ಕ್ರೈಂ

ಸಂಪಾಜೆ: ಡಿವೈಡರ್ ಗೆ ಗುದ್ದಿ ಬೈಕ್ ಪಲ್ಟಿಯಾಗಿರುವ ಶಂಕೆ| ಬೈಕ್ ಸವಾರರಿಬ್ಬರು ದುರ್ಮರಣ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸಂಪಾಜೆ ಸಮೀಪದ ಕೊಯನಾಡು ಎಂಬಲ್ಲಿ ಬೈಕ್ ಭೀಕರವಾಗಿ ಅಪಘಾತಗೊಂಡಿದ್ದು, ದುರ್ಘಟನೆಯಲ್ಲಿ ಬೈಕ್ ಸವಾರ‌ರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಘಟನೆ ನಡೆದಿದೆ ಎಂದು ಶಂಕಿಸಲಾಗಿದ್ದು, ಇಂದು (ಜೂ.5) ಮುಂಜಾನೆ ಸ್ಥಳೀಯರ ಗಮನಕ್ಕೆ ಬಂದಿದೆ. ರಾಯಲ್ ಎನ್ ಫೀಲ್ಡ್ ಬೈಕ್ ಮತ್ತು ಇಬ್ಬರ ಮೃತ ದೇಹ ಚರಂಡಿಯಲ್ಲಿ ಪತ್ತೆಯಾಗಿದೆ. ರಾತ್ರಿ ವೇಗದಿಂದ ಬಂದು ಬೈಕ್ ಡಿವೈಡರ್ ಗೆ ಗುದ್ದಿರಬಹುದು ಎಂದು ಶಂಕಿಸಲಾಗಿದೆ.

ಸಂಪಾಜೆ: ಡಿವೈಡರ್ ಗೆ ಗುದ್ದಿ ಬೈಕ್ ಪಲ್ಟಿಯಾಗಿರುವ ಶಂಕೆ| ಬೈಕ್ ಸವಾರರಿಬ್ಬರು ದುರ್ಮರಣ Read More »

ಕುಂದಾಪುರ: ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಗೆ ಕಡಿದು ನರ್ತಿಸಿದ ಪತಿ| ವಿಕೃತಿ ಮೆರೆದಾತನ ಬಂಧಿಸಲು ಅಶ್ರುವಾಯು ಸಿಡಿಸಿದ ಪೊಲೀಸರು

ಸಮಗ್ರ ನ್ಯೂಸ್: ಪತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಪತ್ನಿಯ ಕುತ್ತಿಗೆಗೆ ಕಡಿದು ಕೈಯಲ್ಲಿ ಕತ್ತಿ ಹಿಡಿದು ನರ್ತಿಸಿ ವಿಚಿತ್ರವಾಗಿ ವರ್ತಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಸದ್ಯ ಗಂಭೀರ ಗಾಯಗೊಂಡಿರುವ ಪತ್ನಿಯನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರಣಾಂತಿಕವಾಗಿ ಹಲ್ಲೆಗೊಳಗಾದವರನ್ನು ಅನಿತಾ (38) ಎಂದು ಗುರುತಿಸಲಾಗಿದೆ. ಅವರ ಪತಿ, ಆರೋಪಿ ಲಕ್ಷ್ಮಣ ಯಾನೆ ರಮೇಶ್‌ನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೊರಬ ತಾಲೂಕು ಮೂಲದ ಲಕ್ಷ್ಮಣ ಮತ್ತು ಅನಿತಾ ದಂಪತಿ ನಾಲ್ಕು ತಿಂಗಳ

ಕುಂದಾಪುರ: ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಗೆ ಕಡಿದು ನರ್ತಿಸಿದ ಪತಿ| ವಿಕೃತಿ ಮೆರೆದಾತನ ಬಂಧಿಸಲು ಅಶ್ರುವಾಯು ಸಿಡಿಸಿದ ಪೊಲೀಸರು Read More »

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಗಲಭೆಗಳಲ್ಲಿ ಭಾಗಿಯಾಗಿಲ್ಲವೆಂದು 13 ಮಂದಿ‌ಯಿಂದ ಕಲ್ಕುಡ ದೇವಸ್ಥಾನದಲ್ಲಿ ಪ್ರಾರ್ಥನೆ

