ಕ್ರೈಂ

ಮಂಗಳೂರು: ಖಾಸಗಿ ಆಸ್ಪತ್ರೆಯ ಪಿಜಿ ವೈದ್ಯ ಕುಡಿದು ಕರ್ತವ್ಯಕ್ಕೆ ಹಾಜರ್| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಕೆಲಸದಲ್ಲಿರುವ ಪಿಜಿ ಯುವ ವೈದ್ಯ ರಾತ್ರಿ ವೇಳೆ ಕುಡಿದು ಕರ್ತವ್ಯಕ್ಕೆ ಹಾಜರಾದ ಘಟನೆ ಸೆ.22 ರಂದು ನಡೆದಿದೆ. ರಾತ್ರಿ ವೇಳೆ ಮದ್ಯದ ಅಮಲಿನಲ್ಲಿದ್ದ ವೈದ್ಯನ ವಿಡಿಯೋ ಮಾಡಿ ರೋಗಿಗಳ ಸಂಬಂಧಿಕರು ತರಾಟೆಗೆತ್ತಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಯುವ ವೈದ್ಯ ಕುಡಿದು ಎಲ್ಲಿಯೋ ಬಿದ್ದು ಬಟ್ಟೆಯೆಲ್ಲಾ ಸಂಪೂರ್ಣ ಕೆಸರು ಮಣ್ಣು ಮೆತ್ತಿಕೊಂಡಿದೆ. ಅದೇ ರೀತಿಯಲ್ಲಿ ಡಾಕ್ಟರ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ವೇಳೆ ಒಳಗಿನ ಮೂಲೆಯಲ್ಲಿ ಕುಳಿತಿದ್ದ ವ್ಯಕ್ತಿಯನ್ನು ರೋಗಿಯ ಸಂಬಂಧಿಕರು […]

ಮಂಗಳೂರು: ಖಾಸಗಿ ಆಸ್ಪತ್ರೆಯ ಪಿಜಿ ವೈದ್ಯ ಕುಡಿದು ಕರ್ತವ್ಯಕ್ಕೆ ಹಾಜರ್| ವಿಡಿಯೋ ವೈರಲ್ Read More »

ಭಯಾನಕ ಕೃತ್ಯಕ್ಕೆ ಬೆಚ್ಚಿ ಬಿದ್ದ ಬೆಂಗಳೂರು| ಪ್ರೇಯಸಿಯ ಕೊಂದು 20 ತುಂಡು ಮಾಡಿ ಪ್ರಿಡ್ಜ್ ನಲ್ಲಿ ಇರಿಸಿ ಪರಾರಿಯಾದ ಪ್ರಿಯಕರ

ಸಮಗ್ರ ನ್ಯೂಸ್: ದೆಹಲಿಯ ಶ್ರದ್ಧಾ ವಾಕರ್‌ ಹತ್ಯೆ ಮಾದರಿಯಲ್ಲೇ ಪ್ರಿಯಕರನೊಬ್ಬ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು 20 ತುಂಡು ಮಾಡಿ, ಫ್ರಿಡ್ಜ್‌ನಲ್ಲಿ ಶೇಖರಣೆ ಮಾಡಿಟ್ಟ ಆಘಾತಕಾರಿ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ನಡೆದಿದೆ. ವೀರಣ್ಣ ಆಶ್ರಮದಲ್ಲಿ ಮೂರನೇ ಅಂತಸ್ತಿನಲ್ಲಿ ಯುವತಿಯನ್ನು ಕೊಲೆ ಮಾಡಿ, ನಂತರ ಆಕೆಯ ದೇಹವನ್ನು 20 ತುಂಡುಗಳನ್ನು ಮಾಡಿ ಫ್ರಿಡ್ಜ್‌ನಲ್ಲಿ ಶೇಖರಣೆ ಮಾಡಿಟ್ಟಿದ್ದಾನೆ. ಕೊಲೆಯಾದ ಯುವತಿ ಅಂತರರಾಜ್ಯದವರಾಗಿದ್ದಾರೆ ಎಂದು ತಿಳಿದುಬಂದಿದೆ. 15ರಿಂದ 20ದಿನಗಳ ಹಿಂದೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವೈಯಾಲಿಕಾವಲ್‌ ಪೊಲೀಸರು

ಭಯಾನಕ ಕೃತ್ಯಕ್ಕೆ ಬೆಚ್ಚಿ ಬಿದ್ದ ಬೆಂಗಳೂರು| ಪ್ರೇಯಸಿಯ ಕೊಂದು 20 ತುಂಡು ಮಾಡಿ ಪ್ರಿಡ್ಜ್ ನಲ್ಲಿ ಇರಿಸಿ ಪರಾರಿಯಾದ ಪ್ರಿಯಕರ Read More »

