ರಾಷ್ಟ್ರೀಯ

ಭಾರತ‌ ಯುದ್ಧ ಸನ್ನಧ್ದ| ನಾಳೆ ದೇಶಾದ್ಯಂತ ಮೊಳಗಲಿದೆ ‘ವಾರ್ ಸೈರನ್’

ಸಮಗ್ರ ನ್ಯೂಸ್: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸೇಡು ತೀರಿಸಿಕೊಳ್ಳಲು ಭಾರತ ಶತ್ರು ರಾಷ್ಟ್ರ ಪಾಕಿಸ್ತಾನದ ಜೊತೆ ಯುದ್ಧ ಮಾಡಲು ಸಹ ಸಿದ್ಧವಾಗಿದೆ. ಯುದ್ಧಕ್ಕೆ ಮಿಲಿಟರಿ ಸಿದ್ಧತೆಗಳ ಮಧ್ಯೆ, ಭಾರತ ಸರ್ಕಾರವು ನಾಗರಿಕ ಮಟ್ಟದಲ್ಲಿ ಯುದ್ಧಕ್ಕೆ ಸಿದ್ಧತೆಗಳನ್ನು ಪ್ರಾರಂಭಿಸಿದೆ. ದೇಶಾದ್ಯಂತ 244 ಜಿಲ್ಲೆಗಳಲ್ಲಿ ನಾಗರಿಕ ರಕ್ಷಣಾ ಅಣಕು ಕವಾಯತುಗಳು, ಅಭ್ಯಾಸಗಳು ಮತ್ತು ಪೂರ್ವಾಭ್ಯಾಸಗಳನ್ನು ನಡೆಸಲು ಕೇಂದ್ರ ಗೃಹ ಸಚಿವಾಲಯವು ಆದೇಶಗಳನ್ನು ಹೊರಡಿಸಿದೆ. ಜನರಿಗೆ ಆತ್ಮರಕ್ಷಣೆಯ ತರಬೇತಿ ನೀಡಬೇಕು. ಪಾಕಿಸ್ತಾನದೊಂದಿಗಿನ ಯುದ್ಧ ಪ್ರಾರಂಭವಾಗುವ ಮೊದಲು 1971 ರಲ್ಲಿ ಇಂತಹ ಅಣಕು […]

ಭಾರತ‌ ಯುದ್ಧ ಸನ್ನಧ್ದ| ನಾಳೆ ದೇಶಾದ್ಯಂತ ಮೊಳಗಲಿದೆ ‘ವಾರ್ ಸೈರನ್’ Read More »

ರಾಮ ದೇವರಲ್ಲ, ಪೌರಾಣಿಕ ವ್ಯಕ್ತಿ| ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್ ಗಾಂಧಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸವೊಂದರಲ್ಲಿ ಭಗವಾನ್ ರಾಮ ಮತ್ತು ಇತರ ಹಿಂದೂ ದೇವತೆಗಳನ್ನು “ಪೌರಾಣಿಕ ವ್ಯಕ್ತಿಗಳು” ಎಂದು ಉಲ್ಲೇಖಿಸುವ ಮೂಲಕ ರಾಜಕೀಯ ವಿವಾದವನ್ನು ಹುಟ್ಟುಹಾಕಿದ್ದಾರೆ. ವೈರಲ್ ಆಗಿರುವ ವೀಡಿಯೊದಲ್ಲಿ, ರಾಹುಲ್ ಗಾಂಧಿ, “ಎಲ್ಲರೂ ಪೌರಾಣಿಕ ವ್ಯಕ್ತಿಗಳು; ಭಗವಾನ್ ರಾಮನು ಆ ರೀತಿಯವನು, ಅವನು ಕ್ಷಮಿಸುತ್ತಿದ್ದನು, ಅವನು ಸಹಾನುಭೂತಿಯುಳ್ಳವನಾಗಿದ್ದನು.”ಎಂದಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ, ಅವರು ಮತ್ತು ಕಾಂಗ್ರೆಸ್ ಪಕ್ಷವು ಹಿಂದೂ ನಂಬಿಕೆಗಳನ್ನು ದುರ್ಬಲಗೊಳಿಸುತ್ತಿದೆ ಎಂದು

