ಕ್ರೈಂ

ಸಾರಿಗೆ ಸಚಿವರ ಮನೆ ಬಳಿಯೇ ರೌಡಿಶೀಟರ್ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ರೌಡಿಶೀಟರ್​ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ನಿವಾಸದ ಸಮೀಪವೇ ದುಷ್ಕರ್ಮಿಗಳ ಗುಂಪು ರೌಡಿಶೀಟರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಜೈ ಪ್ರಕಾಶ್ ಅಲಿಯಾಸ್ ಅಪ್ಪಿ ಕೊಲೆಯಾದ ರೌಡಿಶೀಟರ್ ಆಗಿದ್ದು, ಐದಾರು ದುಷ್ಕರ್ಮಿಗಳ ತಂಡ ಅಟ್ಟಾಡಿಸಿ ರೌಡಿಶೀಟರ್​​ನನ್ನು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ. ಈ ಘಟನೆ ಆಡುಗೋಡಿ ಠಾಣಾ ವ್ಯಾಪ್ತಿಯ ಲಕ್ಕಸಂಧ್ರದಲ್ಲಿ ನಡೆದಿದ್ದು, ಆಡುಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ […]

ಸಾರಿಗೆ ಸಚಿವರ ಮನೆ ಬಳಿಯೇ ರೌಡಿಶೀಟರ್ ಬರ್ಬರ ಹತ್ಯೆ Read More »

ಸುಬ್ರಹ್ಮಣ್ಯ:ಅಸ್ವಸ್ಥ ಅಪರಿಚಿತ ವ್ಯಕ್ತಿ ಮೃತ್ಯು; ವಾರಿಸುದಾರರ ಪತ್ತೆಗೆ ಮನವಿ

ಸಮಗ್ರ ನ್ಯೂಸ್: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದು, ಮೃತರ ವಾರಿಸುದಾರರು ಇದ್ದಲ್ಲಿ ಸಂಪರ್ಕಿಸುವಂತೆ ಕಡಬ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಿ.21ರಂದು ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣ ರೈಲ್ವೇ ಸ್ಟೇಷನ್ ಬಳಿ ಅಪರಿಚಿತ ವ್ಯಕ್ತಿ ಅಸ್ವಸ್ಥನಾಗಿ ಬಿದ್ದುಕೊಂಡಿದ್ದು, ಆ ವ್ಯಕ್ತಿಯನ್ನು 108 ಆಂಬ್ಯುಲೆನ್ಸ್ ವಾಹನದಲ್ಲಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಿ.22ರಂದು ಬೆಳಗ್ಗೆ ಆ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತರಾಗಿದ್ದು,ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು ಅಂದಾಜು 30-35 ವರ್ಷ ಪ್ರಾಯದ ಅಪರಿಚಿತ

ಸುಬ್ರಹ್ಮಣ್ಯ:ಅಸ್ವಸ್ಥ ಅಪರಿಚಿತ ವ್ಯಕ್ತಿ ಮೃತ್ಯು; ವಾರಿಸುದಾರರ ಪತ್ತೆಗೆ ಮನವಿ Read More »

ಉಡುಪಿ: ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಚಿಕ್ಕಮಗಳೂರಿನಲ್ಲಿ 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆಯ ಬೆನ್ನಿಗೇ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಕಲ್ಯಾಣಪುರದ ಮಿಲಾಗ್ರಿಸ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ಓದುತ್ತಿದ್ದ ಅಫ್ಕಾರ್ (17) ಮೃತ ವಿದ್ಯಾರ್ಥಿ. ಅಫ್ಕಾರ್‌ ಹುಟ್ಟಿನಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎಂದು ಮನೆಯವರು ತಿಳಿಸಿದ್ದಾರೆ. ಡಿಸೆಂಬರ್ 6ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದ ಬಾಲಕ ಕಳೆದ 18ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ. ಮನೆಗೆ ತಲುಪಿದ್ದ ಬಾಲಕನಿಗೆ ಮತ್ತೆ ಆರೋಗ್ಯದಲ್ಲಿ

ಉಡುಪಿ: ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು Read More »

ಪ್ರಶ್ನೆ ಮಾಡಿದ್ದಕ್ಕೆ ಪ್ರಿಯಕರನಿಗೆ ಬೆಂಕಿ ಇಟ್ಟ ರಾಣಿ..!

