ಕ್ರೈಂ

ನಾಪತ್ತೆಯಾಗಿದ್ದ ‌ಧ.ಗ್ರಾ.ಯೋ ಸೇವಾಪ್ರತಿನಿಧಿ ಶವವಾಗಿ ಪತ್ತೆ| ಆರೋಪಿ ಬಂಧನ

ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ಯುವತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ತಾಲೂಕಿನ ಆಗುಂಬೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುಶಾಲ್ ಅವರ ಮಗಳಾದ ಪೂಜಾ ಎ.ಕೆ. (24) ಮೃತ ಯುವತಿ. ಕೊಲೆ ಆರೋಪಿ ಮಣಿಯನ್ನು ಬಂಧಿಸಲಾಗಿದೆ. ಪೂಜಾ ಜೂ.30 ರಂದು ನಾಪತ್ತೆಯಾಗಿದ್ದು, ಶವವಾಗಿ ಪತ್ತೆಯಾಗಿದ್ದಾರೆ. ಈ ಪ್ರಕರಣದ ತನಿಖೆ ಆಗುಂಬೆ ಪೊಲೀಸ್ ಠಾಣೆ ಪಿ ಎಸ್ ಐ ರಂಗನಾಥ್ ಅಂತರಗಟ್ಟಿ ನೇತೃತ್ವದಲ್ಲಿ ನಡೆದಿದ್ದು, ನಾಲೂರು ಸಮೀಪದ ಮಣಿ ಎಂಬ ವ್ಯಕ್ತಿ ಕತ್ತು ಹಿಸುಕಿ ಕೊಲೆ ಮಾಡಿ […]

ನಾಪತ್ತೆಯಾಗಿದ್ದ ‌ಧ.ಗ್ರಾ.ಯೋ ಸೇವಾಪ್ರತಿನಿಧಿ ಶವವಾಗಿ ಪತ್ತೆ| ಆರೋಪಿ ಬಂಧನ Read More »

ಹೆರಿಗೆ ಸಂದರ್ಭದಲ್ಲಿ ಮರ್ಮಾಂಗ ಕೊಯ್ದ ಡಾಕ್ಟರ್| ಬೆಳಕು‌ ಕಾಣಬೇಕಿದ್ದ ಮಗುವಿಗೆ ಯಮನಾದ ವೈದ್ಯ

ಸಮಗ್ರ ನ್ಯೂಸ್: ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸುವ ವೇಳೆ ವೈದ್ಯನೊಬ್ಬ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗ ಕೊಯ್ದ ವಿಕೃತ ಘಟನೆ ಧಾರವಾಡದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಧಾರವಾಡದ ಕೊಂಡಜ್ಜಿ ರಸ್ತೆಯಲ್ಲಿರುವ ಅರ್ಜುನ್ ಎಂಬುವವರ ಪತ್ನಿ ಅಮೃತಾ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಜೂನ್ 27ರಂದು ಹತ್ತಿರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅಮೃತಾಳಿಗೆ ಸಿಸರಿನ್ ಮೂಲಕ ಮಗುವನ್ನು ಹೊರ ತೆಗೆಯಬೇಕು ಎಂದು ವೈದ್ಯರು ಹೇಳಿದರು. ಹೀಗೆ ಸಿಸರಿನ್ ಮಾಡಿ ಮಗು ತೆಗೆಯುವ ವೇಳೆ ನಿಜಾಮುದ್ದೀನ್ ಎಂಬುವವನು ಪುಟ್ಟ ಮಗುವಿನ ಮರ್ಮಾಂಗವನ್ನು ಕೊಯ್ಯುವ

ಹೆರಿಗೆ ಸಂದರ್ಭದಲ್ಲಿ ಮರ್ಮಾಂಗ ಕೊಯ್ದ ಡಾಕ್ಟರ್| ಬೆಳಕು‌ ಕಾಣಬೇಕಿದ್ದ ಮಗುವಿಗೆ ಯಮನಾದ ವೈದ್ಯ Read More »

