ರಾಷ್ಟ್ರೀಯ

ಆಂಧ್ರದ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್​ನ ನಿವೃತ್ತ ನ್ಯಾ., ಮೂಡುಬಿದಿರೆಯ ಎಸ್​.ಅಬ್ದುಲ್​ ನಜೀರ್​

ಸಮಗ್ರ ನ್ಯೂಸ್ : ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿ ನಿವೃತ್ತ ನ್ಯಾಯಮೂರ್ತಿ ಎಸ್​.ಅಬ್ದುಲ್ ನಜೀರ್​​ರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಮೂಲತಃ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯವರಾದ ಶ ನಿವೃತ್ತ ನ್ಯಾಯಮೂರ್ತಿ ಎಸ್​.ಅಬ್ದುಲ್​ ನಜೀರ್​ ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿದ್ದು ಕರುನಾಡಿಗೆ ಹೆಮ್ಮೆಯ ವಿಚಾರವಾಗಿದೆ. ಅಬ್ದುಲ್​ ನಜೀರ್​ ಐತಿಹಾಸಿಕ ಅಯೋಧ್ಯೆ ರಾಮಜನ್ಮ ಭೂಮಿ ತೀರ್ಪು ನೀಡಿದ ಬೆಂಚ್ ಸದಸ್ಯರಾಗಿದ್ದರು. ಆಂಧ್ರ ಪ್ರದೇಶದ ಜೊತೆಯಲ್ಲಿ ಛತ್ತಿಸ್‌ಗಢ, ಬಿಹಾರ, ಮಣಿಪುರ ಸೇರಿದಂತೆ ವಿವಿಧ ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು […]

ಆಂಧ್ರದ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್​ನ ನಿವೃತ್ತ ನ್ಯಾ., ಮೂಡುಬಿದಿರೆಯ ಎಸ್​.ಅಬ್ದುಲ್​ ನಜೀರ್​ Read More »

ಇಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ| ನಾಳೆ ಏರೋ ಇಂಡಿಯಾ-2023 ಉದ್ಘಾಟನೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ನಾಳೆ ಬೆಂಗಳೂರಿನ ಯಲಹಂಕದ ವಾಯುಪಡೆ ನಿಲ್ದಾಣದಲ್ಲಿ ಐದು ದಿನಗಳ ಕಾಲ ನಡೆಯುವ ಏರೋ ಇಂಡಿಯಾ-2023ರ 14 ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ. ಇಂದು ರಾತ್ರಿ ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ರಾತ್ರಿ ಬೆಂಗಳೂರಿನ ರಾಜಭವನದಲ್ಲಿ ತಂಗಲಿದ್ದಾರೆ. ಫೆಬ್ರವರಿ 13 ರ ಸೋಮವಾರ ಬೆಳಗ್ಗೆ 9.30 ಕ್ಕೆ ಐದು ದಿನಗಳ ಕಾಲ ನಡೆಯುವ ಏರೋ ಇಂಡಿಯಾ-2023ರ 14 ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ

ಇಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ| ನಾಳೆ ಏರೋ ಇಂಡಿಯಾ-2023 ಉದ್ಘಾಟನೆ Read More »

ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ಆರೀಫ್ ಅರೆಸ್ಟ್| ಗೃಹ‌ಸಚಿವ ಆರಗ‌ ಜ್ಞಾನೇಂದ್ರ ಹೇಳಿಕೆ

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿದ್ದ ವ್ಯಕ್ತಿಯನ್ನು ರಾಜ್ಯ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬಂಧಿತ ಆರೀಫ್ ಎಂಬಾತ ವಿದೇಶ ಪ್ರಯಾಣಕ್ಕೆ ತಯಾರಿ ನಡೆಸಿದ್ದ ಎನ್ನಲಾಗಿದ್ದು, ಅದಕ್ಕೂ ಮುನ್ನವೇ ಪೊಲೀಸರು ಈತನನ್ನು ವಶಕ್ಕೆ ಪಡೆದಿರುವುದಕ್ಕೆ ಪೊಲೀಸರನ್ನು ಅಭಿನಂದಿಸಿದ್ದಾರೆ.ರಾಜ್ಯ ಪೊಲೀಸರು ಕೇಂದ್ರದ ಬೇಹುಗಾರಿಕಾ ಸಂಸ್ಥೆಯ ಅಧಿಕಾರಿಗಳ ಸಹಾಯದಿಂದ ಈತನನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆದಿದೆ. ದೇಶದಲ್ಲಿ ಕೋಮು ಭಾವನೆ ಕೆರಳಿಸಿ ಅಸ್ಥಿರತೆ ಉಂಟು ಮಾಡುತ್ತಿರುವ ಸಂಘಟನೆಗಳು

ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ಆರೀಫ್ ಅರೆಸ್ಟ್| ಗೃಹ‌ಸಚಿವ ಆರಗ‌ ಜ್ಞಾನೇಂದ್ರ ಹೇಳಿಕೆ Read More »

ಟರ್ಕಿ‌ ಭೂಕಂಪದಲ್ಲಿ ಕಾಣೆಯಾಗಿದ್ದ ಬೆಂಗಳೂರು‌ ಮೂಲದ ಟೆಕ್ಕಿ ಶವ ಪತ್ತೆ

ಸಮಗ್ರ ನ್ಯೂಸ್: ಟರ್ಕಿ ಭೂಕಂಪದಲ್ಲಿ ನಾಪತ್ತೆಯಾಗಿದ್ದ ಟೆಕ್ಕಿ ವಿಜಯಕುಮಾರ್ ಅವರು ಟರ್ಕಿಯ ಅನಾಟೋಲಿಯಾ ಪ್ರದೇಶದ ಹೋಟೆಲ್ ಅವಶೇಷಗಳ ಅಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 24 ಅಂತಸ್ತಿನ ಹೋಟೆಲ್ ನ ಎರಡನೇ ಮಹಡಿಯಲ್ಲಿ ವಿಜಯಕುಮಾರ್ ತಂಗಿದ್ದರು. ಹೋಟೆಲ್ ಅವಶೇಷಗಳ ತೆರವು ಕಾರ್ಯಾಚರಣೆ ವೇಳೆ ಅವರ ಮೃತದೇಹ ಪತ್ತೆಯಾಗಿದೆ. ಫೆಬ್ರವರಿ 6 ರಂದು ಭೂಕಂಪದಿಂದ ಟರ್ಕಿಯಲ್ಲಿ ಕಾಣೆಯಾದ ಭಾರತೀಯ ಪ್ರಜೆ ವಿಜಯ್ ಕುಮಾರ್ ಅವರ ಪಾರ್ಥಿವ ಶರೀರವು ವ್ಯಾಪಾರ ಪ್ರವಾಸದಲ್ಲಿದ್ದ ಮಾಲತ್ಯದಲ್ಲಿನ ಹೋಟೆಲ್‌ನ ಅವಶೇಷಗಳ ನಡುವೆ ಪತ್ತೆಯಾಗಿದೆ. ಕುಟುಂಬವು ಹಚ್ಚೆ ಆಧಾರದ

ಟರ್ಕಿ‌ ಭೂಕಂಪದಲ್ಲಿ ಕಾಣೆಯಾಗಿದ್ದ ಬೆಂಗಳೂರು‌ ಮೂಲದ ಟೆಕ್ಕಿ ಶವ ಪತ್ತೆ Read More »

ನೆಹರೂ ಹೆಸರನ್ನು ಸರ್ ನೇಮ್ ಅಲ್ಲಿ ಯಾಕೆ ಬಳಸಲ್ಲ ಎಂದ ಮೋದಿ| ಪ್ರಧಾನಿ ಮೋದಿಗೆ ಭಾರತೀಯ ಸಂಸ್ಕೃತಿಯ ಕನಿಷ್ಠ ತಿಳುವಳಿಕೆಯೂ ಇಲ್ಲ ಎಂದು ಕಾಂಗ್ರೆಸ್ ವ್ಯಂಗ್ಯ

