ಕ್ರೈಂ

ಉಳ್ಳಾಲ: ಸ್ಕೂಟರ್ ಡಿಕ್ಕಿ : ಸಹ ಸವಾರ ಮೃತ್ಯು

ಸಮಗ್ರ ನ್ಯೂಸ್ : ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಧಾವಿಸುತ್ತಿದ್ದ ಸ್ಕೂಟರ್ಗೆ ಕಲ್ಲಾಪು ಜಂಕ್ಷನ್ ನಲ್ಲಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಮತ್ತೊಂದು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹ ಸವಾರ ಸಾವನ್ನಪ್ಪಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಉಳ್ಳಾಲ ಕೋಟೆಪುರ, ಕೋಡಿ ನಿವಾಸಿ ಅಹಮ್ಮದ್ ನಿಷಾಧ್ (22)ಮೃತ ಯುವಕ. ನಿಷಾಧ್ ಇಂದು ಮುಂಜಾನೆ ನಾಲ್ಕು ಗಂಟೆಯ ವೇಳೆ ಸಯ್ಯದ್ ಹಫೀಝ್ ಎಂಬವರೊಂದಿಗೆ ಸ್ಕೂಟರಲ್ಲಿ ಸಹಸವಾರನಾಗಿ ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ವೇಳೆ ಕಲ್ಲಾಪು ಜಂಕ್ಷನ್ ನಲ್ಲಿ ತೊಕ್ಕೊಟ್ಟಿನಿಂದ ಬಂದು […]

ಉಳ್ಳಾಲ: ಸ್ಕೂಟರ್ ಡಿಕ್ಕಿ : ಸಹ ಸವಾರ ಮೃತ್ಯು Read More »

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು

ಸಮಗ್ರ ನ್ಯೂಸ್: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲಾಗಿ, ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಈಜಲು ತೆರಳಿದ್ದ ಜೀವನ್ (13), ಸಾತ್ವಿಕ್ (11), ವಿಶ್ವ (12), ಪೃಥ್ವಿ (12) ಮೃತ ದುರ್ದೈವಿಗಳು. ಇವರೆಲ್ಲ ಮುತ್ತಿಗೆ ಗ್ರಾಮದವರು. ಶಾಲೆಗೆ ರಜೆ ಇರುವುದರಿಂದ ಐವರು ಗೆಳೆಯರು ಈಜಲು ಹೊಳೆಗೆ ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲು ಆಗದೆ ನಾಲ್ವರು ನೀರುಪಾಲಾಗಿದ್ದಾರೆ. ಮತ್ತೊರ್ವ ಬದುಕುಳಿದಿದ್ದಾನೆ. ಇತ್ತ ಬದುಕುಳಿದ ಓರ್ವ

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು Read More »

ವಿಜಯಪುರ : ಮೃತಪಟ್ಟ ನವಜಾತ ಶಿಶುವನ್ನು ಚರಂಡಿಗೆ ಎಸೆದ ಪಾಪಿ ತಾಯಿ

ಸಮಗ್ರ ನ್ಯೂಸ್ : ಮಹಿಳೆಯೊಬ್ಬಳು ಮೃತಪಟ್ಟ ನವಜಾತ ಶಿಶುವನ್ನು ಚರಂಡಿಗೆ ಎಸೆದು ಹೋಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಲಕೊಪ್ಪರ ಗ್ರಾಮದಲ್ಲಿ ನಡೆದಿದೆ. ಮಹಿಳೆಯ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆ ಮೃತಪಟ್ಟ ನವಜಾತ ಶಿಶುವನ್ನು ಪ್ಲಾಸ್ಟಿಲ್ ಹಾಳೆಯಲ್ಲಿ ಸುತ್ತಿ ಚರಂಡಿಗೆ ಎಸೆದು ಅಲ್ಲಿಂದ ಜಾಗ ಖಾಲಿ ಮಾಡಿದ್ದಾಳೆ. ಶಿಶುವನ್ನು ಗಮನಿಸಿದ ಗ್ರಾಮಸ್ಥರು ಚರಂಡಿಯಿಂದ ಗಂಡು ಮಗುವನ್ನು ಮೇಲಕ್ಕೆತ್ತಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಮುದ್ದೇಬಿಹಾಳ ಪೊಲೀಸರು ತಾಯಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ವಿಜಯಪುರ : ಮೃತಪಟ್ಟ ನವಜಾತ ಶಿಶುವನ್ನು ಚರಂಡಿಗೆ ಎಸೆದ ಪಾಪಿ ತಾಯಿ Read More »

