ಕ್ರೈಂ

ಬೆಳಗಾವಿ: ಆಸ್ತಿ ವಿಚಾರವಾಗಿ ಮಾತಿನ ಚಕಮಕಿ| ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್:ಆಸ್ತಿ ವಿಚಾರವಾಗಿ ಅಣ್ಣನ ಮಗನಿಂದ ದಬದಬಹಟ್ಟಿ ಗ್ರಾಮದ ಕೇಶವ ಬೋಸಲೆ ಅವರ ಕೊಲೆ ಮಾಡಿದ ಘಟನೆ ಮೇ. 9ರಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಖಂಡೊಬಾ ಬೋಸಲೆ ಅನ್ನುವ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ. ಹಲವು ವರ್ಷಗಳಿಂದ ಜಮೀನಿನ ಸಲುವಾಗಿ ಚಿಕ್ಕಪ್ಪ ಹಾಗೂ ಯುವಕನ ಜೊತೆ ಜಗಳ ನಡೆಯುತ್ತಲೆ ಇತ್ತು. ಮೇ.9ರಂದು ಇಬ್ಬರು ಕೂಡಿ ಕೊಕಟನೂರ ಹೊರವಲಯದಲ್ಲಿ ಮದ್ಯ ಸೇವನೆ ಮಾಡಿದ್ದಾರೆ. ಬಳಿಕ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು […]

ಬೆಳಗಾವಿ: ಆಸ್ತಿ ವಿಚಾರವಾಗಿ ಮಾತಿನ ಚಕಮಕಿ| ಕೊಲೆಯಲ್ಲಿ ಅಂತ್ಯ Read More »

ಸೋಮವಾರಪೇಟೆ: ಮದುವೆ ರದ್ದು, ಕೋಪದಿಂದ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಸಮಗ್ರ ನ್ಯೂಸ್‌ : ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ. ವಿರೂಪಾಕ್ಷ ಕೊಲೆ ಮಾಡಿದ ಹುಚ್ಚ ಪ್ರೇಮಿ. ಮೀನಾ ಕೊಲೆಯಾಗಿರುವ ಬಾಲಕಿ. ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿದ್ದರೆ ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ವಿರೂಪಾಕ್ಷ ಆಕೆಯನ್ನು ಎಳೆದೊಯ್ದು ಕತ್ತು ಕೊಯ್ದು ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದಾನೆ. ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮದುವೆ ರದ್ದು ಮಾಡಲಾಗಿತ್ತು. ಆಕೆ

ಸೋಮವಾರಪೇಟೆ: ಮದುವೆ ರದ್ದು, ಕೋಪದಿಂದ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ Read More »

ಬೆಂಗಳೂರಿನಲ್ಲಿ ಪಿಜಿ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪಿಜಿ ಮೇಲಿಂದ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಗರದ ವೈಟ್ ಫೀಲ್ಡ್ ನ ಅಂಬೇಡ್ಕರ್ ನಗರದಲ್ಲಿ ಈ ಘಟನೆ ನಡೆದಿದೆ. ಕಲಬುರಗಿ ಮೂಲದ 28 ವರ್ಷದ ಯುವಕ ಕೆಲಸ ಸೀಮಿತ ಬೆಂಗಳೂರಿಗೆ ಬಂದಿದ್ದ, ಎಲ್ಲೂ ಕೂಡ ಕೆಲಸ ಸಿಕ್ಕದ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಪಿಜಿ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ Read More »

ಕಿರುತೆರೆ ನಟಿ ಜ್ಯೋತಿ ರೈಯವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಕನ್ನಡ ಕಿರುತೆರೆಯಲ್ಲಿ ಮಿಂಚಿ ಸುದ್ದಿಯಾಗಿ ಬಳಿಕ ತೆಲುಗು ಇಂಡಸ್ಟ್ರಿಯಲ್ಲಿ ಸದ್ದು ಮಾಡುತ್ತಿರುವ ಜ್ಯೋತಿ ರೈ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ ಹಾಟ್ ಹಾಟ್ ಫೋಟೋಗಳ ಮೂಲಕವೇ ಸದ್ದು ಮಾಡುತ್ತಿರುವ ನಟಿಯದ್ದು ಎನ್ನಲಾದ ಅಶ್ಲೀಲ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜ್ಯೋತಿ ರೈ ಅವರದ್ದು ಎನ್ನಲಾದ ಖಾಸಗಿ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಲು ಆರಂಭಿಸಿದೆ. ಅವರ ಈ ಫೋಟೋಗಳು ಪಕ್ಕದ ಆಂಧ್ರದಲ್ಲೂ ಸಖತ್‌ ಸದ್ದು ಮಾಡಿವೆ. ತೆಲುಗುವಿನಲ್ಲಿ ಗುಪ್ಪೆದ್ದಂತಾ ಮನಸು

