ಕ್ರೈಂ

ಕಾರವಾರ: ರೈಲಿನಲ್ಲಿ ಮಲಗಿದ್ದ ಮಹಿಳೆಯ ಮುಂದೆ ಕಾಮಚೇಷ್ಟೆ| ವಿಕೃತಿ ಮೆರೆದಾತನ‌ ಬೆಂಡೆತ್ತಿದ ರೈಲ್ವೆ ಪೊಲೀಸ್

ಸಮಗ್ರ ನ್ಯೂಸ್: ರೈಲಿನಲ್ಲಿ ಮಹಿಳೆಯ ಮುಂದೆ ಲೈಂಗಿಕ ಚೇಷ್ಟೆಗಳನ್ನು ನಡೆಸಿ ಹಸ್ತಮೈಥುನ ಮಾಡುತ್ತಿದ್ದ ಯುವಕನನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ಪೂರ್ಣಾ ಎಕ್ಸ್‌ಪ್ರೆಸ್‌ನ ಸ್ಲೀಪರ್ ಕೋಚ್‌ನಲ್ಲಿ ಈ ಅಹಿತಕರ ಘಟನೆ ನಡೆದಿದೆ. ಮಹಿಳೆ ತನ್ನ ಸ್ನೇಹಿತರೊಂದಿಗೆ ಕೇರಳದಿಂದ ಗೋವಾಕ್ಕೆ ಪ್ರಯಾಣಿಸುತ್ತಿದ್ದರು. ರೈಲು ಗೋಕರ್ಣ ನಿಲ್ದಾಣಕ್ಕೆ ಬಂದಾಗ ಈ ಘಟನೆ ನಡೆದಿದೆ. 42 ವರ್ಷದ ವ್ಯಕ್ತಿಯೊಬ್ಬ ಎದುರುಗಡೆ ಮಲಗಿದ್ದ 22 ವರ್ಷದ ಕೇರಳದ ಮಹಿಳೆಯ ಮುಂದೆ ತನ್ನ ಗುಪ್ತಾಂಗವನ್ನು ಪ್ರದರ್ಶಿಸಿ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ ಎಂದು ಆರೋಪಿಸಲಾಗಿದೆ. ಸ್ಲೀಪರ್ ಕೋಚ್‌ನಲ್ಲಿ […]

ಕಾರವಾರ: ರೈಲಿನಲ್ಲಿ ಮಲಗಿದ್ದ ಮಹಿಳೆಯ ಮುಂದೆ ಕಾಮಚೇಷ್ಟೆ| ವಿಕೃತಿ ಮೆರೆದಾತನ‌ ಬೆಂಡೆತ್ತಿದ ರೈಲ್ವೆ ಪೊಲೀಸ್ Read More »

ಸುಳ್ಯ: ಕಟ್ಟಡದಿಂದ ಬಿದ್ದು ಗಾಯಗೊಂಡಿದ್ದ ಕಾರ್ಮಿಕ ಸಾವು

ಸಮಗ್ರ ನ್ಯೂಸ್: ಕಟ್ಟಡದಿಂದ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಮುರುಳ್ಯದಿಂದ ವರದಿಯಾಗಿದೆ. ಮೃತನನ್ನು ಬಿಹಾರ ಮೂಲದ ರಾಜ್ ಕುಮಾರ್ ಪಾಸ್ವಾನ್ (32) ಎಂದು ಗುರುತಿಸಲಾಗಿದೆ. ಬಿಹಾರದಿಂದ 10 ದಿನಗಳ ಹಿಂದೆ ಕಟ್ಟಡ ನಿರ್ಮಾಣ,‌ ಸಾರಣೆ ಕೆಲಸಕ್ಕೆಂದು ಬಂದಿದ್ದ ಇಬ್ಬರು ಅಣ್ಣ ತಮ್ಮಂದಿರು ಬೇರೆ ಬೇರೆ ಕಡೆ ಕೆಲಸ ಮಾಡಿಕೊಂಡಿದ್ದರು. ಧರ್ಮೇಂದ್ರ ಪಾಸ್ವಾನ್ ಎಂಬವರು ಮುರುಳ್ಯದಲ್ಲಿ ಕಟ್ಟಡದ ಕೆಲಸ ಮಾಡಿಕೊಂಡಿದ್ದರು. ಅಲ್ಲಿಗೆ ಪಂಜದಲ್ಲಿ ಸಾರಣೆ ಕೆಲಸ ಮಾಡಿಕೊಂಡಿದ್ದ