ಸಮಗ್ರ ನ್ಯೂಸ್: ಎರಡು ವರ್ಷದ ಹಿಂದೆ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆಯಾದ ಅನಂತರದ ಯಾವುದೇ ಗಲಭೆಗಳಲ್ಲಿ ನಾವು ಭಾಗಿಯಾಗಿಲ್ಲ. ನಮ್ಮ ಮೇಲೆ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು 13 ಮಂದಿ ಯುವಕರು ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ಜು. 22ರಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ನಂದಕುಮಾರ್‌, ಕಮಲಾಕ್ಷ, ಅರುಣ್‌ ರೈ, ಪದ್ಮನಾಭ ತಡಗಜೆ, ಪ್ರಶಾಂತ್‌, ಆನಂದ ಯು., ಧರ್ಮಪಾಲ, ಚಿದಾನಂದ ಬಾಳಿಲ, ಹರೀಶ್‌ ಬಾಳಿಲ, ಡಿಪಿನ್‌ ಎಡಮಂಗಲ, ಶಿವಾನಂದ, ಹರ್ಷಿತ್‌, ನಿತೀಶ್‌ ಕೆ. ಅವರ ಮೇಲೆ ಕೇಸು ದಾಖಲಿಸಲಾಗಿತ್ತು.

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಗಲಭೆಗಳಲ್ಲಿ ಭಾಗಿಯಾಗಿಲ್ಲವೆಂದು 13 ಮಂದಿ‌ಯಿಂದ ಕಲ್ಕುಡ ದೇವಸ್ಥಾನದಲ್ಲಿ ಪ್ರಾರ್ಥನೆ Read More »

ಬೆಂಗಳೂರು: ಪಿಜಿಯೊಂದರಲ್ಲಿ ಯುವತಿಯ ಕತ್ತು ಕೊಯ್ದು ಬರ್ಬರ ಕೊಲೆ

ಸಮಗ್ರ ನ್ಯೂಸ್: ಬೆಂಗಳೂರಿನ ಕೋರಮಂಗಲದ ವಿಆರ್ ಲೇಔಟ್ ನ ಪಿಜಿಯೊಂದರಲ್ಲಿ ಯುವತಿಯ ಕತ್ತು ಕೊಯ್ದು ಬರ್ಬರ ಕೊಲೆ ಮಾಡಲಾಗಿದೆ. ಬಿಹಾರ ಮೂಲದ ಕೃತಿ ಕುಮಾರಿ‌(24) ಕೊಲೆಯಾದ ಯುವತಿ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕೃತಿ ಕುಮಾರಿ‌ಯನ್ನು ರಾತ್ರಿ ಸುಮಾರು 11.10 ರಿಂದ 11.30ರ ನಡುವೆ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ ಯುವಕನೋರ್ವ ಚಾಕು ಹಿಡಿದುಕೊಂಡು ಯುವತಿ ಇದ್ದ ಲೇಡಿಸ್ ಪಿಜಿಯೊಳಗೆ ನುಗ್ಗಿದ್ದು 3ನೇ ಮಹಡಿಯಲ್ಲಿರುವ ಕೊಠಡಿ ಬಳಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಕೃತಿ ಕುಮಾರಿ‌ ಕತ್ತು ಕೊಯ್ದು

ಬೆಂಗಳೂರು: ಪಿಜಿಯೊಂದರಲ್ಲಿ ಯುವತಿಯ ಕತ್ತು ಕೊಯ್ದು ಬರ್ಬರ ಕೊಲೆ Read More »

ಕನಕಪುರ: ಮಹಿಳೆಯರು ಸೇರಿದಂತೆ ಏಳು ಜನರ ಮೇಲೆ‌ ಮಾರಕಾಸ್ತ್ರಗಳಿಂದ ಹಲ್ಲೆ

ಸಮಗ್ರ ನ್ಯೂಸ್: ಮಾರಕಾಸ್ತ್ರಗಳಿಂದ ಮಹಿಳೆಯರು ಸೇರಿದಂತೆ‌ 7 ಜನರ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದ ಎನ್.ಕೆ.ಕಾಲೋನಿಯಲ್ಲಿ ನಡೆದಿದೆ. ಗಡಿಪಾರು ರೌಡಿಶೀಟರ್ ಹರ್ಷ ಗ್ಯಾಂಗ್​ನಿಂದ ಕೃತ್ಯ ಆರೋಪ ಮಾಡಲಾಗಿದೆ. ದಾರಿಗೆ ಅಡ್ಡವಾಗಿ ನಿಂತಿದ್ದಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದೆ. ಘಟನೆ ಸಂಬಂಧ ಕೆಲವರನ್ನ ವಶಕ್ಕೆ ಪಡೆಯಲಾಗಿದ್ದು, ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಗಲಾಟೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷನ ಕೈ ಕಟ್ ಆಗಿದೆ. ಘಟನಾ ಸ್ಥಳಕ್ಕೆ ರಾಮನಗರ

