ಕ್ರೈಂ

ತುಮಕೂರಿನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವು|ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪ

ಸಮಗ್ರ ನ್ಯೂಸ್: ಒಂದೇ ವಾರದಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಫೆಬ್ರವರಿ 22ರಂದು ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್​ಗೆ ಒಳಗಾಗಿದ್ದ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಫೆ.22ರಂದು 7 ಮಹಿಳೆಯರಿಗೆ ಆಪರೇಷನ್​ ಮಾಡಿದ್ದರು. ಹೆರಿಗೆ ಸೇರಿದಂತೆ ವೈದ್ಯರು ವಿವಿಧ ಆಪರೇಷನ್​ ಮಾಡಿದ್ದಾರೆ. 7 ಮಹಿಳೆಯರ ಪೈಕಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. 30 ವರ್ಷದ ಅನಿತಾ, ಸಂತಾನ ಹರಣ ಚಿಕಿತ್ಸೆ ನಡೆದ ದಿನವೇ ಸಾನ್ನಪ್ಪಿದ್ದಾರೆ. ಅಂಜಲಿಗೆ ಸಿಸರಿಯನ್ […]

ತುಮಕೂರಿನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವು|ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪ Read More »

ಪತ್ನಿಗೆ ಸೀರೆ ಇಷ್ಟವಾಗದ ಹಿನ್ನೆಲೆ ಅಂಗಡಿ ಮಾಲಿಕನಿಗೆ ಹಲ್ಲೆ ಮಾಡಿದ ಪತಿ

ಸಮಗ್ರ ನ್ಯೂಸ್: ಉತ್ತರ ಕನ್ನಡದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಹೌದು ಪತ್ನಿಗೆ ಸೀರೆ ಇಷ್ಟವಾಗದ ಹಿನ್ನೆಲೆಯಲ್ಲಿ ಪತಿ ಅಂಗಡಿ ಮಾಲಿಕನಿಗೆ ಬೈದು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಸಿಪಿ ಬಜಾರದಲ್ಲಿ ಮಹಮ್ಮದ್ ಹಲ್ಲೆ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶಿರಸಿಯ ನೆಹರುನಗರ ನಿವಾಸಿಯಾಗಿರುವ ಮಹಮ್ಮದ್​ ಕುಟುಂಬದೊಂದಿಗೆ ಫೆ.24 ರಂದು ಸಿಪಿ ಬಜಾರ್​​ನಲ್ಲಿರುವ ಸಾಗರ ಬಟ್ಟೆ ಅಂಗಡಿಗೆ ಬಂದು ಬಟ್ಟೆ ಖರೀದಿ ಮಾಡಿಕೊಂಡು ಹೋಗಿದ್ದಾನು. ಮಹ್ಮಮದ್​ ತೆಗೆದುಕೊಂಡು ಹೋದ ಸೀರೆ

ಪತ್ನಿಗೆ ಸೀರೆ ಇಷ್ಟವಾಗದ ಹಿನ್ನೆಲೆ ಅಂಗಡಿ ಮಾಲಿಕನಿಗೆ ಹಲ್ಲೆ ಮಾಡಿದ ಪತಿ Read More »

ಪ್ರೀತಿಸಿದವ ಬೇರೆ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ಯುವತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಪ್ರೀತಿ ಮಾಡಿ ಪ್ರೀತಿಸಿದ ಯುವಕ ಬೇರೆ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕೂನಬೇವು ಗ್ರಾಮದಲ್ಲಿ ನಡೆದಿದೆ. ವಿಶಾಲಾಕ್ಷಿ ಎಂಬಾಕೆ ಚಿತ್ರದುರ್ಗ ನಗರದ ಡಿಪ್ಲೋಮಾ ಕಾಲೇಜಿನಲ್ಲಿ ಓದುತ್ತಿದ್ದಳು. ಈ ವೇಳೆ ಅದೇ ಕೂನಬೇವು ಗ್ರಾಮದ ಚಾಲಕ ತಿಪ್ಪೇಸ್ವಾಮಿ ಎಂಬಾತ ಪ್ರೀತಿಸು ಎಂದು ಕಾಡಿದ್ದನು. ಕೊನೆಗೂ ಮನಸೋತ ವಿಶಾಲಾಕ್ಷಿ, ತಿಪ್ಪೇಸ್ವಾಮಿ ಜೊತೆ ಪ್ರೀತಿಯಲ್ಲಿ ಬಿದ್ದು ಓಡಾಟ ನಡೆಸಿದ್ದಳು. ತಿಪ್ಪೇಸ್ವಾಮಿ ಎಸ್ಟಿ, ವಿಶಾಲಾಕ್ಷಿ ಎಸ್ಸಿ ಸಮುದಾಯಕ್ಕೆ ಸೇರಿದ್ದಳು. ಹೀಗಾಗಿ, ಅಂತರ್ಜಾತಿ ವಿವಾಹಕ್ಕೆ ಪೋಷಕರ