ರಾಮ ದೇವರಲ್ಲ, ಪೌರಾಣಿಕ ವ್ಯಕ್ತಿ| ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್ ಗಾಂಧಿ Read More »

ಪಹಲ್ಗಾಮ್ ದಾಳಿ NIA ತನಿಖೆ ಆರಂಭ: ಭರತ್ ಭೂಷಣ್ ಪತ್ನಿಯಿಂದ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು

ಸಮಗ್ರ ನ್ಯೂಸ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ದಾಳಿಯ ಬಗ್ಗೆ ಈಗಾಗಲೇ ಎನ್ಐಎ (NIA) ಅಧಿಕಾರಿಗಳು ತನಿಖೆಗೆ ಆರಂಭಿಸಿದ್ದು ಉಗ್ರರಿಂದ  ಬಲಿಯಾದ ಪ್ರತಿಯೊಂದು ಕುಟುಂಬಕ್ಕೂ NIA ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ . ನಿನ್ನೆ ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್ ಮನೆಗೂ ಎನ್ಐಎ ಅಧಿಕಾರಿಗಳ ತಂಡ ಆಗಮಿಸಿದೆ. ಭರತ್ ಭೂಷಣ್ ನಿವಾಸಕ್ಕೆ ಭೇಟಿ ನೀಡಿದ ನಾಲ್ವರು ಅಧಿಕಾರಿಗಳು ಭರತ್ ಭೂಷಣ್ ಪತ್ನಿ ಡಾ.ಸುಜಾತಾರನ್ನು 12 ಗಂಟೆಗಳ ಕಾಲ ವಿಚಾರಣೆ ಮಾಡಿ ದಾಳಿ ಬಗ್ಗೆ ಮಹತ್ವದ

ಪಹಲ್ಗಾಮ್ ದಾಳಿ NIA ತನಿಖೆ ಆರಂಭ: ಭರತ್ ಭೂಷಣ್ ಪತ್ನಿಯಿಂದ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು Read More »

ಭಾರತದಲ್ಲಿ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ ಗಳು ಬ್ಯಾನ್

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಸುಳ್ಳು ಸುದ್ದಿ, ತಪ್ಪು ಮಾಹಿತಿ ನೀಡಿ ಜನರ ಹಾದಿ ತಪ್ಪಿಸುತ್ತಿದ್ದ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ ಗಳನ್ನು ಭಾರತ ನಿಷೇಧಿಸಿದೆ. ಈ ಮಾಹಿತಿಯನ್ನು ಸರ್ಕಾರದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ. ಪಾಕಿಸ್ತಾನದ ರಾಜಕೀಯ ವಿಶ್ಲೇಷಕಿ ಹಾಗೂ ಪತ್ರಕರ್ತೆಯಾದ ಆರ್ಜೂ ಕಾಜ್ಮೀ ಖಾತೆಯನ್ನು ಕೂಡ ಸ್ಥಗಿತಗೊಳಿಸಲಾಗಿದೆ. ದಿ ಪಾಕಿಸ್ತಾನ್ ರೆಫರೆನ್ಸ್, ಸಮಾ ಸ್ಪೋರ್ಟ್ಸ್, ಉಜೈರ್ ಕ್ರಿಕೆಟ್. ರಾಜಿ ನಾಮಾ, ಡಾನ್ ನ್ಯೂಸ್, ಸಮಾ ಟಿವಿ, ಎಆರ್‌ವೈ

ಭಾರತದಲ್ಲಿ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ ಗಳು ಬ್ಯಾನ್ Read More »

ಪತ್ನಿ, ಪುತ್ರನ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಹರ್ಷವರ್ಧನ ಕಿಕ್ಕೇರಿ