ಸುಳ್ಯ: ಕಟ್ಟಡದಿಂದ ಬಿದ್ದು ಗಾಯಗೊಂಡಿದ್ದ ಕಾರ್ಮಿಕ ಸಾವು Read More »

ಭಿಕ್ಷೆ ಬೇಡುತ್ತಿದ್ದ ಬಾಲಕಿಯನ್ನೂ ಬಿಡದ ಕಾಮಾಂಧರು| ಮೈಸೂರಿನಲ್ಲಿ ಕೇರಳದ ಪ್ರವಾಸಿ ಯುವಕರ ತಂಡದಿಂದ ವಿಕೃತಿ

ಸಮಗ್ರ ನ್ಯೂಸ್: ಕೇರಳದಿಂದ ಬಂದ ನಾಲ್ಕು ಯುವಕರ ಗುಂಪೊಂದು ಬಸ್‌ ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ವೇಗವಾಗಿ ಹೋಗುವಾಗ ಗ್ರಾಮವೊಂದರಲ್ಲಿ ಕಾರು ಅಪಘಾತ ಮಾಡಿದ್ದು, ಅಲ್ಲಿ ಅಪ್ರಾಪ್ತ ಹುಡುಗಿ ಅಪಹರಣ ಮಾಡಿರುವುದು ಬೆಳಕಿಗೆ ಬಂದಿದೆ. ಕೊಳ್ಳೇಗಾಲದ ಬಸ್‌ ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ರಾಜ್ಯದ ಗಡಿ ದಾಟಲು ಯತ್ನಿಸಿದ ಕೇರಳ ಮೂಲದ ನಾಲ್ವರು ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ. ಕಾರಿನಲ್ಲಿ ಕುಳಿತಿದ್ದ ಕಿಡಿಗೇಡಿಗಳ ಬಳಿ ಬಾಲಕಿ ಭಿಕ್ಷೆ ಬೇಡಲು ಬಂದಾಗ ಬಾಲಕಿಯನ್ನು ಅಪಹರಿಸಿ

ಭಿಕ್ಷೆ ಬೇಡುತ್ತಿದ್ದ ಬಾಲಕಿಯನ್ನೂ ಬಿಡದ ಕಾಮಾಂಧರು| ಮೈಸೂರಿನಲ್ಲಿ ಕೇರಳದ ಪ್ರವಾಸಿ ಯುವಕರ ತಂಡದಿಂದ ವಿಕೃತಿ Read More »

3 ವರ್ಷದ ಮಗು ಸೇರಿ ಒಂದೇ ಫ್ಯಾಮಿಲಿಯಲ್ಲಿ ಐವರ ಶವಪತ್ತೆ! ನಿಜಕ್ಕೂ ಆಗಿದ್ದೇನು?

ಹೊಸ ವರ್ಷದಂದು ಇಡೀ ದೇಶವೇ ಸಂಭ್ರಮದಲ್ಲಿದ್ದರೆ, ಪಂಜಾಬ್‌ನಲ್ಲಿ ಕುಟುಂಬವೊಂದು ದುರಂತ ಅಂತ್ಯ ಕಂಡಿದೆ. ಜಲಂಧರ್ ಜಿಲ್ಲೆಯ ಆದಂಪುರ ಗ್ರಾಮದಲ್ಲಿ ಒಂದೇ ಕುಟುಂಬದ ಐವರು ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೂಲಗಳ ಮಾಹಿತಿ ಪ್ರಕಾರ ಸಾಲಬಾದೆ ತಾಳಲಾರದೆ ಕುಟುಂಬಸ್ಥರರೆಲ್ಲರೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಲ್ಲಿ 59 ವರ್ಷದ ಮನಮೋಹನ್ ಸಿಂಗ್, ಅವರ ಪತ್ನಿ, ಇಬ್ಬರು ಪುತ್ರಿಯರು

3 ವರ್ಷದ ಮಗು ಸೇರಿ ಒಂದೇ ಫ್ಯಾಮಿಲಿಯಲ್ಲಿ ಐವರ ಶವಪತ್ತೆ! ನಿಜಕ್ಕೂ ಆಗಿದ್ದೇನು? Read More »

ಚಿಕ್ಕಮಗಳೂರು:ಕೆಲಸದ ಒತ್ತಡದಿಂದ ಶಿಕ್ಷಣ ಇಲಾಖೆಯ ಮ್ಯಾನೇಜರ್ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಕೆಲಸದ ಒತ್ತಡದಿಂದ ಶಿಕ್ಷಣ ಇಲಾಖೆಯ ಮ್ಯಾನೇಜರ್ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಜ.1ರಂದು ನಡೆದಿದೆ. ಶಿಕ್ಷಣ ಇಲಾಖೆಯಲ್ಲಿ ಕೆಲಸದ ಒತ್ತಡ ಅಧಿಕವಾಗಿದ್ದು, ಡಿ.ದರ್ಜೆ ನೌಕರರು ಕಡಿಮೆ ಇದ್ದು, ಎಲ್ಲಾ ಕೆಲಸ ಸಮಯಕ್ಕೆ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಮನೆಯಲ್ಲಿ ನಿದ್ದೆ ಬರುತ್ತಿರಲಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.

