ಕ್ರೈಂ

ಕಲಬುರಗಿಯಲ್ಲಿ ಬಡ್ಡಿ ಹಣ ನೀಡದಕ್ಕೆ ವ್ಯಕ್ತಿಯ ಮೇಲೆ ಆ್ಯಸಿಡ್ ಅಟ್ಯಾಕ್

ಸಮಗ್ರ ನ್ಯೂಸ್: ಬಡ್ಡಿ ಹಣಕ್ಕಾಗಿ ವ್ಯಕ್ತಿ ಮೇಲೆ ಆ್ಯಸಿಡ್ ಎರಚಿರುವ ಅಮಾನವೀಯ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜುಬೇರ್ ಅಹ್ಮದ್ ಎಂಬುವರ ಮೇಲೆ ಇಮ್ರಾನ್‌ ಖಾನ್ ಎಂಬ ವ್ಯಕ್ತಿ ಆ್ಯಸಿಡ್ ನಿಂದ ದಾಳಿ ನಡೆಸಿದ್ದಾನೆ. ಜುಬೇರ್ ಬಲಗೈ ಹಾಗೂ ಕಾಲಿನ ಮೇಲೆ ಆ್ಯಸಿಡ್ ಬಿದ್ದಿದ್ದು ಸುಟ್ಟ ಗಾಯಗಳಾಗಿವೆ. ಸದ್ಯ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅರ್ಷದ್ ಮೀನು ವ್ಯಾಪಾರಕ್ಕಾಗಿ ಪರ್ವೇಜ್ ಬಳಿ ಜುಬೇರ್ 35 ಲಕ್ಷ ಹಣ ಪಡೆದುಕೊಂಡಿದ್ದ. ಅದಕ್ಕೆ ಬಡ್ಡಿ, ಚಕ್ರಬಡ್ಡಿ ಹಚ್ಚಿ 90 […]

ಕಲಬುರಗಿಯಲ್ಲಿ ಬಡ್ಡಿ ಹಣ ನೀಡದಕ್ಕೆ ವ್ಯಕ್ತಿಯ ಮೇಲೆ ಆ್ಯಸಿಡ್ ಅಟ್ಯಾಕ್ Read More »

ಕಾಸರಗೋಡಿನ ಮನೆಯೊಂದರಲ್ಲಿ ಸಿಕ್ತು 2000 ರೂಪಾಯಿ ನೋಟಿನ ಕಂತೆ ಕಂತೆ ಹಣ

ಸಮಗ್ರ ನ್ಯೂಸ್: ಕಾಸರಗೋಡು ಜಿಲ್ಲೆಯ ಗುರಪುರದ ಅಂಬಲತ್ತರ ಎಂಬಲ್ಲಿ ಮನೆಯೊಂದರಲ್ಲಿ 7 ಕೋಟಿ ರೂಪಾಯಿ ಮೌಲ್ಯದ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸರು ನಿನ್ನೆ ಕಾರ್ಯಾಚರಣೆ ನಡೆಸಿದ್ದರು. ಈ 2000 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಕೇಂದ್ರ ಸರ್ಕಾರ ಕಳೆದ ವರ್ಷದ ಬ್ಯಾನ್ ಮಾಡಿತ್ತು. ನೋಟುಗಳು ಪತ್ತೆಯಾಗಿರುವುದು ಗಲ್ಫ್ ಉದ್ಯೋಗಿ ಕೆಪಿ ಬಾಬು ರಾಜ್ ಅವರ ಮಾಲೀಕತ್ವದ ಮನೆಯಲ್ಲಿ ಎಂದು ಪೊಲೀಸರು ತಿಳಿಸಿದ್ದಾರೆ. ಬಾಬು ರಾಜ್ ಅವರು

ಕಾಸರಗೋಡಿನ ಮನೆಯೊಂದರಲ್ಲಿ ಸಿಕ್ತು 2000 ರೂಪಾಯಿ ನೋಟಿನ ಕಂತೆ ಕಂತೆ ಹಣ Read More »