ಸಮಗ್ರ ನ್ಯೂಸ್: ಮಂಡ್ಯ ಕೆಆರ್ ಪೇಟೆ ಮೂಲದ ಉದ್ಯಮಿ ಹರ್ಷವರ್ಧನ ಕಿಕ್ಕೇರಿ (57) ಅಮೆರಿಕದ ವಾಷಿಂ‌ಗ್ಟನ್ ಸಮೀಪದ ನ್ಯೂ ಕ್ಯಾಸೆಲ್‌ ನಗರದ ತಮ್ಮ ನಿವಾಸದಲ್ಲಿ ಪತ್ನಿ ಶ್ವೇತಾ ಹಾಗೂ ಪುತ್ರನಿಗೆ ಗುಂಡಿಕ್ಕಿ, ಬಳಿಕ ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ವರದಿಯಾಗಿದೆ. ಅಮೆರಿಕ ಕಾಲಮಾನ ಪ್ರಕಾರ ಗುರುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಅಲ್ಲಿನ ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್, ಸ್ಟಾರ್ ಆಫ್ ಮೈಸೂರು ವರದಿಗಳು ಹೇಳಿವೆ.

ಪತ್ನಿ, ಪುತ್ರನ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಹರ್ಷವರ್ಧನ ಕಿಕ್ಕೇರಿ Read More »

ಕಾಶ್ಮೀರದಲ್ಲಿ ನಿಲ್ಲದ ಉಗ್ರರ ಅಟ್ಟಹಾಸ| ಮನೆಯೊಳಗೆ ನುಗ್ಗಿ ಸಾಮಾಜಿಕ ಕಾರ್ಯಕರ್ತನ‌ ಹತ್ಯೆ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ನಿಂತಿಲ್ಲ. ಪಹಲ್ಗಾಮ್‌ನಲ್ಲಿ 28 ಪ್ರವಾಸಿಗರನ್ನ ಅಮಾನುಷವಾಗಿ ಕೊಂದ ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ಸೇಡು ತೀರಿಸಿಕೊಳ್ಳುವ ಪ್ರಕ್ರಿಯೆಯನ್ನ ಶುರು ಮಾಡಿದೆ. ಆದರೆ ಇದರ ಮಧ್ಯೆಯೇ ಇನ್ನೊಬ್ಬ ನಾಗರಿಕನನ್ನ ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ. ಭಾನುವಾರ ಜಮ್ಮು-ಕಾಶ್ಮೀರದ ಕುಪ್ವಾರಾದಲ್ಲಿ ಸಾಮಾಜಿಕ ಕಾರ್ಯಕರ್ತನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಯ್ತು. ಆದರೆ ಅಲ್ಲಿಗೆ ಹೋಗುವಷ್ಟರಲ್ಲೇ ಪ್ರಾಣ ಹೋಗಿತ್ತು. ಪಾಕಿಸ್ತಾನ ಬೆಂಬಲಿತ ಉಗ್ರರಿಗೆ ಕಾಶ್ಮೀರದ ಇಂಚಿಂಚೂ ಗೊತ್ತು.

ಕಾಶ್ಮೀರದಲ್ಲಿ ನಿಲ್ಲದ ಉಗ್ರರ ಅಟ್ಟಹಾಸ| ಮನೆಯೊಳಗೆ ನುಗ್ಗಿ ಸಾಮಾಜಿಕ ಕಾರ್ಯಕರ್ತನ‌ ಹತ್ಯೆ Read More »