ಚಿಕ್ಕಮಗಳೂರು:ಕೆಲಸದ ಒತ್ತಡದಿಂದ ಶಿಕ್ಷಣ ಇಲಾಖೆಯ ಮ್ಯಾನೇಜರ್ ಆತ್ಮಹತ್ಯೆಗೆ ಶರಣು Read More »

ಹೊಸ ವರ್ಷಾಚರಣೆ ವೇಳೆ ಯುವಕನ ಕಗ್ಗೊಲೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಹೊಸ ವರ್ಷದ ದಿನವೇ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹನುಮಂತನಗರದ 80 ಅಡಿ ರಸ್ತೆಯಲ್ಲಿ ತಡರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತ ಯುವಕನನ್ನು ವಿಜಯ್‌ ಎಂದು ಗುರುತಿಸಲಾಗಿದ್ದು, ವಿಜಯ್‌ ನನ್ನು ಹತ್ಯೆಗೈದು ರಸ್ತೆಯಲ್ಲೇ ಶವವನ್ನು ಎಸೆದು ಆರೋಪಿಗಳು ಪರಾರಿಯಾಗಿದ್ದಾರೆ. ವಿಜಯ್‌ ಬನಶಂಕರಿ ನಿವಾಸಿಯಾಗಿದ್ದು, ಹೊಸ ವರ್ಷದ ಆಚರಣೆಯಲ್ಲಿ ಭಾಗಿಯಾಗಿ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಹೊಸ ವರ್ಷಾಚರಣೆ ವೇಳೆ ಯುವಕನ ಕಗ್ಗೊಲೆ Read More »

ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತ| ಯುವ ಕ್ರಿಕೆಟಿಗ ಸಾವು

ಸಮಗ್ರ ನ್ಯೂಸ್: ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತವಾಗಿ 22 ವರ್ಷದ ಯುವಕ ಮೃತಪಟ್ಟ ಘಟನೆ ಮಧ್ಯಪ್ರದೇಶದ ಖಾರ್ಗೊನ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ. ಕಾಟಕೂಟ್ ಜಿಲ್ಲೆಯ ಶಾಲಿಗ್ರಾಮ್ ಗುಜ್ಜಾರ್ ಗ್ರಾಮದ ನಿವಾಸಿ ಇಂಡಲ್ ಸಿಂಗ್ ಜಾಧವ್ ಬಂಜಾರ(22) ಎಂಬ ಯುವ ಕ್ರಿಕೆಟಿಗ ಮೃತಪಟ್ಟ ಯುವಕ. ಕ್ರಿಕೆಟ್ ಪಂದ್ಯದ ವೇಳೆ ಬೌಲಿಂಗ್ ಮಾಡುತ್ತಿದ್ದಾಗ ಅಸ್ವಸ್ಥಗೊಂಡ ಇಂಡಲ್ ಸಿಂಗ್ ಜಾಧವ್ ಬಂಜಾರ ಅಸ್ವಸ್ಥಗೊಂಡು ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಕ್ರಿಕೆಟಿಗನನ್ನು ಕೂಡಲೇ ಆಸ್ಪತ್ರೆಗೆ ತರುವಾಗಲೇ ಮೃತಪಟ್ಟಿದ್ದರು

ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತ| ಯುವ ಕ್ರಿಕೆಟಿಗ ಸಾವು Read More »

