ರಾಷ್ಟ್ರೀಯ

ರಸಗುಲ್ಲಾ ಶಾರ್ಟೆಜ್/ ಮದುವೆ ಮನೆಯಲ್ಲಿ ಹೊಡೆದಾಟ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ನಡೆದ ಮದುವೆ ಕಾರ್ಯಕ್ರಮದಲ್ಲಿ ರಸಗುಲ್ಲಾ ಕಡಿಮೆಯಾಯಿತೆಂದು ಬಡಿದಾಡಿಕೊಂಡ ಘಟನೆ ನಡೆದಿದೆ. ಇದರಿಂದಾಗಿ ಮಹಿಳೆಯರು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಶಂಸಾಬಾದ್‍ನ ಬ್ರಿಜ್ಛಾನ್ ಕುಶ್ವಾಹಾ ಅವರ ನಿವಾಸದಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿದ್ದು, ಮದುವೆಗೆ ರಸಗುಲ್ಲಾ ಮಾಡಿಸಲಾಗಿತ್ತು. ಆದರೆ ರಸಗುಲ್ಲಾ ಶಾರ್ಟೆಜ್ ಆಗಿತ್ತು. ಈ ಕುರಿತು ಸಂಬಂಧಿಕರೊಬ್ಬರು ರಸಗುಲ್ಲಾ ಕಡಿಮೆಯಾಗಿದೆ ಎಂದು ಜೋರಾಗಿ ಕೂಗಿ ಹೇಳಿದ್ದು ಜಗಕ್ಕೆ ಕಾರಣವಾಗಿತ್ತು. ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಶಂಸಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸಗುಲ್ಲಾ ಶಾರ್ಟೆಜ್/ ಮದುವೆ ಮನೆಯಲ್ಲಿ ಹೊಡೆದಾಟ Read More »

ಅಯೋಧ್ಯಾ ರಾಮಮಂದಿರಕ್ಕೆ ಅರ್ಚಕರ ನೇಮಕಾತಿ/ ಸಲ್ಲಿಕೆಯಾದ ಅರ್ಜಿಗಳು 3000

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ 2024ರ ಜನವರಿ 22ರಂದು ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳನ್ನು ಮಾಡಲಾಗುತ್ತಿದೆ, ಈ ಹಿನ್ನಲೆಯಲ್ಲಿ ರಾಮಮಂದಿರಕ್ಕೆ ಅರ್ಚಕರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಇಲ್ಲಿಯವರೆಗೆ ಮೂರು ಸಾವಿರ ಅರ್ಜಿಗಳ ಸಲ್ಲಿಕೆಯಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅರ್ಚಕ ಹುದ್ದೆಯ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದ್ದು, ಸಲ್ಲಿಕೆಯಾದ ಮೂರು ಸಾವಿರ ಅರ್ಜಿಗಳ ಪೈಕಿ, ಆರ್ಹತೆಯ ಆಧಾರದ ಮೇಲೆ 200 ಮಂದಿಯನ್ನು ಸಂದರ್ಶನಕ್ಕೆ ಶಾರ್ಟ್‍ಲಿಸ್ಟ್ ಮಾಡಲಾಗಿದೆ. ಅಂತಿಮವಾಗಿ 20 ಮಂದಿಯನ್ನು ಆಯ್ಕೆ ಮಾಡಲಾಗುವುದು ಎಂದು ಟ್ರಸ್ಟ್ ತಿಳಿಸಿದೆ.