ಸಮಗ್ರ ನ್ಯೂಸ್: ರಾಜ್ಯಸಭೆಯಲ್ಲಿ ಗಾಂಧಿಗಳು ನೆಹರೂ ಹೆಸರನ್ನು ಬಳಸುವುದಿಲ್ಲ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತೀವ್ರ ತರಾಟೆಗೆ ತೆಗೆದುಕೊಂಡ ಪ್ರತಿಪಕ್ಷ ಕಾಂಗ್ರೆಸ್, ಭಾರತದಲ್ಲಿ ಯಾರಾದರೂ ತಮ್ಮ ತಾಯಿಯ ಅಜ್ಜನ ಸರ್ನೇಮ್ ಅನ್ನು ಬಳಸುತ್ತಾರೆಯೇ?ಎಂದು ಪ್ರಶ್ನಿಸಿದೆ. ಪ್ರಧಾನಿ ಮೋದಿಗೆ ಭಾರತೀಯ ಸಂಸ್ಕೃತಿಯ ಬಗ್ಗೆ ಕನಿಷ್ಟ ತಿಳುವಳಿಕೆಯೂ ಇಲ್ಲ. ದೇಶವನ್ನು ದೇವರೇ ಕಾಪಾಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅವರು, ನೆಹರೂ ಸರ್ ನೇಮ್ ಬಳಸುವುದಕ್ಕೆ ಗಾಂಧಿಗಳು ಏಕೆ ನಾಚಿಕೆಪಡುತ್ತಾರೆ ಎಂದು ಪ್ರಶ್ನಿಸಿದರು.

ನೆಹರೂ ಹೆಸರನ್ನು ಸರ್ ನೇಮ್ ಅಲ್ಲಿ ಯಾಕೆ ಬಳಸಲ್ಲ ಎಂದ ಮೋದಿ| ಪ್ರಧಾನಿ ಮೋದಿಗೆ ಭಾರತೀಯ ಸಂಸ್ಕೃತಿಯ ಕನಿಷ್ಠ ತಿಳುವಳಿಕೆಯೂ ಇಲ್ಲ ಎಂದು ಕಾಂಗ್ರೆಸ್ ವ್ಯಂಗ್ಯ Read More »

ಬಿಬಿಸಿ ಗೆ ಬಿಗ್ ರಿಲೀಪ್| ಸಾಕ್ಷ್ಯಚಿತ್ರ ಪ್ರದರ್ಶನ ನಿಷೇಧ ಕುರಿತ ಅರ್ಜಿ ವಜಾ

ಸಮಗ್ರ ನ್ಯೂಸ್: ‘ಇಂಡಿಯಾ: ದ ಮೋದಿ ಕ್ವೆಶ್ಚೆನ್‌’, ಸಾಕ್ಷ್ಯ ಚಿತ್ರ ಪ್ರದರ್ಶಿಸಿದ್ದ ಕಾರಣಕ್ಕೆ ಬಿಬಿಸಿ ವಾಹಿನಿಯನ್ನು ಭಾರತದಲ್ಲಿ ನಿಷೇಧಿಸಲು ಕೋರಿದ್ದ ಹಿಂದೂ ಸೇನಾ ಮನವಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್‌. ತಾನು ಸೆನ್ಸಾರ್‌ ಶಿಪ್‌ ಹೇರಲು ಸಾಧ್ಯವಿಲ್ಲ ಎಂದು ಹೇಳಿದೆ. ಇದು ಪೂರ್ಣ ತಪ್ಪು ತಿಳಿವಳಿಕೆಯದಾಗಿದೆ. ಸರ್ವೋಚ್ಚ ನ್ಯಾಯಾಲಯವು ಹೇಗೆ ತಾನೆ ಬಿಬಿಸಿ ನಿಷೇಧವನ್ನು ಒಪ್ಪಿಕೊಳ್ಳುವುದು ಸಾಧ್ಯ ಎಂದು ಜಡ್ಜ್ ಕೇಳಿದರು. 2002ರ ಗುಜರಾತ್ ಗಲಭೆಯಲ್ಲಿ ಮೋದಿಯವರ ಪಾತ್ರದ ಬಗ್ಗೆ ಸಾಕ್ಷ್ಯಚಿತ್ರ ತಯಾರಿಸಿರುವ ಬಿಬಿಸಿಯನ್ನು ಭಾರತದಲ್ಲಿ ನಿಷೇಧಿಸುವುದೆಂಬುದು ತೀರಾ