ಜಕಾರ್ತ : ವಿಮಾನದಿಂದ ಇಳಿಯುತ್ತಿದ್ದಾಗ ಆಯಾತಪ್ಪಿ ಕೆಳಗೆ ಬಿದ್ದ ಸಿಬ್ಬಂದಿ

ಸಮಗ್ರ ನ್ಯೂಸ್ : ವಿಮಾನದಿಂದ ಇಳಿಯುತ್ತಿದ್ದ ಸಂದರ್ಭದಲ್ಲಿ ಸ್ಟೆಪ್ಲ್ಯಾಡರ್ ಅನ್ನು ಮುಂದಕ್ಕೆ ತಳ್ಳಿದ ಪರಿಣಾಮ ಸಿಬ್ಬಂದಿಯೊಬ್ಬರು ವಿಮಾನದಿಂದ ಕೆಳಗೆ ಬಿದ್ದ ಘಟನೆಯೊಂದು ಇಂಡೋನೇಷ್ಯಾದ ಜಕಾರ್ತ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಸಾಮಾನ್ಯವಾಗಿ ವಿಮಾನದಿಂದ ಇಳಿಯಲು ಹಾಗೂ ಹತ್ತಲು ಕೃತಕ ಏಣಿಯನ್ನು ಬಳಸುತ್ತಾರೆ. ಅಂತೆಯೇ ಇಲ್ಲಿಯೂ ಏಣಿಯನ್ನು ಇಡಲಾಗಿದ್ದು, ಕೆಲ ಹೊತ್ತಿನ ಬಳಿಕ ಸಿಬ್ಬಂದಿ ಅಲ್ಲಿಂದ ತೆಗೆದಿದ್ದಾರೆ. ಇದನ್ನು ಗಮನಿಸದ ವಿಮಾನದ ಒಳಗಡೆ ಇದ್ದ ಸಿಬ್ಬಂದಿ ಇಳಿಯಲು ಯತ್ನಿಸಿದ್ದಾರೆ. ಮೆಟ್ಟಿಲು ಇದೆ ಎಂದು ಭಾವಿಸಿ ಕಾಲಿಟ್ಟಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.

ಜಕಾರ್ತ : ವಿಮಾನದಿಂದ ಇಳಿಯುತ್ತಿದ್ದಾಗ ಆಯಾತಪ್ಪಿ ಕೆಳಗೆ ಬಿದ್ದ ಸಿಬ್ಬಂದಿ Read More »

ಪತ್ನಿಗೆ ವಿಡಿಯೋ ಕಾಲ್ ನಲ್ಲಿ ಹೆದರಿಸಲು ಹೋಗಿ ಪತಿ ಸಾವು

ಸಮಗ್ರ ನ್ಯೂಸ್: ಪತ್ನಿಗೆ ವಿಡಿಯೋ ಕಾಲ್ ನಲ್ಲಿ ಹೆದರಿಸಲು ಹೋಗಿ ಪತಿ ಸಾವಿಗೆ ಶರಣಾದ ಘಟನೆ ಬೆಂಗಳೂರಿನ ಬಾಗಲಗುಂಟೆಯಲ್ಲಿ ನಡೆದಿದೆ. ಬಿಹಾರ ಮೂಲದ ಅಮಿತ್ ಕುಮಾರ್(28) ಮೃತ ದುರ್ದೈವಿ. ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗ ಅಮಿತ್ ಸಾವನ್ನಪ್ಪಿದ್ದಾನೆ. ಬಿಹಾರ ಮೂಲದ ಅಮಿತ್ ಜಿಮ್ ಟ್ರೈನರ್ ಆಗಿದ್ದು, 10 ವರ್ಷದ ಹಿಂದೆ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದ್ದ. ಒಂದು ವರ್ಷದ ಹಿಂದೆ ಜಿಮ್ ಸಮೀಪದ ಯುವತಿಯನ್ನು ಪ್ರೀತಿಸಿದ್ದು. ಪೋಷಕರ ವಿರೋಧದ ನಡುವೆ ವಿವಾಹವಾಗಿದ್ದರು. ಆದರೆ