ಕನಕಪುರ: ಮಹಿಳೆಯರು ಸೇರಿದಂತೆ ಏಳು ಜನರ ಮೇಲೆ‌ ಮಾರಕಾಸ್ತ್ರಗಳಿಂದ ಹಲ್ಲೆ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ಈ ಭಯಾನಕ ಕೃತ್ಯ ಐಫೋನ್ ನಲ್ಲಿ ಸೆರೆ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಕೊಲೆ ಮಾಡಿದ ಆರೋಪಿಗಳು ಹಲ್ಲೆ ಮಾಡಿದ ಬಳಿಕ ಐ ಫೋನ್‌ನಲ್ಲಿ ರೆಕಾರ್ಡ್‌ ಕೂಡ ಮಾಡಿರುವುದು ತಿಳಿದು ಬಂದಿದೆ. ಹಲ್ಲೆ ಬಳಿಕ ಹೊಡೆದ ಜಾಗದಲ್ಲಿ ರೇಣುಕಾಸ್ವಾಮಿ ಕುಸಿದು ಬಿದ್ದಿದ್ದರಂತೆ. ಸ್ಯಾಕ್ಷಿ ನಾಶ ಮಾಡಬೇಕು ಎಂದು ಪ್ಲ್ಯಾನ್‌ ಕೂಡ ಆಗಿತ್ತು. ಅದರಲ್ಲಿಯೇ ಒಬ್ಬ ಆರೋಪಿ ಹಲ್ಲೆ ನಡೆದ ಬಳಿಕ ಐಫೋನ್‌ನಲ್ಲಿ ರೆಕಾರ್ಡ್‌ ಮಾಡಿದ್ದಾರಂತೆ. ಐವರು ಆರೋಪಿಗಳಿಗೆ ಸಿಮ್ ಕಾರ್ಡ್ ಕೊಟ್ಟಿದ್ದವರ ವಿಚಾರಣೆಯನ್ನು ಕಾಮಾಕ್ಷಿಪಾಳ್ಯ ಪೊಲೀಸರು

ರೇಣುಕಾಸ್ವಾಮಿ ಕೊಲೆ ಪ್ರಕರಣ| ಈ ಭಯಾನಕ ಕೃತ್ಯ ಐಫೋನ್ ನಲ್ಲಿ ಸೆರೆ Read More »

ಕನ್ನಡ ಕಿರುತೆರೆ ನಿರ್ದೇಶಕ‌ ವಿನೋದ್ ದೊಂಡಾಲೆ‌ ಆತ್ಮಹತ್ಯೆ

ಸಮಗ್ರ ನ್ಯೂಸ್:;ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ನಾಗರಬಾವಿಯಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಸಾವಿಗೀಡಾಗಿದ್ದಾರೆ. ಅತಿಥಿ, ಬೇರು, ತುತ್ತೂರಿ, ವಿಮುಕ್ತಿ ಸೇರಿದಂತೆ ಹಲವು ಚಿತ್ರಗಳಲ್ಲಿ ವಿನೋದ್ ಅವರ ಕೆಲಸ ಕಾಣಬಹುದು. ಕರಿಮಣಿ,‌ ಶಾಂತಂ ಪಾಪಂ ಸೇರಿದಂತೆ ಅನೇಕ ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದಾರೆ. ನಿನಾಸಂ ಸತೀಶ್ ನಟನೆಯ ‘ಅಶೋಕ ಬ್ಲೇಡ್’ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಇನ್ನೇನು ಮುಂದಿನ ವಾರದಿಂದ ಸಿನಿಮಾದ ಚಿತ್ರೀಕರಣ ಶುರು ಮಾಡಬೇಕಿತ್ತು. ಅಷ್ಟೊರಳಗೆ ಈ

ಕನ್ನಡ ಕಿರುತೆರೆ ನಿರ್ದೇಶಕ‌ ವಿನೋದ್ ದೊಂಡಾಲೆ‌ ಆತ್ಮಹತ್ಯೆ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ಅಶ್ಲೀಲ ಮೆಸೇಜ್ ಗಳ‌ ಡಾಟಾ ಸಂಗ್ರಹಿಸಿದ ತನಿಖಾ ತಂಡ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಎಸ್‌ಐಟಿ ಪೊಲೀಸರು, ಇದೀಗ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ತನ್ನ ಮೊಬೈಲ್ ನಿಂದ ಕಳುಹಿಸಿದ್ದಂತ ಅಶ್ಲೀಲ ಮೆಸೇಜ್ ಗಳ ಡೇಟಾವನ್ನು ಸಂಗ್ರಹಿಸಿರುವುದಾಗಿ ತಿಳಿದು ಬಂದಿದೆ. ಮೃತದೇಹ ಪತ್ತೆಯಾದ ನಂತ್ರ, ರೇಣುಕಾಸ್ವಾಮಿ ಕೊಲೆ ಹಿಂದಿನ ಅಸಲಿ ಕಾರಣ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದದ್ದು ಎಂಬುದಾಗಿ ಪೊಲೀಸರಿಗೆ ತಿಳಿದು ಬಂದಿತ್ತು. ಹೀಗಾಗಿ ಆತನ ಮೊಬೈಲ್ ಸಂಖ್ಯೆಯ ಮೂಲಕ ಆತ ಬಳಸುತ್ತಿದ್ದ ಸಾಮಾಜಿಕ ಜಾಲತಾಣಗಳಲ್ಲಿನ ಡೇಟಾ ಮಾಹಿತಿ ಸಂಗ್ರಹಿಸೋದಕ್ಕೆ ಎಸ್‌ಐಟಿ ಪೊಲೀಸರು ಮುಂದಾಗಿದ್ದರು. ರೇಣುಕಾಸ್ವಾಮಿ