ಬಿಬಿಸಿ ಗೆ ಬಿಗ್ ರಿಲೀಪ್| ಸಾಕ್ಷ್ಯಚಿತ್ರ ಪ್ರದರ್ಶನ ನಿಷೇಧ ಕುರಿತ ಅರ್ಜಿ ವಜಾ Read More »

ಜಿಎಸ್ಟಿ ವಂಚನೆ ಆರೋಪ| ಅದಾನಿ ಗ್ರೂಪ್ಸ್ ಮೇಲೆ‌ ಅಧಿಕಾರಿಗಳಿಂದ ದಾಳಿ

ಸಮಗ್ರ ನ್ಯೂಸ್: ಜಿಎಸ್‌ಟಿ ಜಮಾ ಮಾಡಿಲ್ಲ ಎಂಬ ಆರೋಪದಡಿ ಗೌತಮ್​ ಅದಾನಿ ಒಡೆತನದ ಅದಾನಿ ಕಂಪನಿ ಮೇಲೆ ರಾಜ್ಯ ಅಬಕಾರಿ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಮಾಚಲ ಪ್ರದೇಶ ರಾಜ್ಯ ತೆರಿಗೆ ಇಲಾಖೆಯು ಪರ್ವಾನೂರಿನಲ್ಲಿರುವ ಅದಾನಿ ಕಂಪನಿ ಮೇಲೆ ದಾಳಿ ಮಾಡಿದೆ. ಬುಧವಾರದಂದು ರಾತ್ರಿ ವೇಳೆ ಹಿಮಾಚಲ ಪ್ರದೇಶದಲ್ಲಿರುವ ಅದಾನಿ ವಿಲ್ಮಾರ್ ಗ್ರೂಪ್​ನ ಸಿ ಆಯಂಡ್​ ಎಫ್​ ಸ್ಟೋರ್​ಗಳ ಮೇಲೆ ​ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ, ಕಳೆದ 5 ವರ್ಷದಿಂದ ಸರಕು ಮತ್ತು

ಜಿಎಸ್ಟಿ ವಂಚನೆ ಆರೋಪ| ಅದಾನಿ ಗ್ರೂಪ್ಸ್ ಮೇಲೆ‌ ಅಧಿಕಾರಿಗಳಿಂದ ದಾಳಿ Read More »

ಉತ್ತರಾಖಂಡ್, ಜೋಶಿಮಠದಲ್ಲಿ ಭಾರೀ ಭೂಕಂಪ‌ ಸಾಧ್ಯತೆ – NGRI

ಸಮಗ್ರ ನ್ಯೂಸ್: ಜೋಶಿಮಠ ಸೇರಿ ಉತ್ತರಾಖಂಡದಲ್ಲಿ ಭಾರಿ ಭೂಕಂಪ ಸಾಧ್ಯತೆ ಇದೆ ಎಂದು NGRI ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಭೂಕುಸಿತ ಸಂಭವಿಸಿದ್ದ ಜೋಶಿಮಠ ಸೇರಿದಂತೆ ಉತ್ತರಾಖಂಡ ರಾಜ್ಯದ ಹಲವೆಡೆ ಭವಿಷ್ಯದಲ್ಲಿ ಭಾರಿ ಭೂಕಂಪ ಸಂಭವಿಸಲಿದೆ ಎಂದು ಹೈದರಾಬಾದ್ ಮೂಲದ ಸಿಎಸ್ಐಆರ್-ರಾಷ್ಟ್ರೀಯ ಭೌಗೋಳಿಕ ಸಂಶೋಧನಾ ಸಂಸ್ಥೆಯ(ಎನ್ ಜಿಆರ್ ಐ) ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಉತ್ತರಾಖಂಡವನ್ನು ಭೂಕಂಪ ವಲಯ ಎಂದು ಗುರುತಿಸಲಾಗಿದ್ದು, 9,000ಕ್ಕೂ ಅಧಿಕ ಜನರ ಸಾವಿಗೆ ಕಾರಣವಾಗಿರುವ ಟರ್ಕಿ– ಸಿರಿಯಾದಲ್ಲಿ ಸಂಭವಿಸಿದ ಭೂಕಂಪದ ಸಂದರ್ಭದಲ್ಲೇ ಈ ಎಚ್ಚರಿಕೆ

