ಕ್ರೈಂ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| 21ನೇ ಆರೋಪಿ ಅತೀಕ್ ಎನೈಎ ಬಲೆಗೆ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿದ್ದ ಅತಿಕ್ ಅಹಮದ್ ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ. ಬೆಳ್ಳಾರೆಯಲ್ಲಿ 2022ರ ಜುಲೈನಲ್ಲಿ ಪ್ರವೀಣ್‌ ನೆಟ್ಟಾರ್ ಹತ್ಯೆ ನಡೆದಿತ್ತು. ಈ ಹತ್ಯೆಯಲ್ಲಿ ಅತೀಕ್ ಹತ್ಯಾಕೋರರಿಗೆ ಸಹಾಯ ಮಾಡಿದ್ದ ಎನ್ನಲಾಗಿದೆ. ಪೊಲೀಸರು ಈವರೆಗೂ 21 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅತೀಕ್, ಪ್ರಕರಣದ ಮುಖ್ಯ ಪಿತೂರಿಕಾರ ಮುಸ್ತಫಾ ಪೈಚಾ‌ರ್ ಅವರಿಗೆ ಆಶ್ರಯ ನೀಡಿ ಸಹಾಯ ಮಾಡಿದ್ದ ಎನ್ನಲಾಗಿದೆ. ಮುಸ್ತಫಾ ಈ ಹತ್ಯೆಯನ್ನು ಯೋಜಿಸಿ ನಡೆಸಿದ್ದು […]

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| 21ನೇ ಆರೋಪಿ ಅತೀಕ್ ಎನೈಎ ಬಲೆಗೆ Read More »

ತರಕಾರಿ ಲಾರಿ ಪಲ್ಟಿ| 9 ಮಂದಿ ದುರ್ಮರಣ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ಘಟ್ಟ ಭಾಗದಲ್ಲಿ ನಡೆದಿದೆ.ಅಪಘಾತದಲ್ಲಿ 9 ಮಂದಿ ಮೃತಪಟ್ಟು, 15 ಕ್ಕೂ ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನ ಪ್ರಯಾಣಿಸುತ್ತಿದ್ದರು. ಮೃತರು ಹಾವೇರಿ ಭಾಗದವರು ಎಂದು ತಿಳಿದು ಬಂದಿದೆ. ಸವಣೂರಿನಿಂದ ಕುಮಟಾಗೆ ಲಾರಿ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ

ತರಕಾರಿ ಲಾರಿ ಪಲ್ಟಿ| 9 ಮಂದಿ ದುರ್ಮರಣ Read More »

ಶಾರ್ಟ್ ಸರ್ಕ್ಯೂಟ್ ಗೆ 7 ಹೋರಿಗಳು ಸಜೀವ ದಹನ

ಸಮಗ್ರ ನ್ಯೂಸ್: ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿ ಕೊಟ್ಟಿಗೆಯಲ್ಲಿದ್ದಂತಹ 7 ಹೋರಿಗಳು ಸಜೀವವಾಗಿ ದಹನ ಗೊಂಡಿರುವ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇಮಗಾರದಲ್ಲಿ ನಡೆದಿದೆ. ಮನೆಯಲ್ಲಿದ್ದ ವೈರ್‌ಗೆ ಶಾರ್ಟ್ ಸರ್ಕ್ಯೂರ್ಟ್‌ನಿಂದಾಗಿ ಕಿಡಿ ಹೊತ್ತಿದ್ದು, ಕೊಟ್ಟಿಗೆಯ ಅಟ್ಟದ ಮೇಲಿರುವ ಹುಲ್ಲಿಗೆ ಈ ಕಿಡಿ ತಾಗಿ ಬೆಂಕಿ ಹತ್ತಿದೆ. ಹುಲ್ಲಿಗೆ ಬಿದ್ದ ಬೆಂಕಿ ಆವರಿಸಿ ಕೊಟ್ಟಿಗೆಯಲ್ಲಿದ್ದ 7 ಹೋರಿಗಳು ಸಜೀವ ದಹನವಾಗಿದೆ. ಹೇಮಗಾರದ ಮಹೇಶ್ ಹೆಗಡೆ ಎಂಬವರ ಮನೆಯಲ್ಲಿ ಬಾನುವಾರ ತಡರಾತ್ರಿ ಘಟನೆ

ಶಾರ್ಟ್ ಸರ್ಕ್ಯೂಟ್ ಗೆ 7 ಹೋರಿಗಳು ಸಜೀವ ದಹನ Read More »

ಮಂಗಳೂರು: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ| ಆರೋಪಿಗಳ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

ಸಮಗ್ರ ನ್ಯೂಸ್: ಮಂಗಳೂರಿನ ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್, ಡಿವೈಎಸ್ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಸಿಎಂ,

ಮಂಗಳೂರು: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ| ಆರೋಪಿಗಳ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳಲು ಸಿಎಂ ಸೂಚನೆ Read More »