ಪಾಕಿಸ್ತಾನ ಮಾಧ್ಯಮಗಳಲ್ಲಿ ‌ಸುದ್ದಿಯಾದ‌ ಸಿದ್ದು| ಸಿಎಂ ನ ಕೊಂಡಾಡಿದ ಪಾಕ್ ಮೀಡಿಯಾ

ಸಮಗ್ರ ನ್ಯೂಸ್: ಪೆಹಲ್ಗಾಮ್‌ ದಾಳಿ ಬೆನ್ನಲ್ಲೇ ಉಂಟಾಗಿರುವ ಭಾರತ ಹಾಗೂ ಪಾಕ್‌ ನಡುವಿನ ಸಂಘರ್ಷ ತಾರಕಕ್ಕೇರುತ್ತಿದೆ. ಎರಡೂ ದೇಶಗಳ ರಾಜಕಾರಣಿಗಳು ಈ ಬಗ್ಗೆ ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಅದೇ ರೀತಿ ನಿನ್ನೆ ( ಏಪ್ರಿಲ್‌ 26 ) ಮೈಸೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿದ್ದರಾಮಯ್ಯ ಪಾಕ್‌ ಹಾಗೂ ಭಾರತದ ನಡುವೆ ಯುದ್ಧ ನಡೆಯಲಿದೆ ಎಂದು ಹರಿದಾಡುತ್ತಿರುವ ಸುದ್ದಿ ಬಗ್ಗೆ ಪ್ರತಿಕ್ರಿಯಿಸಿದರು. ʼಪಾಕಿಸ್ತಾನದ ವಿರುದ್ಧ ಯುದ್ಧ ಮಾಡಬೇಕಾದಂತಹ ಅಗತ್ಯ ಇಲ್ಲ. ಬಿಗಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಅಷ್ಟೆ. ಭದ್ರತಾ

ಪಾಕಿಸ್ತಾನ ಮಾಧ್ಯಮಗಳಲ್ಲಿ ‌ಸುದ್ದಿಯಾದ‌ ಸಿದ್ದು| ಸಿಎಂ ನ ಕೊಂಡಾಡಿದ ಪಾಕ್ ಮೀಡಿಯಾ Read More »

“ನೀವು ನೀರು ನಿಲ್ಲಿಸಿದರೆ ನಾವು ನಿಮ್ಮ ಉಸಿರು ‌ನಿಲ್ಲಿಸುತ್ತೇವೆ”| ಪ್ರಧಾನಿ‌ ಮೋದಿಗೆ ಉಗ್ರ ಹಫೀಜ್‌‌ ಬೆದರಿಕೆ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭೀಕರ ಭಯೋತ್ಪಾದಕ ದಾಳಿ ನಡೆದ ನಂತರ ಭಾರತ ಪಾಕಿಸ್ತಾನದ ವಿರುದ್ಧ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿತು. ಭಾರತವು ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸಿದೆ. ಅಂದಿನಿಂದ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಆ ಹಿನ್ನೆಲೆಯಲ್ಲಿ, ಕುಖ್ಯಾತ ಭಯೋತ್ಪಾದಕ ಹಫೀಜ್ ಸಯೀದ್‌ನ ಹಳೆಯ ವಿಡಿಯೋವೊಂದು ವೈರಲ್ ಆಗಿದೆ. ಆ ವಿಡಿಯೋದಲ್ಲಿ ಹಫೀಜ್ ಸಯೀದ್ ಪ್ರಧಾನಿ ನರೇಂದ್ರ ಮೋದಿಗೆ ಬೆದರಿಕೆ ಹಾಕಿದ್ದಾನೆ. “ನೀವು ಪಾಕಿಸ್ತಾನದ ನೀರನ್ನು ನಿಲ್ಲಿಸಿದರೆ, ನಾವು ನಿಮ್ಮ ಉಸಿರಾಟವನ್ನು ನಿಲ್ಲಿಸುತ್ತೇವೆ.

“ನೀವು ನೀರು ನಿಲ್ಲಿಸಿದರೆ ನಾವು ನಿಮ್ಮ ಉಸಿರು ‌ನಿಲ್ಲಿಸುತ್ತೇವೆ”| ಪ್ರಧಾನಿ‌ ಮೋದಿಗೆ ಉಗ್ರ ಹಫೀಜ್‌‌ ಬೆದರಿಕೆ Read More »

