ಕ್ರೈಂ

10ನೇ ತರಗತಿ ಬಾಲಕಿಯನ್ನು ಅಪಹರಿಸಿ ಗ್ಯಾಂಗ್‍ರೇಪ್

ಸಮಗ್ರ ನ್ಯೂಸ್: ಹತ್ತನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚರ ಎಸಗಿ ಸೇತುವೆ ಮೇಲಿಂದ ಎಸೆದ ಅಮಾನವೀಯ ಪ್ರಕರಣ ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್‌ನಲ್ಲಿ ಜ. 29ರಂದು ನಡೆದಿದೆ. ಬಾಲಕಿಗೆ ಪ್ರಜ್ಞೆ ಬಂದ ನಂತರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದೂರಿನಲ್ಲಿ, ಬಾಲಕಿ ಕೋಚಿಂಗ್‍ಗೆ ತೆರಳುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಆಕೆಯನ್ನು ಅಪಹರಿಸಿದ್ದಾರೆ. ಬಳಿಕ ಅತ್ಯಾಚಾರ ಎಸಗಿ ಕ್ರೂರವಾಗಿ ಥಳಿಸಿ ಆಕೆಯನ್ನು ಸೇತುವೆಯಿಂದ ಎಸೆದಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಬಾಲಕಿಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ಕಂಡ ವ್ಯಕ್ತಿಯೊಬ್ಬರು ಆಕೆಯ ಮನೆಯವರಿಗೆ ಮಾಹಿತಿ ನೀಡಿ ಆಸ್ಪತ್ರೆಗೆ […]

10ನೇ ತರಗತಿ ಬಾಲಕಿಯನ್ನು ಅಪಹರಿಸಿ ಗ್ಯಾಂಗ್‍ರೇಪ್ Read More »

ವಂಟಮೂರಿ ಮಹಿಳೆ‌‌ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ| ಪ್ರೇಮಿಗಳ ಮದುವೆ ಮಾಡಿಸಿದ ಪೊಲೀಸ್

ಸಮಗ್ರ ನ್ಯೂಸ್: ಇತ್ತೀಚೆಗೆ ವಂಟಮೂರಿಯಲ್ಲಿ ನಡೆದ ಘಟನೆ ಎಲ್ಲರಿಗೂ ತಿಳಿದಿರುವಂತ್ತದೆ. ಮಗ ಯುವತಿಯೊಂದಿಗೆ ಓಡಿ ಹೋದ ಎಂಬ ಕಾರಣಕ್ಕೆ ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಲಾಗಿತ್ತು. ಈ ಘಟನೆ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡಿತ್ತು. ಸದ್ಯ ಈಗ ಈ ಘಟನೆಗೆ ಕಾರಣವಾಗಿದ್ದ ವಂಟಮೂರಿ ಗ್ರಾಮದ ಪ್ರೇಮಿಗಳ ಮದುವೆ ಮಾಡಿಸಲಾಗಿದೆ. ಬೆಳಗಾವಿ ನಗರದ ದಕ್ಷಿಣ ಉಪನೋಂದಣಿ ಕಚೇರಿಯಲ್ಲಿ ಮದುವೆ ಮಾಡಿಸಲಾಗಿದೆ. ದುಂಡಪ್ಪ ಅಶೋಕ ನಾಯಕ್ ಎಂಬ ವಂಟಮೂರಿ ಗ್ರಾಮದ ಯುವಕ, ಪ್ರಿಯಾಂಕಾ ಬಸಪ್ಪ

ವಂಟಮೂರಿ ಮಹಿಳೆ‌‌ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ| ಪ್ರೇಮಿಗಳ ಮದುವೆ ಮಾಡಿಸಿದ ಪೊಲೀಸ್ Read More »

