ಕ್ರೈಂ

ಕುಕ್ಕೆ ಸುಬ್ರಹ್ಮಣ್ಯ: ಬಸ್ – ಬೈಕ್ ನಡುವೆ ಅಪಘಾತ| ಗಂಭೀರ ಗಾಯಗೊಂಡ ಸವಾರ ಆಸ್ಪತ್ರೆಯಲ್ಲಿ ಸಾವು

ಸಮಗ್ರ ನ್ಯೂಸ್: ಬೈಕ್‌ಗೆ ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬೈಕ್‌ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆಯಲ್ಲಿ ಸೋಮವಾರ ಸಂಭವಿಸಿದೆ. ಮೃತರನ್ನು ಕೊಂಬಾರು ಮಣಿಭಾಂಡ ತೇರೆಬೀದಿ ನಿವಾಸಿ ನೆಟ್ಟಣದಲ್ಲಿ ಮೆಕ್ಯಾನಿಕ್‌ ಆಗಿದ್ದ ವಾಸುದೇವ ಗೌಡ (52) ಎಂದು ಗುರುತಿಸಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಹಾಗೂ ನಾಲ್ವರು ಸಹೋದರರನ್ನು ಅಗಲಿದ್ದಾರೆ. ಬಸ್‌ ಓವರ್‌ಟೇಕ್‌ ಮಾಡುವ ಭರದಲ್ಲಿ ಎದುರಿನಿಂದ ಬಂದ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ […]

ಕುಕ್ಕೆ ಸುಬ್ರಹ್ಮಣ್ಯ: ಬಸ್ – ಬೈಕ್ ನಡುವೆ ಅಪಘಾತ| ಗಂಭೀರ ಗಾಯಗೊಂಡ ಸವಾರ ಆಸ್ಪತ್ರೆಯಲ್ಲಿ ಸಾವು Read More »

ಆಂಬ್ಯುಲೆನ್ಸ್‌ನಲ್ಲಿ ಗಾಂಜಾ ಸಾಗಾಟ| ಇಬ್ಬರ ಬಂಧನ| 4 ಕೆಜಿ ಗಾಂಜಾ ವಶಕ್ಕೆ

ಸಮಗ್ರ ನ್ಯೂಸ್: ಮಾದಕ ಪದಾರ್ಥಗಳ ಸಾಗಾಟಕ್ಕೆ ಆ್ಯಂಬುಲೆನ್ಸ್‌ಗಳ ಬಳಕೆಯಾಗುತ್ತಿರುವ ಅಘಾತಕಾರಿ ಸುದ್ದಿ ಕೇರಳದಲ್ಲಿ ಬೆಳಕಿಗೆ ಬಂದಿದೆ. ಆಂಬ್ಯುಲೆನ್ಸ್‌ನಲ್ಲಿ ಸಾಗಿಸುತ್ತಿದ್ದ 4ಕೆಜಿ ಗಾಂಜಾ ಸಹಿತ ಇಬ್ಬರನ್ನು ಕೊಲ್ಲಂನ ಪತ್ತನಪುರಂ ಪಿಟವೂರ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಾರವೂರು ಮೂಲದ ವಿಷ್ಣು ಹಾಗೂ ಪುನಲೂರಿನ ನಾಸೀರ್ ಬಂಧಿತ ಆರೋಪಿಗಳಾಗಿದ್ದಾರೆ. ಪುನಲೂರಿಗೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದಾಗ ಪೊಲೀಸರ ಬಲೆಗೆ ಸಿಕ್ಕಿಹಾಕಿಕೊಂಡಿದ್ದಾರೆ. ಪುನಲೂರು ತಾಲೂಕು ಆಸ್ಪತ್ರೆ ಬಳಿ ಹೋಗುತ್ತಿದ್ದ ಆಂಬ್ಯುಲೆನ್ಸ್ ಸಮಶಯವಾಗಿ ನಿಲ್ಲಿಸಿ ತಪಾಸಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ಪಠಾಣಪುರಂ ಪ್ರದೇಶಕ್ಕೆ ಗಾಂಜಾ ವ್ಯಾಪಕವಾಗಿ ಸಾಗಾಟವಾಗುತ್ತಿರುವ

