ಕ್ರೈಂ

ಮನೆಗೆ ಅನ್ಯಕೋಮಿನ ವ್ಯಕ್ತಿಯ ಅಕ್ರಮ ಪ್ರವೇಶ|ಮಹಿಳೆ, ಮಕ್ಕಳ ಮೇಲೆ ದೌರ್ಜನ್ಯ

ಸಮಗ್ರ ನ್ಯೂಸ್: ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಹಿಳೆ ಹಾಗೂ ಮಕ್ಕಳ ಮೇಲೆ ಅನ್ಯಕೋಮಿನ ವ್ಯಕ್ತಿಯೊಬ್ಬ ದೌರ್ಜನ್ಯವೆಸಗಿರುವ ಘಟನೆಯೊಂದು ವಿಟ್ಲ ಸಮೀಪದ ಕನ್ಯಾಯ ಕಣಿಯೂರು ತಲಕ್ಕಿ ಎಂಬಲ್ಲಿ ನಡೆದಿದೆ. ಅನ್ಯಕೋಮಿನ ಯುವಕ ಸಿದ್ದಿಕ್ ಎಂದು ಗುರುತಿಸಲಾಗಿದೆ. ಈತ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿ ಮನೆಯಲ್ಲಿರುವ ಮಂದಿಗೆ ಹಲ್ಲೆ ಮಾಡಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದ್ದು, ಈ ಘಟನೆಯನ್ನು ಹಿಂದೂ ಜಾಗರಣ ವೇದಿಕೆ ಖಂಡನೆ ಮಾಡಿದೆ. ವ್ಯಕ್ತಿಯನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಮನೆಗೆ ಅನ್ಯಕೋಮಿನ ವ್ಯಕ್ತಿಯ ಅಕ್ರಮ ಪ್ರವೇಶ|ಮಹಿಳೆ, ಮಕ್ಕಳ ಮೇಲೆ ದೌರ್ಜನ್ಯ Read More »

ಒಂದು ಘಟನೆ ಮಾಸುವ ಮುನ್ನವೇ ಮತ್ತೊಂದು ಹೀನಕೃತ್ಯ| ಸ್ವಂತ ಮಗುವನ್ನು ಕಚ್ಚಿ, ಫ್ರಿಡ್ಜ್ ನೀರು ಸುರಿದು ಚಿತ್ರಹಿಂಸೆ ನೀಡಿದ ತಾಯಿ

ಸಮಗ್ರ ನ್ಯೂಸ್: ಇತ್ತೀಚೆಗೆ ತಾಯಿಯೊಬ್ಬಳು ಮಗುವನ್ನು ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿತ್ತು ಆದ್ರೆ ಅದು ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದೋಗಿದೆ. ಮಹಿಳೆಯೊಬ್ಬಳು ತನ್ನ ಸ್ವಂತ ಮಗುವಿನ ಮೇಲೆ ಕ್ರೌರ್ಯ ಮೆರೆದ ಅಮಾನವೀಯ ಘಟನೆ ನಡೆದಿದೆ. ಪತಿ ಮೇಲಿನ ಕೋಪಕ್ಕೆ ಪ್ರಿಯಕರನೊಂದಿಗೆ ಸೇರಿ ತನ್ನ ಮೂರು ವರ್ಷದ ಮಗುವಿಗೆ ತಾಯಿ ಚಿತ್ರ ಹಿಂಸೆ ನೀಡಿದ ಆರೋಪ ಕೇಳಿಬಂದಿದೆ. ಆಯೇಷಾ ಎಂಬಾಕೆ ಇಮ್ರಾನ್ ಖಾನ್ ಎಂಬಾತನನ್ನು ಮದುವೆಯಾಗಿದ್ದು, ಒಂದು ಹೆಣ್ಣು ಮಗು ಜನಿಸಿದೆ.

ಒಂದು ಘಟನೆ ಮಾಸುವ ಮುನ್ನವೇ ಮತ್ತೊಂದು ಹೀನಕೃತ್ಯ| ಸ್ವಂತ ಮಗುವನ್ನು ಕಚ್ಚಿ, ಫ್ರಿಡ್ಜ್ ನೀರು ಸುರಿದು ಚಿತ್ರಹಿಂಸೆ ನೀಡಿದ ತಾಯಿ Read More »

