ಕ್ರೈಂ

ತಂದೆ ತಾಯಿ ಕೌಟುಂಬಿಕ ಕಲಹ|17 ವರ್ಷದ ಬಾಲಿಕಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ತಂದೆ ತಾಯಿ ಕೌಟುಂಬಿಕ ಕಲಹದಿಂದ ಮನನೊಂದು 17 ವರ್ಷದ ಬಾಲಿಕಿ ನೇಣು ಬಿಗಿದು ಆತ್ಮಹತ್ಯೆಯನ್ನು ಮಾಡಿಕೊಂಡ ಘಟನೆ ಬೆಂಗಳೂರಿನ ಹೋಸಕೆರೆಹಳ್ಳಿಯ ಮಂಜುನಾಥ್ ನಗರದಲ್ಲಿ ಜ.1 ರಂದು ನಡೆದಿದೆ. ಮೃತ ಬಾಲಕಿ ಲೇಖನಾ (17) ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಲೇಖನಾ ನಿನ್ನೆ ಮಧ್ಯಾಹ್ನ ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯೊಳಗೆ ನೇಣಿಗೆ ಶರಣಾಗಿದ್ದಾಳೆ. ಸಂಜೆ ಊಟಕ್ಕೆಂದು ತಾಯಿ ಮನೆಗೆ ಬಂದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಸ್ಥಳೀಯರ ನೆರವಿನಿಂದ ಆಕೆಯನ್ನು ಆಸ್ಪತ್ರೆಗೆ […]

ತಂದೆ ತಾಯಿ ಕೌಟುಂಬಿಕ ಕಲಹ|17 ವರ್ಷದ ಬಾಲಿಕಿ ನೇಣು ಬಿಗಿದು ಆತ್ಮಹತ್ಯೆ Read More »

ಪುತ್ತೂರು: ಮಗು ಕರುಣಿಸಿ 6 ತಿಂಗಳಾದರೂ ಸಂತ್ರಸ್ತೆಗೆ ಸಿಗದ ನ್ಯಾಯ| ಯುವತಿಯ ಅಳಲು ಕೇಳುವವರಾರು?

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ.ರಾವ್ ಯುವತಿಯೊಬ್ಬಳನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯನ್ನಾಗಿ ಮಾಡಿದ್ದ ಪ್ರಕರಣ ಈಗ ಮತ್ತಷ್ಟು ಜಟಿಲಗೊಂಡಿದೆ. ಸಂತ್ರಸ್ತೆಯು ಮಗುವಿಗೆ ಜನ್ಮ ನೀಡಿ ತಿಂಗಳುಗಳೇ ಕಳೆದರೂ ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣಿಸುತ್ತಿಲ್ಲ. ನ್ಯಾಯಾಲಯದ ನಿರ್ದೇಶನದಂತೆ ಡಿಎನ್​​ಎ ಟೆಸ್ಟ್ ಮಾಡಿ, ಕೃಷ್ಣ ಜೆ.ರಾವ್ ಮಗುವಿನ ತಂದೆ ಎಂಬುದು ಸಾಬೀತಾದರೂ ಆತ ಯುವತಿಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಬಿಜೆಪಿಯ ಪ್ರಮುಖ ನಾಯಕರು, ಆರ್​​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್​ ಸೇರಿ ಅನೇಕರು ಸಂಧಾನಕ್ಕೆ

ಪುತ್ತೂರು: ಮಗು ಕರುಣಿಸಿ 6 ತಿಂಗಳಾದರೂ ಸಂತ್ರಸ್ತೆಗೆ ಸಿಗದ ನ್ಯಾಯ| ಯುವತಿಯ ಅಳಲು ಕೇಳುವವರಾರು? Read More »