ಬೆಳ್ತಂಗಡಿ: ಅರಣ್ಯದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಸಮಗ್ರ ನ್ಯೂಸ್‌ : ಅರಣ್ಯ ಪರಿಸರದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸೊತ್ತುಗಳ ಪತ್ತೆಯಾದ ಘಟನೆ ಬೆಳ್ತಂಗಡಿ ಪುದುವೆಟ್ಟು‌ಗ್ರಾಮದ ಬೋಳ್ಮಿನಾರು, ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಳೆಂಜ ಗ್ರಾಮದ ಕಾಯರ್ತಡ್ಕದ ರಾಜು ಜೋಸೆಫ್ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಅರಣ್ಯ ಪ್ರದೇಶದಿಂದ ಸೊಪ್ಪು ತರಲು ತೆರಳಿದ್ದ ಸ್ಥಳೀಯರು ರಸ್ತೆಯಿಂದ ಸುಮಾರು 100 ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳದಲ್ಲಿ ಮದ್ಯದ

ಬೆಳ್ತಂಗಡಿ: ಅರಣ್ಯದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂದು ಗಂಡನನ್ನೆ ಕೊಂದ ಹೆಂಡತಿ

ಸಮಗ್ರ ನ್ಯೂಸ್: ಮದುವೆ ಆಗಿದ್ದರೂ ಮತ್ತೊಬ್ಬನ ಜೊತೆ ಸಂಬಂದ ಬೆಳೆಸಿದ ಮಹಿಳೆ ಗಂಡನನ್ನೇ ಕೊಂದು ಹಾಕಿದ್ದ ಘಟನೆ ನಡೆದಿದೆ. ಬಿಜೆಪಿಯ ಮಾಜಿ ತಾಲೂಕು ಪಂಚಾಯತಿ ಸದಸ್ಯ ರಾಜು ನಾಯ್ಕ್ ಪತ್ನಿಯಿಂದಲೇ ಕೊಲೆಯಾಗಿದ್ದಾನೆ. ಈ ಘಟನೆ ರಾಯಚೂರಿನ ಸಿಂಗನೋಡಿ ತಾಂಡಾದಲ್ಲಿ ನಡೆದಿದೆ. ಗ್ರಾಮಕ್ಕೆ ದೇವಸ್ಥಾನದ ಗೋಪುರ ಕಟ್ಟಲು ಬಂದಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿ ಜತೆಗೆ ಸ್ನೇಹಾ ಸಲುಗೆಯನ್ನು ಬೆಳೆಸಿದ್ದಳು. ಆತನನ್ನು ಮೋಹಿಸಿದ ಸ್ನೇಹಾ ಆತನೊಟ್ಟಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಕದ್ದು ಮುಚ್ಚಿ ಆತನೊಟ್ಟಿಗೆ ಸೇರುತ್ತಿದ್ದಳು. ಆದರೆ ಇದು ಪತಿ

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂದು ಗಂಡನನ್ನೆ ಕೊಂದ ಹೆಂಡತಿ Read More »

ಈ ತಳ್ಳುಗಾಡಿ ಐಸ್ ಕ್ರೀಂ ವ್ಯಾಪಾರಿ ಮಾಡಿದ‌ ಕಿತಾಪತಿ ನೋಡಿದ್ರೆ ನೀವೆಂದೂ ಐಸ್ ಕ್ರೀಂ ತಿನ್ನಲ್ಲ!! ಕ್ಯಾಮರಾದಲ್ಲಿ ಸೆರೆಯಾಯ್ತು ಈತನ ಕುಕೃತ್ಯ