ಪತ್ನಿಗೆ ವಿಡಿಯೋ ಕಾಲ್ ನಲ್ಲಿ ಹೆದರಿಸಲು ಹೋಗಿ ಪತಿ ಸಾವು Read More »

ಸಚಿನ್ ತೆಂಡೂಲ್ಕರ್ ಸೆಕ್ಯೂರಿಟಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಸಮಗ್ರ ನ್ಯೂಸ್: ಸಚಿನ್ ತೆಂಡೂಲ್ಕರ್ ಅವರ ಭದ್ರತಾ ಸಿಬ್ಬಂದಿ ಪ್ರದೀಪ್ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರಾಜ್ಯ ಮೀಸಲು ಪೊಲೀಸ್ ಪಡೆಯ ಜವಾನ್ ಪ್ರಕಾಶ್ ಕಾಪ್ಡೆ (39) ಮೃತ ದುರ್ದೈವಿ. ಸಚಿನ್ ಅವರ ವಿವಿಐಪಿ ಭದ್ರತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಚರು ಇತ್ತೀಚೆಗಷ್ಟೇ ಕರ್ತವ್ಯಕ್ಕೆ ರಜೆ ಪಡೆದು ಊರಿಗೆ ತೆರಳಿದ್ದರು. ಆದರೆ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕಾಶ್ ಮಹಾರಾಷ್ಟ್ರದಲ್ಲಿರುವ ತಮ್ಮ ಮನೆಯಲ್ಲಿ ಬುಧವಾರ ಬೆಳಗ್ಗಿನ ಜಾವ 1:30ಕ್ಕೆ ತನ್ನ ಸರ್ವೀಸ್ ಗನ್ ನಿಂದ

ಸಚಿನ್ ತೆಂಡೂಲ್ಕರ್ ಸೆಕ್ಯೂರಿಟಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ Read More »

ಸುಬ್ರಹ್ಮಣ್ಯ: ಮರ ಬಿದ್ದು ಮಹಿಳೆ ಸಾವು

ಸಮಗ್ರ ನ್ಯೂಸ್: ಗಾಳಿ ಮಳೆಗೆ ಮರ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಲ್ಕುಂದದಲ್ಲಿ ಮೇ15ರ ಸಂಜೆ ನಡೆದಿದೆ. ಮೃತ ಮಹಿಳೆಯನ್ನು ಇಲ್ಲಿನ ನಿವಾಸಿ ಮೀನಾಕ್ಷಿ ಎಂದು ಗುರುತಿಸಲಾಗಿದೆ. ತೋಟದಲ್ಲಿ ಕಟ್ಟಿದ್ದ ಕರುವನ್ನು ಬಿಡಿಸಲು ಹೋಗುವ ಸಂದರ್ಭದಲ್ಲಿ ಬೀಸಿದ ವಿಪರೀತ ಗಾಳಿ ಸಹಿತ ಮಳೆಗೆ ಮರ ಮುರಿದು ಬಿದ್ದಿದ್ದು, ಇದರಿಂದ ಅವರು ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಬ್ರಹ್ಮಣ್ಯ: ಮರ ಬಿದ್ದು ಮಹಿಳೆ ಸಾವು Read More »

ಪೆನ್‌ಡ್ರೈವ್‌ ಪ್ರಕರಣ: ನಾಳೆ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ?