ಉಪ್ಪಿನಂಗಡಿ: ಲಾರಿಯೊಳಗೆ ಸಾವನ್ನಪ್ಪಿದ ಚಾಲಕ| ಎರಡು ದಿನ ಕಳೆದ ಬಳಿಕ ಬೆಳಕಿಗೆ ಬಂತು ಪ್ರಕರಣ

ಸಮಗ್ರ ನ್ಯೂಸ್: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಲಾರಿ ಚಾಲಕ ಹೃದಯಾಘಾತದಿಂದ ಲಾರಿಯಲ್ಲೇ ಮೃತಪಟ್ಟಿದ್ದು, ಎರಡು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಚನ್ನಪಟ್ಟಣದ ಖಲೀಲ್ ಖಾನ್ ಮೃತ ಚಾಲಕ. ಮೈಸೂರಿನಿಂದ ಬಿ.ಸಿ. ರೋಡಿಗೆ ಹಾಸಿಗೆಯ ಲೋಡನ್ನು ಲಾರಿಯಲ್ಲಿ ತಂದಿದ್ದ ಅವರು ಅದನ್ನು ಖಾಲಿ ಮಾಡಿ ಎರಡು ದಿನಗಳ ಹಿಂದೆ ರಾತ್ರಿ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಸ್ಥಿತಿಯಲ್ಲಿಯೇ ಮೃತಪಟ್ಟಿರುವುದು ಕಂಡು ಬಂದಿದೆ. ಮೃತ ಖಲೀಲ್‌ ಖಾನ್‌

ಉಪ್ಪಿನಂಗಡಿ: ಲಾರಿಯೊಳಗೆ ಸಾವನ್ನಪ್ಪಿದ ಚಾಲಕ| ಎರಡು ದಿನ ಕಳೆದ ಬಳಿಕ ಬೆಳಕಿಗೆ ಬಂತು ಪ್ರಕರಣ Read More »

ಕಾಣಿಯೂರು: ನೇಣು ಬಿಗಿದ ಸ್ಥಿತಿಯಲ್ಲಿ ರಿಕ್ಷಾ ಚಾಲಕನ ಮೃತ ದೇಹ ಪತ್ತೆ

ಸಮಗ್ರ ನ್ಯೂಸ್:ಕಾಣಿಯೂರಿನ ಎಲುವೆ ಎಂಬಲ್ಲಿ ರಿಕ್ಷಾ ಚಾಲಕರೋರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾಣಿಯೂರಿನ ಬೆದ್ರಾಜೆ ನಿವಾಸಿ ವಸಂತ (42) ಎಂಬವರ ರಿಕ್ಷಾ ಕಾಣಿಯೂರು ರಸ್ತೆಯ ಎಲುವೆ ಎಂಬಲ್ಲಿ ನಿಲ್ಲಿಸಿತ್ತು. ಅಲ್ಲೇ ಸಮೀಪದ ಕಾಡಿನಲ್ಲಿ ವಸಂತ ಅವರ ಮೃತದೇಹ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣಿಯೂರು: ನೇಣು ಬಿಗಿದ ಸ್ಥಿತಿಯಲ್ಲಿ ರಿಕ್ಷಾ ಚಾಲಕನ ಮೃತ ದೇಹ ಪತ್ತೆ Read More »

ಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕಿಟ್ಟ ಮಾಲೀಕ

ಸಮಗ್ರ ನ್ಯೂಸ್: ಸಿಲ್ಕ್ ಫ್ಯಾಕ್ಟರಿ ಮಾಲೀಕನೊಬ್ಬ ಕಾರ್ಮಿಕ ಮುಂಗಡವಾಗಿ ಹಣ ಪಡೆದಿದ್ದಕ್ಕೆ ಆತನ ಕಾಲಿಗೆ ಸರಪಳಿ ಹಾಕಿ ಜೀತಕ್ಕೆ ನೇಮಿಸಿಕೊಂಡ ಅಮಾನವೀಯ ಘಟನೆ ರಾಮನಗರದ (Ramanagara) ಮೆಹಬೂಬ್ ನಗರದಲ್ಲಿ ನಡೆದಿದೆ. ಕಾಲಿಗೆ ಸರಪಳಿ ಹಾಕಿಸಿಕೊಂಡು ಕಾರ್ಖಾನೆಯಲ್ಲಿ ಜೀತಕ್ಕೆ ಸಿಲುಕಿದ್ದ ಕಾರ್ಮಿಕನನ್ನು ವಸೀಂ (24) ಎಂದು ಗುರುತಿಸಲಾಗಿದೆ. ಆತ ಕಾರ್ಖಾನೆಯ ಮಾಲೀಕನ ಬಳಿ 1.50 ಲಕ್ಷ ರೂ. ಮುಂಗಡವಾಗಿ ಸಾಲ ಪಡೆದಿದ್ದ. ಇದಾದ ಬಳಿಕ ಅನಿವಾರ್ಯ ಕಾರಣದಿಂದ ಒಂದು ತಿಂಗಳು ಕೆಲಸಕ್ಕೆ ಹೋಗಿರಲಿಲ್ಲ. ಇದೇ ಕಾರಣಕ್ಕೆ ಮಾಲೀಕ ಆತನನ್ನು

ಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕಿಟ್ಟ ಮಾಲೀಕ Read More »