ಕಿರುತೆರೆ ನಟಿ ಜ್ಯೋತಿ ರೈಯವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ Read More »

ಮಧ್ಯಪ್ರದೇಶ: ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ| ಇಬ್ಬರು ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್ : 13 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಮಗುವಿನ ಡಿಎನ್ಎ ಪರೀಕ್ಷೆ ಮೂಲಕ ಅಪರಾಧಿ ಯಾರೆಂದು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ಸದು, ಅನುಮಾನದ ಮೇರೆಗೆ ಇಬ್ಬರನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ. ಮಾಹಿತಿಯ ಪ್ರಕಾರ, ತಾಯಿ ಮತ್ತು ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಬಾಲಕಿಯ ತಾಯಿ ಮಗುವನ್ನು ಸಾಕಲು ನಿರಾಕರಿಸಿದ ಕಾರಣ ಶಿಶು ಕಲ್ಯಾಣ ಸಮಿತಿಯು ಮಗುವನ್ನು ತೆಗೆದುಕೊಳ್ಳಲು ನಿರ್ಧರಿಸಿದೆ. ಪೊಲೀಸರು ಅನುಮಾನದ ಮೇರೆಗೆ ಆಕೆಯ ಸಹೋದರ ಮತ್ತು

ಮಧ್ಯಪ್ರದೇಶ: ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ| ಇಬ್ಬರು ಪೊಲೀಸರ ವಶಕ್ಕೆ Read More »

ಬಿಸಿರೋಡ್: ಹೋಟೆಲ್ ವೊಂದರಲ್ಲಿ ನೇಣು ಬಿಗಿದು ಅವಿವಾಹಿತ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಬಿಸಿರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ‌ಘಟನೆ ಇಂದು ನಡೆದಿದೆ. ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲ್ ಕೃಷ್ಣಿಮಾದಲ್ಲಿ ರೂಮ್ ಮಾಡಿದ್ದ, ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಇಂದು ಬೆಳಿಗ್ಗೆ ರೂಮ್ ನ ಬಾಗಿಲು ತೆರೆಯದ ಇದ್ದ

ಬಿಸಿರೋಡ್: ಹೋಟೆಲ್ ವೊಂದರಲ್ಲಿ ನೇಣು ಬಿಗಿದು ಅವಿವಾಹಿತ ಯುವಕ ಆತ್ಮಹತ್ಯೆ Read More »

ಕಡಬ: ಮದುವೆ ಮನೆಯಲ್ಲಿ ಫೋಟೋ ತೆಗೆದ ಆರೋಪ| ಹಲ್ಲೆ, ಇತ್ತಂಡಗಳಿಂದ ದೂರು ದಾಖಲು

ಸಮಗ್ರ ನ್ಯೂಸ್: ಮದುವೆ‌ ಔತಣ ಕೂಟದಲ್ಲಿ ಯುವಕನೋರ್ವ ಯುವತಿಯೊಂದಿಗಿರುವುದನ್ನು ಮೊಬೈಲ್‌ನಲ್ಲಿ ಫೋಟೋ ತೆಗೆದಿದ್ದಾರೆ ಎನ್ನಲಾದ ಘಟನೆಯೊಂದಕ್ಕೆ ಸಂಬಂಧಿಸಿ ಇತ್ತಂಡಗಳ ವಿರುದ್ಧ ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ. 29ರಂದು ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಕುಶಾಲಪ್ಪ ಗೌಡ ಅವರ ಪುತ್ರಿಯ ವಿವಾಹ ಔತಣಕೂಟ ನಡೆದಿತ್ತು. ಅಲ್ಲಿ ನಿಶಾಂತ್‌ ಎಂಬ ಯುವಕ ಯುವತಿಯೊಂದಿಗಿರುವ ಫೋಟೋವನ್ನು ಬಾಂತಾಜೆ ನಿವಾಸಿ ದಿವಾಕರ ತೆಗೆದಿದ್ದಾರೆ ಎಂದು ಆರೋಪಿಸಿ ನಿಶಾಂತ್‌ ನೇತೃತ್ವದಲ್ಲಿ ಧನಂಜಯ, ಜನಾರ್ದನ, ಲೋಕೇಶ, ರಮೇಶ್‌, ಉದಯ, ಭುವನ, ಅಶ್ವಿ‌ತ್‌ ಅವರು

ಕಡಬ: ಮದುವೆ ಮನೆಯಲ್ಲಿ ಫೋಟೋ ತೆಗೆದ ಆರೋಪ| ಹಲ್ಲೆ, ಇತ್ತಂಡಗಳಿಂದ ದೂರು ದಾಖಲು Read More »