ಮೈಸೂರು ಅರಮನೆ ‌ಮುಂಭಾಗ ಬಲೂನ್ ಗ್ಯಾಸ್ ಸಿಲಿಂಡರ್ ಸ್ಪೋಟ| ಓರ್ವ ಸಾವು, ಐವರು ಗಂಭೀರ

ಸಮಗ್ರ ನ್ಯೂಸ್: ಮೈಸೂರು ಅರಮನೆ ಮುಂಭಾಗದ ಜಯಮಾರ್ತಾಂಡ ಗೇಟ್ ಬಳಿ ಗ್ಯಾಸ್ ಬಲೂನ್ ಸಿಲಿಂಡರ್‌ ಸ್ಪೋಟಗೊಂಡ ಪರಿಣಾಮ ಓರ್ವ ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಅರಮನೆ ಆವರಣದಲ್ಲಿ ʼಮಾಗಿ ಉತ್ಸವʼ ನಡೆಯುತ್ತಿದ್ದು ಅದನ್ನು ನೋಡಲು ಮತ್ತು ಕ್ರಿಸ್ ಮಸ್ ಹಿನ್ನಲೆಯಲ್ಲಿ ಅರಮನೆ ವಿದ್ಯುತ್ ದೀಪಲಂಕಾರ ವೀಕ್ಷಣೆ ಮಾಡಲು ಸ್ಥಳೀಯರು ಸೇರಿದಂತೆ ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ವೇಳೆ ಅರಮನೆ ಮುಂಭಾಗ ಬಲೂನ್ ಗೆ ಗ್ಯಾಸ್ ತುಂಬುವ ನೈಟ್ರೋಜನ್ ಸಿಲಿಂಡರ್ ಸ್ಪೋಟಗೊಂಡಿದೆ. ಪರಿಣಾಮ ಓರ್ವ

ಮೈಸೂರು ಅರಮನೆ ‌ಮುಂಭಾಗ ಬಲೂನ್ ಗ್ಯಾಸ್ ಸಿಲಿಂಡರ್ ಸ್ಪೋಟ| ಓರ್ವ ಸಾವು, ಐವರು ಗಂಭೀರ Read More »

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ಯುವಕನ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಗುಂಪು ಹಿಂಸಾಚಾರದ ಪ್ರಕರಣ ಬೆಳಕಿಗೆ ಬಂದಿದೆ, 29 ವರ್ಷದ ಹಿಂದೂ ವ್ಯಕ್ತಿಯನ್ನು ಗುಂಪು ಹೊಡೆದು ಕೊಂದಿದೆ. ರಾಜ್‌ ಬರಿ ಜಿಲ್ಲೆಯ ಪಂಗ್ಶಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಗುಂಪು ದಾಳಿಗಳ ಬಗ್ಗೆ ಆತಂಕ ಹೆಚ್ಚಿಸಿದೆ. ಮೃತನನ್ನು ಅಮೃತ್ ಮಂಡಲ್ ಎಂದು ಗುರುತಿಸಲಾಗಿದ್ದು, ಸ್ಥಳೀಯರು ಸುಲಿಗೆಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಅವರನ್ನು ಕೊಲ್ಲಲಾಗಿದೆ. ಪಂಗ್ಶಾ ಉಪಜಿಲ್ಲಾದ ಹೊಸೈನ್‌ಡಂಗಾ ಹಳೆಯ ಮಾರುಕಟ್ಟೆಯಲ್ಲಿ ಬುಧವಾರ ತಡರಾತ್ರಿ 11 ಗಂಟೆ ಸುಮಾರಿಗೆ ಮಂಡಲ್

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ಯುವಕನ ಬರ್ಬರ ಹತ್ಯೆ Read More »

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ| 17 ಮಂದಿ ದಾರುಣ ಸಾವು| ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದಿದೆ. ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 17 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಬಸ್ ನಲ್ಲಿದ್ದ 17

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ| 17 ಮಂದಿ ದಾರುಣ ಸಾವು| ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ Read More »

ವಿಟ್ಲ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ| ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಶಾಸಕ ಮಠಂದೂರು ಸೇರಿ 27 ಮಂದಿ ವಿರುದ್ಧ ಪ್ರಕರಣ

