿಬಿ ಹರಿದು ಆಟವಾಡುತ್ತಿದ್ದ 2 ವರ್ಷದ ಮಗು ದುರ್ಮರಣ ಹೊಂದಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್​ನಲ್ಲಿ ನಡೆದಿದೆ. ಥನವ್ ರೆಡ್ಡಿ ಮೃತ ಮಗು. ಜೆಸಿಬಿ ಚಾಲಕನ ಅತಿವೇಗ, ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ. ಮನೆ ಮುಂದೆ ಥನವ್ ರೆಡ್ಡಿ ಆಟವಾಡುತ್ತಿದ್ದ. ಈ ವೇಳೆ ಆತನ ಮೇಲೆ ಜೆಸಿಬಿ ಹರಿದಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಮಗುವನ್ನು ವೈದೇಹಿ ಆಸ್ಪತ್ರೆಗೆ ಪೋಷಕರು ಕರೆದುಕೊಂಡು ಹೋಗಿದ್ದು, ಆದರೆ ಮಾರ್ಗಮಧ್ಯೆಯೇ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ವೈದೇಹಿ ಆಸ್ಪತ್ರೆಯಲ್ಲಿ ಥನವ್

ಜೆಸಿಬಿ‌ ಹರಿದು ಎರಡು ವರ್ಷದ ಮಗು ಸಾವು Read More »

‘ಅತ್ತೆ ಸಾಯಿಸಲು ಮಾತ್ರೆ ಕೊಡಿ’| ವೈದ್ಯರಿಗೆ ಮೆಸೇಜ್ ಮಾಡಿದ ಸೊಸೆ!!

ಸಮಗ್ರ ನ್ಯೂಸ್: ಸೊಸೆಯೊಬ್ಬಳು ಅತ್ತೆಯನ್ನು ಕೊಲ್ಲಲು ವೈದ್ಯರ ಬಳಿಯೇ ಮಾತ್ರೆ ಕೇಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅತ್ತೆಯನ್ನು ಸಾಯಿಸಬೇಕು ಎಂದು ಬೆಂಗಳೂರಿನ ಡಾಕ್ಟರ್ ಸುನೀಲ್ ಕುಮಾರ್ ಎಂಬುವವರ ಬಳಿ ಸಹಾಯ ಕೇಳಿದ್ದಾಳೆ. ನನ್ನ ಅತ್ತೆ ದಿನ ನನಗೆ ಹಿಂಸೆ ನೀಡುತ್ತಿದ್ದಾರೆ, ಅವರಿಗೆ ತುಂಬಾ ವಯಸ್ಸಾಗಿದೆ ಹೀಗಾಗಿ ಏನಾದ್ರೂ ಹೇಳುತ್ತೀರಾ ಅವರನ್ನು ಹೇಗೆ ಸಾಯಿಸೋದು ಅಂತ ಎಂದು ವೈದ್ಯರಿಗೆ ಮೆಸೇಜ್ ಮಾಡಿದ್ದಾರೆ. ಜೊತೆಗೆ ಒಂದೆರಡು ಮಾತ್ರೆ ತಗೊಂಡ್ರೆ ಸಾಯುತ್ತಾರೆ ಅಲ್ವಾ ಅದು ಹೇಳಿ ಎಂದು ಕೇಳಿಕೊಂಡಿದ್ದಾಳೆ. ಇದಕ್ಕೆ ವೈದ್ಯರು

‘ಅತ್ತೆ ಸಾಯಿಸಲು ಮಾತ್ರೆ ಕೊಡಿ’| ವೈದ್ಯರಿಗೆ ಮೆಸೇಜ್ ಮಾಡಿದ ಸೊಸೆ!! Read More »

ಬೆಳ್ತಂಗಡಿ: ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ| ಮೂವರು ವಿದ್ಯಾರ್ಥಿಗಳು ಗಂಭೀರ

