ರಾಷ್ಟ್ರೀಯ

ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ| 130 ಮಂದಿ ಪ್ರಯಾಣಿಕರು ಬಲಿ!?

ಸಮಗ್ರ ನ್ಯೂಸ್: ಗುಜರಾತ್ ನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಅಹ್ಮದಾಬಾದ್ ಏರ್ಪೋರ್ಟ್ ಬಳಿಯೇ ವಿಮಾನ ಒಂದು ಪತನವಾಗಿದೆ. ಟೇಕಾಫ್ ಆಗುವಾಗ ವಿಮಾನ ತಾಂತ್ರಿಕ ದೋಷದಿಂದ ಪತನವಾಗಿದೆ ಎಂದು ತಿಳಿದುಬಂದಿದೆ. ಅಹಮದಾಬಾದ್ ನಿಂದ ಏರ್ ಇಂಡಿಯಾನಾ ವಿಮಾನ ಲಂಡನ್ ಗೆ ತೆರಳುತ್ತಿದ್ದ ವಿಮಾನ ಟೇಕಾಪ್ ಆದ ಕೆಲವೇ ಕ್ಷಣದಲ್ಲಿ ಪತನವಾಗಿದೆ. ಗಾಯಾಳುಗಳನ್ನು ಅಹ್ಮದಾಬಾದ್ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಏರ್ಪೋರ್ಟ್ ಬಳಿ ವಿಮಾನ ಹೊತ್ತಿ ಉರಿಯುತ್ತಿದೆ. ವಿಮಾನದಲ್ಲಿ 133 ಪ್ರಯಾಣಿಕರು ಇರುವ ಮಾಹಿತಿ ಇದೆ. ವಿಮಾನದಲ್ಲಿ ಸಿಬ್ಬಂದಿಗಳು […]

ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ| 130 ಮಂದಿ ಪ್ರಯಾಣಿಕರು ಬಲಿ!? Read More »

ವನ್ ಪ್ಲಸ್ 13S ಇಂದಿನಿಂದ ಮಾರಾಟ ಶುರು| ಏನಿದರ ಸ್ಪೆಷಾಲಿಟಿ? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಅಮೆಜಾನ್ ಮೂಲಕ OnePlus 13s ಸ್ಮಾರ್ಟ್ಫೋನ್ ಇಂದು ತನ್ನ ಮೊದಲ ಮಾರಾಟವನ್ನು ಮಧ್ಯಾಹ್ನ 12 ಗಂಟೆಯಿಂದ ಶುರುವಾಗಲಿದೆ. ಈ ಹೊಸ ಕಾಂಪ್ಯಾಕ್ಟ್ OnePlus ಸ್ಮಾರ್ಟ್‌ಫೋನ್ ಕಂಪನಿಯ ಅಧಿಕೃತ ವೆಬ್‌ಸೈಟ್ ಮತ್ತು ಇ-ಕಾಮರ್ಸ್ ದೈತ್ಯ ಅಮೆಜಾನ್ ಸೇರಿದಂತೆ ಎಲ್ಲಾ ಆನ್‌ಲೈನ್ ಮತ್ತು ಆಫ್‌ಲೈನ್ ಅಂಗಡಿಗಳಲ್ಲಿ ಮಧ್ಯಾಹ್ನದಿಂದ ಖರೀದಿಗೆ ಲಭ್ಯವಿರುತ್ತದೆ. ಈ OnePlus 13s ಸ್ಮಾರ್ಟ್ಫೋನ್ ಬರೋಬ್ಬರಿ 12GB RAM ಮತ್ತು ಅನೇಕ ಇಂಟ್ರೆಸ್ಟಿಂಗ್ ಮತ್ತು ಪವರ್ಫುಲ್ ಫೀಚರ್ಗಳಿಂದ ತುಂಬಿದೆ. ಸ್ಮಾರ್ಟ್ಫೋನ್ ಮೊದಲ ಮಾರಾಟವನ್ನು ಆಚರಿಸಲು ಕಂಪನಿಯು

ವನ್ ಪ್ಲಸ್ 13S ಇಂದಿನಿಂದ ಮಾರಾಟ ಶುರು| ಏನಿದರ ಸ್ಪೆಷಾಲಿಟಿ? ಇಲ್ಲಿದೆ ಡೀಟೈಲ್ಸ್ Read More »

ಆಭರಣ ಸಾಲ ಪಡೆದವರಿಗೆ ಶಾಕಿಂಗ್ ನ್ಯೂಸ್| ಇನ್ಮುಂದೆ ಬಡ್ಡಿ ಕಟ್ಟಿ‌ ರಿನೀವಲ್ ಮಾಡಲಾಗದು!!

