ಕ್ರೈಂ

ಅಪ್ಪ- ಅಮ್ಮನ ಜಗಳ ಬಿಡಿಸಲು ಹೋದ ಮಗನ ಆಕಸ್ಮಿಕ ಕೊಲೆ..!

ಸಮಗ್ರ ನ್ಯೂಸ್: ಅಜ್ಜಿಯನ್ನು ನೋಡಿಕೊಳ್ಳುವ ವಿಚಾರಕ್ಕೆ ಅಪ್ಪ- ಅಮ್ಮನ ನಡುವೆ ಜಗಳ ಶುರುವಾಗಿದ್ದು, ಇದನ್ನು ಬಿಡಿಸಲು ಹೋದ ಮಗ ಆಕಸ್ಮಿಕವಾಗಿ ಕೊಲೆಯಾದ ಘಟನೆ ಬೆಂಗಳೂರಿನ ಜರಗನಹಳ್ಳಿಯಲ್ಲಿ ನಡೆದಿದೆ. ಯಶವಂತ್ (23) ತಂದೆಯಿಂದಲೇ ಕೊಲೆಯಾದ ಪುತ್ರ. ಇತ ಇನ್ಫೋಸಿಸ್ ಕಂಪನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ. ತಂದೆ ಮಾಡಿದ್ದ ಸಾಲವನ್ನು ಈತನೇ ತೀರಿಸುತ್ತಿದ್ದ. ಹೀಗಿರುವಾಗ ಆತನ ಅಜ್ಜಿ ಹಾಸಿಗೆ ಹಿಡಿದಿದ್ದಾರೆ. ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ತಂದೆ-ತಾಯಿ ನಡುವೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಇಬ್ಬರ […]

ಅಪ್ಪ- ಅಮ್ಮನ ಜಗಳ ಬಿಡಿಸಲು ಹೋದ ಮಗನ ಆಕಸ್ಮಿಕ ಕೊಲೆ..! Read More »

ಹಾಸನದಲ್ಲಿ ರೌಡಿಶೀಟರ್ ಡೆಡ್ಲಿ ಮರ್ಡರ್…! ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಸಮಗ್ರ ನ್ಯೂಸ್: ಹಾಸನದಲ್ಲಿ ಇಂದು ಬರ್ಬರ ಕೊಲೆಯೊಂದು ನಡೆದಿದೆ. ನಟೋರಿಯಸ್ ರೌಡಿ ರವಿ ಅಲಿಯಾಸ್ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಈ ಘಟನೆ ಹಾಸನದ ಹೇಮಾವತಿನಗರದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ರೌಡಿ ರವಿ ಕುಡಿಯುವ ನೀರು ತೆಗೆದುಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತ ಸ್ರಾವದಿಂದಾಗಿ ಆತ ಅಲ್ಲೇ ಮೃತಪಟ್ಟಿದ್ದಾನೆ. ಕೊಲೆಯಾದ ರವಿಯ ವಿರುದ್ಧ ಕೊಲೆ, ದರೋಡೆ ಸೇರಿದಂತೆ

ಹಾಸನದಲ್ಲಿ ರೌಡಿಶೀಟರ್ ಡೆಡ್ಲಿ ಮರ್ಡರ್…! ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ Read More »

ಪಲ್ಲಕ್ಕಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವು..!

ಸಮಗ್ರ ನ್ಯೂಸ್: ಪಲ್ಲಕ್ಕಿ ಇದ್ದ ಟ್ರಾಕ್ಟರ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ದುರ್ಮರಣ ಹೊಂದಿದ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೊಲ್ಲಹಳ್ಳಿಯಲ್ಲಿ ನಡೆದಿದೆ. ವೀರಸಂದ್ರ ವಾಸಿ ರಂಗನಾಥ(33), ಯಾರಂಡಹಳ್ಳಿ ವಾಸಿ ಹರಿಬಾಬು(25) ಮೃತ ದುರ್ದೈವಿಗಳು. ಪಲ್ಲಕ್ಕಿ ಉತ್ಸವ ಮುಗಿಸಿ ವಾಪಸ್ ಬರುವಾಗ ಪಲ್ಲಕ್ಕಿಗೆ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಟ್ರ್ಯಾಕ್ಟರ್ ಚಲಾಯಿಸುವಾಗ ಚಾಲಕನಿಗೆ ಕರೆಂಟ್‌ ಶಾಕ್‌ ಹೊಡೆದಿದೆ. ಚಾಲಕನನ್ನು ರಕ್ಷಣೆ ಮಾಡಲು ಹೋಗಿ ಮತ್ತೊಬ್ಬನಿಗೂ ವಿದ್ಯುತ್‌ ಶಾಕ್‌ ಆಗಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ

