ಕ್ರೈಂ

ಸುಬ್ರಹ್ಮಣ್ಯ: ಬಸ್ ನಿಂದ ಬಿದ್ದು ಪ್ರಯಾಣಿಕ ಸಾವು

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದಲ್ಲಿ ಸಂಭವಿಸಿದೆ. ಬೆಂಗಳೂರು ಮೂಲದ ಸುಂಕದಕಟ್ಟೆಯ ಮಂಜುನಾಥ ಮೃತರು. ಎ. 22ರಂದು ಮಂಜುನಾಥ ಅವರು ಪತ್ನಿ ಜತೆ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರಯಾಣಿಸಿದ್ದರು. ಬಸ್‌ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ತಲಪುವಾಗ ಚಾಲಕ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ್ದರಿಂದ ಮತ್ತು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೇ ಇದ್ದುದರಿಂದ ಮಂಜುನಾಥ ಅವರು ಕೆಳಗೆ ಬಿದ್ದು ಗಂಭೀರ ಗಾಯಗೊಂಡರು. ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ […]

ಸುಬ್ರಹ್ಮಣ್ಯ: ಬಸ್ ನಿಂದ ಬಿದ್ದು ಪ್ರಯಾಣಿಕ ಸಾವು Read More »

ಆಕಸ್ಮಿಕವಾಗಿ ಕಾರು ಹರಿದು ಸ್ಥಳದಲ್ಲೇ ಮಗು ಸಾವು

ಸಮಗ್ರ ನ್ಯೂಸ್: ಆಕಸ್ಮಿಕವಾಗಿ ಮಗುವಿನ ಮೇಲೆ ಕಾರು ಹರಿದು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಎಚ್.ಎಸ್.ಆರ್‌. ಲೇಔಟ್‌ನ ಆಗರದಲ್ಲಿ ನಡೆದಿದೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಂದೂವರೆ ವರ್ಷದ ಶೈಜಾ ಜನ್ನತ್ ಮೃತ ಮಗು ಕಾರಿನ ಡೋರ್ ಬಳಿಯೇ ನಿಂತಿತ್ತು, ಆದರೆ ಮಗುವಿನ ತಂದೆ ನೋಡದೆ ಕಾರು ಚಲಾಯಿಸಿದ್ದರಿಂದ ಈ ದುರಂತ ಸಂಭವಿಸಿದೆ. ಸಂಬಂಧಿಗಳ ಮದುವೆ ಇದ್ದ ಕಾರಣ ಮಗುವಿನ ಕುಟುಂಬಸ್ಥರು ಚನ್ನಪಟ್ಟಣಕ್ಕೆ ಹೋಗಿದ್ದರು. ರಾತ್ರಿ ಹಿಂದಿರುಗಿದಾಗ ಮಗುವಿನ ತಂದೆ ಲಗೇಜ್‌ ತೆಗೆದು ಮನೆಯೊಳಗೆ

ಆಕಸ್ಮಿಕವಾಗಿ ಕಾರು ಹರಿದು ಸ್ಥಳದಲ್ಲೇ ಮಗು ಸಾವು Read More »

ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವು

ಸಮಗ್ರ ನ್ಯೂಸ್: ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಪ್ರವಾಸಕ್ಕೆ ಎಂದು ಹೋಗಿದ ಇವರೆಲ್ಲ ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಚಿಕ್ಕ ಮಗುವೊಂದು ಆಕಸ್ಮಿಕವಾಗಿ ನೀರಿಗೆ ಬಿದ್ದಿತ್ತು. ಮಗುವನ್ನು ರಕ್ಷಿಸಲು ಒಬ್ಬರ ಹಿಂದೆ ಒಬ್ಬರು ಹೋಗಿ 6 ಜನರು ಮೃತಪಟ್ಟಿದ್ದಾರೆ. ನಜೀರ್ ಅಹ್ಮದ್(40), ಅಲ್ಛೀಯಾ ಅಹ್ಮದ್(10), ಮೋಹಿನ್(6), ರೇಷಾ ಉನ್ನಿಸಾ(38), ಇಫ್ರಾ‌ ಅಹ್ಮದ್(15),

ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವು Read More »