ಪ್ರೀತಿಸಿದವ ಬೇರೆ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ಯುವತಿ ಆತ್ಮಹತ್ಯೆ Read More »

ಆನ್ ಲೈನ್ ಗೇಮ್ಸ್ ಗೀಳು|ಸಾಲ ತೀರಿಸಲು ವಿಮಾ ಹಣಕ್ಕಾಗಿ ತಾಯಿಯನ್ನೇ ಕೊಂದ ಮಗ!

ಸಮಗ್ರ ನ್ಯೂಸ್: ಆನ್ ಲೈನ್ ಗೇಮ್ಸ್ ಗೀಳು ಅಂಟಿಸಿಕೊಂಡಿದ್ದ ಯುವಕನೋರ್ವ ಜೀವ ವಿಮಾ ಹಣಕ್ಕಾಗಿ ತನ್ನ ತಾಯಿಯನ್ನೇ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಫತೇಹ್ ಪುರದಲ್ಲಿ ನಡೆದಿದೆ. ಹಿಮಾಂಶು ಎಂಬಾತ 50 ಲಕ್ಷ ರೂ ಹಣಕ್ಕಾಗಿ ತಾಯಿಯನ್ನು ಕೊಂದು ಆಕೆಯ ಶವವನ್ನು ಯಮುನಾ ನದಿ ತೀರದಲ್ಲಿ ಹೂತಿದ್ದಾನೆ.ಆರೋಪಿಯು ಜನಪ್ರಿಯ ಪ್ಲಾಟ್‌ಫಾರ್ಮ್ ಝುಪಿಯಲ್ಲಿ ಗೇಮಿಂಗ್‌ ಗೆ ಚಟ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆ ವ್ಯಸನದಿಂದ ಅವನು ಹಲವು ಬಾರಿ ನಷ್ಟ ಅನುಭವಿಸಿದ್ದ. ಇದರಿಂದ ಅವನು ಸಾಲ

ಆನ್ ಲೈನ್ ಗೇಮ್ಸ್ ಗೀಳು|ಸಾಲ ತೀರಿಸಲು ವಿಮಾ ಹಣಕ್ಕಾಗಿ ತಾಯಿಯನ್ನೇ ಕೊಂದ ಮಗ! Read More »

ವೃದ್ಧೆಯನ್ನು ಹತ್ಯೆಗೈದು ಡ್ರಮ್​ನಲ್ಲಿ ಮೃತದೇಹ ಇಟ್ಟು ಹಂತಕ ಪರಾರಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆ ಮಾಡಿ ಡ್ರಮ್​ನಲ್ಲಿ ಮೃತದೇಹ ಇಟ್ಟು ಹಂತಕ ಪರಾರಿಯಾದ ಘಟನೆ ನಡೆದಿದೆ. ಕೆ.ಆರ್.ಪುರಂ ಪೊಲೀಸ್​ ಠಾಣಾ ವ್ಯಾಪ್ತಿಯ ನಿಸರ್ಗ ಲೇಔಟ್​ನಲ್ಲಿ ಈ ಕೃತ್ಯ ನಡೆದಿದೆ. ಕಳೆದ ಎರಡು ಮೂರು ದಿನಗಳ ಹಿಂದೆಯೇ ವೃದ್ಧೆಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ದುರ್ವಾಸನೆ ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಹಾಗೂ ವಿಧಿವಿಜ್ಞಾನ ತಜ್ಞರು ಭೇಟಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ವಿಚಾವಾಗಿ ಪರಿಶೀಲನೆಯನ್ನು ನಡೆಸಿದ್ದಾರೆ.