ಆಂಬ್ಯುಲೆನ್ಸ್‌ನಲ್ಲಿ ಗಾಂಜಾ ಸಾಗಾಟ| ಇಬ್ಬರ ಬಂಧನ| 4 ಕೆಜಿ ಗಾಂಜಾ ವಶಕ್ಕೆ Read More »

ತಂಗಿಯ ಎಂಗೇಜ್ಮೆಂಟ್​ಗೆ ಪತ್ನಿ ಬರ್ಲಿಲ್ಲ ಎಂದು ಚಾಕುವಿನಿಂದ ಇರಿತ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ದಿನನಿತ್ಯ ಚಿತ್ರ ವಿಚಿತ್ರ ಘಟನೆಗಳು ಬೆಳಕಿಗೆ ಬರುತ್ತಿರುತ್ತದೆ ಅದೇ ರೀತಿ ಇಲ್ನೊಂದು ಪ್ರಕರಣ ನೀವೆ ನೋಡಿ.. ಪತಿಯ ತಂಗಿಯ ಎಂಗೇಜ್ಮೆಂಟ್​ಗೆ ಪತ್ನಿ ಬರ್ಲಿಲ್ಲ ಎಂದು ಜಗಳವಾಡುತ್ತಿದ್ದಾಗ ಜಗಳ ವಿಕೋಪಕ್ಕೆ ತಿರುಗಿ ಪತಿ ತನ್ನ ಪತ್ನಿಗೆ ಚಾಕು ಇರಿದ ಘಟನೆ ಸುಂಕದಕಟ್ಟೆ ಬಳಿಯ ಸೊಲ್ಲಾಪುರದಮ್ಮ ದೇವಸ್ಥಾನ ಬಳಿ ನಡೆದಿದೆ. ಜಯಪ್ರಕಾಶ್ ತನ್ನ ಪತ್ನಿ‌ ದಿವ್ಯಶ್ರೀಗೆ ಚಾಕು ಇರಿದಿದ್ದಾರೆ. ಕೊಲೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಆರೋಪಿ ಜಯಪ್ರಕಾಶ್ ರನ್ನು ಬಂಧಿಸಲಾಗಿದೆ.

ತಂಗಿಯ ಎಂಗೇಜ್ಮೆಂಟ್​ಗೆ ಪತ್ನಿ ಬರ್ಲಿಲ್ಲ ಎಂದು ಚಾಕುವಿನಿಂದ ಇರಿತ Read More »

ಉಡುಪಿ: ಪರೀಕ್ಷೆ ಭೀತಿಗೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ

ಸಮಗ್ರ ನ್ಯೂಸ್: ಪರೀಕ್ಷೆಯ ಭೀತಿಯಿಂದ ವಿದ್ಯಾರ್ಥಿ ಒಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಮಣಿಪಾಲ ಮಾಹೆ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. ಪ್ಯಾರಾಮೆಡಿಕಲ್ ವಿದ್ಯಾರ್ಥಿ ಸತ್ಯಂ ಸುಮನ್ (19) ಎನ್ನುವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲಿ ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ವಿದ್ಯಾರ್ಥಿಗಳು ಗಾಬರಿಯಿಂದ ಓಡಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೇರಿಯಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಪರೀಕ್ಷೆ ಭೀತಿಗೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ Read More »

ಬೆಂಗಳೂರಿನ ಕ್ಯಾಬ್​ ಡ್ರೈವರ್ ಚಿಕ್ಕಮಗಳೂರಿನಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಬೆಂಗಳೂರಿನ ಕ್ಯಾಬ್​ ಡ್ರೈವರ್ ಚಿಕ್ಕಮಗಳೂರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದರ್ಶನ ಎಂಬಾತ ಬೆಂಗಳೂರಿನಲ್ಲಿ ಕ್ಯಾಬ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದ. ಇತ ಹಾಫ್​ ಮರ್ಡರ್​ ಮಾಡಿ ಜೈಲಿಗೆ ಹೋಗಿ ಬೇಲ್​ ಮೇಲೆ ಆಚೆ ಬಂದಿದ್ದ. ಈ ಹಿನ್ನಲೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ತನ್ನ ತಾತನ ಮನೆಯಲ್ಲಿ ವಾಸವಿದ್ದ. ನಿನ್ನೆ ಸ್ನೇಹಿತರ ಜೊತೆ ಆಚೆ ಹೋಗಿದ್ದವನನ್ನ ಯಾರೋ ದುಷ್ಕರ್ಮಿಗಳು ಕತ್ತು ಸೀಳಿ ಭೀಕರವಾಗಿ ಹತ್ಯೆಗೈದಿದ್ದಾರೆ. ವಾರದ ಹಿಂದೆ ಬೆಂಗಳೂರಿಗೆ ವಾಪಸ್ ಹೋಗಿದ್ದ ಮೃತ