ಪಲ್ಲಕ್ಕಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವು..! Read More »

ಎಚ್ ಬಿ ಸಿ ನೌಕರ ನೇಣಿಗೆ ಶರಣು

ಅಥಣಿ : ಪಟ್ಟಣದ ಹಿಪ್ಪರಗಿ ಆಣೆಕಟ್ಟು ಹಿನ್ನೀರು ನೀರಾವರಿ ನಿಗಮದ ನೌಕರ ಕಚೇರಿ ಹೊರಾಂಗಣದಲ್ಲಿ ನೇಣಿಗೆ ಶರಣಾದ ಘಟನೆ ನಡೆದಿದೆ. ಕುಮಾರ ಬಸಯ್ಯ ಧುಮ್ಕಿಮಠ (49) ಮೃತ ದುರ್ದೈವಿಯಾಗಿದ್ದು ಇಲಾಖೆ ಆವರಣದ ಪಕ್ಕದಲ್ಲಿದ್ದ ಬೇವಿನ ಮರಕ್ಕೆ ನಿನ್ನೆ ತಡ ರಾತ್ರಿ ನೇಣಿಗೆ ಶರಣಾಗಿದ್ದಾನೆ. ಸುಮಾರು 20 ವರ್ಷ ಸರ್ಕಾರಿ ನೌಕರಿಯಲ್ಲಿ ಸೇವೆಸಲ್ಲಿಸುತ್ತಿದ್ದ ಕುಮಾರ ಕಳೆದ ಮೂರು ತಿಂಗಳಿಂದ ಕೆಲಸಕ್ಕೆ ಬಾರದೆ ರಜೆಯಲ್ಲಿದ್ದ ಎಂದು ತಿಳಿದುಬಂದಿದೆ.ಘಟನೆ ಸಂಬಂಧ ಅಥಣಿ ಪೊಲೀಸ್ ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು

ಎಚ್ ಬಿ ಸಿ ನೌಕರ ನೇಣಿಗೆ ಶರಣು Read More »

ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪೆನ್ ಡ್ರೈವ್ ಪ್ರಜ್ವಲ್ ಅರೆಸ್ಟ್… SIT ಅಧಿಕಾರಿಗಳಿಂದ ಬಂಧನ

ಸಮಗ್ರ ನ್ಯೂಸ್: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸನ ಜೆಡಿಎಸ್‌ ಸಂಸದ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್‌ ರೇವಣ್ಣನನ್ನು ಕೊನೆಗೂ ಅರೆಸ್ಟ್ ಮಾಡಲಾಗಿದೆ. ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಲೇ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್‌ ರೇವಣ್ಣ, 34 ದಿನಗಳಾದ ಮೇಲೆ ಇಂದು ಭಾರತಕ್ಕೆ ಲುಫ್ತಾನ್ಸಾ ವಿಮಾನಯಾನ ಸಂಸ್ಥೆಯ ಎಲ್‌ಎಚ್‌764 ವಿಮಾನದಲ್ಲಿ ಆಗಮಿಸಿದರು. 12.47 ಕ್ಕೆ ಲುಫ್ತಾನ್ಸಾ ವಿಮಾನ ಲ್ಯಾಂಡ್ ಆಗಿದೆ ಇದಾದ ಸ್ವಲ್ಪ ಹೊತ್ತಲ್ಲೇ ಎಸ್‌ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದರು. ಆದರೆ ಪ್ರಜ್ವಲ್ ರೇವಣ್ಣ ನೇರವಾಗಿ

ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪೆನ್ ಡ್ರೈವ್ ಪ್ರಜ್ವಲ್ ಅರೆಸ್ಟ್… SIT ಅಧಿಕಾರಿಗಳಿಂದ ಬಂಧನ Read More »

ಬೆಂಗಳೂರಿನಲ್ಲಿ ಭೀಕರ ಅಪಘಾತ| ನೆಲ್ಯಾಡಿ ಮೂಲದ ಯುವಕ ದಾರುಣ ಸಾವು

ಸಮಗ್ರ ನ್ಯೂಸ್: ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಎಂಜಿರದ ಪರಕ್ಕಳದ ಯುವಕ ಥೋಮಸ್ ಎಂಬವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ನರ್ಸಿಂಗ್ ವಿದ್ಯಾರ್ಥಿಯಾಗಿರುವ ಥೋಮಸ್ ಎಂಜಿರದ ಪರಕ್ಕಳದ ಸ್ಕೇರಿಯಾ ಎಂಬವರ ಪುತ್ರ. ಬೆಳಗ್ಗಿನ ಜಾವ ನಾಲ್ಕು ಗಂಟೆಗೆ ಥಾಮಸ್ ಮನೆಯಿಂದ ಬೈಕ್ ನಲ್ಲಿ ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತವಾಗಿದೆ. ಲಾರಿಯಡಿಗೆ ಬಿದ್ದು ಥಾಮಸ್ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ

ಬೆಂಗಳೂರಿನಲ್ಲಿ ಭೀಕರ ಅಪಘಾತ| ನೆಲ್ಯಾಡಿ ಮೂಲದ ಯುವಕ ದಾರುಣ ಸಾವು Read More »

ತುಮಕೂರು: ಪತ್ನಿಯನ್ನು ಕೊಲೆಗೈದು ಚರ್ಮ ಸುಲಿದ ಕ್ರೂರಿ ಪತಿ…!

ಸಮಗ್ರ ನ್ಯೂಸ್: ದೆಹಲಿಯಲ್ಲಿ ಶ್ರಧ್ಧಾ ವಾಕರ್ ಭೀಕರ ಕೊಲೆ ಪ್ರಕರಣ ಇಡೀ ದೇಶದಾದ್ಯಂತ ಭಾರೀ ಸದ್ದು ಮಾಡಿತ್ತು. ಆದರೆ ಇದೇ ತರಹದ ಘಟನೆ ತುಮಕೂರಿನ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ನಡೆದಿದೆ. ಇಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಭೀಕರವಾಗಿ ಕೊಲೆ ಮಾಡಿ ಪತ್ನಿಯ ಕತ್ತು ಹಾಗೂ ದೇಹದ ಇತರ ಅಂಗಾಂಗಗಳನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪ (32), ಮೃತ ದುರ್ದೈವಿ. ಹುಲಿಯೂರುದುರ್ಗ ಬಳಿಯ ಸುಗ್ಗನಹಳ್ಳಿ ನಿವಾಸಿಯಾಗಿದ್ದ ಶಿವರಾಮ್ ಎಂಬಾತನೇ ಕೃತ್ಯ

ತುಮಕೂರು: ಪತ್ನಿಯನ್ನು ಕೊಲೆಗೈದು ಚರ್ಮ ಸುಲಿದ ಕ್ರೂರಿ ಪತಿ…! Read More »

ಸರ್ಕಾರಿ ಶಾಲೆ ಶಿಕ್ಷಕನಿಂದ ಅತ್ಯಾಚಾರ| 7ನೇ ಕ್ಲಾಸ್ ವಿದ್ಯಾರ್ಥಿನಿ ಗರ್ಭಿಣಿ

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಕನಿಂದಲೇ 7ನೇ ತರಗತಿ ವಿದ್ಯಾರ್ಥಿನಿ ಇದೀಗ ಮೂರು ತಿಂಗಳು ಗರ್ಭಿಣಿಯಾಗಿದ್ದಾಳೆ. ಈ ಘಟನೆ ನಡೆದಿದ್ದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ. ಇದೀಗ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ವಿದ್ಯಾರ್ಥಿನಿಯ ಮೇಲೆ ಶಿಕ್ಷಕ ಕಳೆದ ಕೆಲ ತಿಂಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಈ ಹಿನ್ನೆಲೆಯಲ್ಲಿ ಇದೀಗ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ. ಇನ್ನು  ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿರುವ ವಿದ್ಯಾರ್ಥಿನಿಯನ್ನು ಮಹಿಳಾ ಅಧಿಕಾರಿಗಳು ರಕ್ಷಿಸಿ ಆಪ್ತ ಸಮಾಲೋಚನೆ