ಆಕಸ್ಮಿಕವಾಗಿ ಗಡಿ ದಾಟಿದ ಭಾರತೀಯ ಯೋಧನನ್ನು ಬಂಧಿಸಿದ ಪಾಕಿಸ್ತಾನ

ಸಮಗ್ರ ನ್ಯೂಸ್: ಈಗಾಗಲೇ ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ಜೋರಾಗಿದ್ದು, ಎರಡೂ ದೇಶಗಳು ಕೆಲವು ಒಪ್ಪಂದಗಳನ್ನು ರದ್ದುಗೊಳಿಸುವ ಮೂಲಕ ಪರಸ್ಪರ ದೇಶಗಳ ನಾಗರಿಕರಿಗೆ ವೀಸಾ ಸೇವೆಯನ್ನು ರದ್ದುಗೊಳಿಸಿವೆ. ಈ ನಡುವೆ ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಬಿಎಸ್‌ಎಫ್ ಯೋಧನನ್ನು ಪಾಕಿಸ್ತಾನ ಬಂಧಿಸಿದೆ. ಪಂಜಾಬ್ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧನನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದಾರೆ. ಅವರ ಬಿಡುಗಡೆಗಾಗಿ ಎರಡೂ ದೇಶಗಳ ಸೇನಾ ಪಡೆಗಳ ನಡುವೆ

ಆಕಸ್ಮಿಕವಾಗಿ ಗಡಿ ದಾಟಿದ ಭಾರತೀಯ ಯೋಧನನ್ನು ಬಂಧಿಸಿದ ಪಾಕಿಸ್ತಾನ Read More »

ಪಹಲ್ಗಾಮ್ ದಾಳಿಯಲ್ಲಿ ಕೋಮುದ್ವೇಷದ ಪ್ರಚಾರಕ್ಕೆ ಸೆಡ್ಡು ಹೊಡೆದ ಯುವತಿ| ಹಿಂದೂ ಯುವತಿಯ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಭಯೋತ್ಪಾದಕರ ದಾಳಿಗೆ ಪ್ರವಾಸಿಗರು ಮತ್ತು ಸ್ಥಳೀಯರು ಸೇರಿದಂತೆ ಕನಿಷ್ಠ 28 ಜನರು ಮೃತಪಟ್ಟಿದ್ದರು. ಈ ವೇಳೆ ಕಾಶ್ಮೀರದಲ್ಲಿದ್ದ ಮಹಾರಾಷ್ಟ್ರದ ಬೀಡ್‌ನ ಪ್ರವಾಸಿ ಪೂಜಾ ಜಾಧವ್ ಅವರು ʼನಾನು ಹಿಂದೂ, ಇಲ್ಲಿನ ಮುಸ್ಲಿಮರು ನಮ್ಮೊಂದಿಗಿದ್ದಾರೆʼ ಎಂದು ಹೇಳಿಕೊಂಡು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವೀಡಿಯೋದಲ್ಲಿ ಪೂಜಾ ವೀಕ್ಷಕರ ಜೊತೆ ನೇರವಾಗಿ ಮಾತನಾಡುತ್ತಾ, ʼನಾನು ಹಿಂದೂ, ನಾನು ಬೆಳಿಗ್ಗೆಯಿಂದ ಕಾಶ್ಮೀರದಲ್ಲಿದ್ದೇನೆ. ನಾನು ನಿಮಗೆ ಹೇಳುತ್ತೇನೆ, ಇಲ್ಲಿನ ಮುಸ್ಲಿಮರು ನಮ್ಮೊಂದಿಗಿದ್ದಾರೆ. ಅವರು ನಮ್ಮ ಪಕ್ಕದಲ್ಲಿ ಹೆಗಲಿಗೆ ಹೆಗಲು

ಪಹಲ್ಗಾಮ್ ದಾಳಿಯಲ್ಲಿ ಕೋಮುದ್ವೇಷದ ಪ್ರಚಾರಕ್ಕೆ ಸೆಡ್ಡು ಹೊಡೆದ ಯುವತಿ| ಹಿಂದೂ ಯುವತಿಯ ವಿಡಿಯೋ ವೈರಲ್ Read More »