ಕ್ರೈಂ

ಬಳ್ಳಾರಿ :ಶ್ರೀಗಂಧದ ಮರವನ್ನು ಸಾಗಿಸುತ್ತಿದ್ದ ಕಳ್ಳರು ಪೊಲೀಸರ ವಶ

ಸಮಗ್ರ ನ್ಯೂಸ್ : ಶ್ರೀಗಂಧದ ಮರವನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸುತ್ತಿರುವ ಮಾಹಿತಿ ತಿಳಿದ ಪೊಲೀಸರು ಕಳ್ಳರನ್ನ ಬಂಧಿಸುವಲ್ಲಿ ಯಶಸ್ವಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಎಚ್ಎಲ್ಸಿ ಕ್ಯಾನಲ್ ಬಳಿ ನಡೆದಿದೆ. ಆರೋಪಿ ಒನ್ ಗಂಗಾನಾಯ್ಕ (ಸಂಡೂರ), ಮಾಂತೇಶ (ಕೊಟ್ಟೂರು), ಚೆನ್ನಪ್ಪ (ಬಾಗಲಕೋಟಿ), ರಾಮಣ್ಣ (ಬಾಗಲಕೋಟಿ) ಈ ನಾಲ್ವರನ್ಬಂನು ಬಂಧಿಸುವಲ್ಲಿ ಹೊಸಪೇಟೆ ಶಹರ ಠಾಣೆ ಪೋಲಿಸರು ಯಶಸ್ವಿಯಾಗಿದ್ದಾರೆ. ಗೂಡ್ಸ್ವಾಹನ ಮತ್ತು ಫಿಕಪ್ ವಾಹನದಲ್ಲಿ ಸುಮಾರು 203 ಕೆಜಿ ತೂಕದ ಶ್ರೀಗಂಧದ ಮರದ ತುಂಡುಗಳನ್ನು ಯಾವುದೇ ದಾಖಲೆಗಳಿಲ್ಲದೆ […]

ಬಳ್ಳಾರಿ :ಶ್ರೀಗಂಧದ ಮರವನ್ನು ಸಾಗಿಸುತ್ತಿದ್ದ ಕಳ್ಳರು ಪೊಲೀಸರ ವಶ Read More »

ಬ್ಯಾಂಕ್ ಕೆಲಸ ಬಿಟ್ಟು ಲ್ಯಾಪ್‌ಟಾಪ್‌ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಲೇಡಿ ಅರೆಸ್ಟ್

ಸಮಗ್ರ ನ್ಯೂಸ್: ಹೋಟೆಲ್, ಪಿಜಿಗಳನ್ನೇ ಟಾರ್ಗೆಟ್ ಮಾಡಿ ಲ್ಯಾಪ್‌ಟಾಪ್‌ಗಳನ್ನು ಕದಿಯುತ್ತಿದ್ದ ಜೆಸ್ಸಿ ಅಗರ್ ವಾಲ್ ಎಂಬಾಕೆಯನ್ನು ಎಚ್‌ಎಎಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈಕೆ ಹೋಟೆಲ್, ಪಿಜಿಗಳಲ್ಲಿ ರೂಂ ಪಡೆದು ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದಳು. ಹೋಟೆಲ್‌ ಹಾಗೂ ಪಿಜಿಯಲ್ಲಿರವವರು ಟಿಫಿನ್, ಊಟಕ್ಕೆ ತೆರಳಿದ ಸಂದರ್ಭದಲ್ಲಿ ಕ್ಷಣಾರ್ಧದಲ್ಲಿ ಲ್ಯಾಪ್‌ಟಾಪ್ ಕದ್ದು ಎಸ್ಕೇಪ್ ಆಗುತ್ತಿದ್ದಳು. ಇನ್ನೂ ಈಕೆ ಐಸಿಐಸಿಐ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಕೆಲಸ ಬಿಟ್ಟು ಕೋರಮಂಗಲ, ಇಂದಿರಾನಗರ, ಎಚ್‌ಎಎಲ್ ಸುತ್ತಮುತ್ತ ಲ್ಯಾಪ್‌ಟಾಪ್‌ಗಳನ್ನು ಕಳ್ಳತನ ಮಾಡಿದ್ದಳು.