ಸಮಗ್ರ ನ್ಯೂಸ್: ಚಿನ್ನಾಭರಣ ಸಾಲದ ನಿಯಮ ಈಗ ಹೊರೆಯಾಗಿ ಪರಿಣಮಿಸಿದೆ. ವಾಯಿದೆ ಮುಕ್ತಾಯದ ನಂತರ ಅಸಲು ಪಾವತಿ ಕಡ್ಡಾಯ ಮಾಡಲಾಗಿದೆ. ಬ್ಯಾಂಕುಗಳಲ್ಲಿ ಪಡೆದುಕೊಳ್ಳುವ ಚಿನ್ನಾಭರಣ ಸಾಲವನ್ನು ನಿಗದಿತ ಅವಧಿಯ ಕೊನೆಗೆ ಬಡ್ಡಿ ಮಾತ್ರ ಪಾವತಿಸಿ ಗ್ರಾಹಕರು ನವೀಕರಿಸುತ್ತಿದ್ದರು. ಆದರೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇತ್ತೀಚೆಗೆ ಹೊರಡಿಸಿದ ಸುತ್ತೋಲೆ ಸಾಲಗಾರರಿಗೆ ಹೊರೆಯಾಗಿ ಪರಿಣಮಿಸಿದೆ. ಬಡ್ಡಿಯನ್ನಷ್ಟೇ ಪಾವತಿಸಿ ಸಾಲ ನವೀಕರಿಸುವಂತಿಲ್ಲ ಎಂದು ಆರ್.ಬಿ.ಐ. ಬ್ಯಾಂಕುಗಳಿಗೆ ತಾಕೀತು ಮಾಡಿದೆ. ಸಾಲ ಪಡೆದವರು ಬಡ್ಡಿಯ ಜೊತೆಗೆ ಪೂರ್ಣ ಪ್ರಮಾಣದಲ್ಲಿ ಸಾಲದ ಅಸಲು

ಆಭರಣ ಸಾಲ ಪಡೆದವರಿಗೆ ಶಾಕಿಂಗ್ ನ್ಯೂಸ್| ಇನ್ಮುಂದೆ ಬಡ್ಡಿ ಕಟ್ಟಿ‌ ರಿನೀವಲ್ ಮಾಡಲಾಗದು!! Read More »

ಆಭರಣ ಪ್ರಿಯರಿಗೆ ಗುಡ್ ನ್ಯೂಸ್| ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಸಮಗ್ರ ನ್ಯೂಸ್: ಭಾರತದಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. 22, 24, ಮತ್ತು 18 ಕ್ಯಾರಟ್ ಚಿನ್ನದ ದರಗಳು ಇಳಿಕೆಯಾಗಿವೆ. ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡುಬಂದಿದೆ. ಇಂದು ದೇಶದಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ. ಒಂದು ವೇಳೆ ನೀವು ಚಿನ್ನ ಖರೀದಿಗೆ ಪ್ಲಾನ್ ಮಾಡುತ್ತಿದ್ರೆ, ಇಂದು ಖರೀದಿಸಬಹುದಾಗಿದೆ. ಇಂದಿನ 22, 24 ಮತ್ತು 18 ಕ್ಯಾರಟ್ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ. ಮದುವೆ ಸೀಸನ್ ಶುರುವಿನ ಬೆನ್ನಲ್ಲೇ ಚಿನ್ನದ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್| ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ Read More »

ಪಾಕಿಸ್ತಾನದಿಂದ ಬಂಧಿಸಲ್ಪಟ್ಟ ಬಿಎಸ್ಎಫ್ ಯೋಧ ಭಾರತಕ್ಕೆ ಹಸ್ತಾಂತರ

ಸಮಗ್ರ ನ್ಯೂಸ್: ಪಾಕಿಸ್ತಾನ ರೇಂಜರ್‌ಗಳಿಂದ ಏಪ್ರಿಲ್ 23 ರಂದು ಬಂಧಿಸಲ್ಪಟ್ಟ ಬಿಎಸ್‌ಎಫ್ ಸೈನಿಕನನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ. ಕಳೆದ ತಿಂಗಳು ಅಂತರರಾಷ್ಟ್ರೀಯ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಬಿಎಸ್ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಪಾಕಿಸ್ತಾನ ರೇಂಜರ್‌ ಗಳು ಬಂಧಿಸಿದ್ದರು. ಬುಧವಾರ ಅಟ್ಟಾರಿಯ ಚೆಕ್‌ಪೋಸ್ಟ್‌ ನಲ್ಲಿ ಪಾಕಿಸ್ತಾನ ಸೇನೆಯು ಶಾ ಅವರನ್ನು ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಿದರು. ಪೂರ್ಣಂ‌ ಬಂಧನದ ಬೆನ್ನಲ್ಲೇ ಭಾರತವೂ ಸಹ ಪಾಕಿಸ್ತಾನದ ಯೋಧನೊಬ್ಬನನ್ನು ಜೀವಂತವಾಗಿ ಸೆರೆಹಿಡಿದಿತ್ತು. ಕೂಡಲೇ ಎಚ್ಚೆತ್ತುಕೊಂಡ ಪಾಕಿಸ್ತಾನವು ಈಗ ತನ್ನ ಯೋಧನ