ಸರ್ಕಾರಿ ಶಾಲೆ ಶಿಕ್ಷಕನಿಂದ ಅತ್ಯಾಚಾರ| 7ನೇ ಕ್ಲಾಸ್ ವಿದ್ಯಾರ್ಥಿನಿ ಗರ್ಭಿಣಿ Read More »

ಮೈಸೂರು: ವಿಜಯನಗರದ ಮಸಾಜ್ ಪಾರ್ಲರ್ ಮೇಲೆ ದಾಳಿ| ಮಡಿಕೇರಿ ಮೂಲದ ಓರ್ವ ಯುವತಿ ಸೇರಿದಂತೆ ನಾಲ್ವರು ಮಹಿಳೆಯರ ರಕ್ಷಣೆ

ಸಮಗ್ರ ನ್ಯೂಸ್: ಮೈಸೂರಿನ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಮಡಿಕೇರಿಯ ಓರ್ವ ಯುವತಿ ಸೇರಿದಂತೆ ಐವರನ್ನು ರಕ್ಷಿಸಿದ ಘಟನೆ ನಡೆದಿದೆ. ವಿಜಯನಗರದಲ್ಲಿರುವ ಮಸಾಜ್ ಪಾರ್ಲರ್ ಮೇಲೆ ಪೊಲೀಸರು ದಾಳಿ ನಡೆಸಿದ್ದು ಈ ಪೈಕಿ ಇಬ್ಬರು ಪಶ್ಚಿಮ ಬಂಗಾಳದವರಾಗಿದ್ದು, ಓರ್ವ ಯುವತಿ ಮಡಿಕೇರಿಯ ಮೂಲದವಳು ಇನ್ನುಳಿದ ಇಬ್ಬರು ಸ್ಥಳೀಯರು ಎಂದು ತಿಳಿದು ಬಂದಿದೆ. ಈ ದಾಳಿಯಲ್ಲಿ ಓರ್ವ ದಂದೆ ಕೋರ ಮಹಿಳೆ ಒಬ್ಬ ಪಿಂಪ್

ಮೈಸೂರು: ವಿಜಯನಗರದ ಮಸಾಜ್ ಪಾರ್ಲರ್ ಮೇಲೆ ದಾಳಿ| ಮಡಿಕೇರಿ ಮೂಲದ ಓರ್ವ ಯುವತಿ ಸೇರಿದಂತೆ ನಾಲ್ವರು ಮಹಿಳೆಯರ ರಕ್ಷಣೆ Read More »

ಮಂಗಳೂರು: ಕಂಕನಾಡಿಯ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡುವ ವೀಡಿಯೋ ವೈರಲ್

ಸಮಗ್ರ ನ್ಯೂಸ್: ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದಾರೆ. ಈ ಘಟನೆ ಕಳೆದ ಶುಕ್ರವಾರ ನಡೆದಿದ್ದು, ನಮಾಜ್ ಮಾಡಿದ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ. ಕಂಕನಾಡಿಯಲ್ಲಿ ಮಸೀದಿ ಮುಂದೆ ಇರುವ ರಸ್ತೆಯಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ. ನಡು ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದರಿಂದ ವಾಹನ ಸವಾರರು ಯೂಟರ್ನ್ ತೆಗೆದುಕೊಂಡು ಹೋಗಿದ್ದಾರೆ. ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮುಸ್ಲಿಮರು ನಮಾಜ್ ಮಾಡಿದನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದ್ದು, ಇದಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಮಂಗಳೂರು: ಕಂಕನಾಡಿಯ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡುವ ವೀಡಿಯೋ ವೈರಲ್ Read More »