ರೇಣುಕಾಸ್ವಾಮಿ ಕೊಲೆ ಪ್ರಕರಣ| ಅಶ್ಲೀಲ ಮೆಸೇಜ್ ಗಳ‌ ಡಾಟಾ ಸಂಗ್ರಹಿಸಿದ ತನಿಖಾ ತಂಡ Read More »

ಅಂಕೋಲಾ ಹೆದ್ದಾರಿಯಲ್ಲಿ ಭೂಕುಸಿತ ಪ್ರಕರಣ| ಮೃತರ ಸಂಖ್ಯೆ 10ಕ್ಕೆ ಏರಿಕೆ| ಮುಂದುವರಿದ ರಕ್ಷಣಾ ಕಾರ್ಯ

ಸಮಗ್ರ ನ್ಯೂಸ್: ಕಾರವಾರ-ಕುಮಟಾ ರಸ್ತೆಯ ಅಂಕೋಲಾ ಸಮೀಪದ ಶಿರೂರು ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. 10 ಮಂದಿಯ ಪೈಕಿ ಐವರು ಒಂದೇ ಕುಟುಂಬದ ಸದಸ್ಯರಿದ್ದಾರೆಂದು ಹೇಳಲಾಗಿದ್ದು, ಇವರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೋಟೆಲ್ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಸಂಪೂರ್ಣ ಗುಡ್ಡ ಅಂಗಡಿಯ ಮೇಲೆ ಕುಸಿದು ಬಿದ್ದಿದ್ದು, ಪರಿಣಾಮ ಸ್ಥಳದಲ್ಲಿದ್ದ 15ಕ್ಕೂ ಹೆಚ್ಚು ಮಂದಿ ಹಾಗೂ ಹಲವು ವಾಹನಗಳು ಕೂಡ ಮಣ್ಣಿನಡಿ ಸಿಲುಕಿಕೊಂಡಿದೆ. ಗುಡ್ಡ ಕುಸಿತದ ಪರಿಣಾಮ ರಸ್ತೆಯಲ್ಲಿ ವಾಹನ

ಅಂಕೋಲಾ ಹೆದ್ದಾರಿಯಲ್ಲಿ ಭೂಕುಸಿತ ಪ್ರಕರಣ| ಮೃತರ ಸಂಖ್ಯೆ 10ಕ್ಕೆ ಏರಿಕೆ| ಮುಂದುವರಿದ ರಕ್ಷಣಾ ಕಾರ್ಯ Read More »

ಉಡುಪಿ ಅಗ್ನಿ ಅವಘಡ ಪ್ರಕರಣ| ಉದ್ಯಮಿ ಪತ್ನಿ ಸೋಶಿಯಲ್ ಮೀಡಿಯಾ ಖ್ಯಾತಿಯ ಅಶ್ವಿನಿ ಶೆಟ್ಟಿ ಸಾವು

ಸಮಗ್ರ ನ್ಯೂಸ್: ಉಡುಪಿಯ ಅಂಬಲಪಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಬಾರ್ & ರೆಸ್ಟೋರೆಂಟ್ ಉದ್ಯಮಿ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪತ್ನಿ ಅಶ್ವಿನಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ. ಸೋಮವಾರ ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಸಿಲುಕಿದ ಬಾರ್ ಮಾಲಕ ರಮಾನಂದ ಹಾಗು ಪತ್ನಿ ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ರಮಾನಂದ ಅವರು

ಉಡುಪಿ ಅಗ್ನಿ ಅವಘಡ ಪ್ರಕರಣ| ಉದ್ಯಮಿ ಪತ್ನಿ ಸೋಶಿಯಲ್ ಮೀಡಿಯಾ ಖ್ಯಾತಿಯ ಅಶ್ವಿನಿ ಶೆಟ್ಟಿ ಸಾವು Read More »