ಸಮಗ್ರ ನ್ಯೂಸ್: ಶಾಲೆಯಲ್ಲಿ ಪ್ರಾರ್ಥನೆ ಮಾಡುತ್ತಿದ್ದ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, 15 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಗ್ರಾಮದಲ್ಲಿ ನಡೆದಿದೆ. ವಿದ್ಯಾರ್ಥಿಗಳು ಪ್ರಾರ್ಥನೆ ಮುಗಿಸಿ ಶಾಲೆಯ ಒಳಗೆ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿವೆ. 15 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರಲ್ಲಿ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳಾದ ಅವಸಿನಾ (6), ಅಫೀಜ್‌ (12), ಶಾಬಿತ್‌ (11), ರಫಾ (7), ನಿಧಾ (13), ಶಾಬೆಲ್‌ (13),

ಬೆಳ್ತಂಗಡಿ: ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ| ಮೂವರು ವಿದ್ಯಾರ್ಥಿಗಳು ಗಂಭೀರ Read More »

ಸ್ಕೀಂ‌ ಹೆಸರಲ್ಲಿ ವಂಚನೆ; ಐವರು ಅರೆಸ್ಟ್

ಸಮಗ್ರ ನ್ಯೂಸ್: ವಂಚನೆ ಮಾಡುವ ಉದ್ದೇಶದಿಂದ ಗ್ರಾಹಕರಿಂದ ಹಣವನ್ನು ಸಂಗ್ರಹಿಸುತ್ತಿದ್ದ ಆರೋಪದಡಿ ಎಸ್‌.ವಿ. ಸ್ಮಾರ್ಟ್‌ ವಿಷನ್‌ ಎಂಬ ಸ್ಕೀಂನ ಮಾಲಕ ಸಹಿತ ಐವರನ್ನು ಮಡಿಕೇರಿ ನಗರ ಪೊಲೀಸರು ಬಂಧಿಸಿದ್ದಾರೆ. ಸ್ಕೀಂ ಮಾಲಕ ಮಂಗಳೂರು ಸುರತ್ಕಲ್‌ ಮೂಲದ ಮಹಮದ್‌ ಅಶ್ರಫ್(37), ಮಡಿಕೇರಿಯ ಮಲ್ಲಿಕಾರ್ಜುನ ನಗರದ ನಿವಾಸಿ ಎಂ.ವೈ.ಸುಲೈಮಾನ್‌(37), ತ್ಯಾಗರಾಜ ಕಾಲನಿಯ ಅಬ್ದುಲ್‌ ಗಫ‌ೂರ್‌(34), ಮೊಹಮದ್‌ ಅಕ್ರಮ್‌ (34) ಹಾಗೂ ಕುಂಬಳಕೇರಿ ನಿವಾಸಿ ಎಚ್‌.ಎನ್‌.ಕಿಶೋರ್‌(41) ಬಂಧಿತರು. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್‌ಪಿ ಕೆ.ರಾಮರಾಜನ್‌, ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ರಾಣಿಪೇಟೆಯಲ್ಲಿ

ಸ್ಕೀಂ‌ ಹೆಸರಲ್ಲಿ ವಂಚನೆ; ಐವರು ಅರೆಸ್ಟ್ Read More »