ಪೋಕ್ಸೋ ಪ್ರಕರಣ ಸುಳ್ಳೆಂದು ಬಿ ರಿಪೋರ್ಟ್ ನೀಡಿದ ಪೊಲೀಸರು| ಪ್ರಕರಣಕ್ಕೆ ಮರುಜೀವ ನೀಡಿದ ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಬೈಂದೂರು ಠಾಣಾ ವ್ಯಾಪ್ತಿಯ ಬಾಲಕನೊಬ್ಬ ಸ್ಥಳೀಯಮಸೀದಿಗೆ ನಮಾಜ್‌ಗೆ ತೆರಳಿದ ಸಂದರ್ಭದಲ್ಲಿ ಆತನಿಗೆ ಲೈಂಗಿಕ ಕಿರುಕುಳ ನೀಡುವಉದ್ದೇಶದಿಂದ ಆತನಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವರದಿಯಾಗಿದ್ದ ಪ್ರಕರಣ ಸುಳ್ಳು ಎಂದು ಪೊಲೀಸರು ಬಿ ರಿಪೋರ್ಟ್ ನೀಡಿದ್ದು, ಸದ್ರಿ ಪ್ರಕರಣಕ್ಕೆ ಜಿಲ್ಲಾ ಪೋಕ್ಸೊ ನ್ಯಾಯಾಲಯ ಮರುಜೀವ ನೀಡಿದೆ. ಪ್ರಕರಣದಲ್ಲಿ ಆರೋಪಿಯಾದ ಫೈಜಲ್ ಬ್ಯಾರಿಮತ್ತು ಆ ಬಗ್ಗೆ ಬೇರೆಯವರಿಗೆ ವಿಷಯ ತಿಳಿಸದಂತೆ ಕೊಲೆ ಬೆದರಿಕೆ ಹಾಕಿರುವ ಆರೋಪಿಗಳಾದಆಖಿಲಾ ಮತ್ತು ಮೊಹಾಜಮ್‌ರವರ ಮೇಲೆ ಬೈಂದೂರು ಠಾಣಾ ವ್ಯಾಪ್ತಿಯಲ್ಲಿ

ಪೋಕ್ಸೋ ಪ್ರಕರಣ ಸುಳ್ಳೆಂದು ಬಿ ರಿಪೋರ್ಟ್ ನೀಡಿದ ಪೊಲೀಸರು| ಪ್ರಕರಣಕ್ಕೆ ಮರುಜೀವ ನೀಡಿದ ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯ Read More »

ಜಾತಿನಿಂದನೆ ಪ್ರಕರಣ| ಶಾಸಕ‌ ಮುನಿರತ್ನಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಮೇಲಿನ ಆದೇಶ ನೀಡಿದ್ದಾರೆ. 2 ಲಕ್ಷ ಬಾಂಡ್, ಇಬ್ಬರ ಶೂರಿಟಿ, ಸಾಕ್ಷಿನಾಶ ಮಾಡಬಾರದು ಹಾಗೂ ತನಿಖೆಗೆ ಸಹಕರಿಸಲು ಷರತ್ತು ವಿಧಿಸಿದೆ.

ಜಾತಿನಿಂದನೆ ಪ್ರಕರಣ| ಶಾಸಕ‌ ಮುನಿರತ್ನಗೆ ಜಾಮೀನು ಮಂಜೂರು Read More »

ಲೈಂಗಿಕ ಕಿರುಕುಳ ಕೇಸ್ ಆರೋಪದಲ್ಲಿ ಕೊರಿಯೋಗ್ರಫರ್ ಜಾನಿ ಮಾಸ್ಟರ್‌ ಅರೆಸ್ಟ್

ಸಮಗ್ರ ನ್ಯೂಸ್: ಲೈಂಗಿಕ ಕಿರುಕುಳ ಕೇಸ್ ಆರೋಪಿ ತಮಿಳು ಚಿತ್ರರಂಗದಲ್ಲಿ ಹೆಸರುವಾಸಿಯಾದ ಜಾನಿ ಮಾಸ್ಟರ್‌ ಬಂಧನವಾಗಿದೆ. ಸಹ ಕೊರಿಯೋಗ್ರಾಫರ್‌ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಜಾನಿ ಮಾಸ್ಟರ್‌ನನ್ನು ಬೆಂಗಳೂರಿನಲ್ಲಿ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅವರ ಜೊತೆ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು ರಾಯದುರ್ಗ ಪೊಲೀಸ್‌ ಸ್ಟೇಷನ್‌ನಲ್ಲಿ ದೂರು ದಾಖಲಿಸಿದ್ದಾರೆ. ಆತ ತನ್ನ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ

ಲೈಂಗಿಕ ಕಿರುಕುಳ ಕೇಸ್ ಆರೋಪದಲ್ಲಿ ಕೊರಿಯೋಗ್ರಫರ್ ಜಾನಿ ಮಾಸ್ಟರ್‌ ಅರೆಸ್ಟ್ Read More »

ಅನಾರೋಗ್ಯದಿಂದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ

ಸಮಗ್ರ ನ್ಯೂಸ್: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ ಹೊಂದಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಸೆ.19ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಶೇ. 40 ಪರ್ಸೆಂಟೆಜ್ ಆರೋಪ ಮಾಡಿದ್ದ ಕೆಂಪಣ್ಣ ಅವರು ಗುತ್ತಿಗೆದಾರರ ಪರ ಹೋರಾಟ ಮಾಡಿದ್ದರು.

ಅನಾರೋಗ್ಯದಿಂದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ Read More »

ಮಂಗಳೂರು: ಸಂಬಂಧಿಯ ಪ್ರಾಣ ಉಳಿಸಲು ಲಿವರ್ ದಾನ ಮಾಡಿ ಸಾವನ್ನಪ್ಪಿದ ಉಪನ್ಯಾಸಕಿ

ಸಮಗ್ರ ನ್ಯೂಸ್: ತನ್ನ ಸಂಬಂಧಿಯೋರ್ವರಿಗೆ ಲಿವರ್‌ (ಯಕೃತ್ತು) ದಾನ ಮಾಡಿದ್ದ ನಗರದ ಉಪನ್ಯಾಸಕಿ ಅರ್ಚನಾ ಕಾಮತ್‌ (33) ಅವರು ದಿಢೀರ್‌ ಅಸ್ಪಸ್ಥಗೊಂಡು ಮೃತಪಟ್ಟಿದ್ದಾರೆ. ತನ್ನ ಪತಿಯ ಸಂಬಂಧಿ ಮಹಿಳೆಯೋರ್ವರಿಗೆ ಲಿವರ್‌ ಕಸಿ ಮಾಡಬೇಕಾಗಿತ್ತು. ಹಲವರನ್ನು ತಪಾಸಣೆಗೆ ಒಳಪಡಿಸಿದ್ದರೂ ಹೊಂದಾಣಿಕೆಯಾಗಿರಲಿಲ್ಲ. ಅರ್ಚನಾ ಅವರ ರಕ್ತದ ಗುಂಪು ಹೊಂದಾಣಿಕೆಯಾಗಿತ್ತು ಹಾಗೂ ಅವರು ಲಿವರ್‌ ದಾನಕ್ಕೆ ಒಪ್ಪಿದ್ದರು. ಅದರಂತೆ 12 ದಿನಗಳ ಹಿಂದೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಅರ್ಚನಾ ಅವರ ಲಿವರ್‌ನ ಸ್ವಲ್ಪ ಭಾಗವನ್ನು ಮಹಿಳೆಗೆ ಕಸಿ ಮಾಡಲಾಗಿತ್ತು. ಆರೋಗ್ಯದಿಂದಿದ್ದ ಅರ್ಚನಾ ಆಸ್ಪತ್ರೆಯಿಂದ

ಮಂಗಳೂರು: ಸಂಬಂಧಿಯ ಪ್ರಾಣ ಉಳಿಸಲು ಲಿವರ್ ದಾನ ಮಾಡಿ ಸಾವನ್ನಪ್ಪಿದ ಉಪನ್ಯಾಸಕಿ Read More »