ವೃದ್ಧೆಯನ್ನು ಹತ್ಯೆಗೈದು ಡ್ರಮ್​ನಲ್ಲಿ ಮೃತದೇಹ ಇಟ್ಟು ಹಂತಕ ಪರಾರಿ Read More »

ಮಧ್ಯದ ಅಮಲಿನಲ್ಲಿ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಕೊಲೆ| ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಕುಡಿದ ಮತ್ತಿನಲ್ಲಿ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಇಬ್ಬರನ್ನು ಬಂಧಿಸಿದ ಘಟನೆ ದೇವರಚಿಕ್ಕನಹಳ್ಳಿಯಲ್ಲಿ ನಡೆದಿದೆ. ಮೃತ ಆನಂದ್‌ (32) ಹತ್ಯೆ ಸಂಬಂಧ ಮೃತನ ಮನೆ ಮಾಲಿಕ ಮಹೇಂದ್ರ ಹಾಗೂ ಆತನ ಸ್ನೇಹಿತ ಹರ್ಷಿತ್‌ನನ್ನು ಬಂಧಿಸಲಾಗಿದೆ. ಬೇಗೂರು ಸಮೀಪದ ಬಾರ್‌ನಲ್ಲಿ ಫೆ 22ರಂದು ಬೆಳಗ್ಗೆ ಮದ್ಯ ಸೇವಿಸಿದ ಬಳಿಕ ಮಹೇಂದ್ರ ಹಾಗೂ ಆನಂದ್ ಮಧ್ಯೆ ಜಗಳವಾಗಿದೆ. ಇದರಿಂದ ಕೋಪಗೊಂಡ ಮಹೇಂದ್ರ, ತನ್ನ ಸ್ನೇಹಿತ ಹರ್ಷಿತ್ ಜತೆ ಸೇರಿಕೊಂಡು ಆನಂದ್‌ ಮೇಲೆ ಹಲ್ಲೆ ನಡೆಸಿ

ಮಧ್ಯದ ಅಮಲಿನಲ್ಲಿ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಕೊಲೆ| ಆರೋಪಿಗಳ ಬಂಧನ Read More »

ಮಾಜಿ ಲವರ್ ಕಾಟ ತಾಳಲಾರದೆ ನಿಶ್ಚಿತಾರ್ಥವಾಗಿದ್ದ ಯುವತಿ ಸಾವು

ಸಮಗ್ರ ನ್ಯೂಸ್: ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಹೊರವಲಯದ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಜಿ ಪ್ರಿಯಕರ ಪಕ್ಕದ ಮನೆಯಲ್ಲಿದ್ದು ನಿರಂತರ ಕಾಟ ಕೊಡುತ್ತಿದ್ದ, ಅವನ ಕಾಟ ತಾಳಲಾರದೆ, ನಿಶ್ಚಿತಾರ್ಥವಾಗಿದ್ದ ಚಂದ್ರಕಲಾ (19)ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಿಗಣಿ ಸಮೀಪದ ನಂಜಾಪುರದಲ್ಲಿ ಮೊನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಿಗಣಿ ಸಮೀಪದ ನಂಜಾಪುರದ ನಿವಾಸಿಯಾಗಿದ್ದ ಮೃತ ಚಂದ್ರಕಲಾ ಹಾಗೂ ಆರೋಪಿ ಅರುಣ್ ಕುಮಾರ್​ ಪರಸ್ಪರ ಪ್ರೀಸುತ್ತಿದ್ದರಂತೆ. ಬಳಿಕ ಚಂದ್ರಕಲಾ ಮದುವೆ ಪ್ರಸ್ತಾಪ ಮಾಡಿದ್ದಾಳೆ. ಇಲ್ಲ

ಮಾಜಿ ಲವರ್ ಕಾಟ ತಾಳಲಾರದೆ ನಿಶ್ಚಿತಾರ್ಥವಾಗಿದ್ದ ಯುವತಿ ಸಾವು Read More »