ಕೊಲೊಂಬೊ: ಕಾರ್ ರೇಸ್ ವೇಳೆ ಅಪಘಾತ|ಏಳು ಮಂದಿ ಸಾವು

ಸಮಗ್ರ ನ್ಯೂಸ್ : ಮೋಟಾರ್ ಕಾರ್ ರೇಸಿಂಗ್ ವೇಳೆ ಅಪಘಾತ ಸಂಭವಿಸಿ ಮಗು ಸೇರಿ ಏಳು ಮಂದಿ ಮೃತಪಟ್ಟಿದ್ದು, 23 ಜನ ಗಾಯಗೊಂಡ ಘಟನೆ ಶ್ರೀಲಂಕಾದ ಉವಾ ಪ್ರಾಂತ್ಯದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 8 ವರ್ಷದ ಬಾಲಕ ಹಾಗೂ ನಾಲ್ವರು ಟ್ರ್ಯಾಕ್ ಸಹಾಯಕರು ಸೇರಿ 7 ಮಂದಿ ಮೃತಪಟ್ಟಿದ್ದಾರೆ. ದೀಯತಲಾವದ ಸೆಂಟ್ರಲ್ ಹಿಲ್ ರೆಸಾರ್ಟ್ನಲ್ಲಿ ನಡೆದ ರೇಸ್ನಲ್ಲಿ ಕಾರೊಂದು ಟ್ರ್ಯಾಕ್ನಿಂದ ಪಲ್ಟಿಯಾಗಿ ಪ್ರೇಕ್ಷಕರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 23 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ

ಕೊಲೊಂಬೊ: ಕಾರ್ ರೇಸ್ ವೇಳೆ ಅಪಘಾತ|ಏಳು ಮಂದಿ ಸಾವು Read More »

ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ನಿಂದ ವ್ಯಕ್ತಿಯೋರ್ವನ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ಬಾಪೂಜಿನಗರದ ಗಂಗಮ್ಮ ದೇವಾಲಯದ ಬಳಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ ನಡೆದಿದೆ. ಮೂವರು ದುಷ್ಕರ್ಮಿಗಳು, ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಮೆಂಟಲ್ ಸೂರಿ ಅಲಿಯಾಸ್ ಸುರೇಶ್ (45) ಕೊಲೆಯಾದ ವ್ಯಕ್ತಿ. ಈತ ಕಳ್ಳತನ ಹಾಗೂ ರಾಬರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಹಿನ್ನೆಲೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ಗಳ ಸಹಾಯದಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ವೈಯಕ್ತಿಕ ಕಾರಣಗಳಿಂದ

ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ನಿಂದ ವ್ಯಕ್ತಿಯೋರ್ವನ ಬರ್ಬರ ಹತ್ಯೆ Read More »

ಸುಳ್ಯ: ಪಯಸ್ವಿನಿಯಲ್ಲಿ ಮುಳುಗಿ ಯುವಕ ಸಾವು

ಸಮಗ್ರ ನ್ಯೂಸ್: ಸ್ನಾನ ಮಾಡುವ ವೇಳೆ ಮಂಡೆಕೋಲು ಗ್ರಾಮದ ಪಯಸ್ವಿನಿ ನದಿಯಲ್ಲಿ ಮುಳುಗಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಎ.17ರಂದು ಸಂಜೆ ಬಳಿಕ ಸಂಭವಿಸಿದೆ. ಮೃತನನ್ನು ಈಶ್ವರಮಂಗಲದ ಪ್ರವೀಣ್‌(38) ಎಂದು ಗುರುತಿಸಲಾಗಿದೆ. ಪ್ರವೀಣ್‌ ಅವರು ಎ.17ರಂದು ತನ್ನ ಸ್ನೇಹಿತರೊಂದಿಗೆ ಮಂಡೆಕೋಲು ಗ್ರಾಮದ ಪರಪೆಗಮಂನ್‌ ಗಾಯ ಎಂಬಲ್ಲಿ ಹರಿಯುವ ಪಯಸ್ವಿನಿ ನದಿಗೆ ಮೀನು ಹಿಡಿಯಲು ತೆರಳಿದ್ದವರು, ನದಿಯಲ್ಲಿ ಸ್ನಾನ ಮಾಡಲು ಇಳಿದಿದ್ದು, ಈ ವೇಳೆ ಪ್ರವೀಣ್‌ ಅವರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದು, ಕೂಡಲೇ ಅಲ್ಲಿದ್ದವರು ಇತರರಿಗೆ ಮಾಹಿತಿ ನೀಡಿದ್ದಾರೆ. ಅಲ್ಲಿಗೆ

ಸುಳ್ಯ: ಪಯಸ್ವಿನಿಯಲ್ಲಿ ಮುಳುಗಿ ಯುವಕ ಸಾವು Read More »

ಸುಬ್ರಹ್ಮಣ್ಯ: ಕೊಳೆತ ಸ್ಥಿತಿಯಲ್ಲಿ ತಲೆಬುರುಡೆ ಹಾಗೂ ಬ್ಯಾಗ್ ಪತ್ತೆ

ಸಮಗ್ರ ನ್ಯೂಸ್: ಕೊಳೆತ ಸ್ಥಿತಿಯಲ್ಲಿ ತಲೆಬುರುಡೆ ಹಾಗೂ ಬ್ಯಾಗ್‌ ಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ಚಂದ್ರಶೇಖರ್‌ ಅವರು ಕಡಬ ಠಾಣೆಗೆ ದೂರು ನೀಡಿದ್ದಾರೆ. ಚಂದ್ರಶೇಖರ್‌ ಅವರು ಎ. 19ರಂದು ಸ್ಥಳೀಯ ನಿವಾಸಿಗಳೊಂದಿಗೆ ಕಾಡಿಗೆ ಸೌದೆ ತರಲು ತೆರಳುವ ವೇಳೆ ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಷದಲ್ಲಿರುವ ರಕ್ಷಿತಾರಣ್ಯದಲ್ಲಿ ತೆರಳುತ್ತಿದ್ದಾಗ ದಾರಿಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆ ಬುರುಡೆ ಹಾಗೂ ಬ್ಯಾಗ್‌ ಕಂಡುಬಂದಿತ್ತು. ಸ್ವಲ್ಪ