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಪ್ರೀತಿ ಮಾಡಿದ ಹುಡುಗಿ ಬಿಟ್ಟು ಹೋಗಿದ್ದಕ್ಕೆ ನೊಂದ ಪ್ರಿಯಕರನೊಬ್ಬ ಚೂಪಾದ ಚಾಕುವಿನಿಂದ ಹೊಟ್ಟೆಗೆ ತಿವಿದುಕೊಂಡು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ನಂದಿನಿ ಲೇಔಟ್​ನಲ್ಲಿ ನಡೆದಿದೆ. ದಾವಣಗೆರೆ ಮೂಲದ ಚೇತನ್ (21) ಮೃತ ದುರ್ದೈವಿ. ಜನನಿ ಮತ್ತು ಚೇತನ್ ಇಬ್ಬರು ಕಾಲೇಜಿನಲ್ಲಿ ಓದುವ ವೇಳೆ ಪರಿಚಯವಾಗಿ ಲವ್ ಆಗಿತ್ತು. ಎರಡು ವರ್ಷದಿಂದ ಚೇತನ್​ ಯುವತಿಯನ್ನು ಪ್ರೀತಿಸುತ್ತಿದ್ದ. ಈ ವಿಷಯ ಹುಡುಗಿ ಕಡೆಯವರಿಗೆ ಗೊತ್ತಾಗಿತ್ತು. ಈ ಹಿನ್ನಲೆ ಹುಡುಗಿಯ ಚಿಕ್ಕಪ್ಪ ಚೇತನ್ ಜೊತೆ ಮದುವೆಗೆ ಒಪ್ಪಿರಲಿಲ್ಲ. ಇದಾದ

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ Read More »

ಸಿದ್ದಗಂಗಾ ಜಾತ್ರೆಗೆ ಬಂದಿದ್ದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ಸಮಗ್ರ ನ್ಯೂಸ್: ಸಿದ್ದಗಂಗಾ ಮಠದ ಜಾತ್ರೆಗೆ ಬಂದಿದ ಬಾಲಕಿಯ ಮೇಲೆ ಕಾಮುಕರು ಅತ್ಯಾಚಾರವೆಸಗಿದ ಘಟನೆ ನಡೆದಿದೆ. ತುಮಕೂರು ನಗರದ ಬಂಡೆಪಾಳ್ಯದ ಮನೆಯೊಂದರಲ್ಲಿ ಸಾಮೂಹಿಕವಾಗಿ ಅತ್ಯಾಚಾರವೆಸಗಲಾಗಿದೆ. ಸಿದ್ದಗಂಗಾ ಮಠದ ಜಾತ್ರೆಗೆ ಬಂದಿದ್ದ 17 ವರ್ಷದ ಬಾಲಕಿಯು ತನ್ನ ಸ್ನೇಹಿತನೊಟ್ಟಿಗೆ ಬೆಟ್ಟದ ಬಳಿ ಕುಳಿತಿದ್ದಳು. ಅಲ್ಲಿಗೆ ಬಂದ ಮೂವರು ಕಿರಾತಕರು ಬಾಲಕಿಯನ್ನು ಬೆದರಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ವೇಳೆ ಮೂವರು ಕಿರಾತಕರು ಮೊಬೈಲ್‌ನಲ್ಲಿ ವಿಡಿಯೊವನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಬಳಿಕ ಆ ವಿಡಿಯೊವನ್ನು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಮಾಡುವುದಾಗಿ ಬಾಲಕಿಗೆ

ಸಿದ್ದಗಂಗಾ ಜಾತ್ರೆಗೆ ಬಂದಿದ್ದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ Read More »

ವಾರ್ಷಿಕೋತ್ಸವದ ದಿನ ಗಿಫ್ಟ್ ನೀಡಿಲ್ಲ ಎಂದು ಪತಿಗೆ ಚೂರಿ ಇರಿದ ಪತ್ನಿ

ಸಮಗ್ರ ನ್ಯೂಸ್: ವಾರ್ಷಿಕೋತ್ಸವದ ದಿನ ತನಗೆ ಗಿಫ್ಟ್ ನೀಡಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ಪತ್ನಿ ಮಲಗಿದ್ದ ಪತಿಯನ್ನು ಚಾಕುವಿನಿಂದ ಇರಿದ ಘಟನೆ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕೆಲಸದ ಒತ್ತಡದಲ್ಲಿದ್ದ ಗಂಡ ಇದನ್ನೆಲ್ಲ ಮರೆತಿದ್ದು ಮನೆಗೆ ಬಂದ ತಕ್ಷಣ ಹೋಗಿ ಮಲಗಿದ್ದಾನೆ. ಇದರಿಂದ ಕೋಪಗೊಂಡ ಹೆಂಡತಿ ಗಂಡನ ಮೇಲೆ ಚಾಕು ಇರಿದಿದ್ದಾಳೆ. ಎಫ್ಐಆರ್ ಪ್ರಕಾರ ಫೆ. 27ರಂದು ಬೆಂಗಳೂರಿನ ಪಾರ್ಥ ಪ್ರತಿಮ್ (37) ಅವರನ್ನು ಪತ್ನಿ ರಿಯಾ ಘೋಷ್ (35) ಎಂಬಾಕೆ ಚಾಕುವಿನಿಂದ ಇರಿದಿರುವ ಕುರಿತು ವರದಿಯಾಗಿದೆ.