ಪಾಕಿಸ್ತಾನದಿಂದ ಬಂಧಿಸಲ್ಪಟ್ಟ ಬಿಎಸ್ಎಫ್ ಯೋಧ ಭಾರತಕ್ಕೆ ಹಸ್ತಾಂತರ Read More »

‘ನಾವು ಪಾಕ್ ನೊಂದಿಗೆ ಮಾತನಾಡುವುದಿದ್ರೆ ಪಿಒಕೆ, ಉಗ್ರವಾದ ವಿರುದ್ಧ ಮಾತ್ರ’| ಜಗತ್ತಿಗೆ ಸ್ಪಷ್ಟ ನಿಲುವು ನೀಡಿದ ನರೇಂದ್ರ ಮೋದಿ

ಸಮಗ್ರ ನ್ಯೂಸ್: ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದರೆ, ಅದು ಭಯೋತ್ಪಾದನೆ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಬಗ್ಗೆ ಮಾತ್ರ…” ಎಂದು ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಹೇಳಿದರು. ಪಾಕಿಸ್ತಾನದ ಅಣು ಬಾಂಬ್ ಬೆದರಿಕೆ ಬ್ಲಾಕ್ ಮೇಲ್ ಗೆ ಹೆದರೋದಿಲ್ಲ. ನಮ್ಮ ಸಹೋದರಿಯರ ಸಿಂಧೂರ ತೆಗೆದ ಭಯೋತ್ಪಾದಕರಿಗೆ ಪರಿಣಾಮದ ಎಚ್ಚರಿಕೆ ಸಂದೇಶ ರವಾನಿಸಿದ್ದೇವೆ. ಆಪರೇಷನ್ ಸಿಂಧೂರ್ ಪ್ರತಿಯೊಬ್ಬ ಭಾರತೀಯರ ಭಾವನೆಯ ಸಂಕೇತ ಎಂಬುದಾಗಿ ಖಡಕ್ ಸಂದೇಶ ನೀಡಿದರು. ಪ್ರಧಾನಿ ನರೇಂದ್ರ

‘ನಾವು ಪಾಕ್ ನೊಂದಿಗೆ ಮಾತನಾಡುವುದಿದ್ರೆ ಪಿಒಕೆ, ಉಗ್ರವಾದ ವಿರುದ್ಧ ಮಾತ್ರ’| ಜಗತ್ತಿಗೆ ಸ್ಪಷ್ಟ ನಿಲುವು ನೀಡಿದ ನರೇಂದ್ರ ಮೋದಿ Read More »

ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮಾತು| ‘ಆಪರೇಷನ್ ಸಿಂಧೂರ್’ ಬಳಿಕ ಮೊದಲ ಬಾರಿ ಮಾತನಾಡಲಿರುವ ನಮೋ

ಸಮಗ್ರ ನ್ಯೂಸ್: ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಳಿಕ ಇದೇ ಮೊದಲ ಬಾರಿ ಪ್ರಧಾನಿ ಮೋದಿ ದೇಶದವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪಾಕಿಸ್ತಾನದ ಉಗ್ರರ ವಿರುದ್ಧ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಹಾಗೂ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದು, ಆಪರೇಷನ್ ಸಿಂಧೂರ್ ಬಗ್ಗೆ ಸ್ವತಃ ಮಾಹಿತಿ ನೀಡಲಿದ್ದಾರೆ.  ಪಾಕಿಸ್ತಾನ

ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮಾತು| ‘ಆಪರೇಷನ್ ಸಿಂಧೂರ್’ ಬಳಿಕ ಮೊದಲ ಬಾರಿ ಮಾತನಾಡಲಿರುವ ನಮೋ Read More »

ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. IAF ಮಹತ್ವದ ಹೇಳಿಕೆ..!