ಬಿಜೆಪಿ ಕಾರ್ಯಕರ್ತ ರಂಜಿತ್ ಹತ್ಯೆ ಪ್ರಕರಣ| SDPI ಮತ್ತು PFI ನ 15 ಮಂದಿಗೆ ಗಲ್ಲು

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಮತ್ತು ವಕೀಲ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣದಲ್ಲಿ ಕೇರಳದ ಮಾವೆಲಿಕ್ಕರ ಸೆಷನ್ಸ್ ನ್ಯಾಯಾಲಯ 15 ಜನರಿಗೆ ಮರಣದಂಡನೆ ವಿಧಿಸಿದೆ. ಕೇರಳದಲ್ಲಿ ಒಂದೇ ಪ್ರಕರಣದಲ್ಲಿ ಇಷ್ಟು ಜನರಿಗೆ ಮರಣದಂಡನೆ ವಿಧಿಸಿರುವುದು ಇದೇ ಮೊದಲು ಎಂದು ತಿಳಿದುಬಂದಿದೆ. ಜನವರಿ 20 ರಂದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು PFI ಮತ್ತು SDPI ನ 15 ಜನರನ್ನು ತಪ್ಪಿತಸ್ಥರೆಂದು ಘೋಷಿಸಿತು. ಮಂಗಳವಾರ ಮರಣದಂಡನೆ ಶಿಕ್ಷೆಯನ್ನು ಘೋಷಿಸಲಾಯಿತು. ಮೊದಲ 8 ಆರೋಪಿಗಳು ಕೊಲೆಯಲ್ಲಿ ನೇರ ಭಾಗಿಯಾಗಿದ್ದರೆ, ಇತರ

ಬಿಜೆಪಿ ಕಾರ್ಯಕರ್ತ ರಂಜಿತ್ ಹತ್ಯೆ ಪ್ರಕರಣ| SDPI ಮತ್ತು PFI ನ 15 ಮಂದಿಗೆ ಗಲ್ಲು Read More »

ಟ್ರಾಕ್ಟರ್ – ಶಾಲಾ ಬಸ್ ನಡುವೆ ಅಪಘಾತ| ನಾಲ್ವರು ಮಕ್ಕಳು ಸಾವು; ಹಲವರು ಗಂಭೀರ

ಸಮಗ್ರ ನ್ಯೂಸ್: ಟ್ಯಾಕ್ಟರ್ ಹಾಗೂ ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ್ದು ಈ ವೇಳೆ ಶಾಲಾ ಬಸ್ಸಿನಲ್ಲಿದ ನಾಲ್ವರ ಮಕ್ಕಳು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಲಗೂರು ಗ್ರಾಮದ ಬಳಿ ಸಂಭವಿಸಿದೆ. ಸಾಗರ ಕಡಕೋಳ, ಶ್ವೇತಾ, ಗೋವಿಂದ, ಬಸವರಾಜ್ ಎನ್ನುವ ಮಕ್ಕಳ್ಳು ಸಾವನ್ನಪ್ಪಿದ್ದು ಇಬ್ಬರು ಪಿಯುಸಿ, ಇಬ್ಬರು 9ನೇ ಕ್ಲಾಸ್ ವಿದ್ಯಾರ್ಥಿನಿಯರು ಎಂದು ಹೇಳಲಾಗಿದೆ. ತಡರಾತ್ರಿ 12 ಗಂಟೆ ವೇಳೆ ಈ ಅಪಘಾತ ಸಂಭವಿಸಿದೆ ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಟ್ರಾಕ್ಟರ್ – ಶಾಲಾ ಬಸ್ ನಡುವೆ ಅಪಘಾತ| ನಾಲ್ವರು ಮಕ್ಕಳು ಸಾವು; ಹಲವರು ಗಂಭೀರ Read More »