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೇಪು ಗ್ರಾಮದ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದವರ ಮೇಲೆ ಭಾನುವಾರ ದಾಳಿ ಮುಂದುವರೆಸಿರುವ ವಿಟ್ಲ ಪೊಲೀಸರು, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ಕುಂಪಲ, ಮಾಜಿ ಶಾಸಕ ಸಂಜೀವ ಮಠಂದೂರು ಸೇರಿ 27 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಖಚಿತ ಮಾಹಿತಿ ಬಂದ ಮೇರೆಗೆ ವಿಟ್ಲ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಹಲವು ಜನರು

ವಿಟ್ಲ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ| ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಶಾಸಕ ಮಠಂದೂರು ಸೇರಿ 27 ಮಂದಿ ವಿರುದ್ಧ ಪ್ರಕರಣ Read More »

ವಿಟ್ಲ: ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರನ್ನು ತಡೆದ ಶಾಸಕ‌ ಅಶೋಕ್ ರೈ ಗರಂ

ಸಮಗ್ರ ನ್ಯೂಸ್: ಸಾಂಪ್ರದಾಯಿಕವಾಗಿ ನಡೆಯುವ ಕೋಳಿ ಅಂಕಕ್ಕೆ ದಾಳಿ ಮಾಡಿದ ಪೊಲೀಸರ ವಿರುದ್ದ ಪುತ್ತೂರು ಶಾಸಕ ಅಶೋಕ್ ರೈ ಗರಂ ಆದ ಘಟನೆ ನಡೆದಿದೆ. ವಿಟ್ಲದ ಕೇಪು ಉಳ್ಳಾಲ್ತಿ ಕ್ಷೇತ್ರದ ಪಕ್ಕದಲ್ಲಿ ಕೋಳಿ ಅಂಕ ನಡೆಯುತ್ತಿತ್ತು, ಈ ವೇಳೆ ಪೊಲೀಸರು ದಾಳಿ ನಡೆಸಿ ಕೋಳಿ ಅಂಕ ನಡೆಯದಂತೆ ತಡೆದಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪುತ್ತೂರು ಶಾಸಕ ಅಶೋಕ್ ರೈ ದಾಳಿ ಮಾಡಿದ ಪೋಲೀಸರ ವಿರುದ್ಧ ಆಕ್ರೋಶ ಹೊರಹಾಕಿದರು. ಈ ಕ್ಷೇತ್ರದ ಸಂಪ್ರದಾಯದಂತೆ ಕೋಳಿ ಅಂಕ ನಡೆಯುತ್ತಿದ್ದು,

ವಿಟ್ಲ: ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರನ್ನು ತಡೆದ ಶಾಸಕ‌ ಅಶೋಕ್ ರೈ ಗರಂ Read More »

ವಿಮೆ ಹಣಕ್ಕಾಗಿ ತಂದೆಯನ್ನೇ ಹಾವು ಕಚ್ಚಿಸಿ ಕೊಂದ ಮಕ್ಕಳು

ಸಮಗ್ರ ನ್ಯೂಸ್: ಮೂರು ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ಮಕ್ಕಳು ಹಾವು ಕಚ್ಚಿಸಿ ತಂದೆಯನ್ನೇ ಕೊಲೆಗೈದಿರುವ ಘಟನೆ ತಮಿಳುನಾಡು ಜಿಲ್ಲೆಯ ತಿರುವಳ್ಳೂರು ಜಿಲ್ಲೆಯಲ್ಲಿ ನಡೆದಿದೆ. ಎಸ್ ಐಟಿ ತನಿಖೆ ವೇಳೆ ಕೊಲೆ ರಹಸ್ಯ ಬಯಲಾಗಿದೆ. ತಂದೆಯ ಇನ್ಶೂರೆನ್ಸ್ ಹಣಕ್ಕಾಗಿ ಮಕ್ಕಳಿಬ್ಬರು ತಂದೆಯನ್ನು ಹಾವು ಕಚ್ಚಿಸಿ ಕೊಲೆಗೈದಿದ್ದಾರೆ. ಹಾವು ಕಡಿತದಿಂದ ಸಾವು ಎಂದು ಆರಂಭದಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಇನ್ಶೂರೆನ್ಸ್ ಕಂಪನಿ ಈ ಬಗ್ಗೆ ಅನುಮಾನಗೊಂಡಿದೆ. ಈ ವೇಳೆ ವಿಶೇಷ ತನಿಖಾ ತಂಡ ಪ್ರಕರಣ ಕೈಗೆತ್ತಿಕೊಂಡಿದೆ. ಇ.ಪಿ.ಗಣೇಶನ್ (56) ಇಪರ್ತಿಪೇಟೆ