ಸಮಗ್ರ ನ್ಯೂಸ್: ಪ್ರಶ್ನೆ ಮಾಡಿದ ಪ್ರಿಯಕರನಿಗೆ ಮಹಿಳೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾನ್ಸ್​​ಟೇಬಲ್ ಸಂಜಯ್ ಮತ್ತು ಹೋಂ ಗಾರ್ಡ್ ರಾಣಿ ಇಬ್ಬರು ಬಸವನಗುಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಮದುವೆಯಾಗಿ ಮಕ್ಕಳಿದ್ರೂ ಸಂಜಯ್ ಜೊತೆ ರಾಣಿ ಅನೈತಿಕ ಸಂಬಂಧ ಹೊಂದಿದ್ದಳು. ಒಂದೇ ಸೂರಿನಡಿ ಕೆಲಸ ಮಾಡುತ್ತಿದ್ದರಿಂದ ಇಬ್ಬರ ನಡುವೆ ಪ್ರೇಮವಾಗಿತ್ತು. ಆದರೆ ಕೆಲ ತಿಂಗಳಿನಿಂದ ಪ್ರಿಯಕರ ಸಂಜಯ್​ನಿಂದ ರಾಣಿ ಅಂತರ ಕಾಯ್ದುಕೊಂಡಿದ್ದಳು. ಎರಡು ದಿನದ ಹಿಂದೆ ಕರೆ ಮಾಡಿ ಸಂಜಯ್​ನನ್ನು ರಾಣಿ ಕರೆಸಿಕೊಂಡಿದ್ದಳು.

ಪ್ರಶ್ನೆ ಮಾಡಿದ್ದಕ್ಕೆ ಪ್ರಿಯಕರನಿಗೆ ಬೆಂಕಿ ಇಟ್ಟ ರಾಣಿ..! Read More »

ಪ್ರೀತಿಸಿದ ಯುವಕನ ಮನೆಯವರ ಮೇಲೆ ಹಲ್ಲೆ…!ರಕ್ಷಣೆ ನೀಡುವಂತೆ ಪ್ರೇಮಿಗಳು ಹಾವೇರಿ ಎಸ್ ಪಿ ಮೊರೆ

ಸಮಗ್ರ ನ್ಯೂಸ್: ಬೆಳಗಾವಿಯಲ್ಲಿ ಯುವಕ-ಯುವತಿ ಪ್ರೀತಿಸಿ ನಾಪತ್ತೆಯಾದ ಪ್ರೇಮ ಪ್ರಕರಣದಲ್ಲಿ ಹುಡುಗನ ತಾಯಿಯನ್ನ ವಿವಸ್ತ್ರಗೊಳಿಸಿ ಹಲ್ಲೆ ಮಾಡಲಾಗಿತ್ತು. ಈ ಪ್ರಕರಣದ ಸಿಐಡಿ ತನಿಖೆ ನಡೆಯುತ್ತಿದೆ. ಈ ಘಟನೆಯ ಬೆನ್ನಲ್ಲೇ ಈಗ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಮುದೇನೂರು ಗ್ರಾಮದಲ್ಲಿ ಮತ್ತೊಂದು ಇಂತಹದೆ ಘಟನೆ ನಡೆದಿದೆ. ಮುದೇನೂರು ಗ್ರಾಮದ ಯುವಕ ಪ್ರಕಾಶ್ ಹಾಗೂ ಚಳಗೇರಿ ಗ್ರಾಮದ ಯವತಿ ಸಂಗೀತಾ ಎಂಬುವವರು ಪ್ರೀತಿಸುತ್ತಿದ್ದರು. ಕಳೆದರೆಡು ದಿನಗಳಿಂದ ಇವರು ನಾಪತ್ತೆಯಾಗಿದ್ದರು. ಇದರಿಂದ ಸಿಟ್ಟಿಗೆದ್ದ ಯುವತಿ ಕಡೆಯವರು ಯವಕನ ಮನೆಗೆ ನುಗ್ಗಿ ದಾಂಧಲೆ

ಪ್ರೀತಿಸಿದ ಯುವಕನ ಮನೆಯವರ ಮೇಲೆ ಹಲ್ಲೆ…!ರಕ್ಷಣೆ ನೀಡುವಂತೆ ಪ್ರೇಮಿಗಳು ಹಾವೇರಿ ಎಸ್ ಪಿ ಮೊರೆ Read More »

ಪತ್ನಿಯ ಕಣ್ಣು ಕಚ್ಚಿ ಮಾಂಸ ಹೊರಬರುವಂತೆ ಗಾಯಗೊಳಿಸಿದ್ದ ಪಾಪಿ ಗಂಡ…!