ಅಯೋಧ್ಯಾ ರಾಮಮಂದಿರಕ್ಕೆ ಅರ್ಚಕರ ನೇಮಕಾತಿ/ ಸಲ್ಲಿಕೆಯಾದ ಅರ್ಜಿಗಳು 3000 Read More »

ಭಾರತ-ಪಾಕ್ ಗಡಿಯಲ್ಲಿ ಡ್ರೋಣ್ ಸಂಚಾರ/ವಶಕ್ಕೆ ಪಡೆದ ಗಡಿ ಭದ್ರತಾ ಪಡೆ

ಸಮಗ್ರ ನ್ಯೂಸ್: ಭಾರತ ಮತ್ತು ಪಾಕಿಸ್ತಾನ ಗಡಿ ಪ್ರದೇಶವಾದ ಪಂಜಾಬ್‌ನ ತರಣ್ ತಾರಣ್ ಜಿಲ್ಲೆಯಲ್ಲಿ ಸಂಚರಿಸುತ್ತಿದ್ದ ಡ್ರೋಣ್ ಒಂದನ್ನು ಗಡಿ ಭದ್ರತಾ ಪಡೆಯ ಸೈನಿಕರು ವಶಕ್ಕೆ ಪಡೆದುಕೊಂಡಿದ್ದಾರೆ. ಪಂಜಾಬ್‌ನ ವಿವಿಧೆಡೆಗಳಲ್ಲಿ ಒಂದು ವಾರದ ಒಳಗಡೆ ಗಡಿ ಭದ್ರತಾ ಪಡೆಯ ಸಿಬ್ಬಂದಿಗಳು ವಶಪಡಿಸಿಕೊಂಡ ಎಂಟನೇ ಡ್ರೋಣ್ ಇದಾಗಿದೆ. ಪಾಕಿಸ್ತಾನವು ಡ್ರೋನ್ ಗಳನ್ನುಗಡಿಪ್ರದೇಶದಲ್ಲಿ ಹೆರಾಯಿನ್‌ ಕಳ್ಳಸಾಗಣೆ ಮಾಡಲು ಬಳಸುತ್ತಿದೆ. ಈ ಮಾಹಿತಿ ಆಧರಿಸಿ ಬಿಎಸ್‌ಎಫ್ ಮತ್ತು ಪೊಲೀಸರು ತರಣ್ ತಾರಣ್‌ ಜಿಲ್ಲೆಯಲ್ಲಿ ಸೋಮವಾರ ಜಂಟಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ

ಭಾರತ-ಪಾಕ್ ಗಡಿಯಲ್ಲಿ ಡ್ರೋಣ್ ಸಂಚಾರ/ವಶಕ್ಕೆ ಪಡೆದ ಗಡಿ ಭದ್ರತಾ ಪಡೆ Read More »

ಪಂಚರಾಜ್ಯ ಚುನಾವಣೆ/ ಬೃಹತ್ ಮೊತ್ತದ ಡ್ರಗ್ಸ್ ವಶ

ಸಮಗ್ರ ನ್ಯೂಸ್: ಮಧ್ಯಪ್ರದೇಶ, ಛತ್ತೀಸಗಢ, ಮಿಜೋರಾಂ, ರಾಜಸ್ಥಾನ ಹಾಗೂ ತೆಲಂಗಾಣ ಈ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ನೀತಿ ಸಂಹಿತೆ ಜಾರಿಯಾದ ದಿನದಿಂದ ಈವರೆಗೆ ₹1,760 ಕೋಟಿ ಮೌಲ್ಯದ ಡ್ರಗ್ಸ್‌ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಐದು ರಾಜ್ಯಗಳಲ್ಲಿ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಶಪಡಿಸಿಕೊಂಡ ಪ್ರಮಾಣಕ್ಕಿಂತ 7 ಪಟ್ಟು (₹239.15 ಕೋಟಿ) ಹೆಚ್ಚಾಗಿದೆ ಎಂದು ಹೇಳಲಾಗಿದೆ. ಮತದಾರರಿಗೆ ಹಂಚುವ ಉದ್ದೇಶದಿಂದ ಕೂಡಿಟ್ಟ ನಗದು, ಮದ್ಯ ಮತ್ತು ಬೆಲೆಬಾಳುವ ವಸ್ತುಗಳನ್ನು