ಬ್ಯಾಂಕ್ ಕೆಲಸ ಬಿಟ್ಟು ಲ್ಯಾಪ್‌ಟಾಪ್‌ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಲೇಡಿ ಅರೆಸ್ಟ್ Read More »

ಬಾಲಕನ ಅಪಹರಿಸಿ ಹತ್ಯೆ| 25 ಲಕ್ಷ ರೂ.ಗೆ ಬೇಡಿಕೆ

ಸಮಗ್ರ ನ್ಯೂಸ್:‌ ಹಣಕ್ಕಾಗಿ ಬಾಲಕನನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಬದ್ಲಾಪುರ್‌ನಲ್ಲಿ ನಡೆದಿದೆ. ಒಂಬತ್ತು ವರ್ಷದ ಬಾಲಕನನ್ನು ಮಸೀದಿಯಲ್ಲಿ ಸಂಜೆಯ ಪ್ರಾರ್ಥನೆಯ ವೇಳೆ ದುಷ್ಕರ್ಮಿಗಳು ಅಪಹರಿಸಿದ್ದಾರೆ. ರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ಗಾಬರಿಗೊಂಡು ಹುಡುಕಾಟ ನಡೆಸಿದ್ದಾರೆ. ನಂತರ ಇಬಾದ್‌ನ ಪೋಷಕರಿಗೆ ಅನಾಮಧೇಯ ಕರೆ ಮಾಡಿ ಆತನನ್ನು ಕಿಡ್ನಾಪ್ ಮಾಡಿರುವುದಾಗಿ ತಿಳಿಸಿದ್ದಾರೆ. ಮನೆಯವರ ಬಳಿ 25 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಟೈಲರ್ ಆಗಿರುವ ಆತನ ತಂದೆ ಮುದಾಸಿರ್ ಬುಬರ್ ಕುಲಗಾಂವ್ ಗ್ರಾಮಾಂತರ ಪೊಲೀಸರಿಗೆ ಮಾಹಿತಿ

ಬಾಲಕನ ಅಪಹರಿಸಿ ಹತ್ಯೆ| 25 ಲಕ್ಷ ರೂ.ಗೆ ಬೇಡಿಕೆ Read More »

ನೀಟ್​ ಆಕಾಂಕ್ಷಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್‌ ; ನೀಟ್​ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ನೀಟ್‌ಗೆ ತಯಾರಿ ನಡೆಸುತ್ತಿದ್ದ 20 ವರ್ಷದ ಉರುಜ್ ಖಾನ್ ಎಂಬಾತ ನಗರದ ಬಾಡಿಗೆ ಕೊಠಡಿಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. 2024ರಲ್ಲಿ ಇಂತಹ ಘಟನೆ ಅನೇಕ ಸಂಭವಿಸಿದ್ದು, ಇದೀಗ 7ನೇ ಘಟನೆ ಇದಾಗಿದೆ. ಕಳೆದ ವರ್ಷದಲ್ಲಿ ವಿದ್ಯಾರ್ಥಿಗಳ ಸಾವಿನ ಸಂಖ್ಯೆ 29 ರಷ್ಟಿತ್ತು. ಉತ್ತರ ಪ್ರದೇಶದ ಕನೌಜ್ ನಿವಾಸಿಯಾಗಿರುವ ಮೃತ ಉರುಜ್ ಖಾನ್, ವಿಜ್ಞಾನನಗರ ಪ್ರದೇಶದ ಬಾಡಿಗೆ ಫ್ಲಾಟ್‌ನಲ್ಲಿ

ನೀಟ್​ ಆಕಾಂಕ್ಷಿ ನೇಣು ಬಿಗಿದು ಆತ್ಮಹತ್ಯೆ Read More »