ವಾರ್ಷಿಕೋತ್ಸವದ ದಿನ ಗಿಫ್ಟ್ ನೀಡಿಲ್ಲ ಎಂದು ಪತಿಗೆ ಚೂರಿ ಇರಿದ ಪತ್ನಿ Read More »

ಆಸರೆ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಸ್ಕ್ಯಾಮ್| ವೈದ್ಯರಿಂದ ಬರೋಬ್ಬರಿ 74 ಭ್ರೂಣಹತ್ಯೆ

ಸಮಗ್ರ ನ್ಯೂಸ್: ಇತ್ತೀಚೆಗೆ ಮಂಡ್ಯದಲ್ಲಿ ಭ್ರೂಣ ಹತ್ಯೆ ಕೇಸ್ ಕೇಳಿ ಬಂದಿತ್ತು. ಆದರೆ ಇದೀಗ ಮತ್ತೆ ಇದೆ ಕೇಸ್ ಕೇಳಿಬಂದಿದೆ. ಭ್ರೂಣ ಹತ್ಯೆ ತಡೆಗೆ ನಿಷೇಧವಿದ್ದರು ಈಗ ನೆಲಮಂಗಲ ನಗರದ ಆಸರೆ ಆಸ್ಪತ್ರೆಯ ಕರ್ಮಕಾಂಡ ಬಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿರುವ ಆಸರೆ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ನಡೆಯುತ್ತಿದ್ದು ವೈದ್ಯರು ಬರೋಬ್ಬರಿ 74 ಭ್ರೂಣಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಡಾಕ್ಟರ್ ರವಿಕುಮಾರ್‌ ಎಂಬುವವರಿಗೆ ಸೇರಿದ ಆಸರೆ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಮಾಡಲಾಗುತ್ತಿದೆ ಎಂಬ ಆರೋಪ

ಆಸರೆ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಸ್ಕ್ಯಾಮ್| ವೈದ್ಯರಿಂದ ಬರೋಬ್ಬರಿ 74 ಭ್ರೂಣಹತ್ಯೆ Read More »

ಕಡಬ: ಆ್ಯಸಿಡ್ ದಾಳಿಗೆ ನಲುಗಿದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ| ಪ್ರೀತಿಯ ತಿರಸ್ಕಾರ ತಂದಿತೇ ಬಾಳಿಗೆ ಸಂಚಕಾರ!?

ಸಮಗ್ರ ನ್ಯೂಸ್: ಕಾಲೇಜು ಆವರಣದಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆಯಲು ಸಿದ್ಧರಾಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಯುವಕನೋರ್ವ ಆಯಸಿಡ್ ದಾಳಿ ನಡೆಸಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ(ಮಾ.4) ಬೆಳಿಗ್ಗೆ ನಡೆದಿದೆ. ಪ್ರಕರಣದ ಆರೋಪಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ನಿವಾಸಿ ಎಂಬಿಎ ವಿದ್ಯಾರ್ಥಿ ಅಬೀನ್ (23) ಎಂದು ಗುರುತಿಸಲಾಗಿದೆ. ಸಮವಸ್ತ್ರ ಧರಿಸಿದ್ದ ಆರೋಪಿ:ಆರೋಪಿಯು ಸೋಮವಾರದಂದು ಕಡಬ ಕಾಲೇಜಿನ ಸಮವಸ್ತ್ರವನ್ನು ಹೋಲುವ ಬಿಳಿ ಅಂಗಿ ಮತ್ತು ನೀಲಿ ಪ್ಯಾಂಟ್ ಧರಿಸಿ ಆಗಮಿಸಿದ್ದು, ಪರೀಕ್ಷೆಗೆ ಸಿದ್ಧರಾಗುತ್ತಿದ್ದ ಇತರ

ಕಡಬ: ಆ್ಯಸಿಡ್ ದಾಳಿಗೆ ನಲುಗಿದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ| ಪ್ರೀತಿಯ ತಿರಸ್ಕಾರ ತಂದಿತೇ ಬಾಳಿಗೆ ಸಂಚಕಾರ!? Read More »

ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿ 13 ವರ್ಷಗಳ ನಂತರ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿ ಶರಣಪ್ಪ ಮೊಗಲಪ್ಪ ಎಂಬಾತನನ್ನು ಸೇಡಂ ತಾಲೂಕಿನ ಮುಧೋಳ(Mudhol) ಠಾಣೆಯ ಪೊಲೀಸರು 13 ವರ್ಷಗಳ ಬಳಿಕ ಬಂಧಿಸಿದ್ದಾರೆ. ಸೇಡಂ ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ 2011ರ ಏ. 13ರಂದು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ 27 ಜನ ಆರೋಪಿಗಳು ಸೇರಿಕೊಂಡು ಲಕ್ಷ್ಮಪ್ಪ ಚಿನ್ನಯ್ಯ ಮತ್ತು ನರಸಪ್ಪ ಚಿನ್ನಯ್ಯ ಅವರನ್ನು ಕೊಲೆ ಮಾಡಿದ್ದರು. ಪ್ರಕರಣದಲ್ಲಿ 27 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ

ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿ 13 ವರ್ಷಗಳ ನಂತರ ಪೊಲೀಸ್ ವಶಕ್ಕೆ Read More »

ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆಟೋಚಾಲಕ| ನಿರ್ಜನ ಪ್ರದೇಶದಲ್ಲಿ ನಡೆದಿತ್ತು ಭೀಕರ ಕ್ರೌರ್ಯ

ಸಮಗ್ರ ನ್ಯೂಸ್: ನಿರ್ಮಾಣ ಹಂತದ ಕಟ್ಟಡದಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.20ರ ಮುಂಜಾನೆ ಆಟೋಗಾಗಿ ಕಾಯುತ್ತಿದ್ದ ಅಪರಿಚಿತ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರವೆಸಗಿ ಕೊಲೆ ಮಾಡಿದ ಕಾಮುಕ. ಮುಬಾರಕ್ (28) ಎಂಬ ಆಟೋ ಚಾಲಕ ಅತ್ಯಾಚಾರವೆಸಗಿ ಕೊಂದುಹಾಕಿದ್ದು, ಶಾಂತಿನಗರದ ಜನತಾಕೋ ಆಪರೇಟಿವ್ ಕಟ್ಟಡದ ಬಳಿ ಶವ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಮಹಿಳೆ ಕಟ್ಟಡದಿಂದ ಬಿದ್ದು ಮೃತಪಟ್ಟಂತೆ ಕಾಣುತ್ತಿತ್ತು. ಮರಣೋತ್ತರ ಪರೀಕ್ಷೆ ವೇಳೆ ಅತ್ಯಾಚಾರವೆಸಗಿ ಕೊಂದಿರುವುದು ದೃಢವಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆಟೋ ಚಾಲಕ ಮುಬಾರಕ್ ನನ್ನು

ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆಟೋಚಾಲಕ| ನಿರ್ಜನ ಪ್ರದೇಶದಲ್ಲಿ ನಡೆದಿತ್ತು ಭೀಕರ ಕ್ರೌರ್ಯ Read More »

ಬಿಹಾರದಲ್ಲಿ ಸರಣಿ ಅಪಘಾತ|9 ಮಂದಿ ಮೃತ್ಯು

ಸಮಗ್ರ ನ್ಯೂಸ್:ಬಿಹಾರ ಟ್ರಕ್, ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಂಬತ್ತು ಜನ ಸಾವನ್ನಪ್ಪಿದ ಘಟನೆ ಬಿಹಾರದ ಕೈಮೂರ್ ನಲ್ಲಿ ನಡೆದಿದೆ. ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರನ್ನು ಹೊತ್ತೊಯ್ಯುತ್ತಿದ್ದ ಜೀಪ್, ಚಾಲಕನ ನಿಯಂತ್ರಣ ತಪ್ಪಿ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಬೈಕ್ಗೆ ಮೊದಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಜೀಪ್ ಮತ್ತು ಬೈಕ್ ಎರಡೂ ಪಕ್ಕದ ರಸ್ತೆಗೆ ದೂಡಲ್ಪಟ್ಟಿವೆ. ನಂತರ, ವೇಗವಾಗಿ ಬಂದ ಟ್ರಕ್ ಅವುಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ,

ಬಿಹಾರದಲ್ಲಿ ಸರಣಿ ಅಪಘಾತ|9 ಮಂದಿ ಮೃತ್ಯು Read More »