ಪಂಚರಾಜ್ಯ ಚುನಾವಣೆ/ ಬೃಹತ್ ಮೊತ್ತದ ಡ್ರಗ್ಸ್ ವಶ Read More »

ಹಲಾಲ್ ಉತ್ಪನ್ನ ನಿಷೇಧ/ ಉತ್ತರ ಪ್ರದೇಶ ಸರ್ಕಾರದಿಂದ ಆದೇಶ

ಸಮಗ್ರ ನ್ಯೂಸ್: ಉತ್ತರ ಪ್ರದೇಶ ರಾಜ್ಯದಲ್ಲಿ ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ. ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ನಿಯಮವು ತತ್‌ಕ್ಷಣದಿಂದಲೇ ಜಾರಿಗೆ ಬಂದಿದೆ’ ಎಂದು ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ. ‘ಸಾರ್ವಜನಿಕರ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಹಲಾಲ್ ಪ್ರಮಾಣೀಕೃತ ಉತ್ಪನ್ನಗಳು, ಔಷಧಗಳು ಸೇರಿ ಯಾವುದೇ ವಸ್ತುಗಳ ಉತ್ಪಾದನೆ, ಸಂಗ್ರಹ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ’ ಎಂದು ತಿಳಿಸಲಾಗಿದೆ.

ಹಲಾಲ್ ಉತ್ಪನ್ನ ನಿಷೇಧ/ ಉತ್ತರ ಪ್ರದೇಶ ಸರ್ಕಾರದಿಂದ ಆದೇಶ Read More »

ವಾಹನಗಳ HSRP ನಂಬರ್ ಪ್ಲೇಟ್ ಬದಲಾವಣೆ ಅವಧಿ ವಿಸ್ತರಣೆ| ಯಾವಾಗ ಲಾಸ್ಟ್ ಡೇಟ್ ಗೊತ್ತಾ?

ಸಮಗ್ರ ನ್ಯೂಸ್: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಕೆ ಕಡ್ಡಾಯ ಮಾಡಲಾಗಿದೆ. ನವೆಂಬರ್ 17ರೊಳಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಬೇಕು ಎಂಬ ಆದೇಶ ಹೊರಡಿಸಲಾಗಿತ್ತು. ಆದರೆ ಈಗ ಗಡುವು ವಿಸ್ತರಣೆ ಮಾಡಲಾಗಿದೆ. ನಿರೀಕ್ಷೆಗಿಂತ ಕಡಿಮೆ ಸಂಖ್ಯೆಯಲ್ಲಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿದ್ದರಿಂದ ಡೆಡ್ ಲೈನ್ ನನ್ನು ಫೆಬ್ರವರಿ 17ರವರೆಗೆ ವಿಸ್ತರಿಸಲಾಗಿದೆ. 2019ಕ್ಕಿಂತ ಮೊದಲು ನೋಂದಣಿಯಾದ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ,

ವಾಹನಗಳ HSRP ನಂಬರ್ ಪ್ಲೇಟ್ ಬದಲಾವಣೆ ಅವಧಿ ವಿಸ್ತರಣೆ| ಯಾವಾಗ ಲಾಸ್ಟ್ ಡೇಟ್ ಗೊತ್ತಾ? Read More »