ಕೇರಳ: ರಥದ ಚಕ್ರಕ್ಕೆ ಸಿಲುಕಿ ಐದು ವರ್ಷದ ಮಗು ಸಾವು

ಸಮಗ್ರ ನ್ಯೂಸ್: ವಾರ್ಷಿಕ ಉತ್ಸವದ ವೇಳೆ ಕೊಲ್ಲಂ ಸಮೀಪದ ಕೊಟ್ಟನ್‌ಕುಳಂಗರ ದೇವಸ್ಥಾನದಲ್ಲಿ ಐದು ವರ್ಷದ ಮಗುವೊಂದು ರಥದ ಚಕ್ರದಡಿ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಭಕ್ತರು ಎಳೆಯುವ ರಥದ ದೊಡ್ಡ ಚಕ್ರಗಳ ಅಡಿಯಲ್ಲಿ ಆಕಸ್ಮಿಕವಾಗಿ ಮಗು ಬಿದ್ದು ಸಾವನ್ನಪ್ಪಿದೆ. ಚವರ ನಿವಾಸಿ ದಂಪತಿಯ ಪುತ್ರಿ ಕ್ಷೇತ್ರ ಸಾವನ್ನಪ್ಪಿದ ಮಗು. ಮಗುವನ್ನು ಪೋಷಕರು ಪೊಲೀಸರ ಸಹಾಯದೊಂದಿಗೆ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದದರೂ, ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳ: ರಥದ ಚಕ್ರಕ್ಕೆ ಸಿಲುಕಿ ಐದು ವರ್ಷದ ಮಗು ಸಾವು Read More »

SSLC ಪರೀಕ್ಷೆ ಬರೆಯಬೇಕಾದ ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಸಮಗ್ರ ನ್ಯೂಸ್‌ : ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ರಸ್ತೆ ಅಪಘಾತದಲ್ಲಿ, ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಹೋಗುತ್ತಿದ್ದ ವಿದ್ಯಾರ್ಥಿನಿ ರಸ್ತೆ ದಾಟುವ ವೇಳೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದು,ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಟ್ಟಿರುವ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಮೃತ ದುರ್ದೈವಿ.

SSLC ಪರೀಕ್ಷೆ ಬರೆಯಬೇಕಾದ ಇಬ್ಬರು ವಿದ್ಯಾರ್ಥಿಗಳು ಮೃತ್ಯು Read More »

ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

ಸಮಗ್ರ ನ್ಯೂಸ್: ದುಷ್ಕರ್ಮಿಗಳ ಗುಂಡಿಗೆ 11 ವರ್ಷದ ಕಾಡುಕೋಣ ಒಂದು ಬಲಿಯಾದ ಘಟನೆ ಪಿರಿಯಾಪಟ್ಟಣ ದಲ್ಲಿ ನಡೆದಿದೆ. ಮುಖ್ಯರಸ್ತೆಯಿಂದ ಪರದಕಟ್ಟೆ ಕಳ್ಳ ಬೇಟೆ ತಡೆ ಶಿಬಿರಕ್ಕೆ ಹೋಗುವ ರಸ್ತೆಯ ಮೈಸೂರು ಕೊಡಗು ಚೈನ್ ಗೇಟ್ ಅರಣ್ಯ ಪ್ರದೇಶದಲ್ಲಿ ನಡೆದಿದ್ದು ನಾಗರಹೊಳೆ ಹುಲಿ ಸುರಕ್ಷಿತ ಪ್ರದೇಶವಾಗಿದ್ದು ಇಂದು (ಮಾ.25) ಬೆಳಗ್ಗೆ ಕಾಡುಕೋಣಕ್ಕೆ ಗುಂಡು ಹೊಡೆದ ಶಬ್ದ ಕೇಳಿದೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರುವ ಸಂದರ್ಭ ವನ್ಯಜೀವಿ ಬೇಟೆಗಾರರು ಪರರಿಯಾಗಿದ್ದಾರೆ. ದುಷ್ಕರ್ಮಿಗಳ ಪತ್ತೆಗಾಗಿ ಅರಣ್ಯ ಇಲಾಖೆ ವಿಶೇಷ ತಂಡ ರಚಿಸಿದೆ.

ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ Read More »

ಕಲಬೆರಕೆ ಮದ್ಯ ಸೇವನೆ|21 ಮಂದಿ ಮೃತ್ಯು, 40 ಮಂದಿ ಅಸ್ವಸ್ಥ

ಸಮಗ್ರ ನ್ಯೂಸ್: ಕಲಬೆರಕೆಯಾಗಿರುವ ಮದ್ಯವನ್ನು ಸೇವಿಸಿ 21 ಮಂದಿ ಸಾವನ್ನಪ್ಪಿರುವ ಘಟನೆ ಪಂಜಾಬ್ನ ಹಾಡಿ ಸಂಗ್ರೂರ್ನಲ್ಲಿ ನಡೆದಿದೆ. ಎಥೆನಾಲ್ ಇರುವ ಮದ್ಯ ಸೇವಿಸಿದ್ದರಿಂದ ಈ ದುಷ್ಕೃತ್ಯ ನಡೆದಿದೆ ಎಂಬ ಮಾಹಿತಿಯನ್ನು ನೀಡಿದರು. ಮದ್ಯ ಸೇವಿಸಿದ 40ಕ್ಕೂ ಅಧಿಕ ಮಂದಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನೆಯ ತನಿಖೆಗಾಗಿ ಪಂಜಾಬ್ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಆರು ಮಂದಿಯನ್ನು ಬಂಧಿಸಲಾಗಿದೆ. ಸಂಗ್ರೂರ್ ಮುಖ್ಯ ವೈದ್ಯಕೀಯ ಅಧಿಕಾರಿ (CMO)

ಕಲಬೆರಕೆ ಮದ್ಯ ಸೇವನೆ|21 ಮಂದಿ ಮೃತ್ಯು, 40 ಮಂದಿ ಅಸ್ವಸ್ಥ Read More »

ಕಾರಿಗೆ ಬೆಂಕಿ ಹಚ್ಚಿ‌ ಮೂವರನ್ನು ಕೊಂದ ಪ್ರಕರಣ| ಆರು ಮಂದಿ‌‌ ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿದಂತೆ ಒಟ್ಟು ಆರು ಮಂದಿಯನ್ನು ಕೋರಾ ಪೊಲೀಸರು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56)

ಕಾರಿಗೆ ಬೆಂಕಿ ಹಚ್ಚಿ‌ ಮೂವರನ್ನು ಕೊಂದ ಪ್ರಕರಣ| ಆರು ಮಂದಿ‌‌ ಆರೋಪಿಗಳು ಅರೆಸ್ಟ್ Read More »

ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂರು ಅಪರಿಚಿತ ಶವಗಳು ಪತ್ತೆ

ಸಮಗ್ರ ನ್ಯೂಸ್: ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂರು ಅಪರಿಚಿತ ಶವಗಳು ಪತ್ತೆಯಾಗಿದ್ದು. ನಿನ್ನೆ ರಾತ್ರಿ ನಡೆದಿರುವ ಘಟನೆ ಇದಾಗಿದ್ದು, ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಕೆರೆಗೆ ಕಾರು ತಳ್ಳಿರುವ ಶಂಕೆ ವ್ಯಕ್ತವಾಗಿದೆ. ಇದು ದಕ್ಷಿಣ ಕನ್ನಡ ಮೂಲದ ರಫಿಕ್ ಎಂಬುವರಿಗೆ ಸೇರಿದ ಕಾರು ಎನ್ನಲಾಗಿದೆ. ಸ್ಥಳಕ್ಕೆ ತುಮಕೂರು ಎಸ್ ಪಿ ಅಶೋಕ್ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ತುಮಕೂರು ಎಸ್ ಪಿ ಅಶೋಕ್ ಕೆ.ವಿ, ಘಟನೆ ಕುರಿತು ಮಾಹಿತಿ ನೀಡಿದ್ದು, ಇವತ್ತು ಮಧ್ಯಾಹ್ನ

ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂರು ಅಪರಿಚಿತ ಶವಗಳು ಪತ್ತೆ Read More »