ಸಮಗ್ರ ನ್ಯೂಸ್: ರಸ್ತೆ ಬದಿ ಮಾರಾಟ ಮಾಡುವ ಆಹಾರಗಳನ್ನು ಸೇವಿಸುವ ಮೊದಲು ಸಾಕಷ್ಟು ಬಾರಿ ಯೋಚನೆ ಮಾಡಬೇಕಾಗುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಬೀದಿ ಬದಿ ಐಸ್ ಕ್ರೀಂ ಗಾಡಿ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ವ್ಯಕ್ತಿ ತನ್ನ ವೀರ್ಯಾಣುವನ್ನು ಐಸ್ ಕ್ರೀಂಗೆ ತುಂಬಿ ಮಾರಾಟ ಮಾಡುತ್ತಿದ್ದ. ಈ ವಿಕೃತ ಕೃತ್ಯ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ವಾರಂಗಲ್ ಜಿಲ್ಲೆಯಲ್ಲಿ ಈ ವಿಕೃತ ಘಟನೆ ನಡೆದಿದೆ. ಈ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆರೋಪಿ ವ್ಯಾಪಾರಿ ಕಾಳುರಾಮ್ ಕುರ್ಬಿಯಾ ಎಂದು

ಈ ತಳ್ಳುಗಾಡಿ ಐಸ್ ಕ್ರೀಂ ವ್ಯಾಪಾರಿ ಮಾಡಿದ‌ ಕಿತಾಪತಿ ನೋಡಿದ್ರೆ ನೀವೆಂದೂ ಐಸ್ ಕ್ರೀಂ ತಿನ್ನಲ್ಲ!! ಕ್ಯಾಮರಾದಲ್ಲಿ ಸೆರೆಯಾಯ್ತು ಈತನ ಕುಕೃತ್ಯ Read More »

ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ| ಕ್ರೈಂ ಸೀನ್ ಪರಿಶೀಲನೆ ವೇಳೆ ಅನುಮಾನ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಜೆ‌.ಪಿ.ನಗರದ 3ನೇ ಹಂತದಲ್ಲಿ ಈ ದುರಂತ ನಡೆದಿದೆ. ಈ ಘಟನೆಯಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ತಾಯಿ ಸುಕನ್ಯಾ ಮಕ್ಕಳಾದ ನಿಖಿತ್, ನಿಶಿತ್ ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಜೆ‌.ಪಿ.ನಗರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಸ್ಥಳೀಯರು ಮತ್ತು ಸಂಬಂಧಿಕರಿಂದ ಮಾಹಿತಿ ಪಡೆಯುತ್ತಿದ್ದಾರೆ. ಇವರು ಉಡುಪಿ ಮೂಲದ ಅಂಬಲಪಾಡಿ ನಿವಾಸಿಗಳಾಗಿರುವ ಕುಟುಂಬ, ಜೆಪಿ ನಗರದಲ್ಲಿ ವಾಸವಾಗಿದ್ದರು. ನಿನ್ನೆ

ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ| ಕ್ರೈಂ ಸೀನ್ ಪರಿಶೀಲನೆ ವೇಳೆ ಅನುಮಾನ Read More »

ಕಾಸರಗೋಡು: ಖಾಸಗಿ ಬಸ್ ಪಲ್ಟಿ| ಚಾಲಕ ಸಾವು, 20 ಮಂದಿಗೆ ಗಾಯ

ಸಮಗ್ರ ನ್ಯೂಸ್ : ಖಾಸಗಿ ಬಸ್ಸು ಮಗುಚಿ ಬಿದ್ದ ಪರಿಣಾಮ ಚಾಲಕ ಮೃತ ಪಟ್ಟು, ವಿದ್ಯಾರ್ಥಿಗಳು ಸೇರಿದಂತೆ 20 ಮಂದಿ ಗಾಯಗೊಂಡ ಘಟನೆ ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ಚಾಲಿಂಗಾಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ. ಚಾಲಕ ಮಧೂರು ರಾಮನಗರದ ಚೇತನ್ ಕುಮಾರ್ (37) ಮೃತ ದುರ್ದೈವಿ. ಮಂಗಳೂರಿನಿಂದ ಕಣ್ಣೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಅಪಘಾತಕ್ಕೀಡಾಗಿದ್ದು, ಚಾಲಿಂಗಾಲ್ ನ ಪೆರಿಯ ಗ್ರಾಮ ಪಂಚಾಯತ್ ಕಚೇರಿ ಸಮೀಪ ಈ ಅವಘಡ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿ ಹಿನ್ನಲೆಯಲ್ಲಿ ಟೋಲ್ ಬೂತ್