ಮಂಗಳೂರು: ಹಾಡುಹಗಲೇ ಬ್ಯಾಂಕ್ ದರೋಡೆ| ಚಿನ್ನ, ನಗದು ದೋಚಿ ಪರಾರಿ

ಸಮಗ್ರ ನ್ಯೂಸ್: ಮಂಗಳೂರು‌ ನಗರದ ಉಳ್ಳಾಲ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿರೋಡು ಶಾಖೆಯಿಂದ ಭಾರೀ ದರೋಡೆ ನಡೆದ ಘಟನೆ ಜ.17ರ ಶುಕ್ರವಾರ ನಡೆದಿದೆ. ಹಾಡಹಗಲೇ ಐದು ಮಂದಿ ಆಗಂತುಕರ ತಂಡದಿಂದ ಬಂದೂಕು ತೋರಿಸಿ ಈ ಕೃತ್ಯ ನಡೆದಿದೆ. ಫಿಯೇಟ್ ಕಾರಿನಲ್ಲಿ ಬಂದ ಈ ತಂಡ ಚಿನ್ನ, ನಗದುಗಳೆಲ್ಲವನ್ನು ಕಳವು ಮಾಡಿ ಮಂಗಳೂರು ಕಡೆಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದೆ.

ಮಂಗಳೂರು: ಹಾಡುಹಗಲೇ ಬ್ಯಾಂಕ್ ದರೋಡೆ| ಚಿನ್ನ, ನಗದು ದೋಚಿ ಪರಾರಿ Read More »

ರೀಲ್ಸ್ ನೋಡುತ್ತಾ ಕಾರು ಚಾಲನೆ| ಕೆರೆಗೆ‌ ಬಿದ್ದು ಇಬ್ಬರು ದುರ್ಮರಣ

ಸಮಗ್ರ ನ್ಯೂಸ್: ಕಾರು ಚಾಲನೆ ಮಾಡುವಾಗ ರೀಲ್ಸ್ ನೋಡುತ್ತಾ ಕಾರು ಚಲಾಯಿಸಿದ ಪರಿಣಾಮ, ರಸ್ತೆ ಪಕ್ಕದಲ್ಲಿದ್ದ ನದಿಗೆ ಕಾರು ಉರುಳಿ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಭೋಪಾಲ್ ನಲ್ಲಿ ನಡೆದಿದೆ. ಕಾರು ಚಾಲನೆ ಮಾಡುವ ಕಾರು ಚಾಲಕ ಮೊಬೈಲ್ ನಲ್ಲಿ ರೂಲ್ಸ್ ನೋಡುತ್ತಾ ಕಾರು ಓಡಿಸುತ್ತಿದ್ದ. ಈ ವೇಳೆ ಕಾರು ಕೆರೆಗೆ ಬಿದ್ದು ಇಬ್ಬರು ಸಾವಿಗೀಡಾಗಿದ್ದು, ಮತ್ತೊಬ್ಬ ವ್ಯಕ್ತಿ ಬಹಳ ಕಷ್ಟಪಟ್ಟು ಜೀವವನ್ನು ಉಳಿಸಿಕೊಂಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಮೃತರನ್ನು ಪಲಾಶ್ ಗಾಯಕ್ವಾಡ್ ಮತ್ತು ಕಾರು

ರೀಲ್ಸ್ ನೋಡುತ್ತಾ ಕಾರು ಚಾಲನೆ| ಕೆರೆಗೆ‌ ಬಿದ್ದು ಇಬ್ಬರು ದುರ್ಮರಣ Read More »

ಎಟಿಎಂ ಸಿಬ್ಬಂದಿ ಕೊಲೆ ಪ್ರಕರಣ| ಇಬ್ಬರು ಆರೋಪಿಗಳು ಹೈದ್ರಾಬಾದ್ ನಲ್ಲಿ ಅರೆಸ್ಟ್

ಸಮಗ್ರ ನ್ಯೂಸ್: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಎಟಿಎಂ ಸಿಬ್ಬಂದಿ ಕೊಲೆ ಹಾಗೂ ದರೋಡೆ ಪ್ರಕರಣ ಸಂಬಂಧ ಇಬ್ಬರು ದರೋಡೆಕೋರರನ್ನು ಪೊಲೀಸರು ಹೈದರಾಬಾದ್​​ನಲ್ಲಿ ಅರೆಸ್ಟ್​​​​​​​ ಮಾಡಿದ್ದಾರೆ. ಘಟನೆ ಬೆನ್ನಲ್ಲೇ 9 ತಂಡಗಳಾಗಿ ಹಂತಕರ ಬೆನ್ನತ್ತಿದ್ದ ಖಾಕಿ ಪಡೆ, ಚೇಸಿಂಗ್ ಮಾಡಿ ಹೈದರಾಬಾದ್​ ವರೆಗೂ ಹೋಗಿ ಫೈರ್ ಮಾಡಿ ಬಂಧಿಸಿದ್ದಾರೆ. ಚೇಸಿಂಗ್ ವೇಳೆ ಅಫ್ಜಲ್​​​​ಗಂಜ್​​​​​​​​​ ಪ್ರದೇಶದ ಟ್ರಾವಲ್​​ ಏಜೆನ್ಸಿಗೆ ನುಗ್ಗಿದ್ದ ದರೋಡೆಕೋರರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರ ಮೇಲೆ ಶೂಟ್ ಮಾಡಲು ದರೋಡೆಕೋರರು ಯತ್ನಾಸಿದ್ದಾರೆ. ಈ ವೇಳೆ ಮಿಸ್​​ ಆಗಿ