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಅಮಾನವಿಯ ಘಟನೆಯೊಂದು ಬೆಳಕಿಗೆ ಬಂದಿದೆ.ಪತ್ನಿಯ ಕಣ್ಣು ಕಚ್ಚಿ ಮಾಂಸ ಹೊರಬರುವಂತೆ ಗಾಯಗೊಳಿಸಿದ್ದಾನೆ ಪಾಪಿ ಗಂಡ. ಆರೋಪಿಯನ್ನ ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಕಂಠಪೂರ್ತಿ ಕುಡಿದು ಮನೆಗೆ ಬಂದ ಆರೋಪಿ ಪತಿ ಸುರೇಶ್​ ಗೌಡ(55), ತನ್ನ ಹೆಂಡತಿ ಮೋಹಿನಿ(55) ಯ ಕಣ್ಣನ್ನು ಕಚ್ಚಿ, ಮಾಂಸ ಹೊರಬರುವಂತೆ ಗಾಯಗೊಳಿಸಿದ್ದ ವಿಕೃತ ಘಟನೆ ನಡೆದಿದೆ. ಬಳಿಕ ಪರಾರಿಯಾಗಿ ಮನೆಯ ಹತ್ತಿರದ ತೋಟದಲ್ಲಿ ಅಡಗಿ ಕುಳಿತ್ತಿದ್ದ ಆತನನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ರಾತ್ರಿ 12

ಪತ್ನಿಯ ಕಣ್ಣು ಕಚ್ಚಿ ಮಾಂಸ ಹೊರಬರುವಂತೆ ಗಾಯಗೊಳಿಸಿದ್ದ ಪಾಪಿ ಗಂಡ…! Read More »

ಬಾವ- ನಾದಿನಿ ಪ್ರೀತಿ ಸೂಸೈಡ್ ನಲ್ಲಿ ಅಂತ್ಯ| ಬೀದಿಪಾಲಾಯಿತು ಆಟೋ ಚಾಲಕನ ಬದುಕು…!

ಸಮಗ್ರ ನ್ಯೂಸ್: ಅದೊಂದು ವಿಚಿತ್ರ ಪ್ರೇಮಕಥೆ. ಅವನು ಎರಡು ಮಕ್ಕಳ ತಂದೆ. ಅವಳು ಕೂಡಾ ವಿವಾಹಿತೆ. ಆದ್ರೆ ಆತ ತನ್ನ ಹೆಂಡತಿ ಸಹೋದರಿ ಜೊತೆ‌‌ ಪ್ರೇಮಪಾಶದಲ್ಲಿ ಸಿಲುಕ್ಕಿದ್ದ. ಅವಳು ಗಂಡನ ಬಿಟ್ಟು ಬಾವನ ಜೊತೆ ಸಂಬಂಧ ಬೆಳೆಸಿದ್ಲು. ಕದ್ದುಮುಚ್ಚಿ ಇದ್ದ ಬಾವ-ನಾದಿನಿ ಸಂಬಂಧ ಗುಟ್ಟು ರಟ್ಟಾಗಿತ್ತು. ಹೆಂಡತಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿತ್ತು ಆ ಜೋಡಿ. ಆದ್ರೆ ಇದೀಗ ಆ ಜೋಡಿ ನೇಣಿಗೆ ಕೊರಳೊಡ್ಡಿದೆ. ಅವರದ್ದು ಬೆಂಗಳೂರು ಆದರು ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಹುಬ್ಬಳ್ಳಿಯಲ್ಲಿ. ಆತ್ಮಹತ್ಯೆಗೂ ಮುನ್ನ