ಸಿಮೆಂಟ್ ಜಿಂಕೆ ಮುರಿದು 6 ವರ್ಷದ ಮಗು ಸಾವು

ಸಮಗ್ರ ನ್ಯೂಸ್: ಆಟವಾಡಲೆಂದು ಸಿಮೆಂಟ್ ಜಿಂಕೆ ಮೇಲೆ ಏರಿ ಆ ಸಿಮೆಂಟ್ ಜಿಂಕೆ ಮುರಿದು 6 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮುದ್ದಿನಕೊಪ್ಪದಲ್ಲಿರುವ ಟ್ರೀ ಪಾರ್ಕ್ ನಲ್ಲಿ ನಡೆದಿದೆ. ಸಮೀಕ್ಷಾ ಮೃತ ದುರ್ದೈವಿಯಾಗಿದ್ದು, ಸಿಮೆಂಟ್ ಜಿಂಕೆ ಮೇಲೆ ಮಗು ಕುಳಿತ ಕೊಂಡ ವೇಳೆ ಭಾರ ತಾಳದೇ ಸಿಮೆಂಟ್ ಜಿಂಕೆ ಮುರಿದು ಬಿದ್ದಿದೆ. ಆಟವಾಡಲು ಪೋಷಕರೊಂದಿಗೆ ಮಗು ತೆರಳಿದ್ದು ಈ ವೇಳೆ ದುರ್ಘಟನೆ ನಡೆದಿದೆ. ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸಿಮೆಂಟ್ ಜಿಂಕೆ ಮುರಿದು 6 ವರ್ಷದ ಮಗು ಸಾವು Read More »

ಓಡಿ ಹೋಗಿ ಮದುವೆಯಾಗಿ ಬಂದ ದಂಪತಿಗೆ ವಧುವಿನ ಪೋಷಕರಿಂದ ಜೀವ ಬೆದರಿಕೆ

ಸಮಗ್ರ ನ್ಯೂಸ್: ಪ್ರೀತಿಸಿ ಮದುವೆಯಾಗಿದಕ್ಕೆ ನವ ಜೋಡಿಗಳಿಗೆ ವಧುವಿನ ಪೋಷಕರು ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಪೋಷಕರು ಜೀವ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ನವ ಜೋಡಿ ರಕ್ಷಣೆ ಕೋರಿ ಬಳ್ಳಾರಿ ಜಿಲ್ಲೆಯ ಪೊಲೀಸ್​ ವರಿಷ್ಠಾಧಿಕಾರಿ ಅವರಿಗೆ ಮನವಿ ಮಾಡಿದ್ದಾರೆ. ಬಳ್ಳಾರಿ ತಾಲೂಕಿನ ಗೋನಾಳ ಗ್ರಾಮದ ನಾರಾಯಣ ಮತ್ತು ಸಿರಗುಪ್ಪ ತಾಲೂಕಿನ ಊಳೂರು ಗ್ರಾಮದ ಶಿಲ್ಪಾ ಕಳೆದ ಐದು ವರ್ಷದಿಂದ ಪ್ರೀತಿಸುತ್ತಿದ್ದಾರೆ. ಶಿಲ್ಪಾ ಬಳ್ಳಾರಿಯಲ್ಲಿ ದೊಡ್ಡಮ್ಮನ ಮನೆಯಲ್ಲಿದ್ದು ಹೈಸ್ಕೂಲ್ ಓದುವ ವೇಳೆ ನಾರಾಯಣನನ್ನು ಪ್ರೀತಿ ಮಾಡಲು ಆರಂಭಿಸಿದ್ದಾರೆ. 9ನೇ

ಓಡಿ ಹೋಗಿ ಮದುವೆಯಾಗಿ ಬಂದ ದಂಪತಿಗೆ ವಧುವಿನ ಪೋಷಕರಿಂದ ಜೀವ ಬೆದರಿಕೆ Read More »