ಕೊಟ್ಟಿಗೆಹಾರ: ಸಹೋದರನ ಅತ್ತೆಯನ್ನು ಕೊಲೆ ಮಾಡಿ ಶಶಿಧರ್ ಆತ್ಮಹತ್ಯೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ಅತ್ತೆ ಯಮುನಾ ಕುಡಿದ ಮತ್ತಿನಲ್ಲಿದ್ದ ಅಳಿಯನಿಗೆ ಬುದ್ದಿ ಹೇಳಿದ ಕಾರಣಕ್ಕೆ ಅವನ ಸಹೋದರ ಶಶಿಧರ್ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ ಘಟನೆ ನಡೆದಿದೆ. ಕೊಲೆ ಮಾಡಿದ ಬಳಿಕ ಶಶಿಧರ್ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಬಣಕಲ್ ಪೊಲೀಸರು ನಿನ್ನೆ ಮೊದಲು ತನಿಖೆ ಆರಂಭಿಸಿದ್ದರು. ಶಶಿಧರ್ ನನ್ನು ಪತ್ತೆ ಹಚ್ಚಲು ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದರು. ಫೆ.18 ರಂದು ಭಾರತೀಬೈಲು ಕಾಫಿತೋಟದಲ್ಲಿ ಶಶಿಧರ್ ನೇಣು

ಕೊಟ್ಟಿಗೆಹಾರ: ಸಹೋದರನ ಅತ್ತೆಯನ್ನು ಕೊಲೆ ಮಾಡಿ ಶಶಿಧರ್ ಆತ್ಮಹತ್ಯೆ Read More »

ಭದ್ರಾ ನದಿಯಲ್ಲಿ ಈಜಲು ಹೋದ ಯುವಕ ಸಾವು| ಶವಕ್ಕಾಗಿ ಶೋಧ ಮುಂದುವರಿಕೆ

ಸಮಗ್ರ ನ್ಯೂಸ್: ಚಿಕ್ಕಮಗಳೂರಿನ ಎನ್.ಆರ್.ಪುರ ಭದ್ರಾ ನದಿಯಲ್ಲಿ ಈಜಲು ಹೋದ 25 ವರ್ಷದ ಯುವಕ ಜಲಾಲ್ ಸುಳಿಗೆ ಸಿಕ್ಕಿ ಪ್ರಾಣ ಕಳೆದುಕೊಂಡ ಘಟನೆ ಎನ್.ಆರ್.ಪುರ ತಾಲೂಕಿನ ಗಡಿಗೇಶ್ವರದಲ್ಲಿ ನಡೆದಿದೆ. ಬಾಳೆಹೊನ್ನೂರಿನ ಭದ್ರಾ ನದಿಗೆ ಮೂವರು ಸ್ನೇಹಿತರು ಈಜಲು ತೆರಳಿದ್ದರು. ಈ ವೇಳೆ ಜಲಾಲ್ ನದಿಯ ಸುಳಿಗೆ ಸಿಲುಕಿದನು. ಸ್ನೇಹಿತರು ಆತನನ್ನು ರಕ್ಷಿಸಲು ಹರಸಾಹಸ ಪಡಿದರೂ ಸಾಧ್ಯವಾಗಲಿಲ್ಲ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಶವಕ್ಕಾಗಿ ತೀವ್ರ ಶೋಧ ನಡೆಸಿದರು. ಆದರೆ

ಭದ್ರಾ ನದಿಯಲ್ಲಿ ಈಜಲು ಹೋದ ಯುವಕ ಸಾವು| ಶವಕ್ಕಾಗಿ ಶೋಧ ಮುಂದುವರಿಕೆ Read More »

ವಿರಾಜಪೇಟೆ: 14 ದಿನದ ಬಾಣಂತಿ ನೇಣಿಗೆ ಶರಣು

ಸಮಗ್ರ ನ್ಯೂಸ್: 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಬಾಣಂತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತಹ ಆಘಾತಕಾರಿ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಟ್ಟೋಳಿಯಲ್ಲಿ ನಡೆದಿದೆ. ವಿರಾಜಪೇಟೆ ತಾಲೂಕಿನ ಕರಡ ನಿವಾಸಿ ದಿವಂಗತ ಕಟ್ಟಿ ಬಿದ್ದಪ್ಪ-ಶೀಲಾ ದಂಪತಿ ಪುತ್ರಿ ಕೊಟ್ಟೋಳಿ ಗ್ರಾಮದ ನಿವಾಸಿ, ಎಂಎಂ ದಿನೇಶ್ ಎಂಬುವವರ ಪತ್ನಿ ಕಾವೇರಮ್ಮ (24) ನೇಣಿಗೆ ಶರಣಾದ ಬಾಣಂತಿ. ಕಾವೇರಮ್ಮ ಹಾಗೂ ದಿನೇಶ್ ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದರು. 14 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದಳು.