ಬೆಂಗಳೂರಿನ ಕ್ಯಾಬ್​ ಡ್ರೈವರ್ ಚಿಕ್ಕಮಗಳೂರಿನಲ್ಲಿ ಶವವಾಗಿ ಪತ್ತೆ Read More »

ಲಸಿಕೆ ಹಾಕಿದ ಕೆಲವೇ ಹೊತ್ತಿನಲ್ಲಿ ಒಂದೂವರೆ ತಿಂಗಳ ಮಗು ಸಾವು| ವೈದ್ಯರ ನಿರ್ಲಕ್ಷ್ಯ..?

ಸಮಗ್ರ ನ್ಯೂಸ್: ರಾಮನಗರದಲ್ಲಿ ಚುಚ್ಚುಮದ್ದು ಪಡೆದ ಕೆಲವೇ ಹೊತ್ತಿನಲ್ಲಿ ಒಂದೂವರೆ ತಿಂಗಳ ಗಂಡು ಮಗು ಮೃತಪಟ್ಟ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಟ್ಟಣ ತಾಲೂಕಿನ ಭೈರಾಪಟ್ಟಣ ಗ್ರಾಮದ ಸ್ಪೂರ್ತಿ ಮತ್ತು ಮೋಹನ್ ದಂಪತಿಯ ಮಗು ಜಸ್ವಿಕ್ ಮೃತಪಟ್ಟಿದೆ. ದೊಡ್ಡಮಳೂರು ಗ್ರಾಮದಲ್ಲಿ ಇಂದು ಆರೋಗ್ಯ ಇಲಾಖೆ ಸಿಬ್ಬಂದಿ 18 ಮಕ್ಕಳಿಗೆ ಪೆಂಟಾ ಲಸಿಕೆ ನೀಡಿದ್ದಾರೆ. ಈ ಮಕ್ಕಳ ಪೈಕಿ ಜಸ್ವಿಕ್​ಗೆ ಚುಚ್ಚುಮದ್ದು ನೀಡಿದ ಒಂದು ಗಂಟೆ ಬಳಿಕ ಆರೋಗ್ಯದಲ್ಲಿ ಏರುಪೇರಾಗಿದೆ. ಪೋಷಕರು ಮಗುವನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಕೊನೆಯುಸಿರೆಳೆದಿದೆ. ಸೂಕ್ತ

ಲಸಿಕೆ ಹಾಕಿದ ಕೆಲವೇ ಹೊತ್ತಿನಲ್ಲಿ ಒಂದೂವರೆ ತಿಂಗಳ ಮಗು ಸಾವು| ವೈದ್ಯರ ನಿರ್ಲಕ್ಷ್ಯ..? Read More »

ಸಂಪಾಜೆ: ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳರು

ಸಮಗ್ರ ನ್ಯೂಸ್: ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಸಹಿತ ಹಣ ಕಳ್ಳತನ ನಡೆಸಿದ ಘಟನೆ ಕೊಡಗು ಜಿಲ್ಲೆಯ ಸಂಪಾಜೆ ಗ್ರಾಮದ ಬೈಲು ಎಂಬಲ್ಲಿ ಫೆ.08 ರಂದು ನಡೆದಿದೆ.‌ ಇಲ್ಲಿನ ಕನ್ಯಾನ ವಿಜಯ ಕುಮಾರ್ ಅವರ ಮನೆಗೆ ಕಳ್ಳರು ನುಗ್ಗಿ ಕಳ್ಳತನ ನಡೆಸಲಾಗಿದೆ ಎಂದು ತಿಳಿದುಬಂದಿದೆ. ವಿಜಯಕುಮಾರ್ ಕಲ್ಲುಗುಂಡಿಯ ತಮ್ಮ ಅಂಗಡಿಗೆ ಹೋಗಿ ಸಂಜೆ ವೇಳೆ ಮನೆಗೆ ಹಿಂದಿರುಗಿ ನೋಡಿದಾಗ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿತ್ತು. ಕೂಡಲೇ ಸ್ಥಳೀಯರಿಗೆ ವಿಷಯ ತಿಳಿಸಲಾಗಿದ್ದು, ಸಂಪಾಜೆ ಪೊಲೀಸರಿಗೆ ಮಾಹಿತಿ ತಿಳಿಸಲಾಗಿದೆ. ಮನೆಯಿಂದ 40 ಗ್ರಾಂ

