ಕ್ರೈಂ

ಶಿವಮೊಗ್ಗ : ಲಾಡ್ಜ್‌ ನಲ್ಲಿ ಯುವತಿಯ ಕತ್ತು ಸೀಳಿ ಬರ್ಬರ ಹತ್ಯೆ

ಸಮಗ್ರ ನ್ಯೂಸ್‌ : ಲಾಡ್ಜ್‌ವೊಂದರಲ್ಲಿ ಯುವತಿಯೊಬ್ಬಳ ಬರ್ಬರ ಹತ್ಯೆ ನಡೆದಿರುವ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಚೌಡೇಶ್ವರಿ ದೇವಸ್ಥಾನದ ಪಕ್ಕದ ಲಾಡ್ಜ್‌ನಲ್ಲಿ ನಡೆದಿದೆ. ಕಳೆದ ಸೋಮವಾರ (ಏ.1)ರಂದು ಲಾಡ್ಜ್‌ಗೆ ಬಂದಿದ್ದ ಯುವಕ-ಯುವತಿ ರೂಂ ಬಾಡಿಗೆ ಪಡೆದಿದ್ದರು. ಲಾಡ್ಜ್‌ನಲ್ಲಿ ತಂಗಿದ್ದಾಗ ಜತೆಗೆ ಇದ್ದ ಯುವಕನೇ ಯುವತಿಯ ಕತ್ತು ಸೀಳಿ ಕೊಲೆ ಮಾಡಿ ಓಡಿ ಹೋಗಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ. ಲಾಡ್ಜ್‌ ಸಿಬ್ಬಂದಿ ರೂಮಿಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮೃತಳ ಗುರುತು ಇನ್ನೂ ಪತ್ತೆಯಾಗಿಲ್ಲ. […]

ಶಿವಮೊಗ್ಗ : ಲಾಡ್ಜ್‌ ನಲ್ಲಿ ಯುವತಿಯ ಕತ್ತು ಸೀಳಿ ಬರ್ಬರ ಹತ್ಯೆ Read More »

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣ/ ಶ್ರೀಲಂಕಾಗೆ ವಾಪಸಾದ ಅಪರಾಧಿಗಳು

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಮೂವರು ಅಪರಾಧಿಗಳು ಭಾರತ ತೊರೆದಿದ್ದು, ಶ್ರೀಲಂಕಾಗೆ ವಾಪಸಾಗಿದ್ದಾರೆ. 30 ವರ್ಷಗಳಿಗೂ ಹೆಚ್ಚು ಕಾಲ ಜೈಲುವಾಸ ಅನುಭವಿಸಿದ್ದ ಮುರುಗನ್ ಯಾನೆ ಶ್ರೀಹರನ್, ಜಯಕುಮಾರ್ ಹಾಗೂ ರಾಬರ್ಟ್ ಪಯಸ್ ಸಹಿತ ಈ ಪ್ರಕರಣದ ಒಟ್ಟು ಏಳು ಮಂದಿಯನ್ನು ಸದ್ಯ ತಿರುಚಿರಾಪಳ್ಳಿಯ ವಿಶೇಷ ಶಿಬಿರದಲ್ಲಿ ಇರಿಸಲಾಗಿತ್ತು. ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ ಗಡೀಪಾರು ಆದೇಶ ಹೊರಡಿಸಿದ ಬಳಿಕ ಅವರು ಸ್ವದೇಶಕ್ಕೆ ಮರಳಬಹುದು ಎಂದು ತಮಿಳುನಾಡು ಸರ್ಕಾರ ಮದ್ರಾಸ್ ಹೈಕೋರ್ಟ್‍ಗೆ ಈ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣ/ ಶ್ರೀಲಂಕಾಗೆ ವಾಪಸಾದ ಅಪರಾಧಿಗಳು Read More »