ತಂಗಿ ಅನ್ಯಧರ್ಮೀಯ ಯುವಕನನ್ನು ಲವ್ ಮಾಡಿದ್ದಕ್ಕೆ ತಂಗಿ- ತಾಯಿಯನ್ನು ಕೊಲೆ ಮಾಡಿದ ಪಾಪಿ ಅಣ್ಣ

ಸಮಗ್ರ ನ್ಯೂಸ್: ತನ್ನ ತಂಗಿ ಅನ್ಯಧರ್ಮೀಯ ಯುವಕನನ್ನು ಲವ್ ಮಾಡುತ್ತಿದ್ದಳೆಂಬ ಒಂದೇ ಕಾರಣಕ್ಕೆ ಅಣ್ಣನೊಬ್ಬ ಆಕೆಯೊಂದಿಗೆ ತನ್ನ ತಾಯಿಯನ್ನೂ ಕೆರೆಗೆ ತಳ್ಳಿ ಕೊಂದ ದಾರುಣ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ. 19-ವರ್ಷ-ವಯಸ್ಸಿನ ಯುವತಿ ಧನುಶ್ರೀ ಮತ್ತು 43-ವರ್ಷ ವಯಸ್ಸಿನ ಅನಿತಾ ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ಅವರನ್ನು ಕೆರೆಗೆ ತಳ್ಳಿದ ಆರೋಪ ಹೊತ್ತಿರುವ ಯುವಕನ ಹೆಸರು ನಿತಿನ್. ಅಗ್ನಿ ಶಾಮಕದಳ ಸಿಬ್ಬಂದಿ ಮೃತ ದೇಹಗಳನ್ನು ಹೊರತೆಗೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನೂ ಧನುಶ್ರೀ

ತಂಗಿ ಅನ್ಯಧರ್ಮೀಯ ಯುವಕನನ್ನು ಲವ್ ಮಾಡಿದ್ದಕ್ಕೆ ತಂಗಿ- ತಾಯಿಯನ್ನು ಕೊಲೆ ಮಾಡಿದ ಪಾಪಿ ಅಣ್ಣ Read More »

ಬೈಕ್ ಗೆ ನೇತುಹಾಕಿದ್ದ ಬ್ಯಾಗ್ ನಲ್ಲಿ ಹುಲಿ ತಲೆಬುರುಡೆ, ಹಲ್ಲು, ಉಗುರು ಪತ್ತೆ; ಇಬ್ಬರ ಬಂಧನ

ಸಮಗ್ರ ನ್ಯೂಸ್: ಬೈಕಿಗೆ ನೇತುಹಾಕಿದ್ದ ಬ್ಯಾಗಿನಲ್ಲಿ ಹುಲಿ ತಲೆಬುರುಡೆ, ಹಲ್ಲು, ಉಗುರು ಪತ್ತೆಯಾಗಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂದಿಸಿ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿ ಕುಂಡ್ರ ಗ್ರಾಮದ ಸತೀಶ್ ಮತ್ತು ಸುಧೀರ್ ಅವರನ್ನು ಚಿಕ್ಕಮಗಳೂರು ನಗರ ವ್ಯಾಪ್ತಿಯಲ್ಲಿ ಜ. 19ರಂದು ಬಂಧಿಸಲಾಗಿದೆ. ಪ್ರಕರಣವೊಂದರಲ್ಲಿ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದ ಸತೀಶ್ ನನ್ನು ಖಚಿತ ಮಾಹಿತಿ ಮೇರೆಗೆ ಮೂಡಿಗೆರೆ ಅರಣ್ಯ ಸಿಬ್ಬಂದಿ ತಡೆದು ಬೈಕ್ ಗೆ ನೇತುಹಾಕಿದ್ದ ಬ್ಯಾಗ್

ಬೈಕ್ ಗೆ ನೇತುಹಾಕಿದ್ದ ಬ್ಯಾಗ್ ನಲ್ಲಿ ಹುಲಿ ತಲೆಬುರುಡೆ, ಹಲ್ಲು, ಉಗುರು ಪತ್ತೆ; ಇಬ್ಬರ ಬಂಧನ Read More »

ಬೆಂಗಳೂರು: ಹಾಡುಹಗಲೇ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಸೆಕ್ಸ್| ಪ್ರಶ್ನಿಸಿದ ಪೊಲೀಸ್ ಮೇಲೆ‌ ಕಾರು ಹತ್ತಿಸಿದ ಯುವಕ