ಸಂಪಾಜೆ: ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳರು Read More »

ಬೆಳ್ಳಾರೆ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು| ಚಾಲಕ ಪವಾಡಸದೃಶ ಪಾರು

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬೆಳ್ಳಾರೆ – ಸುಬ್ರಹ್ಮಣ್ಯ ಹೆದ್ದಾರಿಯ ಪಾಜಪಳ್ಳ ಬಳಿ ಸಂಭವಿಸಿದೆ. ಬೆಳ್ಳಾರೆಯಿಂದ ನಿಂತಿಕಲ್ಲಿಗೆ ತೆರಳುತ್ತಿದ್ದ ಆಲ್ಟೋ ಕಾರು (KA19P9807) ಪಾಜಪಳ್ಳ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಾಲ್ಕು ಪಲ್ಟಿಯಾಗಿ ಪಕ್ಕದ ಚರಂಡಿಗೆ ಉರುಳಿದೆ. ಇದರಿಂದ ವಿದ್ಯುತ್ ಕಂಬಗಳು ಮುರಿದಿದ್ದು ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಚಾಲಕನ ಅತಿವೇಗದ ಅಜಾಗರೂಕತೆಯ ಚಾಲನೆಯೇ ಅವಘಡಕ್ಕೆ

ಬೆಳ್ಳಾರೆ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು| ಚಾಲಕ ಪವಾಡಸದೃಶ ಪಾರು Read More »

ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಲವ್ವಿಡವ್ವಿ|ಮನನೊಂದು ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ತಾನು ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಇರುವುದನ್ನು ಕಣ್ಣಾರೆ ನೋಡಿದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಮೃತನ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಗನ ಅತ್ಮಹತ್ಯೆಗೆ ಯುವತಿಯೇ ಪ್ರಚೋದನೆ ನೀಡಿದ್ದಾಳೆ ಎಂದು ಗಂಭೀರವಾಗಿ ಆರೋಪ ಮಾಡಿದ್ದಾರೆ. ದಿವ್ಯಾ ಎಂಬಾಕೆಗೆ ಈ ಹಿಂದೆ ಬೇರೊಬ್ಬ ಯುವಕನೊಂದಿಗೆ ಮದುವೆಯಾಗಿತ್ತು. ಬಳಿಕ ಆಕೆ ವಿಚ್ಚೇದನ ಪಡೆದಿದ್ದಳು. ವಿಚ್ಚೇದನ ಪಡೆದ ಸ್ವಲ್ಪ ದಿನದಲ್ಲೇ

ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಲವ್ವಿಡವ್ವಿ|ಮನನೊಂದು ಯುವಕ ಆತ್ಮಹತ್ಯೆ Read More »

ಸುಳ್ಯ: ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು(ಫೆ.7) ಬೆಳಿಗ್ಗೆ ಸಂಭವಿಸಿದೆ. ಸುಳ್ಯ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಪುತ್ತೂರು ತಾಲೂಕಿನ ತಿಂಗಳಾಡಿಯ ವಸಂತ ಎಂಬವರು ಚಿಕಿತ್ಸೆಗಾಗಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಲಿಕಾರರಾಗಿದ್ದ ಇವರು ಪಿಟ್ಸ್ ಕಾಯಿಲೆಗೆ ಒಳಗಾಗಿದ್ದರು. ಇದಕ್ಕಾಗಿ ಚಿಕಿತ್ಸೆ ನೀಡಲಾಗುತ್ತಿತ್ತು‌ ಎಂದು ತಿಳಿದುಬಂದಿದೆ. ಮೃತರು ಪತ್ನಿ

ಸುಳ್ಯ: ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ Read More »