ಕೆಪಿಎಸ್​ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ 4 ಕೋಟಿ ವಂಚನೆ| ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಖತರ್ನಾಕ್ ಗ್ಯಾಂಗೊಂದು ಕೆಪಿಎಸ್​ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ 4 ಕೋಟಿ ಹಣ ಪಡೆದು ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕೆಪಿಎಸ್​ಸಿ ಸದಸ್ಯತ್ವ ಕೊಡಿಸುವುದಾಗಿ ಹೇಳಿ ಸಿಎಂ ಹಾಗೂ ರಾಜ್ಯಪಾಲರ ನಕಲಿ ಲೆಟರ್ ಹೆಡ್ ಹಾಗೂ ನಕಲಿ ಸಹಿ ಬಳಸಿ 4 ಕೋಟಿ ಹಣ ಪಡೆದು ವಂಚನೆ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ರಿಯಾಜ್ ಅಹ್ಮದ್, ಯೂಸುಫ್, ಚಂದ್ರಪ್ಪ ಸೇರಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಖತರ್ನಾಕ್ ಗ್ಯಾಂಗ್ ಕರ್ನಾಟಕ

ಕೆಪಿಎಸ್​ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ 4 ಕೋಟಿ ವಂಚನೆ| ಆರೋಪಿಗಳು ಅರೆಸ್ಟ್ Read More »

ರಾಯಚೂರು: ಜಮೀನಿನ ವಿಚಾರದಲ್ಲಿ ಜಗಳ ನಡೆದು ಕೊಲೆಯಲ್ಲಿ ಅಂತ್ಯ| ಐವರ ಬಂಧನ

ಸಮಗ್ರ ನ್ಯೂಸ್ : ಜಮೀನಿನ ವಿಚಾರಕ್ಕೆ ಸಹೋದರರ ನಡುವೆ ನಡೆದ ಗಲಾಟೆಯಲ್ಲಿ ಕಿರಿಯ ಸಹೋದರ ಭೀಕರವಾಗಿ ಕೊಲೆಯಾಗಿರುವ ಘಟನೆ ಮಾನ್ವಿಯ ಜಿನೂರಿನಲ್ಲಿ ನಡೆದಿದೆ. ರಾಮಣ್ಣ (36) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸಹೋದರರ ನಡುವೆ ನಡೆದ ಗಲಾಟೆಯಲ್ಲಿ ರಾಮಣ್ಣ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಗಲಾಟೆಯಲ್ಲಿ ಮೃತನ ಪತ್ನಿ ರತ್ನಮ್ಮ ಹಾಗೂ ಅಕ್ಕ ಯಲ್ಲಮ್ಮ ಗಂಭೀರವಾಗಿ ಗಾಯಗೊಂಡಿದ್ದು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಗ್ರಾಮದಲ್ಲಿದ್ದ 2

ರಾಯಚೂರು: ಜಮೀನಿನ ವಿಚಾರದಲ್ಲಿ ಜಗಳ ನಡೆದು ಕೊಲೆಯಲ್ಲಿ ಅಂತ್ಯ| ಐವರ ಬಂಧನ Read More »

ಬೇಗೂರಿನಲ್ಲಿ ಸಹೋದರನಿಂದಲೇ ತಮ್ಮನಿಗೆ ಗುಂಡು| ಸ್ಥಳದಲ್ಲಿ ಮೃತಪಟ್ಟ ಮಲ್ಲಂಡ ಪ್ರಕಾಶ್

ಸಮಗ್ರ ನ್ಯೂಸ್: ಸಹೋದರನಿಂದಲೇ ತಮ್ಮನಿಗೆ ಗುಂಡು ಹೊಡೆದು ಕೊಲೆ ಮಾಡಿದ ಪ್ರಕರಣ ಪೊನ್ನಂಪೇಟೆ ತಾಲೂಕು ಬೇಗೂರಿನಲ್ಲಿ ಮಾ.30 ರಂದು ನಡೆದಿದೆ. ಕಾಂಗ್ರೆಸ್ ಪಕ್ಷದ ಮುಖಂಡ ಅರ್ವತೋಕ್ಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಂಡ ಪ್ರಕಾಶ್(57) ಎಂಬವರಿಗೆ ಅವರ ಸಹೋದರ ಸುಬ್ರಮಣಿ ಇದೀಗ ಬೇಗೂರು ತೋಟದಲ್ಲಿ ಗುಂಡು ಹೊಡೆದ ಪರಿಣಾಮ ಪ್ರಕಾಶ್ ಮೃತಪಟ್ಟಿದ್ದಾರೆ. ಪ್ರಕಾಶ್ ಪುತ್ರನಿಗೂ ಗುಂಡು ತಗಲಿದ್ದು ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ ಪೊನ್ನಂಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ

ಬೇಗೂರಿನಲ್ಲಿ ಸಹೋದರನಿಂದಲೇ ತಮ್ಮನಿಗೆ ಗುಂಡು| ಸ್ಥಳದಲ್ಲಿ ಮೃತಪಟ್ಟ ಮಲ್ಲಂಡ ಪ್ರಕಾಶ್ Read More »

ಪತ್ನಿಗೆ ಅನೈತಿಕ ಸಂಬಂಧ|ಮನನೊಂದು ಪತಿ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ವ್ಯಕ್ತಿ ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ತಾಲೂಕಿನ ಅಣದೂರ್ ಗ್ರಾಮದಲ್ಲಿ ನಡೆದಿದೆ. ಮೃತನ ಪತ್ನಿ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಆತನೊಂದಿಗೆ ಪರಾರಿಯಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ದಾಸರ್ (27) ಎರಡು ದಿನಗಳ ಹಿಂದೆಯೇ ಟ್ಯಾಂಕ್‍ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಲ್ಲಿಯಲ್ಲಿ ಬರುತ್ತಿದ್ದ ನೀರು ವಾಸನೆ ಬರುತ್ತಿದ್ದ ಕಾರಣ, ಟ್ಯಾಂಕ್‍ನ್ನು ಜನ ಪರಿಶೀಲಿಸಿದಾಗ ದಾಸರ್‍ನ ಮೃತದೇಹ

ಪತ್ನಿಗೆ ಅನೈತಿಕ ಸಂಬಂಧ|ಮನನೊಂದು ಪತಿ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆ Read More »

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ| ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ NIA

ಸಮಗ್ರ ನ್ಯೂಸ್: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಘೋಷಿಸಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿಗಳಾಗಿರುವ ಮುಸಾವಿರ್ ಹುಸೇನ್ ಶಾಜೀಬ್ ಮತ್ತು ಅಬ್ದುಲ್ ಮತಿನ್ ಅಹಮದ್ ತಾಹಾ ಅವರ ಪತ್ತೆಗೆ ಸಹಕಾರಿ ಆಗುವ ಸುಳಿವು ಇದ್ದಲ್ಲಿ ಮಾಹಿತಿ ನೀಡುವಂತೆ ಎನ್‌ಐಎ ಮನವಿ ಮಾಡಿಕೊಂಡಿದೆ. ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿ ಇರಿಸಲಾಗುವುದು. 10 ಲಕ್ಷ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ| ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ NIA Read More »