ತಮಿಳುನಾಡು: ಭೀಕರ ರಸ್ತೆ ಅಪಘಾತ|ಐವರ ದುರ್ಮರಣ

ಸಮಗ್ರ ನ್ಯೂಸ್: ಕಾರು ಮತ್ತು ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನಪ್ಪಿದ ಘಟನೆ ತಿರುಪುರ್ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ನ. 16ರಂದು ನಡೆದಿದೆ. ಮೃತರನ್ನು ತಮಿಳುಮಣಿ (51), ಚಿತ್ರಾ (49), ಸೆಲ್ವರಾಣಿ (70), ಬಾಲಕೃಷ್ಣನ್ (78), ಮತ್ತು ಕಲಾರಾಣಿ (50) ಎಂದು ಗುರುತಿಸಲಾಗಿದೆ. ಧಾರಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕಲಾರಾಣಿ ಮೃತಪಟ್ಟಿದ್ದಾರೆ. ಟ್ಯಾಂಕರ್ ಟ್ರಕ್ ಕೊಯಮತ್ತೂರು ಜಿಲ್ಲೆಯ ಇರುಗೂರ್‌ನಿಂದ ದ್ರಾಪುರಂ-ಪಳನಿ ರಸ್ತೆಯ ಮನಕಾಡೌ ಬಳಿ ಪೆಟ್ರೋಲ್ ಸಾಗಿಸುತ್ತಿದ್ದ

ತಮಿಳುನಾಡು: ಭೀಕರ ರಸ್ತೆ ಅಪಘಾತ|ಐವರ ದುರ್ಮರಣ Read More »

ತಕ್ಷಣದಿಂದಲೇ ಜಾರಿಗೆ ಬರುವಂತೆ ಆರ್​ಬಿಐನಿಂದ ಮಹತ್ವದ ಸೂಚನೆ| ಸಾಲ ನೀಡದಂತೆ ನಿರ್ದೇಶನ|ಯಾರಿಗೆ? ಯಾಕೆ?

ಸಮಗ್ರ ನ್ಯೂಸ್: ಹಣಕಾಸು ಸಂಸ್ಥೆಗಳು ಹಾಗೂ ಆರ್ಥಿಕ ವಹಿವಾಟಿಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳುವ ಅವಕಾಶ ಇರುವ ಭಾರತೀಯ ರಿಸರ್ವ್ ಬ್ಯಾಂಕ್ ಇಂದು ತಕ್ಷಣದಿಂದಲೇ ಜಾರಿಗೆ ಬರುವಂಥ ಮಹತ್ವದ ನಿರ್ದೇಶನವೊಂದನ್ನು ನೀಡಿದೆ. ಪ್ರಮುಖವಾಗಿ ಸಾಲ ಮಂಜೂರು ಮತ್ತು ಸಾಲ ವಿತರಣೆ ಮಾಡುವುದಕ್ಕೆ ಸಂಬಂಧಿಸಿದಂತೆ ಆರ್​ಬಿಐ ಈ ನಿರ್ದೇಶನವನ್ನು ನೀಡಿದೆ. ಆರ್ಥಿಕ ವಹಿವಾಟಿನಲ್ಲಿ ತೊಡಗಿಸಿಕೊಂಡಿರುವ ಬಜಾಜ್​ ಫೈನಾನ್ಸ್​ ಲಿ. ಕಂಪನಿಗೆ ಆರ್​​ಬಿಐ ಈ ನಿರ್ದೇಶನ ನೀಡಿದೆ. ಕಂಪನಿಯು ತನ್ನ ಎರಡು ಸಾಲ ಯೋಜನೆಗಳಾದ ಇಕಾಮ್​ ಮತ್ತು ಇನ್​ಸ್ಟಾ ಇಎಂಐ ಕಾರ್ಡ್​ ಅನ್ವಯ

ತಕ್ಷಣದಿಂದಲೇ ಜಾರಿಗೆ ಬರುವಂತೆ ಆರ್​ಬಿಐನಿಂದ ಮಹತ್ವದ ಸೂಚನೆ| ಸಾಲ ನೀಡದಂತೆ ನಿರ್ದೇಶನ|ಯಾರಿಗೆ? ಯಾಕೆ? Read More »

ಕೇರಳ ಅರಣ್ಯ ಪ್ರದೇಶ ವ್ಯಾಪ್ತಿಯ ಬಿರುನಾಣಿ ಸಮೀಪ ನೆನ್ನೆ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ|ಓರ್ವ ನಕ್ಸಲನಿಗೆ ಗಾಯ