ಕಾಸರಗೋಡು: ಖಾಸಗಿ ಬಸ್ ಪಲ್ಟಿ| ಚಾಲಕ ಸಾವು, 20 ಮಂದಿಗೆ ಗಾಯ Read More »

ಕರುವಿನ ಮೇಲೆ ಕಾರು ಹರಿಸಿ ಚಾಲಕ ಪರಾರಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದುಹೋಗಿದೆ. ಕರುವಿನ ಮೇಲೆ ಕಾರು ಹರಿಸಿ ಚಾಲಕ ಪರಾರಿಯಾಗಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಠಾಣೆಯ ಹಿಂಭಾಗದ ರಸ್ತೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಕರುವಿನ ಹೊಟ್ಟೆ, ಕಾಲಿಗೆ ಗಂಭೀರ ಗಾಯವಾಗಿದೆ. ಕಳೆದ ವಾರ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚಾಲಕನ ಕೃತ್ಯದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕರುವಿನ ಮೇಲೆ ಕಾರು ಹರಿಸಿ ಚಾಲಕ ಪರಾರಿ Read More »

ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥ

ಸಮಗ್ರ ನ್ಯೂಸ್: ಪಾನಿಪುರಿಯನ್ನು ಸೇವಿಸಿ 19 ಮಕ್ಕಳು ಅಸ್ವಸ್ಥಗೊಂಡಿರುವಂತಹ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ನಡೆದಿದೆ. ಈ ಮಕ್ಕಳು ರಂಜಾನ್ ಹಬ್ಬ ಹಿನ್ನೆಲೆಯಲ್ಲಿ ಉಪವಾಸ ಇದ್ದರು. ಉಪವಾಸ ಮುಗಿದ ನಂತರ ಮಸೀದಿ ಬಳಿ ಪಾನಿಪುರಿ ಸೇವಿಸಿದ್ದಾರೆ. ಬಳಿಕ ವಾಂತಿ ಭೇದಿ, ಹೊಟ್ಟೆ ನೋವಿನಿಂದ 19 ಮಕ್ಕಳು ಬಳಲಿದ್ದಾರೆ. ಇವರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿರುವ ತಹಶೀಲ್ದಾರ್ ಗುರು ಬಸವರಾಜ್ ಮತ್ತು ಜಿಪಂ ಸಿಇಓ

ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥ Read More »

ತಂದೆಯ ವಿರುದ್ಧವೇ ಕೇಸ್ ದಾಖಲಿಸಿದ ಪುತ್ರ

ಸಮಗ್ರ ನ್ಯೂಸ್ : ತಂದೆಯ ವಿರುದ್ದ ಏಳು ವರ್ಷದ ಬಾಲಕ ಪೊಲೀಸರಿಗೆ ದೂರು ನೀಡಿದ್ದಾನೆ. ತನ್ನ ಮೇಲೆ ತಂದೆ ಹಲ್ಲೆ ಮಾಡಿರುವುದಾಗಿ ಕಾಸರಗೋಡು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನ್ನ ತಂದೆ ಕೈಕಾಲುಗಳಿಗೆ ಹಲವು ಬಾರಿ ಹೊಡೆದಿದ್ದಾನೆ ಎಂದು ಆರೋಪಿಸಿ ಬಾಲಕ ತನ್ನ ತಾಯಿ ಜತೆ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾನೆ. ದ ಜುವೈನಲ್ ಜಸ್ಟೀಸ್ ಕಾಯ್ದೆ ಪ್ರಕಾರ ತಂದೆ ವಿರುದ್ದ ಪೊಲೀಸರು ಕೇಸು ದಾಖಲಿಸಿದ್ದಾರೆ.

ತಂದೆಯ ವಿರುದ್ಧವೇ ಕೇಸ್ ದಾಖಲಿಸಿದ ಪುತ್ರ Read More »