ಕೂಜಿಮಲೆ‌ ಪ್ರದೇಶದಲ್ಲಿ ಮತ್ತೆ ನಕ್ಸಲ್ ಸಂಚಾರ!?| ರಬ್ಬರ್ ತೋಟದಲ್ಲಿ ಕಂಡುಬಂದ ಅಪರಿಚಿತ ಮಹಿಳೆ ಯಾರು? ಚುರುಕುಗೊಂಡ ಶೋಧ ಕಾರ್ಯಾಚರಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಹಾಗೂ ಕೊಡಗು ಗಡಿ ಭಾಗದ ಕೂಜಿಮಲೆ ಎಸ್ಟೇಟ್‌ ಪ್ರದೇಶದಲ್ಲಿ ಬುಧವಾರ ಅಪರಿಚಿತ ಮಹಿಳೆ ಓಡಾಡಿದ್ದು, ಆಕೆ ನಕ್ಸಲ್‌ ಎಂಬ ಶಂಕೆಯ ಹಿನ್ನೆಲೆಯಲ್ಲಿ ಶೋಧ ನಡೆಸಲಾಗಿದೆ. ಬುಧವಾರ (ಮಾ27) ಮಧ್ಯಾಹ್ನ 12ರ ಬಳಿಕ ಅಪರಿಚಿತ ಮಹಿಳೆ ಎಸ್ಟೇಟ್‌ನ ರಬ್ಬರ್‌ ತೋಟದಲ್ಲಿ ಸಂಚರಿಸುತ್ತಿರುವುದನ್ನು ಸಿಬಂದಿ ನೋಡಿದ್ದು, ಬಳಿಕ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ನಕ್ಸಲ್‌ ನಿಗ್ರಹ ಪಡೆ (ಎಎನ್‌ಎಫ್) ಆಗಮಿಸಿ ಶೋಧ ನಡೆಸಿದರೂ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಹೇಳಲಾಗಿದೆ. ಶಂಕಿತ ಮಹಿಳೆ ರಬ್ಬರ್‌ ತೋಟದಿಂದ

ಕೂಜಿಮಲೆ‌ ಪ್ರದೇಶದಲ್ಲಿ ಮತ್ತೆ ನಕ್ಸಲ್ ಸಂಚಾರ!?| ರಬ್ಬರ್ ತೋಟದಲ್ಲಿ ಕಂಡುಬಂದ ಅಪರಿಚಿತ ಮಹಿಳೆ ಯಾರು? ಚುರುಕುಗೊಂಡ ಶೋಧ ಕಾರ್ಯಾಚರಣೆ Read More »

ಪುತ್ತೂರು: ಬಸ್ ನಿಲ್ದಾಣದಲ್ಲೇ ಚೂರಿ ಇರಿತ

ಸಮಗ್ರ ನ್ಯೂಸ್: ಕೆಎಸ್ ಆರ್ ಟಿಸಿ ಬಸ್‌ ನಿಲ್ದಾಣದಲ್ಲಿ ಕೂಲಿ ಕಾರ್ಮಿಕರ ನಡುವೆ ಮಾತಿನ ಚಕಮಕಿ ನಡೆದು ಚೂರಿ ಇರಿದ ಘಟನೆ ನಡೆದಿದ್ದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಮಲ್ಲಪುರ ಗೋಕಾಕ್‌ ನಿವಾಸಿ ಕೂಲಿ ಕಾರ್ಮಿಕ ಆನಂದ ಬಾಂದಾವಿ ಚೂರಿ ಇರಿತಕ್ಕೊಳಗಾದವರು. ಗಾಯಾಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಪರಿಚಯಸ್ಥರಾದ ಅವಿನಾಶ್‌, ನಾರಾಯಣ, ದುಗೇìಶ್‌ ಮತ್ತು ಹರೀಶ್‌ರೊಂದಿಗೆ ಕುಳಿತುಕೊಂಡು ಮಾತನಾಡುತ್ತಿದ್ದಾಗ ಆರೋಪಿ ಅವಿನಾಶ್‌ ಏಕಾಏಕಿಯಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ

ಪುತ್ತೂರು: ಬಸ್ ನಿಲ್ದಾಣದಲ್ಲೇ ಚೂರಿ ಇರಿತ Read More »

ಪಣಂಬೂರು : ಶವ ಪತ್ತೆ- ಕೊಲೆ ಶಂಕೆ

ಸಮಗ್ರ ನ್ಯೂಸ್: ಪಣಂಬೂರು-ಜೋಕಟ್ಟೆ ಬಯಲು ಪ್ರದೇಶದಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಎಂಬ ಸಂಶಯ ವ್ಯಕ್ತವಾಗಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲವಾದರೂ, ಸುಮಾರು 40-45 ವರ್ಷ ವಯಸ್ಸಿನ ಗಂಡಸಿನ ಶವ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪಣಂಬೂರು : ಶವ ಪತ್ತೆ- ಕೊಲೆ ಶಂಕೆ Read More »