ಎಟಿಎಂ ಸಿಬ್ಬಂದಿ ಕೊಲೆ ಪ್ರಕರಣ| ಇಬ್ಬರು ಆರೋಪಿಗಳು ಹೈದ್ರಾಬಾದ್ ನಲ್ಲಿ ಅರೆಸ್ಟ್ Read More »

ನಟ ಸೈಫ್ ಅಲಿಖಾನ್ ಗೆ ಚೂರಿ ಇರಿತ ಪ್ರಕರಣ| ಓರ್ವ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ದಾಳಿ ನಡೆಸಿದ್ದ ಓರ್ವನನ್ನ ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿಯನ್ನು ಬಂಧಿಸಿ ಬಾಂದ್ರಾ ಠಾಣೆಗೆ ಕರೆದುಕೊಂಡು ಬರಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಸೈಫ್ ಅಲಿ ಖಾನ್ ಅವರ ನಿವಾಸದಲ್ಲೇ ಗುರುವಾರ ರಾತ್ರಿ ಹಲ್ಲೆ ನಡೆಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಸೈಫ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಚಾಕುವಿನಿಂದ 6 ಬಾರಿ ಇರಿದಿದ್ದು, ಅದರಲ್ಲಿ ಎರಡು ಕಡೆ ಗಂಭೀರ ಗಾಯಗಳಾಗಿವೆ

ನಟ ಸೈಫ್ ಅಲಿಖಾನ್ ಗೆ ಚೂರಿ ಇರಿತ ಪ್ರಕರಣ| ಓರ್ವ ಆರೋಪಿ ಅರೆಸ್ಟ್ Read More »

ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು‌ ಕೊಲೆಗೈದ ಪತಿ| ಏಳು ವರ್ಷಗಳ ದಾಂಪತ್ಯದ ನಡುವೆ ಬಂದಿದ್ದು ಯಾರು?

ಸಮಗ್ರ ನ್ಯೂಸ್ : ಪತಿಗೆ ತನ್ನ ಪತ್ನಿಯ ಅನೈತಿಕ ಸಂಬಂಧದ ವಿಷಯ ತಿಳಿದು ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿಯಲ್ಲಿ ನಡೆದಿದೆ. ಏಳು ವರ್ಷಗಳ ಹಿಂದೆ ದೇವರಾಜ್ ತನ್ನ ಸಂಬಂಧಿಯಾಗಿದ್ದ ತೇಜು ಎನ್ನುವವಳನ್ನು ಮದುವೆಯಾಗಿದ್ದ. ಇವರಿಗೆ ಎರಡು ಮಕ್ಕಳು ಇದ್ದಾರೆ. ಹಾಗಿದ್ದರೂ ಸಹ ತೇಜ ಪರ ಪುರುಷನೊಂದಿಗೆ ಸಂಬಂಧ ಇಟ್ಟುಕೊಂಡಿದ್ದಳು. ಈ ಹಿಂದೆ ಗಂಡ ಮಕ್ಕಳನ್ನು ಬಿಟ್ಟು ಪ್ರಿಯಕರನ ಜತೆ ಮನೆ ಬಿಟ್ಟು ಓಡಿಹೋಗಿದ್ದಳು. ನಂತರ ರಾಜೀ ಸಂದಾನ ಮಾಡಿ

ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು‌ ಕೊಲೆಗೈದ ಪತಿ| ಏಳು ವರ್ಷಗಳ ದಾಂಪತ್ಯದ ನಡುವೆ ಬಂದಿದ್ದು ಯಾರು? Read More »

ಕಡಬ: ಮೋರಿಗೆ ಡಿಕ್ಕಿ ಹೊಡೆದ ಬೈಕ್| ಶಾಲಾ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಸವಾರನ ನಿಯಂತ್ರಣ ತಪ್ಪಿದ ಬೈಕೊಂದು ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಬೆಳಿಗ್ಗೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ನಡೆದಿದೆ. ಮೃತ ಬಾಲಕನನ್ನು ಪೇರಡ್ಕದ ಖಾಸಗಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಎಂದು ಗುರುತಿಸಲಾಗಿದೆ. ಮನೆಯಿಂದ ಶಾಲೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಬಾಲಕನನ್ನು ಕಡಬದ ಖಾಸಗಿ ಆಸ್ಪತ್ರೆಗೆ

ಕಡಬ: ಮೋರಿಗೆ ಡಿಕ್ಕಿ ಹೊಡೆದ ಬೈಕ್| ಶಾಲಾ ವಿದ್ಯಾರ್ಥಿ ಸ್ಥಳದಲ್ಲೇ ಸಾವು Read More »