ಸಮಗ್ರ ನ್ಯೂಸ್: ಯುವಕನೊಬ್ಬರಸ್ತೆ ಬದಿಯಲ್ಲೇ ಕಾರು ನಿಲ್ಲಿಸಿ ಯುವತಿಯೊಬ್ಬಳೊಡನೆ ಹಾಡಹಗಲಿನಲ್ಲೇ ಸಂಭೋಗ ನಡೆಸುತ್ತಿದ್ದ ವೇಳೆ ಪ್ರಶ್ನಿಸಿದ ಪೊಲೀಸ್‌ ಸಿಬ್ಬಂದಿಯೊಬ್ಬರ ಮೇಲೆ ಕಾರು ಹತ್ತಿಸಿ ಕೊಲ್ಲಲು ಯತ್ನಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಗಾಯಗೊಂಡ ಪೊಲೀಸ್‌ ಸಿಬ್ಬಂದಿ ಮಹೇಶ್‌ ಖಾಸಗಿ ಆಸ್ಪತೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೀಸಲು ಪಡೆಯಲ್ಲಿ ಸಬ್‌ ಇನ್ಸ್‌ ಪೆಕ್ಟರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಮಹೇಶ್‌ ಶನಿವಾರ ಉಪಕಾರ್‌ ಲೇಔಟ್‌ ನಲ್ಲಿದ್ದ ತಮ್ಮ ಮನೆಯ ಬಳಿ KA 02 MR 8102 ನೋಂದಣಿಯ ಕಾರೊಂದರಲ್ಲಿ

ಬೆಂಗಳೂರು: ಹಾಡುಹಗಲೇ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಸೆಕ್ಸ್| ಪ್ರಶ್ನಿಸಿದ ಪೊಲೀಸ್ ಮೇಲೆ‌ ಕಾರು ಹತ್ತಿಸಿದ ಯುವಕ Read More »

ಮಗುವಿಗೆ ವಿಷವಿಟ್ಟು ತಾಯಿಯು ಆತ್ಮಹತ್ಯೆ| ಚಿಕಿತ್ಸೆ ಫಲಕಾರಿ ಆಗದೇ 3 ವರ್ಷದ ಮಗು ಸಾವು

ಸಮಗ್ರ ನ್ಯೂಸ್: ಮಗುವಿನ ಜೊತೆ ವಿಷ ಕುಡಿದು ತಾಯಿಯ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಗೋದೂರ ಗ್ರಾಮದಲ್ಲಿ ನಡೆದಿದೆ. 3 ವರ್ಷದ ಮಗು ದೀಕ್ಷಿತ್ ಗೌಡ ಸಾವನ್ನಪ್ಪಿದರೆ, ಅಸ್ವಸ್ಥ ತಾಯಿ ಪೂರ್ಣಿಮಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಲಕ್ಷ್ಮಣ ರೇಖೆ ಎಂಬ ಹೆಸರಿನ ಜಿರಳೆಗಿಡುವ ವಿಷ ಇದಾಗಿದ್ದು, ತಾಯಿ ಪೂರ್ಣಿಮಾ ತಾನೂ ಕುಡಿದು, ಮಗುವಿಗೂ ವಿಷವುಣಿಸಿದ್ದಾರೆ. ಸತತ ವಾಂತಿ ಹಾಗೂ ಭೇದಿಯಿಂದ ಮಗು ಕೊನೆಯುಸಿರೆಳೆದಿದೆ. ಇದೀಗ ದಯಾನಂದ ಆಸ್ಪತ್ರೆಯಲ್ಲಿ ಮಗುವಿನ ಮರಣೋತ್ತರ

ಮಗುವಿಗೆ ವಿಷವಿಟ್ಟು ತಾಯಿಯು ಆತ್ಮಹತ್ಯೆ| ಚಿಕಿತ್ಸೆ ಫಲಕಾರಿ ಆಗದೇ 3 ವರ್ಷದ ಮಗು ಸಾವು Read More »