ಉತ್ತರಾಖಂಡ್, ಜೋಶಿಮಠದಲ್ಲಿ ಭಾರೀ ಭೂಕಂಪ‌ ಸಾಧ್ಯತೆ – NGRI Read More »

ಮೋದಿ ಅದಾನಿಯನ್ನು ರಕ್ಷಿಸುತ್ತಿದ್ದಾರೆ | ಸಂಸತ್ತಿನಲ್ಲಿ ರಾಹುಲ್ ಗಾಂಧಿ ಹೇಳಿಕೆ

ಸಮಗ್ರ ನ್ಯೂಸ್: ಅದಾನಿ ವಿವಾದದ ಬಗ್ಗೆ ಯಾವುದೇ ತನಿಖೆಯ ಪ್ರಸ್ತಾಪವಿಲ್ಲದ ಕಾರಣ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಉದ್ಯಮಿ ಗೌತಮ್ ಅದಾನಿ ಅವರನ್ನ ಪ್ರಧಾನಿ ಮೋದಿ ರಕ್ಷಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದರು. ‘ಪ್ರಧಾನಿಯವರ ಭಾಷಣದಿಂದ ನನಗೆ ತೃಪ್ತಿಯಾಗಿಲ್ಲ. ವಿಚಾರಣೆಯ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಅವರು (ಗೌತಮ್ ಅದಾನಿ) ಸ್ನೇಹಿತನಲ್ಲದಿದ್ದರೆ, ಅವರು (ಪ್ರಧಾನಿ) ತನಿಖೆ ನಡೆಸಬೇಕೆಂದು

ಮೋದಿ ಅದಾನಿಯನ್ನು ರಕ್ಷಿಸುತ್ತಿದ್ದಾರೆ | ಸಂಸತ್ತಿನಲ್ಲಿ ರಾಹುಲ್ ಗಾಂಧಿ ಹೇಳಿಕೆ Read More »

2004-2014 ಹಗರಣಗಳ‌ ದಶಕ| ಕಾಂಗ್ರೆಸ್ ವಿರುದ್ದ ಸಂಸತ್ತಿನಲ್ಲಿ ಪ್ರಧಾನಿ ವಾಗ್ದಾಳಿ

ಸಮಗ್ರ ನ್ಯೂಸ್: ಬಜೆಟ್​ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಮಾಡಿದ್ದ ಭಾಷಣದ ಮೇಲಿನ ವಂದನಾ ನಿರ್ಣಯದಲ್ಲಿ ಪಾಲ್ಗೊಂಡು ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ಬಗ್ಗೆ ಟೀಕಾಪ್ರಹಾರ ಎಸಗಿದರು. ಈ ಸಂದರ್ಭದಲ್ಲಿ ಅವರು ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸುತ್ತಾ ಕಾಂಗ್ರೆಸ್​ ವಿರುದ್ಧ ಟೀಕಾಪ್ರಹಾರ ನಡೆಸಿದರು. ಯುಪಿಎ ಸರ್ಕಾರದ ಅವಧಿಯ ಆಡಳಿತವನ್ನು ಪ್ರಸ್ತಾಪಿಸಿ, “ಆ 10 ವರ್ಷಗಳಲ್ಲಿ ದೇಶದಲ್ಲಿ ಕೇವಲ ಹತ್ಯೆಗಳು, ಭಯೋತ್ಪಾದನೆ ಹಾಗು ಹಗರಣಗಳೇ ತುಂಬಿದ್ದವು. ಜಾಗತಿಕ ವೇದಿಕೆಯಲ್ಲಿ ಭಾರತದ ಧ್ವನಿ

2004-2014 ಹಗರಣಗಳ‌ ದಶಕ| ಕಾಂಗ್ರೆಸ್ ವಿರುದ್ದ ಸಂಸತ್ತಿನಲ್ಲಿ ಪ್ರಧಾನಿ ವಾಗ್ದಾಳಿ Read More »