ಸಮಗ್ರ ನ್ಯೂಸ್: ಭಾರತ ಮತ್ತು ಪಾಕಿಸ್ತಾನ ಮಧ್ಯೆ ದಾಳಿಗಳು ನಡೆಯುತ್ತಿದ್ದು. ಇದೀಗ ಕದನವಿರಾಮ ಸಿಕ್ಕಿದೆ. ಆದರೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ನಿನ್ನೆ ರಾತ್ರಿ ಜಮ್ಮು ಕಾಶ್ಮೀರ ಮತ್ತು ಗಡಿ ರಾಜ್ಯಗಳ ಮೇಲೆ ಡ್ರೋನ್ ದಾಳಿ ಮಾಡಿದೆ. ಇದೇ ವಿಚಾರವಾಗಿ ಭಾರತೀಯ ವಾಯುಪಡೆ( IAF) ಟ್ವೀಟ್ ಮಾಡಿದ್ದು ಆಪರೇಷನ್ ಸಿಂಧೂರ್(Operation Sindoor) ಮುಂದುವರೆದಿದೆ, ಸರಿಯಾದ ಸಮಯದಲ್ಲಿ ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಭಾರತೀಯ ವಾಯುಪಡೆ(ಐಎಎಫ್) ಮಾಹಿತಿ ನೀಡಿದೆ. ಭಾರತೀಯ ವಾಯುಪಡೆ (ಐಎಎಫ್) ಆಪರೇಷನ್ ಸಿಂಧೂರ್ ಅಡಿಯಲ್ಲಿ ನಿಯೋಜಿಸಲಾದ

ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. IAF ಮಹತ್ವದ ಹೇಳಿಕೆ..! Read More »

ಕದನ ವಿರಾಮದ ಬಳಿಕ ನರಿಬುದ್ದಿ ತೋರಿದ ಪಾಕ್| ಜಮ್ಮು ಕಾಶ್ಮೀರದ ಹಲವೆಡೆ ಡ್ರೋಣ್ ದಾಳಿ

ಸಮಗ್ರ ನ್ಯೂಸ್: ಕದನ ವಿರಾಮ ಘೋಷಣೆ ಬೆನ್ನಲ್ಲೇ‌ ಮತ್ತೆ ನರಿ ಬುದ್ದಿ ತೋರಿರುವ ಪಾಕ್ ಜಮ್ಮು ಕಾಶ್ಮೀರದ ಹಲವು ನಗರಗಳನ್ನು ಗುರಿಯಾಗಿರಿಸಿ ಡ್ರೋಣ್ ದಾಳಿ ನಡೆಸಿದೆ. ಇದೀಗ ಬಂದ ಮಾಹಿತಿಗಳ ಶ್ರೀನಗರದ ಲಾಲ್ ಚೌಕ್, ಉದಂಪುರ ಸೇರಿದಂತೆ ಹಲವು ನಗರಗಳಲ್ಲಿ ಪಾಕ್ ಕದನ ವಿರಾಮ ಉಲ್ಲಂಘಿಸಿದ್ದು, ಡ್ರೋಣ್ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ. ಉಳಿದಂತೆ ಗುಜರಾತ್ ನ ಕಚ್, ರಾಜಸ್ಥಾನದ ಜೈಸ್ಮೇರ್ ನಲ್ಲಿ ಪಾಕಿಸ್ತಾನ ಡ್ರೋಣ್ ದಾಳಿ ನಡೆಸಿದ್ದು ಕದನ ವಿರಾಮ ಉಲ್ಲಂಘನೆಯಾಗಿದೆ.

ಕದನ ವಿರಾಮದ ಬಳಿಕ ನರಿಬುದ್ದಿ ತೋರಿದ ಪಾಕ್| ಜಮ್ಮು ಕಾಶ್ಮೀರದ ಹಲವೆಡೆ ಡ್ರೋಣ್ ದಾಳಿ Read More »

ಭಾರತ – ಪಾಕ್ ನಡುವೆ ಕದನ ವಿರಾಮ| ಅಮೇರಿಕಾ ಅಧ್ಯಕ್ಷ ಟ್ರಂಪ್ ಘೋಷಣೆ

ಸಮಗ್ರ ನ್ಯೂಸ್: ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ರಾಯಿಟರ್ಸ್ ಉಲ್ಲೇಖಿಸಿ ವರದಿ ಮಾಡಿದೆ. ಡೊನಾಲ್ಡ್ ಟ್ರಂಪ್ ಸಹ ಟ್ವೀಟ್ ಮಾಡುವ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಎರಡು ದೇಶಗಳು ಬುದ್ಧಿವಂತಿಕೆಯನ್ನು ಪ್ರದರ್ಶಿಸಿವೆ. ಎರಡು ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿರೋದಕ್ಕೆ ಸಂತೋಷವಾಗಿದೆ ಎಂದು ಟ್ರಂಪ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇತ್ತ ಅಮೆರಿಕ ವಿದೇಶಾಂಗ

ಭಾರತ – ಪಾಕ್ ನಡುವೆ ಕದನ ವಿರಾಮ| ಅಮೇರಿಕಾ ಅಧ್ಯಕ್ಷ ಟ್ರಂಪ್ ಘೋಷಣೆ Read More »