ಬಾವ- ನಾದಿನಿ ಪ್ರೀತಿ ಸೂಸೈಡ್ ನಲ್ಲಿ ಅಂತ್ಯ| ಬೀದಿಪಾಲಾಯಿತು ಆಟೋ ಚಾಲಕನ ಬದುಕು…! Read More »

ಕೊಡಗಿನ ರೆಸಾರ್ಟ್ ನಲ್ಲಿ ಮಗುವನ್ನು ಕೊಂದು ದಂಪತಿಗಳು ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಕೇರಳದ ಕೊಲ್ಲಂನಿಂದ ಮಡಿಕೇರಿಗೆ ಆಗಮಿಸಿದ ಕುಟುಂಬ ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ರೆಸಾರ್ಟ್ ಒಂದರಲ್ಲಿ ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಂಡ ಹೆಂಡತಿ ಹಾಗೂ ಮಗು ಸೇರಿ ಮೂವರು ಸಾವಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇವರುಗಳು ಕೇರಳದ ಕೊಲ್ಲಂನಿಂದ ಮಡಿಕೇರಿಗೆ ಆಗಮಿಸಿದ ಕುಟುಂಬವಾಗಿದು. ಆದರೆ ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಕಾರಣ ಇನ್ನು ತಿಳಿದು ಬಂದಿಲ್ಲ ಮೃತರ ಗುರುತು ಇನ್ನಷ್ಟತಿಳಿದುಬರಬೇಕಿದೆೆ. ದಂಪತಿಗಳು ಮಗುವನ್ನು ಕೊಂದು ಬಳಿಕ ಇಬ್ಬರು

ಕೊಡಗಿನ ರೆಸಾರ್ಟ್ ನಲ್ಲಿ ಮಗುವನ್ನು ಕೊಂದು ದಂಪತಿಗಳು ನೇಣು ಬಿಗಿದು ಆತ್ಮಹತ್ಯೆ Read More »

ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿ ಪತ್ತೆ!? ಫೋಟೋ ವೈರಲ್…

ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿದ್ದಾರೆ ಎನ್ನಲಾದ ಪೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 7ನೇ ಬ್ಲಾಕ್ ಕಾಟಿಪಳ್ಳದ ಯುವಕ ಪ್ರಶಾಂತ್ ಭಂಡಾರಿ (31) ಹಾಗೂ 3ನೇ ಬ್ಲಾಕ್ ಆಶ್ರಯ ಕಾಲೋನಿ ನಿವಾಸಿ ಆಯೇಷಾ (19) ಡಿ.1 ರಂದು ನಾಪತ್ತೆಯಾಗಿದ್ದರು. ಇದೀಗ ಈ ಜೋಡಿ ಮದುವೆಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಪ್ರಕರಣಕ್ಕೆ ಪುಷ್ಠಿ ಎಂಬಂತೆ ಹಿಂದೂ ಮುಖಂಡ ಶರಣ್ ಪಂಪ್‌ವೆಲ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು

ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿ ಪತ್ತೆ!? ಫೋಟೋ ವೈರಲ್… Read More »

ಸಿ.ಪಿ ಯೋಗೇಶ್ವರ್ ಭಾವ‌ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರದಲ್ಲಿನ ನಿರ್ಜನ ಪ್ರದೇಶದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಹದೇವಯ್ಯ ಅವರ ಕಾರು ಈಗಾಗಲೇ ಇದೇ ರಾಮಾಪುರ ಪ್ರದೇಶದಲ್ಲಿ ಪತ್ತೆಯಾಗಿತ್ತು. ಕಾರು ಪತ್ತೆಯ ಬೆನ್ನಲ್ಲೇ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಅಲ್ಲದೇ ಮಹದೇವಯ್ಯ ಅವರನ್ನು ಕೊಲೆ ಮಾಡಿರೋ ಶಂಕೆ ವ್ಯಕ್ತ ಪಡಿಸಿದ್ದರು. ಇದೀಗ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಸಿಪಿ ಯೋಗೇಶ್ವರ್ ಅವರ ಭಾವನ ಮೃತದೇಹ ಕೊಲೆಯಾದ

ಸಿ.ಪಿ ಯೋಗೇಶ್ವರ್ ಭಾವ‌ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ Read More »