ಮದುವೆ ಮನೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಜನರು ಅಸ್ವಸ್ಥ

ಸಮಗ್ರ ನ್ಯೂಸ್: ಮದುವೆ ಮನೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಾತನೂರು ಸರ್ಕಲ್ ಬಳಿ ನಡೆದಿದೆ. ಇದು ಮುಸ್ಲಿಂ ಸಮುದಾಯದ ಮದುವೆ ಸಮಾರಂಭದಲ್ಲಿ ನಡೆದ ಘಟನೆಯಾಗಿದೆ. ಊಟದ ನಂತರ ಐಸ್ ಕ್ರೀಂ ತಿಂದಿದ್ದ ಅರ್ಧಗಂಟೆಯಲ್ಲಿ ವಾಂತಿ, ಭೇದಿ ಶುರುವಾಗಿದೆ. 50ಕ್ಕೂ ಹೆಚ್ಚು ಜನರ ಆರೋಗ್ಯ ವ್ಯತ್ಯಾಸವಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ 40 ಜನರನ್ನು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ

ಮದುವೆ ಮನೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಜನರು ಅಸ್ವಸ್ಥ Read More »

ಕೃಷಿಹೊಂಡದಲ್ಲಿ ಮುಳುಗಿ ಯುವಕ ಸಾವು| ತಂಗಿಯ ಮೊಬೈಲ್ ನಲ್ಲಿ ಸೆರೆಯಾಯ್ತು ಸಾವಿನ ಕೊನೆ ಕ್ಷಣ

ಸಮಗ್ರ ನ್ಯೂಸ್: ಕೃಷಿ ಹೊಂಡದಲ್ಲಿ ಆಕಸ್ಮಿಕವಾಗಿ ಮುಳುಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯ ನಾಗನಾಳ ಎಂಬಲ್ಲಿ ನಡೆದಿದೆ. ಮೊನ್ನೆ ಬುಧವಾರ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೈಸೂರಿನ ರಾಘವೇಂದ್ರ ನಗರ ನಿವಾಸಿ ಗೌತಮ್ ಗೌಡ (26) ಮೃತ ದುರ್ದೈವಿ. ಗೌತಮ್‌ ತನ್ನ ತಂದೆಯ ಊರು ವೇಮಗಲ್ ಸಮೀಪದ ನಾಗನಾಳ ಗ್ರಾಮಕ್ಕೆ ಆಗಮಿಸಿದ್ದ. ಕುಟುಂಬದವರೊಂದಿಗೆ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ. ಒಂದು ಬದಿ ಮಕ್ಕಳಿಬ್ಬರು ಈಜುತ್ತಿದ್ದರು. ಈ ಕಡೆ ತಂಗಿಗೆ ಮೊಬೈಲ್‌ನಲ್ಲಿ ಕೊಟ್ಟು ಈಜುವುದನ್ನು ವಿಡಿಯೊ

ಕೃಷಿಹೊಂಡದಲ್ಲಿ ಮುಳುಗಿ ಯುವಕ ಸಾವು| ತಂಗಿಯ ಮೊಬೈಲ್ ನಲ್ಲಿ ಸೆರೆಯಾಯ್ತು ಸಾವಿನ ಕೊನೆ ಕ್ಷಣ Read More »

ಕುಕ್ಕೆ ಸುಬ್ರಹ್ಮಣ್ಯ : ಸಿಡಿಲಾಘಾತಕ್ಕೆ ನವ ವಿವಾಹಿತ ಬಲಿ

ಸಮಗ್ರ ನ್ಯೂಸ್: ಸಿಡಿಲಿನ ಆಘಾತಕ್ಕೆ ಸಿಲುಕಿ ನವ ವಿವಾಹಿತ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕುಕ್ಕೆ ಸುಬ್ರಹ್ಮಣ್ಯದ ಹೊಸೊಳಿಕೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಇಲ್ಲಿನ ನಿವಾಸಿ ದಿ. ಬೀರಣ್ಣ ಗೌಡ ಎಂಬವರ ಮಗ ಸೋಮಸುಂದರ (32) ಎಂದು ಗುರುತಿಸಲಾಗಿದೆ. ಇಂದು ಸಂಜೆ ವೇಳೆಗೆ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಸಿಡಿಲು ಸಹಿತ ಮಳೆ ಸುರಿದಿತ್ತು. ಪರ್ವತ ಮುಖಿ ಬಳಿ ಸರ್ವೀಸ್ ಸ್ಟೇಷನ್ ನಡೆಸುತ್ತಿದ್ದ ಸೋಮಸುಂದರ್ ಮಳೆ ಬರುವ ಹಿನ್ನಲೆಯಲ್ಲಿ ಅಂಗಳದಲ್ಲಿ ಹರಡಿದ್ದ ಅಡಿಕೆ ಎತ್ತಿಡಲು ತೆರಳಿದ್ದರು. ಈ ವೇಳೆ

ಕುಕ್ಕೆ ಸುಬ್ರಹ್ಮಣ್ಯ : ಸಿಡಿಲಾಘಾತಕ್ಕೆ ನವ ವಿವಾಹಿತ ಬಲಿ Read More »