ವಿರಾಜಪೇಟೆ: 14 ದಿನದ ಬಾಣಂತಿ ನೇಣಿಗೆ ಶರಣು Read More »

ಬೆಳ್ತಂಗಡಿ: ಊರಿಗೆ ಮರಳಲು ತಯಾರಾಗಿದ್ದ ವ್ಯಕ್ತಿ ವಿದೇಶದಲ್ಲಿ ಸಾವು

ಸಮಗ್ರ ನ್ಯೂಸ್: ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಊರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತನ್ನ ಕಾರನ್ನು ತರಲು ಹೇಳಿ ಜಿದ್ದಾದಿಂದ ರಾತ್ರಿ 10:30 ರ ವಿಮಾನದಲ್ಲಿ ಹೊರಟು ಬೆಳಗಿನ ಜಾವ ಮಂಗಳೂರು ತಲುಪುವವರಿದ್ದರು. ಜಿದ್ದಾ ವಿಮಾನ ನಿಲ್ದಾಣಕ್ಕೆ ಕಾರಲ್ಲಿ ಬಂದು ತಲುಪಿದ್ದಂತೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ತಕ್ಷಣ ಅವರನ್ನು

ಬೆಳ್ತಂಗಡಿ: ಊರಿಗೆ ಮರಳಲು ತಯಾರಾಗಿದ್ದ ವ್ಯಕ್ತಿ ವಿದೇಶದಲ್ಲಿ ಸಾವು Read More »

ಪದ್ಮಶ್ರೀ ಪುರಸ್ಕೃತೆ, ಜಾನಪದ ಗಾನಕೋಗಿಲೆ ಸುಕ್ರಿ‌ ಬೊಮ್ಮಗೌಡ ವಿಧಿವಶ

ಸಮಗ್ರ ನ್ಯೂಸ್: ಪದ್ಮಶ್ರೀ ಮತ್ತು ನಾಡೋಜಾ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಜನಪದ ಕೋಗಿಲೆ ಎಂದೇ ಹೆಸರು ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನ ಬಡಿಗೇರಿಯ ಸುಕ್ರಿ ಬೊಮ್ಮಗೌಡ ವಯೋಸಹಜ ಕಾಯಿಲೆಗಳಿಂದಾಗಿ ವಿಧಿವಶರಾಗಿದ್ದಾರೆ. ಹಾಲಕ್ಕಿ ಬುಡಕಟ್ಟು ಜನಾಂಗದಲ್ಲಿ ಹುಟ್ಟಿದ ಇವರು ವಿದ್ಯಾಭ್ಯಾಸ ಮಾಡದಿದ್ದರೂ ಹಾಲಕ್ಕಿ ಜನಾಂಗದ ಜನಪದ ಹಾಡುಗಳನ್ನು ಹಾಡುವ ಮೂಲಕ ಹಳ್ಳಿ ಸೊಗಡನ್ನು ದಿಲ್ಲಿಗೆ ಕೊಂಡೊಯ್ದಿದ್ದರು. ಇದಲ್ಲದೇ ಮದ್ಯ ಮುಕ್ತ ಗ್ರಾಮ ಮಾಡುವ ಹೋರಾಟದಲ್ಲಿ

ಪದ್ಮಶ್ರೀ ಪುರಸ್ಕೃತೆ, ಜಾನಪದ ಗಾನಕೋಗಿಲೆ ಸುಕ್ರಿ‌ ಬೊಮ್ಮಗೌಡ ವಿಧಿವಶ Read More »