ಸಮಗ್ರ ನ್ಯೂಸ್: ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೊಡಗಿನ ಬಿರುನಾಣಿ ಗಡಿ ಭಾಗದಲ್ಲಿ ನಕ್ಸಲ್ ನಿಗ್ರಹ ತಂಡ ಹಾಗೂ ನಕ್ಸಲರ ನಡುವೆ ನ. 13ರಂದು ಗುಂಡಿನ ಚಕಮುಕಿ ನಡೆದು ಒರ್ವ ನಕ್ಸಲನಿಗೆ ಗಾಯವಾಗಿದೆ. ಗಾಯಗೊಂಡ ನಕ್ಸಲ್ ಶ್ರೀಮಂಗಳ ಕುಟ್ಟ ವ್ಯಾಪ್ತಿಯ ಆಸ್ಪತ್ರೆ ಅಥವಾ ಔಷಧಿ ಮಳಿಗೆಗೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಕುಟ್ಟ ಗಡಿ ಭಾಗ ಹಾಗೂ ಅದರ ವ್ಯಾಪ್ತಿಯಲ್ಲಿ ಬಿಗಿ ನಾಕಬಂದಿ ಹಾಕಿದ್ದು ದಿನದ 24 ಗಂಟೆ ಬಿಗಿ ಪೊಲೀಸ್ ತಪಾಸಣಾ ಕಾರ್ಯ, ಹಾಗೂ ಹೆಚ್ಚಿನ

ಕೇರಳ ಅರಣ್ಯ ಪ್ರದೇಶ ವ್ಯಾಪ್ತಿಯ ಬಿರುನಾಣಿ ಸಮೀಪ ನೆನ್ನೆ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ|ಓರ್ವ ನಕ್ಸಲನಿಗೆ ಗಾಯ Read More »

ಶಬರಿಮಲೆ: ಇಂದಿನಿಂದ ತೆರೆಯಲಿದೆ ಅಯ್ಯಪ್ಪ‌ ಸನ್ನಿಧಾನ

ಸಮಗ್ರ ನ್ಯೂಸ್: ದೇಶದ ಅತ್ಯಂತ ಪ್ರಾಚೀನ ಮತ್ತು ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಕೇರಳದ ಶಬರಿಮಲೆಯ ಅಯ್ಯಪ್ಪ ದೇಗುಲದ ಗರ್ಭಗುಡಿ ಇಂದು ಸಂಜೆ ತೆರೆಯಲು ಸಜ್ಜಾಗಿದೆ. ಈ ಮೂಲಕ ಎರಡು ತಿಂಗಳ ಯಾತ್ರಿಯ ಋತು ಆರಂಭವಾಗಲಿದೆ. ಈ ದಿನಗಳಲ್ಲಿ ಅಯ್ಯಪ್ಪನ ಭಕ್ತರು ಮಾಲೆ ಧರಿಸಿ ಉಪವಾಸ ಆರಂಭಿಸುತ್ತಾರೆ. ಈ ವರ್ಷದ ಮಂಡಲಪೂಜೆಯು ಶನಿವಾರ 17ರಂದು ನಡೆಯಲಿದೆ. ಅಯ್ಯಪ್ಪನ ದರ್ಶನ ಪಡೆಯಲು ಪ್ರತಿ ವರ್ಷ ಲಕ್ಷಾಂತರ ಭಕ್ತರು ಶಬರಿಮಲೆಗೆ ಭೇಟಿ ನೀಡುತ್ತಾರೆ. ಪ್ರತಿ ತಿಂಗಳು 5 ದಿನಗಳ ಕಾಲ ಪೂಜೆಗಳು

ಶಬರಿಮಲೆ: ಇಂದಿನಿಂದ ತೆರೆಯಲಿದೆ ಅಯ್ಯಪ್ಪ‌ ಸನ್ನಿಧಾನ Read More »