ಪ್ರಚೋದನಕಾರಿ ಪೋಸ್ಟ್ ಬಳಕೆ ಹಿನ್ನೆಲೆ| ಶರಣ್ ಪಂಪ್ ವೆಲ್, ಪುನೀತ್ ಅತ್ತಾವರ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಜಾಲತಾಣಗಳಲ್ಲಿ ಕೋಮು ಸೌಹಾರ್ಧತೆ ಕದಡುವಂತಹ ಪೋಸ್ಟ್ ಹಾಕಿದ‌ ಶರಣ್ ಪಂಪವೆಲ್ ಹಾಗೂ ಪುನೀತ್ ಅತ್ತಾವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಶರಣ್ ಪಂಪ್ ವೇಲ್ ಹಾಗೂ ಪುನೀತ್ ಅತ್ತಾವರ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿ, ಕೋಮು ಗಲಭೆಗೆ ಪ್ರಚೋದನೆ ನೀಡುವಂತೆ ಮಾಡಿದ್ದರು. ಅಲ್ಲದೇ ಮುಸ್ಲೀಂ ಮುಖಂಡರೊಬ್ಬರ ಜೊತೆಗೆ ಮಾತನಾಡಿದ್ದಂತ ಆಡಿಯೋವೊಂದನ್ನು ಹಾಕಿ, ವೈರಲ್ ಮಾಡಿದ್ದರು. ಈ ಹಿನ್ನಲೆಯಲ್ಲಿ ಮಂಗಳೂರಿನ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಶರಣ್ ಪಂಪ್ ವೇಲ್, ಪುನೀತ್ ಅತ್ತಾವರ

ಪ್ರಚೋದನಕಾರಿ ಪೋಸ್ಟ್ ಬಳಕೆ ಹಿನ್ನೆಲೆ| ಶರಣ್ ಪಂಪ್ ವೆಲ್, ಪುನೀತ್ ಅತ್ತಾವರ ವಿರುದ್ಧ ಎಫ್ಐಆರ್ Read More »

ಮಂಗಳೂರು: ಮಸೀದಿ ಮೇಲೆ‌ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಸಮಗ್ರ ನ್ಯೂಸ್: ಮಂಗಳೂರಿನ ಕಾಟಿಪಳ್ಳದ ಮಸೀದಿಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣದಿಂದ ಕೂಡಿರುವುದಾಗಿ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿಯಲ್ಲಿರುವ ಕಾಟಿಪಳ್ಳದ 3ನೇ ಬ್ಲಾಕ್ ನಲ್ಲಿರುವ ಬದ್ರಿಯಾ ಮಸೀದಿಯ ಮೇಲೆ ಕಿಡಿಗೇಡಿಗಳು ನಿನ್ನೆ ರಾತ್ರಿ 10.30ರ ಸುಮಾರಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಕಿಡಿಗೇಡಿಗಳ ಕಲ್ಲೆಸೆತದಿಂದ ಬದ್ರಿಯಾ ಮಸೀದಿಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಈ ಕೃತ್ಯವನ್ನು ಎರಡು ಬೈಕ್ ನಲ್ಲಿ

ಮಂಗಳೂರು: ಮಸೀದಿ ಮೇಲೆ‌ ಕಿಡಿಗೇಡಿಗಳಿಂದ ಕಲ್ಲು ತೂರಾಟ Read More »

ಜಾತಿ ನಿಂದನೆ ಹಾಗೂ ಜೀವಬೆದರಿಕೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಬಂಧನ..!

ಸಮಗ್ರ ನ್ಯೂಸ್: ಗುತ್ತಿಗೆದಾರನಿಗೆ ಜಾತಿ ನಿಂದನೆ ಹಾಗೂ ಜೀವಬೆದರಿಕೆ ಕೇಸ್ ನಲ್ಲಿ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಾಗಿತ್ತು. ಇತ್ತ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಶಾಸಕ ಮುನಿರತ್ನರನ್ನು ಕೋಲಾರ ಜಿಲ್ಲೆಯ ನಂಗಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತವರು ಜಿಲ್ಲೆಯಾದ ಆಂಧ್ರಪ್ರದೇಶದ ಚಿತ್ತೂರಿಗೆ ಪಲಾಯಾನ‌ ಮಾಡುವ ವೇಳೆ ಮುನಿರತ್ನರನ್ನು ಅರೆಸ್ಟ್‌ ಮಾಡಲಾಗಿದೆ. ಗುತ್ತಿಗೆದಾರ ಚೆಲುವರಾಜು ಸಿಎಂ ಸಿದ್ದರಾಮಯ್ಯಗೆ ಮನವಿ ಕೊಟ್ಟ ಒಂದೇ ಗಂಟೆಯಲ್ಲಿ ಪೊಲೀಸರು ಮುನಿರತ್ನರನ್ನು ವಶಕ್ಕೆ ಪಡೆದಿದ್ದಾರೆ. ಮುನಿರತ್ನರನ್ನು ವಶಕ್ಕೆ ಪಡೆದು ಕೋಲಾರ ಮಾರ್ಗವಾಗಿ ಬೆಂಗಳೂರಿಗೆ

ಜಾತಿ ನಿಂದನೆ ಹಾಗೂ ಜೀವಬೆದರಿಕೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಬಂಧನ..! Read More »