ಉಡುಪಿ: ವಿದ್ಯಾರ್ಥಿ ಬಳಿ‌‌ ಶೌಚಾಲಯ ಸ್ವಚ್ಛಗೊಳಿಸಿದ ಶಿಕ್ಷಕ

ಕಳೆದ ವರ್ಷ ವಿದ್ಯಾರ್ಥಿಗಳ ಕೈಯಲ್ಲಿ ಸರ್ಕಾರಿ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ ವಿಚಾರ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿತ್ತು. ಇದೀಗ ಅಂತದ್ದೆ ಘಟನೆ ಉಡುಪಿಯಲ್ಲಿ ನಡೆದಿದ್ದು ಅನುದಾನಿತ ಶಾಲೆಯಲ್ಲಿ ವಿದ್ಯಾರ್ಥಿಯಿಂದ ದೈಹಿಕ ಶಿಕ್ಷಕರೊಬ್ಬರು ಶೌಚಾಲಯ ಸ್ವಚ್ಛಗೊಳಿಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಉಡುಪಿಯ ನಿಟ್ಟೂರು ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಬಾಲಕನಿಂದ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ದೃಶ್ಯ ಇದೀಗ ವೈರಲ್ ಆಗಿದೆ. ಅಲ್ಲದೆ ಕಳೆದ ವರ್ಷ ಡಿಸೆಂಬರ್ ತಿಂಗಳಿನಲ್ಲಿ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ

ಉಡುಪಿ: ವಿದ್ಯಾರ್ಥಿ ಬಳಿ‌‌ ಶೌಚಾಲಯ ಸ್ವಚ್ಛಗೊಳಿಸಿದ ಶಿಕ್ಷಕ Read More »

ಕೋಲಾರ: ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯೊಬ್ಬಳು ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದರಿಂದ ಕಾಲೇಜು ಉಪನ್ಯಾಸಕರು, ಸಹಪಾಠಿಗಳು ಆತಂಕಕ್ಕೀಡಾಗಿದ್ದಾರೆ. ಸದ್ಯ ವಿದ್ಯಾರ್ಥಿಯನ್ನು ಸಹ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಕೋಲಾರ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಮಗು ಕರುಣಿಸಿದ ಯುವಕನಿಗಾಗಿ ಹುಡುಕಾಟ

ಕೋಲಾರ: ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ Read More »

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ| ನಿಂತಿದ್ದ ಲಾರಿಗೆ ಟಿಟಿ ಗುದ್ದಿ 13 ಮಂದಿ ದುರ್ಮರಣ

ಸಮಗ್ರ ನ್ಯೂಸ್: ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ ಪರಿಣಾಮ 13 ಜನರು ಮೃತಪಟ್ಟ ಘಟನೆ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು(ಜೂ.28) ಬೆಳಗ್ಗೆ ನಡೆದಿದೆ. ಅಪಘಾತದ ರಭಸಕ್ಕೆ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿದ್ದು, ಭೀಕರತೆಗೆ ಸಾಕ್ಷಿಯಾಗಿವೆ. ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹೊರ ತೆಗೆಯುತ್ತಿದ್ದಾರೆ. ಮೃತರ ಹಿನ್ನಲೆಯನ್ನು ಪೊಲೀಸರು ಪತ್ತೆ ಹಚ್ಚುತ್ತಿರುವುದಾಗಿ‌ ತಿಳಿದುಬಂದಿದೆ ಮಾಹಿತಿಗಳ ಪ್ರಕಾರ ಮೃತರು

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ| ನಿಂತಿದ್ದ ಲಾರಿಗೆ ಟಿಟಿ ಗುದ್ದಿ 13 ಮಂದಿ ದುರ್ಮರಣ Read More »

ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

ಸಮಗ್ರ ನ್ಯೂಸ್: ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್‌ ಬೊಮ್ಮನಹಳ್ಳಿ ಬಾಬು ಅವರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು ಬಂಧಿಸಿದ್ದಾರೆ. ಕದ್ದ ಚಿನ್ನದ ಆಭರಣಗಳನ್ನು ಖರೀದಿ ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ ಫ್ರೇಜರ್‌ ಟೌನ್‌ ನಿವಾಸದ ಬಳಿ ಅಟ್ಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ತುರುವೇಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ, ತುರುವೇಕೆರೆ ಸಿಪಿಐ ಲೋಹಿತ್‌ ಬಿ.ಎನ್‌ ಹಾಗೂ ತಂಡದಿಂದ ಬಂಧಿಸಲಾಗಿದೆ. ಕಳ್ಳತನದ

ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ Read More »

ಸಾಕಾನೆಯಿಂದಲೇ ದಾರುಣವಾಗಿ ಸಾವನ್ನಪ್ಪಿದ ಮಾವುತ| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಕೇರಳದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ತಾನು ಸಾಕಿದ ಆನೆಯಿಂದಲೇ ಮಾವುತನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೇರಳದ ಕಲ್ಲಾರ್ ನ ಸಫಾರಿ ಕೇಂದ್ರದಲ್ಲಿ ಗುರುವಾರ ಈ ಘಟನೆ ನಡೆದಿದೆ. ಆನೆ ದೇವಾಲಯದ ಮಾವುತನನ್ನು ಕಾಲಿನಿಂದ ತುಳಿದು ಕೊಂದುಹಾಕಿದೆ. ಮೃತನ ಹೆಸರು ಬಾಲಕೃಷ್ಣನ್. ಅವರಿಗೆ 62 ವರ್ಷ ವಯಸ್ಸು. ಅವರು ನೀಲೇಶ್ವರಂ ಮೂಲದವರು. ಸಂಜೆ 6.30 ರ ಸುಮಾರಿಗೆ ಈ ಘಟನೆ ನಡೆದಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನೆಟ್ಟಿಗರು ಅದನ್ನು ನೋಡಲು ಸಾಧ್ಯವಾಗುತ್ತಿಲ್ಲ.

ಸಾಕಾನೆಯಿಂದಲೇ ದಾರುಣವಾಗಿ ಸಾವನ್ನಪ್ಪಿದ ಮಾವುತ| ವಿಡಿಯೋ ವೈರಲ್ Read More »

ಪ್ರಜ್ವಲ್ ರೇವಣ್ಣ ಬಳಿಕ ಸೂರಜ್ ಮೇಲೂ ಲೈಂಗಿಕ ಆರೋಪ| ಯುವಕನ ಮೇಲೆ ಅಸಹಜ‌ ಕಾಮಕೇಳಿ ನಡೆಸಿದ್ರಂತೆ ಎಂಎಲ್ ಸಿ ಸೂರಜ್ ರೇವಣ್ಣ!!

ಸಮಗ್ರ ನ್ಯೂಸ್: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಭಾರೀ ಸದ್ದು ಮಾಡಿದ್ದು, ದೇಶ-ವಿದೇಶ ಮಾಧ್ಯಮಗಳಲ್ಲೂ ಸುದ್ದಿಯಾಗಿದೆ. ತಮ್ಮ ಪಕ್ಷದ ಕಾರ್ಯಕರ್ತೆಯರು, ಸರ್ಕಾರಿ ಮಹಿಳಾ ಅಧಿಕಾರಿಗಳು, ಜೆಡಿಎಸ್​ ಮುಖಂಡರ ಹೆಂಡತಿಯರನ್ನು ಪ್ರಜ್ವಲ್​ ಲೈಂಗಿಕವಾಗಿ ಬಳಿಸಿಕೊಂಡಿರುವ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ಅಣ್ಣ ವಿಧಾನಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ಧವೂ ಸಹ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಅರಕಲಗೂಡು ಜೆಡಿಎಸ್​ ಕಾರ್ಯಕರ್ತನ ಮೇಲೆ ಸೂರಜ್​ ರೇವಣ್ಣ,