ವಿಮೆ ಹಣಕ್ಕಾಗಿ ತಂದೆಯನ್ನೇ ಹಾವು ಕಚ್ಚಿಸಿ ಕೊಂದ ಮಕ್ಕಳು Read More »

ಸಕಲಿ ಚಿನ್ನ ಅಡವಿಟ್ಟು ಸಿಕ್ಕಿಬಿದ್ದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ

ಸಮಗ್ರ ನ್ಯೂಸ್: ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬುಧವಾರ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಅವರನ್ನು ಅರೆಸ್ಟ್​ ಮಾಡಿದ್ದಾರೆ. ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ನಿನ್ನೆ ಶಿವಮೊಗ್ಗದಲ್ಲಿ ಮಂಜುನಾಥ್ ಗೌಡ ಮನೆ, ಕಚೇರಿ ಸೇರಿದಂತೆ 8 ಕಡೆ ದಾಳಿ ನಡೆಸಿದ್ದರು. ಅಲ್ಲದೇ ಮಂಜುನಾಥ್ ಅವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಅತಿಥಿಗೃಹದಲ್ಲಿ ವಿಚಾರಣೆ ನಡೆಸಿದ್ದರು.

ಸಕಲಿ ಚಿನ್ನ ಅಡವಿಟ್ಟು ಸಿಕ್ಕಿಬಿದ್ದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ Read More »

ಶಿವಮೊಗ್ಗ: ಕಾಂಗ್ರೆಸ್ ಪ್ರತಿಭಟನೆ ವೇಳೆ ಮಹಿಳಾ ಎಎಸ್ಐ ನ ಚಿನ್ನದ ಸರ ನಾಪತ್ತೆ

ಸಮಗ್ರ ನ್ಯೂಸ್: ಜಿಲ್ಲಾ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಭಾರೀ ಗೊಂದಲ ಮತ್ತು ಹೈಡ್ರಾಮ ನಡೆದಿದೆ. ಈ ಪ್ರತಿಭಟನೆಯ ನೂಕುನುಗ್ಗಲಿನ ನಡುವೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಚಿನ್ನದ ಸರ ನಾಪತ್ತೆಯಾಗಿರುವ ಘಟನೆ ನಡೆದಿದೆ. ಕೋಟೆ ಪೊಲೀಸ್ ಠಾಣೆಯ ಎಎಸ್‌ಐ ಅಮೃತಾಬಾಯಿ ಅವರು ಕರ್ತವ್ಯದಲ್ಲಿದ್ದ ವೇಳೆ ಸುಮಾರು 60 ಗ್ರಾಂ ತೂಕದ ಚಿನ್ನದ ಸರ ಕಳೆದುಕೊಂಡಿದ್ದಾರೆ. ಇತ್ತೀಚಿಗಷ್ಟೇ ಹೊಸದಾಗಿ ಚಿನ್ನದ ಸರ ಖರೀದಿಸಿದ್ದ ಅಮೃತಾಬಾಯಿ, ಸರ ನಾಪತ್ತೆಯಾದ ನಂತರ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.

ಶಿವಮೊಗ್ಗ: ಕಾಂಗ್ರೆಸ್ ಪ್ರತಿಭಟನೆ ವೇಳೆ ಮಹಿಳಾ ಎಎಸ್ಐ ನ ಚಿನ್ನದ ಸರ ನಾಪತ್ತೆ Read More »