ಸಮಗ್ರ ನ್ಯೂಸ್: ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡು ವಿದೇಶಕ್ಕೆ ತೆರಳಿರುವ ಪ್ರಜ್ವಲ್ ರೇವಣ್ಣ ಯಾವಾಗ ಭಾರತಕ್ಕೆ ಬರುತ್ತಾರೆ ಎಂದು ಅಧಿಕಾರಿಗಳು ಕಾಯುತ್ತಿದ್ದಾರೆ. ಅಪ್ಪನಿಗೆ ಜಾಮೀನು ಸಿಕ್ಕಿದ ಮೇಲೆ ಬರಬಹುದು ಎಂಬ ಮಾತುಗಳು ಹೊರಬಿದ್ದಿತು. ಅದರಂತೆ ಈಗ ಬಿಗ್ ಅಪ್ಡೇಟ್ ಒಂದು ಲಭ್ಯವಾಗಿದೆ. ಜರ್ಮನಿಯಲ್ಲಿರುವ ಪ್ರಜ್ವಲ್‌, ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಭಾರತಕ್ಕೆ ಹಿಂತಿರುಗಲಿದ್ದಾರೆ. ಜರ್ಮನಿಯಲ್ಲಿ ನಾಳೆ (ಮೇ 15) ಬೆಳಗ್ಗೆ 11.20 ರಿಂದ 11.50ರೊಳಗೆ ಬೋರ್ಡಿಂಗ್‌ ಆಗಲಿದ್ದು, ಅವರಿಗಾಗಿ ಸೀಟ್‌ ನಂಬರ್‌ 6ಜಿ ಬುಕ್‌ ಮಾಡಲಾಗಿದೆ.

ಪೆನ್‌ಡ್ರೈವ್‌ ಪ್ರಕರಣ: ನಾಳೆ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ? Read More »

ಸುಳ್ಯ: ನೇಣಿಗೆ ಶರಣಾದ ಕಾಲೇಜು ವಿದ್ಯಾರ್ಥಿ

ಸಮಗ್ರ ನ್ಯೂಸ್: ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಾರಿನಲ್ಲಿ ವರದಿಯಾಗಿದೆ. ಮೃತನನ್ನು ನೆಟ್ಟಾರು ನಿವಾಸಿ ಚರಣ್‌ ಎಂದು ಗುರುತಿಸಲಾಗಿದೆ. ಈತ ಸುಳ್ಯದ ಶಿಕ್ಷಣ ಸಂಸ್ಥೆಯೊಂದರಲ್ಲಿ ಅಭ್ಯಾಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸುಳ್ಯ: ನೇಣಿಗೆ ಶರಣಾದ ಕಾಲೇಜು ವಿದ್ಯಾರ್ಥಿ Read More »

ನಾಪತ್ತೆಯಾಗಿದ್ದ ಮೂವರು ಮಕ್ಕಳು ಚರಂಡಿಯಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಗಚ್ಚಿನಗಕಟ್ಟಿ ಕಾಲೋನಿಯಿಂದ ನಿನ್ನೆ ನಾಪತ್ತೆಯಾಗಿದ್ದ ಮೂವರು ಮಕ್ಕಳು ಇಂದು ಶವವಾಗಿ ಪತ್ತೆಯಾಗಿದ್ದಾರೆ. ಅನುಷ್ಕಾ, ವಿಜಯ ಹಾಗೂ ಮಿಹಿರ ಮೃತ ದುರ್ದೈವಿಗಳು. ಇವರೆಲ್ಲ ಮನೆ ಮುಂದೆ ಆಟವಾಡುತ್ತಿದ್ದಾಗ ಕಾಲೋನಿಯಲ್ಲಿ ಒಂಟೆ ಬಂದಿತ್ತು. ಮೂವರು ಖುಷಿಯಲ್ಲಿ ಅದರ ಹಿಂದೆ ಹೋಗಿದ್ದಾರೆ. ಹೀಗೆ ಹೋದವರು ಮನೆಗೆ ವಾಪಸ್‌ ಆಗಿರಲಿಲ್ಲ. ಪೋಷಕರು ಸಹ ಮನೆ ಸುತ್ತಮುತ್ತ ಹುಡುಕಾಟ ನಡೆಸಿದ್ದರು. ಆದರೆ ಮಕ್ಕಳ ಸುಳಿವು ಮಾತ್ರ ಸಿಕ್ಕಿರಲಿಲ್ಲ. ಮಕ್ಕಳು ಕಾಣಿಯಾಗಿದ್ದಕ್ಕೆ ಕಂಗಾಲಾದ ಪೋಷಕರು ಎಪಿಎಂಸಿ ಠಾಣೆ ಮೆಟ್ಟಿಲು ಹತ್ತಿದ್ದರು.

ನಾಪತ್ತೆಯಾಗಿದ್ದ ಮೂವರು ಮಕ್ಕಳು ಚರಂಡಿಯಲ್ಲಿ ಶವವಾಗಿ ಪತ್ತೆ Read More »