ಪ್ರಜ್ವಲ್ ರೇವಣ್ಣ ಬಳಿಕ ಸೂರಜ್ ಮೇಲೂ ಲೈಂಗಿಕ ಆರೋಪ| ಯುವಕನ ಮೇಲೆ ಅಸಹಜ‌ ಕಾಮಕೇಳಿ ನಡೆಸಿದ್ರಂತೆ ಎಂಎಲ್ ಸಿ ಸೂರಜ್ ರೇವಣ್ಣ!! Read More »

ತನ್ನ ಮದುವೆ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವಧು ಸಾವು

ಸಮಗ್ರ ನ್ಯೂಸ್: ಯುವತಿಯೊಬ್ಬಳು ಇನ್ನೇನು ಸಪ್ತಪದಿ ತುಳಿದು ಹೊಸ ಬದುಕಿನ ಕನಸು ಕಾಣುತ್ತಾ ಸಂಭ್ರಮದಲ್ಲಿರುವಾಗಲೇ ವಿಧಿ ವಿಪರ್ಯಾಸವೆಂಬಂತೆ ಕೊನೆ ಉಸಿರೆಳೆದಿದ್ದಾಳೆ. ಮದುವೆಯ ಹಿಂದಿನ ದಿನ ತನ್ನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿರುವಾಗ ಯುವತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ನಡೆದಿದೆ. ಸಂತೋಷದಿಂದ ತುಂಬಿ ತುಳುಕುತ್ತಿದ್ದ ಮನೆಯಲ್ಲಿ ಇದೀಗ ನೀರವ ಮೌನ ಆವರಿಸಿದೆ. ಮೃತ ಯುವತಿ ಶ್ರೇಯಾ ಜೈನ್(28) ದೆಹಲಿ ಮೂಲದವರಾದ ಶ್ರೇಯಾ ಕುಟುಂಬ ಡೆಹ್ರಾಡೂನ್‌ನ ಐಷಾರಾಮಿ ರೆಸಾರ್ಟೊಂದನ್ನು ಮದುವೆಯ ಸಂಭ್ರಮಾಚರಣೆಗಾಗಿ ಬುಕ್ ಮಾಡಿತ್ತು. ಆದರಂತೆ

ತನ್ನ ಮದುವೆ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವಧು ಸಾವು Read More »

ಪುತ್ತೂರು: ಆಲ್ಟೋ – ಬೊಲೆರೋ ನಡುವೆ ಭೀಕರ ಅಪಘಾತ| ಸೋಮವಾರಪೇಟೆ ಮೂಲದ ಇಬ್ಬರು ದಾರುಣ ಸಾವು

ಸಮಗ್ರ ನ್ಯೂಸ್: ಆಲ್ಟೋ 800 ಹಾಗೂ ಮಹೀಂದ್ರಾ ಬೊಲೆರೋ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಸಮೀಪದ ಕುಂಬ್ರ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತರನ್ನು ಆಲ್ಟೋ ಕಾರಿನಲ್ಲಿದ್ದ ಸೋಮವಾರಪೇಟೆ ನಿವಾಸಿಗಳಾದ ಲೋಕೇಶ್ ಹಾಗೂ ರವೀಂದ್ರ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಆಲ್ಟೋ ಹಾಗೂ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೊಲೆರೋ ನಡುವೆ ಢಿಕ್ಕಿ

ಪುತ್ತೂರು: ಆಲ್ಟೋ – ಬೊಲೆರೋ ನಡುವೆ ಭೀಕರ ಅಪಘಾತ| ಸೋಮವಾರಪೇಟೆ ಮೂಲದ ಇಬ್ಬರು ದಾರುಣ ಸಾವು Read More »