ಸುಬ್ರಹ್ಮಣ್ಯ: ಕೊಳೆತ ಸ್ಥಿತಿಯಲ್ಲಿ ತಲೆಬುರುಡೆ ಹಾಗೂ ಬ್ಯಾಗ್ ಪತ್ತೆ Read More »

ಸುಳ್ಯ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಎರಡು ಕಾರುಗಳ‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಪ್ರಯಾಣಿಕರು ಗಾಯಗೊಂಡ ಘಟನೆ ಸುಳ್ಯ ನಗರ ಶ್ರೀರಾಮ್ ಪೇಟೆಯಲ್ಲಿ ನಡೆದಿದೆ. ಓಮ್ನಿ ಹಾಗೂ ಸಿಲಾರಿಯೋ ಕಾರುಗಳ ನಡುವೆ ನಡುರಸ್ತೆಯಲ್ಲೇ ಡಿಕ್ಕಿ ಸಂಭವಿಸಿದೆ. ಘಟನೆಯಿಂದಾಗಿ ನಗರದಲ್ಲಿ‌ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪ್ರಯಾಣಿಕರು ಪರದಾಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸುಳ್ಯ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ Read More »

ದೋಣಿ ಮಗುಚಿ ಇಬ್ಬರು ಸಾವು| ಏಳು ಮಂದಿ ನಾಪತ್ತೆ

ಸಮಗ್ರ ನ್ಯೂಸ್: ಒಡಿಶಾದ ಜಾರ್ಸುಗುಡ ಜಿಲ್ಲೆಯ ಮಹಾನದಿಯಲ್ಲಿ ದೋಣಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ, ಏಳು ಮಂದಿ ನಾಪತ್ತೆಯಾದ ಘಟನೆ ನಡೆದಿದೆ. ಈ ದೋಣಿ ಸುಮಾರು 50 ಪ್ರಯಾಣಿಕರನ್ನು ಹೊತ್ತು ಪಥರ್ಸೇನಿ ಕುಡಾದಿಂದ ಬಾರ್ಗರ್ ಜಿಲ್ಲೆಯ ಬಂಜಿಪಲ್ಲಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಜಾರ್ಸುಗುಡ ಜಿಲ್ಲೆಯ ರೆಂಗಲಿ ಪೊಲೀಸ್ ಠಾಣೆಯ ಶಾರದಾ ಘಾಟ್ ತಲುಪುತ್ತಿದ್ದಾಗ ದೋಣಿ ಮಗುಚಿ ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸ್ಥಳೀಯ ಮೀನುಗಾರರು 35 ಪ್ರಯಾಣಿಕರನ್ನು ರಕ್ಷಿಸಿ ದಡಕ್ಕೆ ಕರೆ

ದೋಣಿ ಮಗುಚಿ ಇಬ್ಬರು ಸಾವು| ಏಳು ಮಂದಿ ನಾಪತ್ತೆ Read More »

ರಾಮನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 45 ಜನ ಅಸ್ವಸ್ಥ

ಸಮಗ್ರ ನ್ಯೂಸ್: ನಿನ್ನೆ ರಾಮನವಮಿ ಸಂಭ್ರಮ. ಇದೇ ಸಂದರ್ಭದಲ್ಲಿ ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 45 ಜನರು ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ನಿನ್ನೆ ತುಮಕೂರಿನ ಸುಬ್ರಹ್ಮಣ್ಯ ದೇಗುಲದಲ್ಲಿ ಮಜ್ಜಿಗೆ, ಪಾನಕವನ್ನ ಗ್ರಾಮಸ್ಥರು ಸೇವಿಸಿದ್ದರು. ಬಳಿಕ ಮಧ್ಯರಾತ್ರಿಯಿಂದ ವಾಂತಿ-ಭೇದಿ ಶುರುವಾಗಿದೆ. ಇವರೆಲ್ಲ ಬೆಳಗ್ಗೆ ಎಡೆಯೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು. ಆದರೆ, ಆರೋಗ್ಯ ಸುಧಾರಿಸದ ಹಿನ್ನೆಲೆ ಕುಣಿಗಲ್ ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ರಾಮನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 45 ಜನ ಅಸ್ವಸ್ಥ Read More »