ಮಹಾರಾಷ್ಟ್ರದಲ್ಲಿ ಪ್ರಸಾದ ಸೇವಿಸಿ 300 ಕ್ಕೂ ಹೆಚ್ಚು ಜನರು ಅಸ್ವಸ್ಥ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಪ್ರಸಾದ ಸೇವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 300 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಲೋನಾರ್‌ನ ಸೋಮಥಾನ ಗ್ರಾಮದಲ್ಲಿ ಧಾರ್ಮಿಕ ಕಾರ್ಯಕ್ರಮವಾದ ಹರಿಣಂ ಸಪ್ತಾಹದ ಕೊನೆಯ ದಿನದಂದು ರಾತ್ರಿ ಈ ಘಟನೆ ನಡೆದಿದೆ ಎಂದು ಬುಲ್ಧಾನ ಜಿಲ್ಲಾಧಿಕಾರಿ ಕಿರಣ್ ಪಾಟೀಲ್ ತಿಳಿಸಿದರು. ಹಾಸಿಗೆಗಳ ಕೊರತೆಯಿಂದಾಗಿ ಆಸ್ಪತ್ರೆಯ ಹೊರಗೆ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು, ಸಲೈನ್ ಬಾಟಲಿಗಳನ್ನು ಮರಗಳಿಗೆ ಕೊಕ್ಕೆಯಿಂದ ನೇತುಹಾಕಲಾಗಿದೆ. ಸೋಮಠಾಣಾ ಮತ್ತು ಖಾಪರಖೇಡ್

ಮಹಾರಾಷ್ಟ್ರದಲ್ಲಿ ಪ್ರಸಾದ ಸೇವಿಸಿ 300 ಕ್ಕೂ ಹೆಚ್ಚು ಜನರು ಅಸ್ವಸ್ಥ Read More »

ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ಅರ್ಜಿ‌ ವಿಚಾರಣೆ| ಸಿಬಿಐ ಗೆ ನೋಟೀಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪ ಪ್ರಕರಣದ ಮರು ತನಿಖೆಗೆ ಆದೇಶಿಸುವಂತೆ ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ. ಈ ಸಂಬಂಧ ಮೃತ ಸೌಜನ್ಯ ತಂದೆಯೂ ಆದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಆರ್‌.ಬಾಲಕೃಷ್ಣ,

ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ಅರ್ಜಿ‌ ವಿಚಾರಣೆ| ಸಿಬಿಐ ಗೆ ನೋಟೀಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ Read More »

ಚಂದಗಾಣಲೆಂದು ಹಲ್ಲಿನ ಶಸ್ತ್ರಚಿಕಿತ್ಸೆಗೆ ಹೋಗಿ ಪ್ರಾಣ ಕಳೆದುಕೊಂಡ ಮದುಮಗ

ಸಮಗ್ರ ನ್ಯೂಸ್: ಮದುವೆಯ ದಿನ ಚೆನ್ನಾಗಿ ಕಾಣಿಸಬೇಕು ಎಂದು ಸ್ಮೈಲ್ ಡಿಸೈನಿಂಗ್ (Smile Designing) ಶಸ್ತ್ರಚಿಕಿತ್ಸೆಗೆ ಹೋಗಿ ಪ್ರಾಣವನ್ನೇ ಕಳೆದುಕೊಂಡ ವಿಚಿತ್ರ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಲಕ್ಷ್ಮಿ ನಾರಾಯಣ ವಿಂಜಮ್ (28) ಎಂಬಾತ ಮದುವೆಯ ದಿನ ತಾನು ಚೆನ್ನಾಗಿ ಕಾಣಿಸಲು ಹೈದರಾಬಾದ್ ನ ಜುಬಿಲಿ ಹಿಲ್ನಲ್ಲಿರುವ ಎಫ್ಎಂಎಸ್ ಇಂಟರ್ನ್ಯಾ ಷನಲ್ ಡೆಂಟಲ್ ಕ್ಲಿನಿಕ್ ನಲ್ಲಿ ಸ್ಮೈಲ್ ಡಿಸೈನಿಂಗ್ ಶಸ್ತ್ರ ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲಿ ಸಾವನ್ನಪ್ಪಿದ್ದಾನೆ. ಪ್ರಜ್ಞೆ ತಪ್ಪಿಸುವ ಔಷಧ (ಅನಸ್ತೇಶಿಯಾ) ಹೆಚ್ಚು ಕೊಟ್ಟ ಕಾರಣ ಆತ ಸಾವನ್ನಪ್ಪಿದ್ದಾನೆ

ಚಂದಗಾಣಲೆಂದು ಹಲ್ಲಿನ ಶಸ್ತ್ರಚಿಕಿತ್ಸೆಗೆ ಹೋಗಿ ಪ್ರಾಣ ಕಳೆದುಕೊಂಡ ಮದುಮಗ Read More »